Homeಮುಖಪುಟಗುಜರಾತ್‌ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಾಚಿತ್ರ ಅಂತಾರಾಷ್ಟ್ರೀಯ ಪಿತೂರಿ ಎಂದ ವಕೀಲರ ಸಂಘ: ತನಿಖೆಗೆ ಒತ್ತಾಯ

ಗುಜರಾತ್‌ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಾಚಿತ್ರ ಅಂತಾರಾಷ್ಟ್ರೀಯ ಪಿತೂರಿ ಎಂದ ವಕೀಲರ ಸಂಘ: ತನಿಖೆಗೆ ಒತ್ತಾಯ

- Advertisement -
- Advertisement -

ಅಖಿಲ ಭಾರತ ವಕೀಲರ ಸಂಘದ (ಎಐಬಿಎ) ಅಧ್ಯಕ್ಷ ಮತ್ತು ಹಿರಿಯ ವಕೀಲ ಡಾ. ಆದೀಶ್ ಸಿ ಅಗರ್‌ವಾಲಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, “ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಬಿಬಿಸಿಯ ಇತ್ತೀಚಿನ ಸಾಕ್ಷ್ಯಚಿತ್ರದಲ್ಲಿನ ಅಂತಾರಾಷ್ಟ್ರೀಯ ಪಿತೂರಿ ಕುರಿತು ಎಲ್ಲ ಆಯಾಮದಲ್ಲೂ (360 ಡಿಗ್ರಿ) ತನಿಖೆಗೆ ಆದೇಶಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡುವ ಯೂಟ್ಯೂಬ್ ಚಾನೆಲ್‌ಗಳು ಮತ್ತು ಟ್ವಿಟರ್ ಹ್ಯಾಂಡಲ್‌ಗಳನ್ನು ನಿರ್ಬಂಧಿಸುವ ಸರ್ಕಾರದ ಕ್ರಮವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿರುವ ಎಐಬಿಎ ಅಧ್ಯಕ್ಷರು, “ಸುಪ್ರೀಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು, ನ್ಯಾಯಶಾಸ್ತ್ರಜ್ಞರು ಮತ್ತು ತನಿಖಾಧಿಕಾರಿಗಳನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಿ ಸಾಕ್ಷ್ಯಾಚಿತ್ರದ ವಿರುದ್ಧ ತನಿಖೆ ನಡೆಸಬೇಕು” ಎಂದು ಪತ್ರದಲ್ಲಿ ಕೋರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಸಾಕ್ಷ್ಯಚಿತ್ರದ ಹಿಂದೆ ಕಾಣದ ಕೈಗಳಿವೆ. ಅಪಖ್ಯಾತಿಗೊಳಗಾದ ಮತ್ತು ತಿರಸ್ಕರಿಸಲ್ಪಟ್ಟ ಸಾಕ್ಷಿಗಳೊಂದಿಗೆ ಕಾಲ್ಪನಿಕ ಕತೆಗಳನ್ನು ರೂಪಿಸಲು ಸೇರಿಕೊಂಡಿರುವ ಮನಸ್ಸುಗಳನ್ನು ಗುರುತಿಸಿ ತನಿಖೆ ಮಾಡಬೇಕು” ಎಂದು ಅಗರವಾಲಾ ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಸಾಕ್ಷ್ಯಚಿತ್ರ ಎಂದು ಕರೆಯಲ್ಪಡುವ ಇದು ಹೊಸ ವಿಚಾರಗಳನ್ನೇನೂ ಹೊಂದಿಲ್ಲ. ಅದರ ಹೆಚ್ಚಿನ ವಿಷಯಗಳನ್ನು ಸಾರ್ವಜನಿಕವಾಗಿ ಸಂಪೂರ್ಣವಾಗಿ ಪ್ರಕಟಿಸಲಾಗಿದೆ ಮತ್ತು ಚರ್ಚಿಸಲಾಗಿದೆ. ಭಾರತದ ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ಪರಿಗಣಿಸಿ, ಅವುಗಳನ್ನು ತಿರಸ್ಕರಿಸಿವೆ” ಎಂದು ತಿಳಿಸಿದ್ದಾರೆ.

“20 ವರ್ಷಗಳ ಹಿಂದಿನ ಗುಜರಾತ್ ಗಲಭೆಯು ಹಲವಾರು ಪದರಗಳನ್ನು ಹೊಂದಿದೆ. ಆದರೆ ಈ ಬಿಬಿಸಿ ಸಾಕ್ಷ್ಯಾಚಿತ್ರವು ಏಕಮುಖವಾಗಿದೆ. ಸಾಕಷ್ಟು ದುರುದ್ದೇಶಪೂರಿತವಾಗಿದೆ. ನಮ್ಮ ಪ್ರಧಾನಮಂತ್ರಿ ಮತ್ತು ರಾಷ್ಟ್ರ ಟೀಕೆ ಎದುರಿಸುವಂತಾಗಿದೆ” ಎಂದು ಗೃಹ ಸಚಿವರಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.

ತನಿಖೆಯ ಜೊತೆಗೆ, ಈ ಸಾಕ್ಷ್ಯಾಚಿತ್ರ ನಿರ್ಮಾಣವಾಗಲು ಕಾರಣವಾದ ಜನರನ್ನು ಗುರುತಿಸಬೇಕು, ಅವರ ಹಿನ್ನೆಲೆಯನ್ನು ತನಿಖೆ ಮಾಡಬೇಕು, ಬಿಬಿಸಿ ಮತ್ತು ಅದರ ಹಿಡಿತದಲ್ಲಿರುವ ದಾಖಲೆಗಳನ್ನು ಪಡೆದುಕೊಳ್ಳಬೇಕು, ಭಾರತ ಸರ್ಕಾರದೊಂದಿಗೆ ಇನ್ನಷ್ಟು ಸಹಕರಿಸಲು ಯುಕೆ ಸರ್ಕಾರಕ್ಕೆ ಪತ್ರ ಬರೆಯಬೇಕು ಎಂದು ಪತ್ರದಲ್ಲಿ ಎಐಬಿಎ ಅಧ್ಯಕ್ಷರು ಮನವಿ ಮಾಡಿದ್ದಾರೆ.

ಭಾನುವಾರ ಪ್ರತಿಕ್ರಿಯಿಸಿದ್ದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, “ದುರುದ್ದೇಶಪೂರಿತ ಪ್ರಚಾರಗಳನ್ನು ಮಾಡುವಾಗ ಕೆಲವರು ಸುಪ್ರೀಂಕೋರ್ಟ್‌ಗಿಂತ ಬಿಬಿಸಿಯನ್ನು ಹೆಚ್ಚು ಪರಿಗಣಿಸುತ್ತಾರೆ” ಎಂದು ಆರೋಪಿಸಿದ್ದರು.

ವೆಬ್‌ಸೈಟ್‌ನಲ್ಲಿ ಡಾಕ್ಯುಮೆಂಟರಿ ಪ್ರಕಟಿಸಿದ ಬಿಬಿಸಿ

2002ರ ಗುಜರಾತ್ ಗಲಭೆಯ ವಿಚಾರಣೆಗೆ ಬ್ರಿಟನ್ ಸರ್ಕಾರ ಕಳುಹಿಸಿದ ತಂಡವೊಂದು, “ಹಿಂಸಾಚಾರಕ್ಕೆ ಕಾರಣ ಅವತ್ತಿನ ಅಲ್ಲಿಯ ಭಯದ ವಾತಾವರಣ ಹಾಗಾಗಿ ಆ ಪರಿಸ್ಥಿತಿಗೆ ರಾಜ್ಯದ ಅವತ್ತಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರೇ ನೇರ ಹೊಣೆ” ಎಂದು ಉಲ್ಲೇಖಿಸಿರುವ ಬಿಬಿಸಿ ಸಾಕ್ಷ್ಯಚಿತ್ರವನ್ನು ಮತ್ತೆ ಮರು ಅಪ್ಲೋಡ್ ಮಾಡಲಾಗಿದೆ. ಅಧಿಕೃತವಾಗಿ ಮಂಗಳವಾರ ಬಿಡುಗಡೆಯಾಗಿದ್ದ ‘ಮೋದಿ ಪ್ರಶ್ನೆ’ ಎಂಬ ಶೀರ್ಷಿಕೆಯ ಈ ಸಾಕ್ಷ್ಯಚಿತ್ರವನ್ನು ಯೂಟ್ಯೂಬ್‌ನಿಂದ ಬುಧವಾರ ತೆಗೆದುಹಾಕಲಾಗಿತ್ತು. ಈಗ ಬಿಬಿಸಿ ವೆಬ್‌ಸೈಟ್ ನಲ್ಲಿ ಅದನ್ನು ನೋಡಬಹುದಾಗಿದೆ.

ಇದನ್ನೂ ಓದಿರಿ: ಬರ್ತ್‌ ಡೇ ಪಾರ್ಟಿಗೆ ನುಗ್ಗಿ ಮುಸ್ಲಿಂ ಯುವಕರಿಗೆ ಥಳಿತ: ಬಜರಂಗದಳದ ದುಷ್ಕರ್ಮಿಗಳಿಗೆ ರಕ್ಷಣೆ; ಸಂತ್ರಸ್ತರೇ ಅರೆಸ್ಟ್!

ಗುಜರಾತ್‌ನ ಗೋಧ್ರಾದಲ್ಲಿ 2002ರ ಫೆಬ್ರವರಿ ಮತ್ತು ಮಾರ್ಚ್‌ ಸಮಯದಲ್ಲಿ ಹಿಂದೂ ಯಾತ್ರಾರ್ಥಿಗಳು ತುಂಬಿದ್ದ ಪ್ಯಾಸೆಂಜರ್ ರೈಲಿನ ಕೋಚ್‌ಗೆ ಬೆಂಕಿ ಹಚ್ಚಿದ ನಂತರ ಗುಜರಾತ್‌ನಲ್ಲಿ ದೊಡ್ಡ ಪ್ರಮಾಣದ ಕೋಮುಗಲಭೆ ಭುಗಿಲೆದ್ದಿತ್ತು. ಗಲಭೆಯಲ್ಲಿ 790 ಮುಸ್ಲಿಮರು ಮತ್ತು 254 ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ. ಈ ಗಲಭೆಯನ್ನು ತಡೆಯಲು ಸರ್ಕಾರ ಪ್ರಯತ್ನ ಮಾಡಿಲ್ಲ ಮತ್ತು ಗಲಭೆಗೆ ಮೋದಿಯವರೆ ಹೊಣೆ ಎಂಬ ಆರೋಪಗಳು ಕೇಳಿಬಂದಿದ್ದವು.

ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆದ ಈ ಹಿಂಸಾಚಾರವನ್ನು ತಡೆಯಲು ಗುಜರಾತ್ ಪೊಲೀಸರಿಗೆ ಕಾರ್ಯನಿರ್ವಹಿಸದಂತೆ ಮೋದಿ ತಡೆದಿದ್ದಾರೆ ಎಂದು ಬ್ರಿಟಿಷ್ ತನಿಖಾ ತಂಡ ಆರೋಪಿಸಿದೆ ಎಂದು ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಹೇಳಿಕೊಂಡಿದೆ. ಸಾಕ್ಷ್ಯ ಚಿತ್ರ ನೋಡಲು ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...