Homeಚಳವಳಿಜೆಎನ್‌ಯು ವಿದ್ಯಾರ್ಥಿ ಸಂಘದಿಂದ ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ; ರದ್ದು ಮಾಡಿ ಎಂದ...

ಜೆಎನ್‌ಯು ವಿದ್ಯಾರ್ಥಿ ಸಂಘದಿಂದ ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ; ರದ್ದು ಮಾಡಿ ಎಂದ ವಿಶ್ವವಿದ್ಯಾಲಯ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಕುರಿತಾಗಿ ಬಿಬಿಸಿ ರಚಿಸಿರುವ ‘‘ಇಂಡಿಯಾ: ಮೋದಿ ಪ್ರಶ್ನೆ” ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಜವಾಹರ್‌‌‌ಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ವಿದ್ಯಾರ್ಥಿ ಸಂಘ ಪ್ರದರ್ಶಿಸಲು ಯೋಜಿಸಿದೆ. ಆದರೆ ಈ ಪ್ರದರ್ಶನವನ್ನು ರದ್ದುಗೊಳಿಸುವಂತೆ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳನ್ನು ಕೇಳಿದೆ.

ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಜನವರಿ 24 ರಂದು ರಾತ್ರಿ 9 ಗಂಟೆಗೆ ನಿಗದಿ ಪಡಿಸಲಾಗಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಜೆಎನ್‌ಯು ವಿದ್ಯಾರ್ಥಿ ಸಂಘದ ಹೆಸರಿನಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕರಪತ್ರವನ್ನು ಬಿಡುಗಡೆ ಮಾಡಿರುವುದು ಆಡಳಿತದ ಗಮನಕ್ಕೆ ಬಂದಿದೆ ಎಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಸಲಹೆಯಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕಾರ್ಯಕ್ರಮಕ್ಕೆ ಆಡಳಿತದಿಂದ ಯಾವುದೇ ಪೂರ್ವಾನುಮತಿ ಪಡೆದಿಲ್ಲ ಎಂದು ರಿಜಿಸ್ಟ್ರಾರ್ ಹೇಳಿದ್ದು,‘‘ಇಂತಹ ಅನಧಿಕೃತ ಚಟುವಟಿಕೆಯು ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನ ಶಾಂತಿ ಮತ್ತು ಸಾಮರಸ್ಯವನ್ನು ಕದಡಬಹುದು” ಎಂದು ಸಲಹೆ ಹೇಳಿದೆ.

“ಸಂಬಂಧಿತ ವಿದ್ಯಾರ್ಥಿಗಳು/ವ್ಯಕ್ತಿಗಳು ಪ್ರಸ್ತಾವಿತ ಕಾರ್ಯಕ್ರಮವನ್ನು ತಕ್ಷಣವೇ ರದ್ದುಗೊಳಿಸುವಂತೆ ದೃಢವಾಗಿ ಸೂಚಿಸಲಾಗಿದೆ. ಅದು ವಿಫಲವಾದರೆ ವಿಶ್ವವಿದ್ಯಾನಿಲಯದ ನಿಯಮಗಳ ಪ್ರಕಾರ ಕಟ್ಟುನಿಟ್ಟಾದ ಶಿಸ್ತು ಕ್ರಮವನ್ನು ಪ್ರಾರಂಭಿಸಬಹುದು” ಎಂದು ರಿಜಿಸ್ಟ್ರಾರ್‌ ಹೇಳಿದ್ದಾರೆ.

ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷೆ ಐಷೆ ಘೋಷ್‌ ಅವರು,“ಅತಿದೊಡ್ಡ ‘ಪ್ರಜಾಪ್ರಭುತ್ವ’ದ ‘ಚುನಾಯಿತ ಸರ್ಕಾರ’ವು ‘ನಿಷೇಧಿಸಿದ’ ಸಾಕ್ಷ್ಯಚಿತ್ರ ಪ್ರದರ್ಶನಕ್ಕಾಗಿ ನಮ್ಮೊಂದಿಗೆ ಸೇರಿ.” ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ. ಪ್ರದರ್ಶನವನ್ನು ಜೆಎನ್‌ಯು ವಿದ್ಯಾರ್ಥಿ ಒಕ್ಕೂಟದ ಕಚೇರಿಯಲ್ಲಿ ಪ್ರದರ್ಶಿಸುವುದಾಗಿ ಅವರು ಹಂಚಿಕೊಂಡಿರುವ ಪೋಸ್ಟರ್‌‌ನಲ್ಲಿ ಬರೆಯಲಾಗಿದೆ.

2002 ರ ಗುಜರಾತ್ ಗಲಭೆಗಳು ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅಡಿಯಲ್ಲಿ ಕೇಂದ್ರದ CAA ನಂತಹ ಕೆಲವು ನೀತಿಗಳನ್ನು ಒಳಗೊಂಡಿರುವ ಬಗ್ಗೆ “ಭಾರತ: ಮೋದಿ ಪ್ರಶ್ನೆ” ಎಂಬ ಶೀರ್ಷಿಕೆಯ ಸಾಕ್ಷ್ಯಚಿತ್ರವು ಚರ್ಚಿಸಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯವು, “ಸಾಕ್ಷ್ಯಚಿತ್ರವು ಪಕ್ಷಪಾತದಿಂದ ಕೂಡಿದ್ದು, ವಸ್ತುನಿಷ್ಠತೆಯ ಕೊರತೆ ಮತ್ತು ಇನ್ನೂ ಮುಂದುವರಿದ ವಸಾಹತುಶಾಹಿ ಮನಸ್ಥಿತಿಯನ್ನು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಹೇಳಿದ್ದರು.

ಇದನ್ನೂ ಓದಿ: ಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ ಖಾತೆ ಡಿಲೀಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...