Homeಚಳವಳಿಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ | CPI(M) ಕೌನ್ಸಿಲರ್‌‌ ಮತ್ತು DYFI ಕಾರ್ಯಕರ್ತರನ್ನು ಬಂಧಿಸಿದ ಚೆನ್ನೈ ಪೊಲೀಸರು

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ | CPI(M) ಕೌನ್ಸಿಲರ್‌‌ ಮತ್ತು DYFI ಕಾರ್ಯಕರ್ತರನ್ನು ಬಂಧಿಸಿದ ಚೆನ್ನೈ ಪೊಲೀಸರು

- Advertisement -
- Advertisement -

ಪ್ರಧಾನಮಂತ್ರಿ ಮೋದಿಯವರ ಕುರಿತಾಗಿ ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ್ದಕ್ಕಾಗಿ ಗ್ರೇಟರ್ ಚೆನ್ನೈ ಕಾರ್ಪೊರೇಷನ್ (GCC)ನ ತೆನಾಂಪೇಟೆಯ ಕೌನ್ಸಿಲರ್ ಎ. ಪ್ರಿಯದರ್ಶಿನಿ ಅವರನ್ನು ಗುರುವಾರ ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಸಾಕ್ಷ್ಯಚಿತ್ರಗಳ ಲಿಂಕನ್ನು ಒಕ್ಕೂಟ ಸರ್ಕಾರದ ತಡೆ ಹಿಡಿದಿದ್ದನ್ನು ವಿರೋಧಿಸಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ದೇಶದಾದ್ಯಂತ ಹೋರಾಟಗಾರರು ಮತ್ತು ವಿಪಕ್ಷಗಳು ನಡೆಸುತ್ತಿದ್ದಾರೆ.

ಚೆನ್ನೈನ ಟಿಪಿ ಛತ್ರಂನ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ದ ಅಂಗ ಸಂಸ್ಥೆ ಡಿವೈಎಫ್‌ಐ ಸಂಘಟನೆ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಆಯೋಜಿಸಿತ್ತು. ಪ್ರತಿಭಟನಾಕಾರರು ತಮ್ಮ ಫೋನ್‌ಗಳಲ್ಲಿ ಸಾಕ್ಷ್ಯಚಿತ್ರಗಳನ್ನು ಒಟ್ಟಿಗೆ ವೀಕ್ಷಿಸಲು ಉದ್ದೇಶಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಕೌನ್ಸಿಲರ್‌‌ ಪ್ರಿಯದರ್ಶಿನಿ ಸೇರಿದಂತೆ 14 ಪ್ರತಿಭಟನಾಕಾರರನ್ನು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ನಂತರ ಎಲ್ಲಾ 14 ಮಂದಿಯನ್ನು ಬಿಡುಗಡೆ ಮಾಡಲಾಯಿದೆ. ಆದಾಗ್ಯೂ, ಪೊಲೀಸರು ಬರುವ ಮೊದಲು ಪ್ರತಿಭಟನಾಕಾರರು ಸಾಕ್ಷ್ಯಚಿತ್ರವನ್ನು ವೀಕ್ಷಿಸಲು ಸಾಧ್ಯವಾಯಿತು ಎಂದು ಕೌನ್ಸಿಲರ್ ಪ್ರಿಯದರ್ಶಿನಿ ಅವರ ಕುಟುಂಬವು ಹೇಳಿದೆ.

ಸಿಪಿಐ(ಎಂ)ನ ಪಕ್ಷದವಾಗಿರುವ ಪ್ರಿಯದರ್ಶಿನಿ ಅವರು ಕಳೆದ ವರ್ಷ ನಡೆದ ಸ್ಥಳೀಯ ನಗರ ಸಂಸ್ಥೆ ಚುನಾವಣೆಯಲ್ಲಿ ತೆನಾಂಪೇಟೆಯ ವಾರ್ಡ್ ಸಂಖ್ಯೆ 98 ರಿಂದ 5,253 ಮತಗಳ ಅಂತರದಿಂದ ಗೆದ್ದಿದ್ದರು. ಗೆಲ್ಲುವ ವೇಳೆ ಅವರು 21 ನೇ ವಯಸ್ಸಿನವರಾಗಿದ್ದು, ಅವರು ಚೆನ್ನೈನ ಅತ್ಯಂತ ಕಿರಿಯ ಕೌನ್ಸಿಲರ್ ಆಗಿದ್ದಾರೆ.

ಗುಜರಾತ್‌ ಗಲಭೆ ನಡೆದ ಸಂದರ್ಭದಲ್ಲಿ ಪೊಲೀಸರು ಕ್ರಮ ಕೈಗೊಳ್ಳದಂತೆ ತಡೆದಿದ್ದರು ಎಂದು ಬಿಬಿಸಿ ಸಾಕ್ಷ್ಯಚಿತ್ರ ಆರೋಪಿಸಿದೆ. ಯುಕೆ ಸರ್ಕಾರದ ಆಂತರಿಕ ವರದಿಯನ್ನು ಉಲ್ಲೇಖಿಸಿರುವ ಸಾಕ್ಷ್ಯಚಿತ್ರವು ‘ವಿಚಾರಣೆ ನಡೆಸಿದ ಬ್ರಿಟಿಷ್ ತಂಡವು, ಘಟನೆಗಳಿಗೆ ನರೇಂದ್ರ ಮೋದಿ ಅವರೇ ನೇರ ಹೊಣೆ’ ಎಂದು ಹೇಳುತ್ತದೆ.

ಅದಾಗ್ಯೂ ಗುಜರಾತ್‌ ಸರ್ಕಾರವು ಸಾಕ್ಷ್ಯಚಿತ್ರವನ್ನು “ಪ್ರೊಪಗಾಂಡ” ಎಂದು ಕರೆದಿದ್ದು, ಐಟಿ ನಿಯಮಗಳು-2021 ರ ಸೆಕ್ಷನ್ 16 ರ ಅಡಿಯಲ್ಲಿ ತುರ್ತು ಅಧಿಕಾರವನ್ನು ಅನ್ವಯಿಸುವ ಮೂಲಕ ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ತೆಗೆದುಹಾಕಲು ಟ್ವಿಟರ್‌ ಮತ್ತು ಯೂಟ್ಯೂಬ್‌ಗೆ ಕೇಳಿದೆ. ಚಿತ್ರದ ಲಿಂಕ್‌ಗಳನ್ನು ಜನವರಿ 20 ರಂದು ನಿರ್ಬಂಧಿಸಲಾಗಿದೆ.

ಕಾಂಗ್ರೆಸ್‌ ಮತ್ತು ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ದಂತಹ ವಿವಿಧ ಎಡಪಂಥೀಯ ಸಂಘಟನೆಗಳ ನೇತೃತ್ವದಲ್ಲಿ ದೇಶದಾದ್ಯಂತ ಸಾಕ್ಷ್ಯಚಿತ್ರದ ನಿಷೇಧದ ವಿರುದ್ಧ ಪ್ರತಿಭಟನೆಗಳು ನಡೆದಿದ್ದು, ಅದರ ಪ್ರದರ್ಶನವೂ ನಡೆಯುತ್ತಿದೆ. ಜನವರಿ 24 ರಂದು, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ವೀಡಿಯೊವನ್ನು ನೋಡಬಹುದಾದ ಸೈಟ್‌ಗಳ ಹಲವಾರು ಲಿಂಕ್‌ಗಳನ್ನು ಹಂಚಿಕೊಂಡಿದ್ದಾರೆ.

ಜನವರಿ 24 ರಂದು, ಡಿವೈಎಫ್‌ಐ, ಎಸ್‌ಎಫ್‌ಐ ಮತ್ತು ಯುವ ಕಾಂಗ್ರೆಸ್ ಕೇರಳದಾದ್ಯಂತ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ನಡೆಸಿದ್ದವು. ಅದೇ ದಿನ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್‌ಯು) ಆಡಳಿತವು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಕ್ಕೂಟವನ್ನು ಸ್ಕ್ರೀನಿಂಗ್ ಮಾಡದಂತೆ ತಡೆಯಲು ಕ್ಯಾಂಪಸ್‌ನಲ್ಲಿ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿತು.

ಜನವರಿ 25 ರಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವುದಾಗಿ ಘೋಷಿಸಿದ ನಂತರ ದೆಹಲಿ ಪೊಲೀಸರು ಎಸ್‌ಎಫ್‌ಐನ ನಾಲ್ಕು ವಿದ್ಯಾರ್ಥಿಗಳನ್ನು ಬಂಧಿಸಿದ್ದರು.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ಸಂಬಂಧ ನಮ್ಮ ವಿವಿಯಲ್ಲಿ ಯಾವ ಗಲಾಟೆಯೂ ನಡೆದಿಲ್ಲ: ಜಾಮಿಯಾ ಕುಲಪತಿ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...