Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ್ದ ದೆಹಲಿ ವಿವಿ ಆದೇಶ ರದ್ದುಗೊಳಿಸಿದ ಕೋರ್ಟ್

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ್ದ ದೆಹಲಿ ವಿವಿ ಆದೇಶ ರದ್ದುಗೊಳಿಸಿದ ಕೋರ್ಟ್

- Advertisement -
- Advertisement -

2002ರ ಗುಜರಾತ್ ಗೋದ್ರಾ ಹತ್ಯಾಕಾಂಡದಲ್ಲಿ ಮೋದಿ ಪಾತ್ರದ ಕುರಿತು ಬಿಬಿಸಿ ಸಾಕ್ಷ್ಯಚಿತ್ರ ನಿರ್ಮಿಸಿದೆ. ಆ ಸಾಕ್ಷ್ಯಚಿತ್ರವನ್ನು ಕ್ಯಾಂಪಸ್‌ನಲ್ಲಿ ಪ್ರದರ್ಶಿಸಲು ಮುಂದಾಗಿದ್ದ ಎನ್‌ಎಸ್‌ಯುಐ ನಾಯಕನನ್ನು ದೆಹಲಿ ವಿಶ್ವವಿದ್ಯಾಲಯವು ಒಂದು ವರ್ಷದವರೆಗೆ ಡಿಬಾರ್ ಮಾಡಿತ್ತು. ಇದೀಗ ಆ ಆದೇಶವನ್ನು ದೆಹಲಿ ನ್ಯಾಯಾಲಯ ರದ್ದುಗೊಳಿಸಿದೆ.

ಗುರುವಾರ ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರವ್ ಅವರು, ”ದೆಹಲಿ ವಿಶ್ವವಿದ್ಯಾಲಯವು ಹೊರಡಿಸಿದ ಆದೇಶವು ಸಹಜ ನ್ಯಾಯದ ಉಲ್ಲಂಘನೆಯಾಗಿದೆ’ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಇದರ ಜೊತೆಗೆ ನ್ಯಾಯಮೂರ್ತಿ ಕೌರವ್ ಅವರು ಆಡಳಿತಾತ್ಮಕ ಪ್ರಾಧಿಕಾರವು ಆದೇಶದ ಕಾರಣಗಳನ್ನು ನೀಡಬೇಕು ಎಂದು ಹೇಳಿದರು.

ಡಿಬಾರ್‌ಮೆಂಟ್ ಆದೇಶದ ಕುರಿತು ದೆಹಲಿ ಹೈಕೋರ್ಟ್ ತೀರ್ಪಿನಲ್ಲಿ, ”ಮಾರ್ಚ್ 10, 2023ರ ದೋಷಾರೋಪಣೆಯ ಆದೇಶವನ್ನು ಮುಂದುವರೆಸಲು ಸಾಧ್ಯವಿಲ್ಲ. ದೋಷಾರೋಪಣೆ ಮಾಡಲಾದ ಆದೇಶವನ್ನು ರದ್ದುಗೊಳಿಸಲಾಗಿದೆ. ಅಗತ್ಯ ಪರಿಣಾಮಗಳು ಅನುಸರಿಸುತ್ತವೆ” ಎಂದು ಹೇಳಲಾಗಿದೆ.

ದೆಹಲಿ ವಿಶ್ವವಿದ್ಯಾಲಯವು ಲೋಕೇಶ್ ಚುಗ್ ವಿರುದ್ಧ ಇತರ ಕ್ರಮಗಳನ್ನು ತೆಗೆದುಕೊಳ್ಳಲು ಸ್ವತಂತ್ರವಾಗಿದೆ. ಆದರೆ ಸಹಜ ನ್ಯಾಯದ ಉಲ್ಲಂಘನೆ ಮಾಡಿ ಡಿಬಾರ್ಮೆಂಟ್ ಆದೇಶವನ್ನು ರದ್ದುಗೊಳಿಸಿರುವುದು ಸರಿಯಲ್ಲ ಎಂದು ಹೈಕೋರ್ಟ್ ಗಮನಿಸಿದೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಸಂಶೋದನ ವಿದ್ಯಾರ್ಥಿಯನ್ನ ಡಿಬಾರ್ ಮಾಡಿದ್ದೇಕೆ?; ದೆಹಲಿ ವಿವಿಗೆ ಹೈಕೋರ್ಟ್ ನೋಟಿಸ್

ಜನವರಿ 27ರಂದು ದೆಹಲಿ ವಿವಿಯ ಕಲಾ ವಿಭಾಗದಲ್ಲಿ ಭುಗಿಲೆದ್ದ ಪ್ರತಿಭಟನೆಯ ‘ಮಾಸ್ಟರ್ ಮೈಂಡ್’ ಈ ಲೋಕೇಶ್ ಚುಗ್ ಎಂದು ಕೆಲ ದಿನಗಳ ಹಿಂದೆ, ದೆಹಲಿ ವಿಶ್ವವಿದ್ಯಾನಿಲಯವು ಹೈಕೋರ್ಟ್‌ನಲ್ಲಿ ವಾದಿಸಿತ್ತು.

”ಅರ್ಜಿದಾರರು 27.01.2023 ರಂದು ಸಂಜೆ 4:00 ಗಂಟೆಗೆ ದೆಹಲಿ ವಿಶ್ವವಿದ್ಯಾಲಯದ ಕಲಾ ವಿಭಾಗದ ಗೇಟ್ ನಂ. 4 ರ ಮುಂಭಾಗದಲ್ಲಿ ನಿಷೇಧಿತ BBC ಸಾಕ್ಷ್ಯಚಿತ್ರದ ‘ಪ್ರದರ್ಶನ’ದಲ್ಲಿ ಭಾಗವಹಿಸಿದ್ದರು. ಇದು ಅಶಿಸ್ತಿನ ಕೃತ್ಯಕ್ಕೆ ಸಮಾನವಾಗಿದೆ” ಎಂದು ದೆಹಲಿ ವಿಶ್ವವಿದ್ಯಾನಿಲಯ ರಿಜಿಸ್ಟ್ರಾರ್ ಅವರು ಚುಗ್ ಯಾವುದೇ ವಿಶ್ವವಿದ್ಯಾಲಯ, ಕಾಲೇಜು ಅಥವಾ ವಿಭಾಗೀಯ ಪರೀಕ್ಷೆಯಲ್ಲಿ ಒಂದು ವರ್ಷದ ಅವಧಿಗೆ ಹಾಜರಾಗದಂತೆ ಡಿಬಾರ್ ಮಾಡಿ ನೋಟಿಸ್ ಜಾರಿ ಮಾಡಿದ್ದರು.

ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಕಚೇರಿಯು ಪರೀಕ್ಷೆಯಿಂದ ತಮ್ಮನ್ನು ನಿಷೇಧಿಸುವಂತೆ ನೀಡಿದ್ದ ನೋಟಿಸ್‌ನ್ನು ಪ್ರಶ್ನಿಸಿ ಚುಗ್ ಅವರು ಏಪ್ರಿಲ್ 13ರಂದು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

‘ಭಾರತ: ಮೋದಿ ಪ್ರಶ್ನೆ’ ಶೀರ್ಷಿಕೆಯ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರವು ದೇಶದಲ್ಲಿ ನಿಷೇಧ ಹೇರಿತ್ತು. ಆದಾಗ್ಯೂ ಹಲವೆಡೆ ಪ್ರದರ್ಶಿಸಲಾಯಿತು. ಮತ್ತು ಈ ಬಗ್ಗೆ ಪ್ರತಿಭಟನೆಗಲು ನಡೆದವು. ಸರ್ಕಾರ ನಿಷೇಧಿಸಿದ ನಡೆಗೆ ದೇಶ, ವಿದೇಶಗಳಲ್ಲೂ ಖಂಡನೆ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...