Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಸಂಶೋದನ ವಿದ್ಯಾರ್ಥಿಯನ್ನ ಡಿಬಾರ್ ಮಾಡಿದ್ದೇಕೆ?; ದೆಹಲಿ ವಿವಿಗೆ ಹೈಕೋರ್ಟ್ ನೋಟಿಸ್

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಸಂಶೋದನ ವಿದ್ಯಾರ್ಥಿಯನ್ನ ಡಿಬಾರ್ ಮಾಡಿದ್ದೇಕೆ?; ದೆಹಲಿ ವಿವಿಗೆ ಹೈಕೋರ್ಟ್ ನೋಟಿಸ್

- Advertisement -
- Advertisement -

ಗುಜರಾತ್ ಹತ್ಯಾಕಾಂಡ ಘಟನೆಯ ಕುರಿತು ‘ಇಂಡಿಯಾ: ದಿ ಮೋದಿ ಕ್ವಶ್ಚನ್’ ಎನ್ನುವ ಸಾಕ್ಷ್ಯಚಿತ್ರವನ್ನು ಬಿಬಿಸಿ ಬಿಡುಗಡೆ ಮಾಡಿತ್ತು. ಈ ಸಾಕ್ಷ್ಯಚಿತ್ರವನ್ನು ದೆಹಲಿ ವಿಶ್ವವಿದ್ಯಾಲಯದಲ್ಲಿ ಪ್ರದರ್ಶನದ ಪ್ರಯತ್ನ ಮಾಡಿರುವುದಕ್ಕೆ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿಯೊಬ್ಬರನ್ನು ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತಂದ ಆರೋಪದಲ್ಲಿ ಒಂದು ವರ್ಷ ಡಿಬಾರ್ ಮಾಡಲಾಗಿತ್ತು. ವಿಶ್ವವಿದ್ಯಾಲಯದ ಈ ನಿರ್ಧಾರದ ವಿರುದ್ಧ ಸಂಶೋಧನಾ ವಿದ್ಯಾರ್ಥಿ ದೆಹಲಿ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದು, ಗುರುವಾರ ಹೈಕೋರ್ಟ್, ದೆಹಲಿ ವಿಶ್ವವಿದ್ಯಾಲಯದ ನಿಲುವು ಏನು? ಎಂದು ಕೇಳಿದೆ.

ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿ ಮತ್ತು ಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ಲೋಕೇಶ್ ಚುಗ್ ಅವರ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರವ್ ಅವರ ಏಕಸದಸ್ಯ ಪೀಠವು, ದೆಹಲಿ ವಿಶ್ವವಿದ್ಯಾಲಯಕ್ಕೆ ನೋಟಿಸ್ ಜಾರಿಗೊಳಿಸಿ, ವಿಶ್ವವಿದ್ಯಾಲಯದ ಪರ ವಕೀಲರಿಗೆ ಉತ್ತರವನ್ನು ಸಲ್ಲಿಸುವಂತೆ ಕೇಳದೆ. ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿದೆ.

ಜನವರಿ 27ರಂದು ದೆಹಲಿ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್‌ನಲ್ಲಿ ಕೆಲವು ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಆಯೋಜಿಸಿದ್ದರು. ಈ ಸಂದರ್ಭದಲ್ಲಿ “ನಿಷೇಧಿಸಲಾದ BBC ಸಾಕ್ಷ್ಯಚಿತ್ರ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಅನ್ನು ಸಾರ್ವಜನಿಕರಿಗೆ ಪ್ರದರ್ಶಿಸಲಾಯಿತು ಎಂದು ಚುಗ್ ಅವರ ಮನವಿಯಲ್ಲಿ ತಿಳಿಸಲಾಗಿದೆ. ಆ ಸಂದರ್ಭದಲ್ಲಿ ಚುಗ್ ಪ್ರತಿಭಟನಾ ಸ್ಥಳದಲ್ಲಿ ಇರಲಿಲ್ಲ ಮತ್ತು ಯಾವುದೇ ರೀತಿಯಲ್ಲಿ ಪ್ರದರ್ಶನದಲ್ಲಿ ಭಾಗವಹಿಸಿರಲಿಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ. ಚುಗ್ ಅವರು ವಿಜ್ಞಾನ ವಿಭಾಗದ ಮಾನವಶಾಸ್ತ್ರ ವಿಭಾಗದಿಂದ ತಮ್ಮ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರಕ್ಕೆ ತಡೆ ವಿವಾದ; ಮೂರು ವಾರಗಳಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

”ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವಾಗ ಕಲಾ ವಿಭಾಗದ ಹೊರಗೆ ತಾನು ಮಾಧ್ಯಮಗಳಿಗೆ ನೇರ ಸಂದರ್ಶನ ನೀಡುತ್ತಿದ್ದೆ. ಅಲ್ಲಿ ಶಾಂತಿ ಕದಡುವ ಕೆಲವು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದರು. ಆದರೆ ನಾನು ಯಾವುದೇ ರೀತಿಯ ಪ್ರಚೋದನೆ, ಹಿಂಸೆ ಅಥವಾ ಶಾಂತಿ ಭಂಗ ತಂದಿಲ್ಲ ಹಾಗಾಗಿ ಆಗ ಪೊಲೀಸರು ನನ್ನನ್ನು ಬಂಧಿಸಿಲ್ಲ ಮತ್ತು ನನ್ನ ಮೇಲೆ ಯಾವ ಆರೋಪವನ್ನೂ ಹೊರಿಸಿಲ್ಲ” ಎಂದು ಅವರ ಮನವಿಯಲ್ಲಿ ತಿಳಿಸಿದ್ದಾರೆ.

ಫೆಬ್ರವರಿ 16ರಂದು ಸಾಕ್ಷ್ಯಚಿತ್ರದ ಪ್ರದರ್ಶನದ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಅವರ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ವಿಶ್ವಿದ್ಯಾಲಯದ ಶಿಸ್ತುಪಾಲನಾಧಿಕಾರಿ ಶೋಕಾಸ್ ನೋಟಿಸ್ ನೀಡಿದ್ದರು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಫೆಬ್ರವರಿ 20ರಂದು ಅವರು ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸಿರುವ ಬಗ್ಗೆಯೂ ಚುಗ್ ಅವರ ಮನವಿಯಲ್ಲಿ ಹೇಳಲಾಗಿದೆ.

ಮಾರ್ಚ್ 3ರಂದು, ಅವರು ತಮ್ಮ ಪಿಎಚ್‌ಡಿ ಪ್ರಬಂಧವನ್ನು ಸಲ್ಲಿಸಿದರು. ಆದರೆ, ರಿಜಿಸ್ಟಾರ್ ಅವರು, ಮಾರ್ಚ್ 10ರಂದು, ಒಂದು ವರ್ಷದವರೆಗೆ ಯಾವುದೇ ವಿಶ್ವವಿದ್ಯಾಲಯ/ಕಾಲೇಜು/ಇಲಾಖೆ ಪರೀಕ್ಷೆಯನ್ನು ತೆಗೆದುಕೊಳ್ಳದಂತೆ ಡಿಬಾರ್‌ಮೆಂಟ್ ದಂಡವನ್ನು ವಿಧಿಸುವ ಮೆಮೊರಾಂಡಮ್ ಅನ್ನು ಹೊರಡಿಸಿದರು ಎಂದು ತಿಳಿಸಿದ್ದಾರೆ.

ಚುಗ್ ಅವರು ದೆಹಲಿ ವಿಶ್ವವಿದ್ಯಾಲಯದ ಪ್ರಾಮಾಣಿಕ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದಾರೆ. ಡಿಬಾರ್ ಮಾಡುವ ಮೂಲಕ ಅವರ ಶಿಕ್ಷಣ ಮತ್ತು ವೃತ್ತಿಪರ ಅವಕಾಶಗಳನ್ನು ಕಸಿದುಕೊಳ್ಳುವ ಸಾಧ್ಯತೆಯಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.

ಮಾರ್ಚ್ 10ರ ಡಿಬಾರ್ ಪತ್ರವನ್ನು ರದ್ದುಗೊಳಿಸುವುದು, ಫೆಬ್ರವರಿ 16ರ ಶೋಕಾಸ್ ನೋಟಿಸ್ ರದ್ದುಗೊಳಿಸಬೇಕು ಎಂದು ಮನವಿಯಲ್ಲಿ ತಿಳಸಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...