Homeಮುಖಪುಟಗುಜರಾತ್‌ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಾಚಿತ್ರ ಅಂತಾರಾಷ್ಟ್ರೀಯ ಪಿತೂರಿ ಎಂದ ವಕೀಲರ ಸಂಘ: ತನಿಖೆಗೆ ಒತ್ತಾಯ

ಗುಜರಾತ್‌ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಾಚಿತ್ರ ಅಂತಾರಾಷ್ಟ್ರೀಯ ಪಿತೂರಿ ಎಂದ ವಕೀಲರ ಸಂಘ: ತನಿಖೆಗೆ ಒತ್ತಾಯ

- Advertisement -
- Advertisement -

ಅಖಿಲ ಭಾರತ ವಕೀಲರ ಸಂಘದ (ಎಐಬಿಎ) ಅಧ್ಯಕ್ಷ ಮತ್ತು ಹಿರಿಯ ವಕೀಲ ಡಾ. ಆದೀಶ್ ಸಿ ಅಗರ್‌ವಾಲಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, “ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಬಿಬಿಸಿಯ ಇತ್ತೀಚಿನ ಸಾಕ್ಷ್ಯಚಿತ್ರದಲ್ಲಿನ ಅಂತಾರಾಷ್ಟ್ರೀಯ ಪಿತೂರಿ ಕುರಿತು ಎಲ್ಲ ಆಯಾಮದಲ್ಲೂ (360 ಡಿಗ್ರಿ) ತನಿಖೆಗೆ ಆದೇಶಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡುವ ಯೂಟ್ಯೂಬ್ ಚಾನೆಲ್‌ಗಳು ಮತ್ತು ಟ್ವಿಟರ್ ಹ್ಯಾಂಡಲ್‌ಗಳನ್ನು ನಿರ್ಬಂಧಿಸುವ ಸರ್ಕಾರದ ಕ್ರಮವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿರುವ ಎಐಬಿಎ ಅಧ್ಯಕ್ಷರು, “ಸುಪ್ರೀಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು, ನ್ಯಾಯಶಾಸ್ತ್ರಜ್ಞರು ಮತ್ತು ತನಿಖಾಧಿಕಾರಿಗಳನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಿ ಸಾಕ್ಷ್ಯಾಚಿತ್ರದ ವಿರುದ್ಧ ತನಿಖೆ ನಡೆಸಬೇಕು” ಎಂದು ಪತ್ರದಲ್ಲಿ ಕೋರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಸಾಕ್ಷ್ಯಚಿತ್ರದ ಹಿಂದೆ ಕಾಣದ ಕೈಗಳಿವೆ. ಅಪಖ್ಯಾತಿಗೊಳಗಾದ ಮತ್ತು ತಿರಸ್ಕರಿಸಲ್ಪಟ್ಟ ಸಾಕ್ಷಿಗಳೊಂದಿಗೆ ಕಾಲ್ಪನಿಕ ಕತೆಗಳನ್ನು ರೂಪಿಸಲು ಸೇರಿಕೊಂಡಿರುವ ಮನಸ್ಸುಗಳನ್ನು ಗುರುತಿಸಿ ತನಿಖೆ ಮಾಡಬೇಕು” ಎಂದು ಅಗರವಾಲಾ ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಸಾಕ್ಷ್ಯಚಿತ್ರ ಎಂದು ಕರೆಯಲ್ಪಡುವ ಇದು ಹೊಸ ವಿಚಾರಗಳನ್ನೇನೂ ಹೊಂದಿಲ್ಲ. ಅದರ ಹೆಚ್ಚಿನ ವಿಷಯಗಳನ್ನು ಸಾರ್ವಜನಿಕವಾಗಿ ಸಂಪೂರ್ಣವಾಗಿ ಪ್ರಕಟಿಸಲಾಗಿದೆ ಮತ್ತು ಚರ್ಚಿಸಲಾಗಿದೆ. ಭಾರತದ ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ಪರಿಗಣಿಸಿ, ಅವುಗಳನ್ನು ತಿರಸ್ಕರಿಸಿವೆ” ಎಂದು ತಿಳಿಸಿದ್ದಾರೆ.

“20 ವರ್ಷಗಳ ಹಿಂದಿನ ಗುಜರಾತ್ ಗಲಭೆಯು ಹಲವಾರು ಪದರಗಳನ್ನು ಹೊಂದಿದೆ. ಆದರೆ ಈ ಬಿಬಿಸಿ ಸಾಕ್ಷ್ಯಾಚಿತ್ರವು ಏಕಮುಖವಾಗಿದೆ. ಸಾಕಷ್ಟು ದುರುದ್ದೇಶಪೂರಿತವಾಗಿದೆ. ನಮ್ಮ ಪ್ರಧಾನಮಂತ್ರಿ ಮತ್ತು ರಾಷ್ಟ್ರ ಟೀಕೆ ಎದುರಿಸುವಂತಾಗಿದೆ” ಎಂದು ಗೃಹ ಸಚಿವರಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.

ತನಿಖೆಯ ಜೊತೆಗೆ, ಈ ಸಾಕ್ಷ್ಯಾಚಿತ್ರ ನಿರ್ಮಾಣವಾಗಲು ಕಾರಣವಾದ ಜನರನ್ನು ಗುರುತಿಸಬೇಕು, ಅವರ ಹಿನ್ನೆಲೆಯನ್ನು ತನಿಖೆ ಮಾಡಬೇಕು, ಬಿಬಿಸಿ ಮತ್ತು ಅದರ ಹಿಡಿತದಲ್ಲಿರುವ ದಾಖಲೆಗಳನ್ನು ಪಡೆದುಕೊಳ್ಳಬೇಕು, ಭಾರತ ಸರ್ಕಾರದೊಂದಿಗೆ ಇನ್ನಷ್ಟು ಸಹಕರಿಸಲು ಯುಕೆ ಸರ್ಕಾರಕ್ಕೆ ಪತ್ರ ಬರೆಯಬೇಕು ಎಂದು ಪತ್ರದಲ್ಲಿ ಎಐಬಿಎ ಅಧ್ಯಕ್ಷರು ಮನವಿ ಮಾಡಿದ್ದಾರೆ.

ಭಾನುವಾರ ಪ್ರತಿಕ್ರಿಯಿಸಿದ್ದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, “ದುರುದ್ದೇಶಪೂರಿತ ಪ್ರಚಾರಗಳನ್ನು ಮಾಡುವಾಗ ಕೆಲವರು ಸುಪ್ರೀಂಕೋರ್ಟ್‌ಗಿಂತ ಬಿಬಿಸಿಯನ್ನು ಹೆಚ್ಚು ಪರಿಗಣಿಸುತ್ತಾರೆ” ಎಂದು ಆರೋಪಿಸಿದ್ದರು.

ವೆಬ್‌ಸೈಟ್‌ನಲ್ಲಿ ಡಾಕ್ಯುಮೆಂಟರಿ ಪ್ರಕಟಿಸಿದ ಬಿಬಿಸಿ

2002ರ ಗುಜರಾತ್ ಗಲಭೆಯ ವಿಚಾರಣೆಗೆ ಬ್ರಿಟನ್ ಸರ್ಕಾರ ಕಳುಹಿಸಿದ ತಂಡವೊಂದು, “ಹಿಂಸಾಚಾರಕ್ಕೆ ಕಾರಣ ಅವತ್ತಿನ ಅಲ್ಲಿಯ ಭಯದ ವಾತಾವರಣ ಹಾಗಾಗಿ ಆ ಪರಿಸ್ಥಿತಿಗೆ ರಾಜ್ಯದ ಅವತ್ತಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರೇ ನೇರ ಹೊಣೆ” ಎಂದು ಉಲ್ಲೇಖಿಸಿರುವ ಬಿಬಿಸಿ ಸಾಕ್ಷ್ಯಚಿತ್ರವನ್ನು ಮತ್ತೆ ಮರು ಅಪ್ಲೋಡ್ ಮಾಡಲಾಗಿದೆ. ಅಧಿಕೃತವಾಗಿ ಮಂಗಳವಾರ ಬಿಡುಗಡೆಯಾಗಿದ್ದ ‘ಮೋದಿ ಪ್ರಶ್ನೆ’ ಎಂಬ ಶೀರ್ಷಿಕೆಯ ಈ ಸಾಕ್ಷ್ಯಚಿತ್ರವನ್ನು ಯೂಟ್ಯೂಬ್‌ನಿಂದ ಬುಧವಾರ ತೆಗೆದುಹಾಕಲಾಗಿತ್ತು. ಈಗ ಬಿಬಿಸಿ ವೆಬ್‌ಸೈಟ್ ನಲ್ಲಿ ಅದನ್ನು ನೋಡಬಹುದಾಗಿದೆ.

ಇದನ್ನೂ ಓದಿರಿ: ಬರ್ತ್‌ ಡೇ ಪಾರ್ಟಿಗೆ ನುಗ್ಗಿ ಮುಸ್ಲಿಂ ಯುವಕರಿಗೆ ಥಳಿತ: ಬಜರಂಗದಳದ ದುಷ್ಕರ್ಮಿಗಳಿಗೆ ರಕ್ಷಣೆ; ಸಂತ್ರಸ್ತರೇ ಅರೆಸ್ಟ್!

ಗುಜರಾತ್‌ನ ಗೋಧ್ರಾದಲ್ಲಿ 2002ರ ಫೆಬ್ರವರಿ ಮತ್ತು ಮಾರ್ಚ್‌ ಸಮಯದಲ್ಲಿ ಹಿಂದೂ ಯಾತ್ರಾರ್ಥಿಗಳು ತುಂಬಿದ್ದ ಪ್ಯಾಸೆಂಜರ್ ರೈಲಿನ ಕೋಚ್‌ಗೆ ಬೆಂಕಿ ಹಚ್ಚಿದ ನಂತರ ಗುಜರಾತ್‌ನಲ್ಲಿ ದೊಡ್ಡ ಪ್ರಮಾಣದ ಕೋಮುಗಲಭೆ ಭುಗಿಲೆದ್ದಿತ್ತು. ಗಲಭೆಯಲ್ಲಿ 790 ಮುಸ್ಲಿಮರು ಮತ್ತು 254 ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ. ಈ ಗಲಭೆಯನ್ನು ತಡೆಯಲು ಸರ್ಕಾರ ಪ್ರಯತ್ನ ಮಾಡಿಲ್ಲ ಮತ್ತು ಗಲಭೆಗೆ ಮೋದಿಯವರೆ ಹೊಣೆ ಎಂಬ ಆರೋಪಗಳು ಕೇಳಿಬಂದಿದ್ದವು.

ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆದ ಈ ಹಿಂಸಾಚಾರವನ್ನು ತಡೆಯಲು ಗುಜರಾತ್ ಪೊಲೀಸರಿಗೆ ಕಾರ್ಯನಿರ್ವಹಿಸದಂತೆ ಮೋದಿ ತಡೆದಿದ್ದಾರೆ ಎಂದು ಬ್ರಿಟಿಷ್ ತನಿಖಾ ತಂಡ ಆರೋಪಿಸಿದೆ ಎಂದು ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಹೇಳಿಕೊಂಡಿದೆ. ಸಾಕ್ಷ್ಯ ಚಿತ್ರ ನೋಡಲು ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...