Homeಚಳವಳಿಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ | CPI(M) ಕೌನ್ಸಿಲರ್‌‌ ಮತ್ತು DYFI ಕಾರ್ಯಕರ್ತರನ್ನು ಬಂಧಿಸಿದ ಚೆನ್ನೈ ಪೊಲೀಸರು

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ | CPI(M) ಕೌನ್ಸಿಲರ್‌‌ ಮತ್ತು DYFI ಕಾರ್ಯಕರ್ತರನ್ನು ಬಂಧಿಸಿದ ಚೆನ್ನೈ ಪೊಲೀಸರು

- Advertisement -
- Advertisement -

ಪ್ರಧಾನಮಂತ್ರಿ ಮೋದಿಯವರ ಕುರಿತಾಗಿ ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ್ದಕ್ಕಾಗಿ ಗ್ರೇಟರ್ ಚೆನ್ನೈ ಕಾರ್ಪೊರೇಷನ್ (GCC)ನ ತೆನಾಂಪೇಟೆಯ ಕೌನ್ಸಿಲರ್ ಎ. ಪ್ರಿಯದರ್ಶಿನಿ ಅವರನ್ನು ಗುರುವಾರ ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಸಾಕ್ಷ್ಯಚಿತ್ರಗಳ ಲಿಂಕನ್ನು ಒಕ್ಕೂಟ ಸರ್ಕಾರದ ತಡೆ ಹಿಡಿದಿದ್ದನ್ನು ವಿರೋಧಿಸಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ದೇಶದಾದ್ಯಂತ ಹೋರಾಟಗಾರರು ಮತ್ತು ವಿಪಕ್ಷಗಳು ನಡೆಸುತ್ತಿದ್ದಾರೆ.

ಚೆನ್ನೈನ ಟಿಪಿ ಛತ್ರಂನ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ದ ಅಂಗ ಸಂಸ್ಥೆ ಡಿವೈಎಫ್‌ಐ ಸಂಘಟನೆ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಆಯೋಜಿಸಿತ್ತು. ಪ್ರತಿಭಟನಾಕಾರರು ತಮ್ಮ ಫೋನ್‌ಗಳಲ್ಲಿ ಸಾಕ್ಷ್ಯಚಿತ್ರಗಳನ್ನು ಒಟ್ಟಿಗೆ ವೀಕ್ಷಿಸಲು ಉದ್ದೇಶಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಕೌನ್ಸಿಲರ್‌‌ ಪ್ರಿಯದರ್ಶಿನಿ ಸೇರಿದಂತೆ 14 ಪ್ರತಿಭಟನಾಕಾರರನ್ನು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ನಂತರ ಎಲ್ಲಾ 14 ಮಂದಿಯನ್ನು ಬಿಡುಗಡೆ ಮಾಡಲಾಯಿದೆ. ಆದಾಗ್ಯೂ, ಪೊಲೀಸರು ಬರುವ ಮೊದಲು ಪ್ರತಿಭಟನಾಕಾರರು ಸಾಕ್ಷ್ಯಚಿತ್ರವನ್ನು ವೀಕ್ಷಿಸಲು ಸಾಧ್ಯವಾಯಿತು ಎಂದು ಕೌನ್ಸಿಲರ್ ಪ್ರಿಯದರ್ಶಿನಿ ಅವರ ಕುಟುಂಬವು ಹೇಳಿದೆ.

ಸಿಪಿಐ(ಎಂ)ನ ಪಕ್ಷದವಾಗಿರುವ ಪ್ರಿಯದರ್ಶಿನಿ ಅವರು ಕಳೆದ ವರ್ಷ ನಡೆದ ಸ್ಥಳೀಯ ನಗರ ಸಂಸ್ಥೆ ಚುನಾವಣೆಯಲ್ಲಿ ತೆನಾಂಪೇಟೆಯ ವಾರ್ಡ್ ಸಂಖ್ಯೆ 98 ರಿಂದ 5,253 ಮತಗಳ ಅಂತರದಿಂದ ಗೆದ್ದಿದ್ದರು. ಗೆಲ್ಲುವ ವೇಳೆ ಅವರು 21 ನೇ ವಯಸ್ಸಿನವರಾಗಿದ್ದು, ಅವರು ಚೆನ್ನೈನ ಅತ್ಯಂತ ಕಿರಿಯ ಕೌನ್ಸಿಲರ್ ಆಗಿದ್ದಾರೆ.

ಗುಜರಾತ್‌ ಗಲಭೆ ನಡೆದ ಸಂದರ್ಭದಲ್ಲಿ ಪೊಲೀಸರು ಕ್ರಮ ಕೈಗೊಳ್ಳದಂತೆ ತಡೆದಿದ್ದರು ಎಂದು ಬಿಬಿಸಿ ಸಾಕ್ಷ್ಯಚಿತ್ರ ಆರೋಪಿಸಿದೆ. ಯುಕೆ ಸರ್ಕಾರದ ಆಂತರಿಕ ವರದಿಯನ್ನು ಉಲ್ಲೇಖಿಸಿರುವ ಸಾಕ್ಷ್ಯಚಿತ್ರವು ‘ವಿಚಾರಣೆ ನಡೆಸಿದ ಬ್ರಿಟಿಷ್ ತಂಡವು, ಘಟನೆಗಳಿಗೆ ನರೇಂದ್ರ ಮೋದಿ ಅವರೇ ನೇರ ಹೊಣೆ’ ಎಂದು ಹೇಳುತ್ತದೆ.

ಅದಾಗ್ಯೂ ಗುಜರಾತ್‌ ಸರ್ಕಾರವು ಸಾಕ್ಷ್ಯಚಿತ್ರವನ್ನು “ಪ್ರೊಪಗಾಂಡ” ಎಂದು ಕರೆದಿದ್ದು, ಐಟಿ ನಿಯಮಗಳು-2021 ರ ಸೆಕ್ಷನ್ 16 ರ ಅಡಿಯಲ್ಲಿ ತುರ್ತು ಅಧಿಕಾರವನ್ನು ಅನ್ವಯಿಸುವ ಮೂಲಕ ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ತೆಗೆದುಹಾಕಲು ಟ್ವಿಟರ್‌ ಮತ್ತು ಯೂಟ್ಯೂಬ್‌ಗೆ ಕೇಳಿದೆ. ಚಿತ್ರದ ಲಿಂಕ್‌ಗಳನ್ನು ಜನವರಿ 20 ರಂದು ನಿರ್ಬಂಧಿಸಲಾಗಿದೆ.

ಕಾಂಗ್ರೆಸ್‌ ಮತ್ತು ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ದಂತಹ ವಿವಿಧ ಎಡಪಂಥೀಯ ಸಂಘಟನೆಗಳ ನೇತೃತ್ವದಲ್ಲಿ ದೇಶದಾದ್ಯಂತ ಸಾಕ್ಷ್ಯಚಿತ್ರದ ನಿಷೇಧದ ವಿರುದ್ಧ ಪ್ರತಿಭಟನೆಗಳು ನಡೆದಿದ್ದು, ಅದರ ಪ್ರದರ್ಶನವೂ ನಡೆಯುತ್ತಿದೆ. ಜನವರಿ 24 ರಂದು, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ವೀಡಿಯೊವನ್ನು ನೋಡಬಹುದಾದ ಸೈಟ್‌ಗಳ ಹಲವಾರು ಲಿಂಕ್‌ಗಳನ್ನು ಹಂಚಿಕೊಂಡಿದ್ದಾರೆ.

ಜನವರಿ 24 ರಂದು, ಡಿವೈಎಫ್‌ಐ, ಎಸ್‌ಎಫ್‌ಐ ಮತ್ತು ಯುವ ಕಾಂಗ್ರೆಸ್ ಕೇರಳದಾದ್ಯಂತ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ನಡೆಸಿದ್ದವು. ಅದೇ ದಿನ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್‌ಯು) ಆಡಳಿತವು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಕ್ಕೂಟವನ್ನು ಸ್ಕ್ರೀನಿಂಗ್ ಮಾಡದಂತೆ ತಡೆಯಲು ಕ್ಯಾಂಪಸ್‌ನಲ್ಲಿ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿತು.

ಜನವರಿ 25 ರಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವುದಾಗಿ ಘೋಷಿಸಿದ ನಂತರ ದೆಹಲಿ ಪೊಲೀಸರು ಎಸ್‌ಎಫ್‌ಐನ ನಾಲ್ಕು ವಿದ್ಯಾರ್ಥಿಗಳನ್ನು ಬಂಧಿಸಿದ್ದರು.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ಸಂಬಂಧ ನಮ್ಮ ವಿವಿಯಲ್ಲಿ ಯಾವ ಗಲಾಟೆಯೂ ನಡೆದಿಲ್ಲ: ಜಾಮಿಯಾ ಕುಲಪತಿ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...