Homeಚಳವಳಿಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ | CPI(M) ಕೌನ್ಸಿಲರ್‌‌ ಮತ್ತು DYFI ಕಾರ್ಯಕರ್ತರನ್ನು ಬಂಧಿಸಿದ ಚೆನ್ನೈ ಪೊಲೀಸರು

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ | CPI(M) ಕೌನ್ಸಿಲರ್‌‌ ಮತ್ತು DYFI ಕಾರ್ಯಕರ್ತರನ್ನು ಬಂಧಿಸಿದ ಚೆನ್ನೈ ಪೊಲೀಸರು

- Advertisement -
- Advertisement -

ಪ್ರಧಾನಮಂತ್ರಿ ಮೋದಿಯವರ ಕುರಿತಾಗಿ ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ್ದಕ್ಕಾಗಿ ಗ್ರೇಟರ್ ಚೆನ್ನೈ ಕಾರ್ಪೊರೇಷನ್ (GCC)ನ ತೆನಾಂಪೇಟೆಯ ಕೌನ್ಸಿಲರ್ ಎ. ಪ್ರಿಯದರ್ಶಿನಿ ಅವರನ್ನು ಗುರುವಾರ ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಸಾಕ್ಷ್ಯಚಿತ್ರಗಳ ಲಿಂಕನ್ನು ಒಕ್ಕೂಟ ಸರ್ಕಾರದ ತಡೆ ಹಿಡಿದಿದ್ದನ್ನು ವಿರೋಧಿಸಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ದೇಶದಾದ್ಯಂತ ಹೋರಾಟಗಾರರು ಮತ್ತು ವಿಪಕ್ಷಗಳು ನಡೆಸುತ್ತಿದ್ದಾರೆ.

ಚೆನ್ನೈನ ಟಿಪಿ ಛತ್ರಂನ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ದ ಅಂಗ ಸಂಸ್ಥೆ ಡಿವೈಎಫ್‌ಐ ಸಂಘಟನೆ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಆಯೋಜಿಸಿತ್ತು. ಪ್ರತಿಭಟನಾಕಾರರು ತಮ್ಮ ಫೋನ್‌ಗಳಲ್ಲಿ ಸಾಕ್ಷ್ಯಚಿತ್ರಗಳನ್ನು ಒಟ್ಟಿಗೆ ವೀಕ್ಷಿಸಲು ಉದ್ದೇಶಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಕೌನ್ಸಿಲರ್‌‌ ಪ್ರಿಯದರ್ಶಿನಿ ಸೇರಿದಂತೆ 14 ಪ್ರತಿಭಟನಾಕಾರರನ್ನು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ನಂತರ ಎಲ್ಲಾ 14 ಮಂದಿಯನ್ನು ಬಿಡುಗಡೆ ಮಾಡಲಾಯಿದೆ. ಆದಾಗ್ಯೂ, ಪೊಲೀಸರು ಬರುವ ಮೊದಲು ಪ್ರತಿಭಟನಾಕಾರರು ಸಾಕ್ಷ್ಯಚಿತ್ರವನ್ನು ವೀಕ್ಷಿಸಲು ಸಾಧ್ಯವಾಯಿತು ಎಂದು ಕೌನ್ಸಿಲರ್ ಪ್ರಿಯದರ್ಶಿನಿ ಅವರ ಕುಟುಂಬವು ಹೇಳಿದೆ.

ಸಿಪಿಐ(ಎಂ)ನ ಪಕ್ಷದವಾಗಿರುವ ಪ್ರಿಯದರ್ಶಿನಿ ಅವರು ಕಳೆದ ವರ್ಷ ನಡೆದ ಸ್ಥಳೀಯ ನಗರ ಸಂಸ್ಥೆ ಚುನಾವಣೆಯಲ್ಲಿ ತೆನಾಂಪೇಟೆಯ ವಾರ್ಡ್ ಸಂಖ್ಯೆ 98 ರಿಂದ 5,253 ಮತಗಳ ಅಂತರದಿಂದ ಗೆದ್ದಿದ್ದರು. ಗೆಲ್ಲುವ ವೇಳೆ ಅವರು 21 ನೇ ವಯಸ್ಸಿನವರಾಗಿದ್ದು, ಅವರು ಚೆನ್ನೈನ ಅತ್ಯಂತ ಕಿರಿಯ ಕೌನ್ಸಿಲರ್ ಆಗಿದ್ದಾರೆ.

ಗುಜರಾತ್‌ ಗಲಭೆ ನಡೆದ ಸಂದರ್ಭದಲ್ಲಿ ಪೊಲೀಸರು ಕ್ರಮ ಕೈಗೊಳ್ಳದಂತೆ ತಡೆದಿದ್ದರು ಎಂದು ಬಿಬಿಸಿ ಸಾಕ್ಷ್ಯಚಿತ್ರ ಆರೋಪಿಸಿದೆ. ಯುಕೆ ಸರ್ಕಾರದ ಆಂತರಿಕ ವರದಿಯನ್ನು ಉಲ್ಲೇಖಿಸಿರುವ ಸಾಕ್ಷ್ಯಚಿತ್ರವು ‘ವಿಚಾರಣೆ ನಡೆಸಿದ ಬ್ರಿಟಿಷ್ ತಂಡವು, ಘಟನೆಗಳಿಗೆ ನರೇಂದ್ರ ಮೋದಿ ಅವರೇ ನೇರ ಹೊಣೆ’ ಎಂದು ಹೇಳುತ್ತದೆ.

ಅದಾಗ್ಯೂ ಗುಜರಾತ್‌ ಸರ್ಕಾರವು ಸಾಕ್ಷ್ಯಚಿತ್ರವನ್ನು “ಪ್ರೊಪಗಾಂಡ” ಎಂದು ಕರೆದಿದ್ದು, ಐಟಿ ನಿಯಮಗಳು-2021 ರ ಸೆಕ್ಷನ್ 16 ರ ಅಡಿಯಲ್ಲಿ ತುರ್ತು ಅಧಿಕಾರವನ್ನು ಅನ್ವಯಿಸುವ ಮೂಲಕ ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ತೆಗೆದುಹಾಕಲು ಟ್ವಿಟರ್‌ ಮತ್ತು ಯೂಟ್ಯೂಬ್‌ಗೆ ಕೇಳಿದೆ. ಚಿತ್ರದ ಲಿಂಕ್‌ಗಳನ್ನು ಜನವರಿ 20 ರಂದು ನಿರ್ಬಂಧಿಸಲಾಗಿದೆ.

ಕಾಂಗ್ರೆಸ್‌ ಮತ್ತು ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ದಂತಹ ವಿವಿಧ ಎಡಪಂಥೀಯ ಸಂಘಟನೆಗಳ ನೇತೃತ್ವದಲ್ಲಿ ದೇಶದಾದ್ಯಂತ ಸಾಕ್ಷ್ಯಚಿತ್ರದ ನಿಷೇಧದ ವಿರುದ್ಧ ಪ್ರತಿಭಟನೆಗಳು ನಡೆದಿದ್ದು, ಅದರ ಪ್ರದರ್ಶನವೂ ನಡೆಯುತ್ತಿದೆ. ಜನವರಿ 24 ರಂದು, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ವೀಡಿಯೊವನ್ನು ನೋಡಬಹುದಾದ ಸೈಟ್‌ಗಳ ಹಲವಾರು ಲಿಂಕ್‌ಗಳನ್ನು ಹಂಚಿಕೊಂಡಿದ್ದಾರೆ.

ಜನವರಿ 24 ರಂದು, ಡಿವೈಎಫ್‌ಐ, ಎಸ್‌ಎಫ್‌ಐ ಮತ್ತು ಯುವ ಕಾಂಗ್ರೆಸ್ ಕೇರಳದಾದ್ಯಂತ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ನಡೆಸಿದ್ದವು. ಅದೇ ದಿನ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್‌ಯು) ಆಡಳಿತವು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಕ್ಕೂಟವನ್ನು ಸ್ಕ್ರೀನಿಂಗ್ ಮಾಡದಂತೆ ತಡೆಯಲು ಕ್ಯಾಂಪಸ್‌ನಲ್ಲಿ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿತು.

ಜನವರಿ 25 ರಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವುದಾಗಿ ಘೋಷಿಸಿದ ನಂತರ ದೆಹಲಿ ಪೊಲೀಸರು ಎಸ್‌ಎಫ್‌ಐನ ನಾಲ್ಕು ವಿದ್ಯಾರ್ಥಿಗಳನ್ನು ಬಂಧಿಸಿದ್ದರು.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ಸಂಬಂಧ ನಮ್ಮ ವಿವಿಯಲ್ಲಿ ಯಾವ ಗಲಾಟೆಯೂ ನಡೆದಿಲ್ಲ: ಜಾಮಿಯಾ ಕುಲಪತಿ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...