Homeಮುಖಪುಟಗುಜರಾತ್‌ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಾಚಿತ್ರ ಅಂತಾರಾಷ್ಟ್ರೀಯ ಪಿತೂರಿ ಎಂದ ವಕೀಲರ ಸಂಘ: ತನಿಖೆಗೆ ಒತ್ತಾಯ

ಗುಜರಾತ್‌ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಾಚಿತ್ರ ಅಂತಾರಾಷ್ಟ್ರೀಯ ಪಿತೂರಿ ಎಂದ ವಕೀಲರ ಸಂಘ: ತನಿಖೆಗೆ ಒತ್ತಾಯ

- Advertisement -
- Advertisement -

ಅಖಿಲ ಭಾರತ ವಕೀಲರ ಸಂಘದ (ಎಐಬಿಎ) ಅಧ್ಯಕ್ಷ ಮತ್ತು ಹಿರಿಯ ವಕೀಲ ಡಾ. ಆದೀಶ್ ಸಿ ಅಗರ್‌ವಾಲಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, “ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಬಿಬಿಸಿಯ ಇತ್ತೀಚಿನ ಸಾಕ್ಷ್ಯಚಿತ್ರದಲ್ಲಿನ ಅಂತಾರಾಷ್ಟ್ರೀಯ ಪಿತೂರಿ ಕುರಿತು ಎಲ್ಲ ಆಯಾಮದಲ್ಲೂ (360 ಡಿಗ್ರಿ) ತನಿಖೆಗೆ ಆದೇಶಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡುವ ಯೂಟ್ಯೂಬ್ ಚಾನೆಲ್‌ಗಳು ಮತ್ತು ಟ್ವಿಟರ್ ಹ್ಯಾಂಡಲ್‌ಗಳನ್ನು ನಿರ್ಬಂಧಿಸುವ ಸರ್ಕಾರದ ಕ್ರಮವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿರುವ ಎಐಬಿಎ ಅಧ್ಯಕ್ಷರು, “ಸುಪ್ರೀಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು, ನ್ಯಾಯಶಾಸ್ತ್ರಜ್ಞರು ಮತ್ತು ತನಿಖಾಧಿಕಾರಿಗಳನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಿ ಸಾಕ್ಷ್ಯಾಚಿತ್ರದ ವಿರುದ್ಧ ತನಿಖೆ ನಡೆಸಬೇಕು” ಎಂದು ಪತ್ರದಲ್ಲಿ ಕೋರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಸಾಕ್ಷ್ಯಚಿತ್ರದ ಹಿಂದೆ ಕಾಣದ ಕೈಗಳಿವೆ. ಅಪಖ್ಯಾತಿಗೊಳಗಾದ ಮತ್ತು ತಿರಸ್ಕರಿಸಲ್ಪಟ್ಟ ಸಾಕ್ಷಿಗಳೊಂದಿಗೆ ಕಾಲ್ಪನಿಕ ಕತೆಗಳನ್ನು ರೂಪಿಸಲು ಸೇರಿಕೊಂಡಿರುವ ಮನಸ್ಸುಗಳನ್ನು ಗುರುತಿಸಿ ತನಿಖೆ ಮಾಡಬೇಕು” ಎಂದು ಅಗರವಾಲಾ ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಸಾಕ್ಷ್ಯಚಿತ್ರ ಎಂದು ಕರೆಯಲ್ಪಡುವ ಇದು ಹೊಸ ವಿಚಾರಗಳನ್ನೇನೂ ಹೊಂದಿಲ್ಲ. ಅದರ ಹೆಚ್ಚಿನ ವಿಷಯಗಳನ್ನು ಸಾರ್ವಜನಿಕವಾಗಿ ಸಂಪೂರ್ಣವಾಗಿ ಪ್ರಕಟಿಸಲಾಗಿದೆ ಮತ್ತು ಚರ್ಚಿಸಲಾಗಿದೆ. ಭಾರತದ ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ಪರಿಗಣಿಸಿ, ಅವುಗಳನ್ನು ತಿರಸ್ಕರಿಸಿವೆ” ಎಂದು ತಿಳಿಸಿದ್ದಾರೆ.

“20 ವರ್ಷಗಳ ಹಿಂದಿನ ಗುಜರಾತ್ ಗಲಭೆಯು ಹಲವಾರು ಪದರಗಳನ್ನು ಹೊಂದಿದೆ. ಆದರೆ ಈ ಬಿಬಿಸಿ ಸಾಕ್ಷ್ಯಾಚಿತ್ರವು ಏಕಮುಖವಾಗಿದೆ. ಸಾಕಷ್ಟು ದುರುದ್ದೇಶಪೂರಿತವಾಗಿದೆ. ನಮ್ಮ ಪ್ರಧಾನಮಂತ್ರಿ ಮತ್ತು ರಾಷ್ಟ್ರ ಟೀಕೆ ಎದುರಿಸುವಂತಾಗಿದೆ” ಎಂದು ಗೃಹ ಸಚಿವರಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.

ತನಿಖೆಯ ಜೊತೆಗೆ, ಈ ಸಾಕ್ಷ್ಯಾಚಿತ್ರ ನಿರ್ಮಾಣವಾಗಲು ಕಾರಣವಾದ ಜನರನ್ನು ಗುರುತಿಸಬೇಕು, ಅವರ ಹಿನ್ನೆಲೆಯನ್ನು ತನಿಖೆ ಮಾಡಬೇಕು, ಬಿಬಿಸಿ ಮತ್ತು ಅದರ ಹಿಡಿತದಲ್ಲಿರುವ ದಾಖಲೆಗಳನ್ನು ಪಡೆದುಕೊಳ್ಳಬೇಕು, ಭಾರತ ಸರ್ಕಾರದೊಂದಿಗೆ ಇನ್ನಷ್ಟು ಸಹಕರಿಸಲು ಯುಕೆ ಸರ್ಕಾರಕ್ಕೆ ಪತ್ರ ಬರೆಯಬೇಕು ಎಂದು ಪತ್ರದಲ್ಲಿ ಎಐಬಿಎ ಅಧ್ಯಕ್ಷರು ಮನವಿ ಮಾಡಿದ್ದಾರೆ.

ಭಾನುವಾರ ಪ್ರತಿಕ್ರಿಯಿಸಿದ್ದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, “ದುರುದ್ದೇಶಪೂರಿತ ಪ್ರಚಾರಗಳನ್ನು ಮಾಡುವಾಗ ಕೆಲವರು ಸುಪ್ರೀಂಕೋರ್ಟ್‌ಗಿಂತ ಬಿಬಿಸಿಯನ್ನು ಹೆಚ್ಚು ಪರಿಗಣಿಸುತ್ತಾರೆ” ಎಂದು ಆರೋಪಿಸಿದ್ದರು.

ವೆಬ್‌ಸೈಟ್‌ನಲ್ಲಿ ಡಾಕ್ಯುಮೆಂಟರಿ ಪ್ರಕಟಿಸಿದ ಬಿಬಿಸಿ

2002ರ ಗುಜರಾತ್ ಗಲಭೆಯ ವಿಚಾರಣೆಗೆ ಬ್ರಿಟನ್ ಸರ್ಕಾರ ಕಳುಹಿಸಿದ ತಂಡವೊಂದು, “ಹಿಂಸಾಚಾರಕ್ಕೆ ಕಾರಣ ಅವತ್ತಿನ ಅಲ್ಲಿಯ ಭಯದ ವಾತಾವರಣ ಹಾಗಾಗಿ ಆ ಪರಿಸ್ಥಿತಿಗೆ ರಾಜ್ಯದ ಅವತ್ತಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರೇ ನೇರ ಹೊಣೆ” ಎಂದು ಉಲ್ಲೇಖಿಸಿರುವ ಬಿಬಿಸಿ ಸಾಕ್ಷ್ಯಚಿತ್ರವನ್ನು ಮತ್ತೆ ಮರು ಅಪ್ಲೋಡ್ ಮಾಡಲಾಗಿದೆ. ಅಧಿಕೃತವಾಗಿ ಮಂಗಳವಾರ ಬಿಡುಗಡೆಯಾಗಿದ್ದ ‘ಮೋದಿ ಪ್ರಶ್ನೆ’ ಎಂಬ ಶೀರ್ಷಿಕೆಯ ಈ ಸಾಕ್ಷ್ಯಚಿತ್ರವನ್ನು ಯೂಟ್ಯೂಬ್‌ನಿಂದ ಬುಧವಾರ ತೆಗೆದುಹಾಕಲಾಗಿತ್ತು. ಈಗ ಬಿಬಿಸಿ ವೆಬ್‌ಸೈಟ್ ನಲ್ಲಿ ಅದನ್ನು ನೋಡಬಹುದಾಗಿದೆ.

ಇದನ್ನೂ ಓದಿರಿ: ಬರ್ತ್‌ ಡೇ ಪಾರ್ಟಿಗೆ ನುಗ್ಗಿ ಮುಸ್ಲಿಂ ಯುವಕರಿಗೆ ಥಳಿತ: ಬಜರಂಗದಳದ ದುಷ್ಕರ್ಮಿಗಳಿಗೆ ರಕ್ಷಣೆ; ಸಂತ್ರಸ್ತರೇ ಅರೆಸ್ಟ್!

ಗುಜರಾತ್‌ನ ಗೋಧ್ರಾದಲ್ಲಿ 2002ರ ಫೆಬ್ರವರಿ ಮತ್ತು ಮಾರ್ಚ್‌ ಸಮಯದಲ್ಲಿ ಹಿಂದೂ ಯಾತ್ರಾರ್ಥಿಗಳು ತುಂಬಿದ್ದ ಪ್ಯಾಸೆಂಜರ್ ರೈಲಿನ ಕೋಚ್‌ಗೆ ಬೆಂಕಿ ಹಚ್ಚಿದ ನಂತರ ಗುಜರಾತ್‌ನಲ್ಲಿ ದೊಡ್ಡ ಪ್ರಮಾಣದ ಕೋಮುಗಲಭೆ ಭುಗಿಲೆದ್ದಿತ್ತು. ಗಲಭೆಯಲ್ಲಿ 790 ಮುಸ್ಲಿಮರು ಮತ್ತು 254 ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ. ಈ ಗಲಭೆಯನ್ನು ತಡೆಯಲು ಸರ್ಕಾರ ಪ್ರಯತ್ನ ಮಾಡಿಲ್ಲ ಮತ್ತು ಗಲಭೆಗೆ ಮೋದಿಯವರೆ ಹೊಣೆ ಎಂಬ ಆರೋಪಗಳು ಕೇಳಿಬಂದಿದ್ದವು.

ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆದ ಈ ಹಿಂಸಾಚಾರವನ್ನು ತಡೆಯಲು ಗುಜರಾತ್ ಪೊಲೀಸರಿಗೆ ಕಾರ್ಯನಿರ್ವಹಿಸದಂತೆ ಮೋದಿ ತಡೆದಿದ್ದಾರೆ ಎಂದು ಬ್ರಿಟಿಷ್ ತನಿಖಾ ತಂಡ ಆರೋಪಿಸಿದೆ ಎಂದು ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಹೇಳಿಕೊಂಡಿದೆ. ಸಾಕ್ಷ್ಯ ಚಿತ್ರ ನೋಡಲು ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...