Homeಮುಖಪುಟಗುಜರಾತ್‌ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಾಚಿತ್ರ ಅಂತಾರಾಷ್ಟ್ರೀಯ ಪಿತೂರಿ ಎಂದ ವಕೀಲರ ಸಂಘ: ತನಿಖೆಗೆ ಒತ್ತಾಯ

ಗುಜರಾತ್‌ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಾಚಿತ್ರ ಅಂತಾರಾಷ್ಟ್ರೀಯ ಪಿತೂರಿ ಎಂದ ವಕೀಲರ ಸಂಘ: ತನಿಖೆಗೆ ಒತ್ತಾಯ

- Advertisement -
- Advertisement -

ಅಖಿಲ ಭಾರತ ವಕೀಲರ ಸಂಘದ (ಎಐಬಿಎ) ಅಧ್ಯಕ್ಷ ಮತ್ತು ಹಿರಿಯ ವಕೀಲ ಡಾ. ಆದೀಶ್ ಸಿ ಅಗರ್‌ವಾಲಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, “ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಬಿಬಿಸಿಯ ಇತ್ತೀಚಿನ ಸಾಕ್ಷ್ಯಚಿತ್ರದಲ್ಲಿನ ಅಂತಾರಾಷ್ಟ್ರೀಯ ಪಿತೂರಿ ಕುರಿತು ಎಲ್ಲ ಆಯಾಮದಲ್ಲೂ (360 ಡಿಗ್ರಿ) ತನಿಖೆಗೆ ಆದೇಶಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡುವ ಯೂಟ್ಯೂಬ್ ಚಾನೆಲ್‌ಗಳು ಮತ್ತು ಟ್ವಿಟರ್ ಹ್ಯಾಂಡಲ್‌ಗಳನ್ನು ನಿರ್ಬಂಧಿಸುವ ಸರ್ಕಾರದ ಕ್ರಮವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿರುವ ಎಐಬಿಎ ಅಧ್ಯಕ್ಷರು, “ಸುಪ್ರೀಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು, ನ್ಯಾಯಶಾಸ್ತ್ರಜ್ಞರು ಮತ್ತು ತನಿಖಾಧಿಕಾರಿಗಳನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಿ ಸಾಕ್ಷ್ಯಾಚಿತ್ರದ ವಿರುದ್ಧ ತನಿಖೆ ನಡೆಸಬೇಕು” ಎಂದು ಪತ್ರದಲ್ಲಿ ಕೋರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಸಾಕ್ಷ್ಯಚಿತ್ರದ ಹಿಂದೆ ಕಾಣದ ಕೈಗಳಿವೆ. ಅಪಖ್ಯಾತಿಗೊಳಗಾದ ಮತ್ತು ತಿರಸ್ಕರಿಸಲ್ಪಟ್ಟ ಸಾಕ್ಷಿಗಳೊಂದಿಗೆ ಕಾಲ್ಪನಿಕ ಕತೆಗಳನ್ನು ರೂಪಿಸಲು ಸೇರಿಕೊಂಡಿರುವ ಮನಸ್ಸುಗಳನ್ನು ಗುರುತಿಸಿ ತನಿಖೆ ಮಾಡಬೇಕು” ಎಂದು ಅಗರವಾಲಾ ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಸಾಕ್ಷ್ಯಚಿತ್ರ ಎಂದು ಕರೆಯಲ್ಪಡುವ ಇದು ಹೊಸ ವಿಚಾರಗಳನ್ನೇನೂ ಹೊಂದಿಲ್ಲ. ಅದರ ಹೆಚ್ಚಿನ ವಿಷಯಗಳನ್ನು ಸಾರ್ವಜನಿಕವಾಗಿ ಸಂಪೂರ್ಣವಾಗಿ ಪ್ರಕಟಿಸಲಾಗಿದೆ ಮತ್ತು ಚರ್ಚಿಸಲಾಗಿದೆ. ಭಾರತದ ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ಪರಿಗಣಿಸಿ, ಅವುಗಳನ್ನು ತಿರಸ್ಕರಿಸಿವೆ” ಎಂದು ತಿಳಿಸಿದ್ದಾರೆ.

“20 ವರ್ಷಗಳ ಹಿಂದಿನ ಗುಜರಾತ್ ಗಲಭೆಯು ಹಲವಾರು ಪದರಗಳನ್ನು ಹೊಂದಿದೆ. ಆದರೆ ಈ ಬಿಬಿಸಿ ಸಾಕ್ಷ್ಯಾಚಿತ್ರವು ಏಕಮುಖವಾಗಿದೆ. ಸಾಕಷ್ಟು ದುರುದ್ದೇಶಪೂರಿತವಾಗಿದೆ. ನಮ್ಮ ಪ್ರಧಾನಮಂತ್ರಿ ಮತ್ತು ರಾಷ್ಟ್ರ ಟೀಕೆ ಎದುರಿಸುವಂತಾಗಿದೆ” ಎಂದು ಗೃಹ ಸಚಿವರಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.

ತನಿಖೆಯ ಜೊತೆಗೆ, ಈ ಸಾಕ್ಷ್ಯಾಚಿತ್ರ ನಿರ್ಮಾಣವಾಗಲು ಕಾರಣವಾದ ಜನರನ್ನು ಗುರುತಿಸಬೇಕು, ಅವರ ಹಿನ್ನೆಲೆಯನ್ನು ತನಿಖೆ ಮಾಡಬೇಕು, ಬಿಬಿಸಿ ಮತ್ತು ಅದರ ಹಿಡಿತದಲ್ಲಿರುವ ದಾಖಲೆಗಳನ್ನು ಪಡೆದುಕೊಳ್ಳಬೇಕು, ಭಾರತ ಸರ್ಕಾರದೊಂದಿಗೆ ಇನ್ನಷ್ಟು ಸಹಕರಿಸಲು ಯುಕೆ ಸರ್ಕಾರಕ್ಕೆ ಪತ್ರ ಬರೆಯಬೇಕು ಎಂದು ಪತ್ರದಲ್ಲಿ ಎಐಬಿಎ ಅಧ್ಯಕ್ಷರು ಮನವಿ ಮಾಡಿದ್ದಾರೆ.

ಭಾನುವಾರ ಪ್ರತಿಕ್ರಿಯಿಸಿದ್ದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, “ದುರುದ್ದೇಶಪೂರಿತ ಪ್ರಚಾರಗಳನ್ನು ಮಾಡುವಾಗ ಕೆಲವರು ಸುಪ್ರೀಂಕೋರ್ಟ್‌ಗಿಂತ ಬಿಬಿಸಿಯನ್ನು ಹೆಚ್ಚು ಪರಿಗಣಿಸುತ್ತಾರೆ” ಎಂದು ಆರೋಪಿಸಿದ್ದರು.

ವೆಬ್‌ಸೈಟ್‌ನಲ್ಲಿ ಡಾಕ್ಯುಮೆಂಟರಿ ಪ್ರಕಟಿಸಿದ ಬಿಬಿಸಿ

2002ರ ಗುಜರಾತ್ ಗಲಭೆಯ ವಿಚಾರಣೆಗೆ ಬ್ರಿಟನ್ ಸರ್ಕಾರ ಕಳುಹಿಸಿದ ತಂಡವೊಂದು, “ಹಿಂಸಾಚಾರಕ್ಕೆ ಕಾರಣ ಅವತ್ತಿನ ಅಲ್ಲಿಯ ಭಯದ ವಾತಾವರಣ ಹಾಗಾಗಿ ಆ ಪರಿಸ್ಥಿತಿಗೆ ರಾಜ್ಯದ ಅವತ್ತಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರೇ ನೇರ ಹೊಣೆ” ಎಂದು ಉಲ್ಲೇಖಿಸಿರುವ ಬಿಬಿಸಿ ಸಾಕ್ಷ್ಯಚಿತ್ರವನ್ನು ಮತ್ತೆ ಮರು ಅಪ್ಲೋಡ್ ಮಾಡಲಾಗಿದೆ. ಅಧಿಕೃತವಾಗಿ ಮಂಗಳವಾರ ಬಿಡುಗಡೆಯಾಗಿದ್ದ ‘ಮೋದಿ ಪ್ರಶ್ನೆ’ ಎಂಬ ಶೀರ್ಷಿಕೆಯ ಈ ಸಾಕ್ಷ್ಯಚಿತ್ರವನ್ನು ಯೂಟ್ಯೂಬ್‌ನಿಂದ ಬುಧವಾರ ತೆಗೆದುಹಾಕಲಾಗಿತ್ತು. ಈಗ ಬಿಬಿಸಿ ವೆಬ್‌ಸೈಟ್ ನಲ್ಲಿ ಅದನ್ನು ನೋಡಬಹುದಾಗಿದೆ.

ಇದನ್ನೂ ಓದಿರಿ: ಬರ್ತ್‌ ಡೇ ಪಾರ್ಟಿಗೆ ನುಗ್ಗಿ ಮುಸ್ಲಿಂ ಯುವಕರಿಗೆ ಥಳಿತ: ಬಜರಂಗದಳದ ದುಷ್ಕರ್ಮಿಗಳಿಗೆ ರಕ್ಷಣೆ; ಸಂತ್ರಸ್ತರೇ ಅರೆಸ್ಟ್!

ಗುಜರಾತ್‌ನ ಗೋಧ್ರಾದಲ್ಲಿ 2002ರ ಫೆಬ್ರವರಿ ಮತ್ತು ಮಾರ್ಚ್‌ ಸಮಯದಲ್ಲಿ ಹಿಂದೂ ಯಾತ್ರಾರ್ಥಿಗಳು ತುಂಬಿದ್ದ ಪ್ಯಾಸೆಂಜರ್ ರೈಲಿನ ಕೋಚ್‌ಗೆ ಬೆಂಕಿ ಹಚ್ಚಿದ ನಂತರ ಗುಜರಾತ್‌ನಲ್ಲಿ ದೊಡ್ಡ ಪ್ರಮಾಣದ ಕೋಮುಗಲಭೆ ಭುಗಿಲೆದ್ದಿತ್ತು. ಗಲಭೆಯಲ್ಲಿ 790 ಮುಸ್ಲಿಮರು ಮತ್ತು 254 ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ. ಈ ಗಲಭೆಯನ್ನು ತಡೆಯಲು ಸರ್ಕಾರ ಪ್ರಯತ್ನ ಮಾಡಿಲ್ಲ ಮತ್ತು ಗಲಭೆಗೆ ಮೋದಿಯವರೆ ಹೊಣೆ ಎಂಬ ಆರೋಪಗಳು ಕೇಳಿಬಂದಿದ್ದವು.

ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆದ ಈ ಹಿಂಸಾಚಾರವನ್ನು ತಡೆಯಲು ಗುಜರಾತ್ ಪೊಲೀಸರಿಗೆ ಕಾರ್ಯನಿರ್ವಹಿಸದಂತೆ ಮೋದಿ ತಡೆದಿದ್ದಾರೆ ಎಂದು ಬ್ರಿಟಿಷ್ ತನಿಖಾ ತಂಡ ಆರೋಪಿಸಿದೆ ಎಂದು ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಹೇಳಿಕೊಂಡಿದೆ. ಸಾಕ್ಷ್ಯ ಚಿತ್ರ ನೋಡಲು ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...