Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ್ದ ದೆಹಲಿ ವಿವಿ ಆದೇಶ ರದ್ದುಗೊಳಿಸಿದ ಕೋರ್ಟ್

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ್ದ ದೆಹಲಿ ವಿವಿ ಆದೇಶ ರದ್ದುಗೊಳಿಸಿದ ಕೋರ್ಟ್

- Advertisement -
- Advertisement -

2002ರ ಗುಜರಾತ್ ಗೋದ್ರಾ ಹತ್ಯಾಕಾಂಡದಲ್ಲಿ ಮೋದಿ ಪಾತ್ರದ ಕುರಿತು ಬಿಬಿಸಿ ಸಾಕ್ಷ್ಯಚಿತ್ರ ನಿರ್ಮಿಸಿದೆ. ಆ ಸಾಕ್ಷ್ಯಚಿತ್ರವನ್ನು ಕ್ಯಾಂಪಸ್‌ನಲ್ಲಿ ಪ್ರದರ್ಶಿಸಲು ಮುಂದಾಗಿದ್ದ ಎನ್‌ಎಸ್‌ಯುಐ ನಾಯಕನನ್ನು ದೆಹಲಿ ವಿಶ್ವವಿದ್ಯಾಲಯವು ಒಂದು ವರ್ಷದವರೆಗೆ ಡಿಬಾರ್ ಮಾಡಿತ್ತು. ಇದೀಗ ಆ ಆದೇಶವನ್ನು ದೆಹಲಿ ನ್ಯಾಯಾಲಯ ರದ್ದುಗೊಳಿಸಿದೆ.

ಗುರುವಾರ ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರವ್ ಅವರು, ”ದೆಹಲಿ ವಿಶ್ವವಿದ್ಯಾಲಯವು ಹೊರಡಿಸಿದ ಆದೇಶವು ಸಹಜ ನ್ಯಾಯದ ಉಲ್ಲಂಘನೆಯಾಗಿದೆ’ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಇದರ ಜೊತೆಗೆ ನ್ಯಾಯಮೂರ್ತಿ ಕೌರವ್ ಅವರು ಆಡಳಿತಾತ್ಮಕ ಪ್ರಾಧಿಕಾರವು ಆದೇಶದ ಕಾರಣಗಳನ್ನು ನೀಡಬೇಕು ಎಂದು ಹೇಳಿದರು.

ಡಿಬಾರ್‌ಮೆಂಟ್ ಆದೇಶದ ಕುರಿತು ದೆಹಲಿ ಹೈಕೋರ್ಟ್ ತೀರ್ಪಿನಲ್ಲಿ, ”ಮಾರ್ಚ್ 10, 2023ರ ದೋಷಾರೋಪಣೆಯ ಆದೇಶವನ್ನು ಮುಂದುವರೆಸಲು ಸಾಧ್ಯವಿಲ್ಲ. ದೋಷಾರೋಪಣೆ ಮಾಡಲಾದ ಆದೇಶವನ್ನು ರದ್ದುಗೊಳಿಸಲಾಗಿದೆ. ಅಗತ್ಯ ಪರಿಣಾಮಗಳು ಅನುಸರಿಸುತ್ತವೆ” ಎಂದು ಹೇಳಲಾಗಿದೆ.

ದೆಹಲಿ ವಿಶ್ವವಿದ್ಯಾಲಯವು ಲೋಕೇಶ್ ಚುಗ್ ವಿರುದ್ಧ ಇತರ ಕ್ರಮಗಳನ್ನು ತೆಗೆದುಕೊಳ್ಳಲು ಸ್ವತಂತ್ರವಾಗಿದೆ. ಆದರೆ ಸಹಜ ನ್ಯಾಯದ ಉಲ್ಲಂಘನೆ ಮಾಡಿ ಡಿಬಾರ್ಮೆಂಟ್ ಆದೇಶವನ್ನು ರದ್ದುಗೊಳಿಸಿರುವುದು ಸರಿಯಲ್ಲ ಎಂದು ಹೈಕೋರ್ಟ್ ಗಮನಿಸಿದೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಸಂಶೋದನ ವಿದ್ಯಾರ್ಥಿಯನ್ನ ಡಿಬಾರ್ ಮಾಡಿದ್ದೇಕೆ?; ದೆಹಲಿ ವಿವಿಗೆ ಹೈಕೋರ್ಟ್ ನೋಟಿಸ್

ಜನವರಿ 27ರಂದು ದೆಹಲಿ ವಿವಿಯ ಕಲಾ ವಿಭಾಗದಲ್ಲಿ ಭುಗಿಲೆದ್ದ ಪ್ರತಿಭಟನೆಯ ‘ಮಾಸ್ಟರ್ ಮೈಂಡ್’ ಈ ಲೋಕೇಶ್ ಚುಗ್ ಎಂದು ಕೆಲ ದಿನಗಳ ಹಿಂದೆ, ದೆಹಲಿ ವಿಶ್ವವಿದ್ಯಾನಿಲಯವು ಹೈಕೋರ್ಟ್‌ನಲ್ಲಿ ವಾದಿಸಿತ್ತು.

”ಅರ್ಜಿದಾರರು 27.01.2023 ರಂದು ಸಂಜೆ 4:00 ಗಂಟೆಗೆ ದೆಹಲಿ ವಿಶ್ವವಿದ್ಯಾಲಯದ ಕಲಾ ವಿಭಾಗದ ಗೇಟ್ ನಂ. 4 ರ ಮುಂಭಾಗದಲ್ಲಿ ನಿಷೇಧಿತ BBC ಸಾಕ್ಷ್ಯಚಿತ್ರದ ‘ಪ್ರದರ್ಶನ’ದಲ್ಲಿ ಭಾಗವಹಿಸಿದ್ದರು. ಇದು ಅಶಿಸ್ತಿನ ಕೃತ್ಯಕ್ಕೆ ಸಮಾನವಾಗಿದೆ” ಎಂದು ದೆಹಲಿ ವಿಶ್ವವಿದ್ಯಾನಿಲಯ ರಿಜಿಸ್ಟ್ರಾರ್ ಅವರು ಚುಗ್ ಯಾವುದೇ ವಿಶ್ವವಿದ್ಯಾಲಯ, ಕಾಲೇಜು ಅಥವಾ ವಿಭಾಗೀಯ ಪರೀಕ್ಷೆಯಲ್ಲಿ ಒಂದು ವರ್ಷದ ಅವಧಿಗೆ ಹಾಜರಾಗದಂತೆ ಡಿಬಾರ್ ಮಾಡಿ ನೋಟಿಸ್ ಜಾರಿ ಮಾಡಿದ್ದರು.

ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಕಚೇರಿಯು ಪರೀಕ್ಷೆಯಿಂದ ತಮ್ಮನ್ನು ನಿಷೇಧಿಸುವಂತೆ ನೀಡಿದ್ದ ನೋಟಿಸ್‌ನ್ನು ಪ್ರಶ್ನಿಸಿ ಚುಗ್ ಅವರು ಏಪ್ರಿಲ್ 13ರಂದು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

‘ಭಾರತ: ಮೋದಿ ಪ್ರಶ್ನೆ’ ಶೀರ್ಷಿಕೆಯ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರವು ದೇಶದಲ್ಲಿ ನಿಷೇಧ ಹೇರಿತ್ತು. ಆದಾಗ್ಯೂ ಹಲವೆಡೆ ಪ್ರದರ್ಶಿಸಲಾಯಿತು. ಮತ್ತು ಈ ಬಗ್ಗೆ ಪ್ರತಿಭಟನೆಗಲು ನಡೆದವು. ಸರ್ಕಾರ ನಿಷೇಧಿಸಿದ ನಡೆಗೆ ದೇಶ, ವಿದೇಶಗಳಲ್ಲೂ ಖಂಡನೆ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...