Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ್ದ ದೆಹಲಿ ವಿವಿ ಆದೇಶ ರದ್ದುಗೊಳಿಸಿದ ಕೋರ್ಟ್

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ್ದ ದೆಹಲಿ ವಿವಿ ಆದೇಶ ರದ್ದುಗೊಳಿಸಿದ ಕೋರ್ಟ್

- Advertisement -
- Advertisement -

2002ರ ಗುಜರಾತ್ ಗೋದ್ರಾ ಹತ್ಯಾಕಾಂಡದಲ್ಲಿ ಮೋದಿ ಪಾತ್ರದ ಕುರಿತು ಬಿಬಿಸಿ ಸಾಕ್ಷ್ಯಚಿತ್ರ ನಿರ್ಮಿಸಿದೆ. ಆ ಸಾಕ್ಷ್ಯಚಿತ್ರವನ್ನು ಕ್ಯಾಂಪಸ್‌ನಲ್ಲಿ ಪ್ರದರ್ಶಿಸಲು ಮುಂದಾಗಿದ್ದ ಎನ್‌ಎಸ್‌ಯುಐ ನಾಯಕನನ್ನು ದೆಹಲಿ ವಿಶ್ವವಿದ್ಯಾಲಯವು ಒಂದು ವರ್ಷದವರೆಗೆ ಡಿಬಾರ್ ಮಾಡಿತ್ತು. ಇದೀಗ ಆ ಆದೇಶವನ್ನು ದೆಹಲಿ ನ್ಯಾಯಾಲಯ ರದ್ದುಗೊಳಿಸಿದೆ.

ಗುರುವಾರ ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರವ್ ಅವರು, ”ದೆಹಲಿ ವಿಶ್ವವಿದ್ಯಾಲಯವು ಹೊರಡಿಸಿದ ಆದೇಶವು ಸಹಜ ನ್ಯಾಯದ ಉಲ್ಲಂಘನೆಯಾಗಿದೆ’ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಇದರ ಜೊತೆಗೆ ನ್ಯಾಯಮೂರ್ತಿ ಕೌರವ್ ಅವರು ಆಡಳಿತಾತ್ಮಕ ಪ್ರಾಧಿಕಾರವು ಆದೇಶದ ಕಾರಣಗಳನ್ನು ನೀಡಬೇಕು ಎಂದು ಹೇಳಿದರು.

ಡಿಬಾರ್‌ಮೆಂಟ್ ಆದೇಶದ ಕುರಿತು ದೆಹಲಿ ಹೈಕೋರ್ಟ್ ತೀರ್ಪಿನಲ್ಲಿ, ”ಮಾರ್ಚ್ 10, 2023ರ ದೋಷಾರೋಪಣೆಯ ಆದೇಶವನ್ನು ಮುಂದುವರೆಸಲು ಸಾಧ್ಯವಿಲ್ಲ. ದೋಷಾರೋಪಣೆ ಮಾಡಲಾದ ಆದೇಶವನ್ನು ರದ್ದುಗೊಳಿಸಲಾಗಿದೆ. ಅಗತ್ಯ ಪರಿಣಾಮಗಳು ಅನುಸರಿಸುತ್ತವೆ” ಎಂದು ಹೇಳಲಾಗಿದೆ.

ದೆಹಲಿ ವಿಶ್ವವಿದ್ಯಾಲಯವು ಲೋಕೇಶ್ ಚುಗ್ ವಿರುದ್ಧ ಇತರ ಕ್ರಮಗಳನ್ನು ತೆಗೆದುಕೊಳ್ಳಲು ಸ್ವತಂತ್ರವಾಗಿದೆ. ಆದರೆ ಸಹಜ ನ್ಯಾಯದ ಉಲ್ಲಂಘನೆ ಮಾಡಿ ಡಿಬಾರ್ಮೆಂಟ್ ಆದೇಶವನ್ನು ರದ್ದುಗೊಳಿಸಿರುವುದು ಸರಿಯಲ್ಲ ಎಂದು ಹೈಕೋರ್ಟ್ ಗಮನಿಸಿದೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಸಂಶೋದನ ವಿದ್ಯಾರ್ಥಿಯನ್ನ ಡಿಬಾರ್ ಮಾಡಿದ್ದೇಕೆ?; ದೆಹಲಿ ವಿವಿಗೆ ಹೈಕೋರ್ಟ್ ನೋಟಿಸ್

ಜನವರಿ 27ರಂದು ದೆಹಲಿ ವಿವಿಯ ಕಲಾ ವಿಭಾಗದಲ್ಲಿ ಭುಗಿಲೆದ್ದ ಪ್ರತಿಭಟನೆಯ ‘ಮಾಸ್ಟರ್ ಮೈಂಡ್’ ಈ ಲೋಕೇಶ್ ಚುಗ್ ಎಂದು ಕೆಲ ದಿನಗಳ ಹಿಂದೆ, ದೆಹಲಿ ವಿಶ್ವವಿದ್ಯಾನಿಲಯವು ಹೈಕೋರ್ಟ್‌ನಲ್ಲಿ ವಾದಿಸಿತ್ತು.

”ಅರ್ಜಿದಾರರು 27.01.2023 ರಂದು ಸಂಜೆ 4:00 ಗಂಟೆಗೆ ದೆಹಲಿ ವಿಶ್ವವಿದ್ಯಾಲಯದ ಕಲಾ ವಿಭಾಗದ ಗೇಟ್ ನಂ. 4 ರ ಮುಂಭಾಗದಲ್ಲಿ ನಿಷೇಧಿತ BBC ಸಾಕ್ಷ್ಯಚಿತ್ರದ ‘ಪ್ರದರ್ಶನ’ದಲ್ಲಿ ಭಾಗವಹಿಸಿದ್ದರು. ಇದು ಅಶಿಸ್ತಿನ ಕೃತ್ಯಕ್ಕೆ ಸಮಾನವಾಗಿದೆ” ಎಂದು ದೆಹಲಿ ವಿಶ್ವವಿದ್ಯಾನಿಲಯ ರಿಜಿಸ್ಟ್ರಾರ್ ಅವರು ಚುಗ್ ಯಾವುದೇ ವಿಶ್ವವಿದ್ಯಾಲಯ, ಕಾಲೇಜು ಅಥವಾ ವಿಭಾಗೀಯ ಪರೀಕ್ಷೆಯಲ್ಲಿ ಒಂದು ವರ್ಷದ ಅವಧಿಗೆ ಹಾಜರಾಗದಂತೆ ಡಿಬಾರ್ ಮಾಡಿ ನೋಟಿಸ್ ಜಾರಿ ಮಾಡಿದ್ದರು.

ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಕಚೇರಿಯು ಪರೀಕ್ಷೆಯಿಂದ ತಮ್ಮನ್ನು ನಿಷೇಧಿಸುವಂತೆ ನೀಡಿದ್ದ ನೋಟಿಸ್‌ನ್ನು ಪ್ರಶ್ನಿಸಿ ಚುಗ್ ಅವರು ಏಪ್ರಿಲ್ 13ರಂದು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

‘ಭಾರತ: ಮೋದಿ ಪ್ರಶ್ನೆ’ ಶೀರ್ಷಿಕೆಯ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರವು ದೇಶದಲ್ಲಿ ನಿಷೇಧ ಹೇರಿತ್ತು. ಆದಾಗ್ಯೂ ಹಲವೆಡೆ ಪ್ರದರ್ಶಿಸಲಾಯಿತು. ಮತ್ತು ಈ ಬಗ್ಗೆ ಪ್ರತಿಭಟನೆಗಲು ನಡೆದವು. ಸರ್ಕಾರ ನಿಷೇಧಿಸಿದ ನಡೆಗೆ ದೇಶ, ವಿದೇಶಗಳಲ್ಲೂ ಖಂಡನೆ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...