Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಸಂಶೋದನ ವಿದ್ಯಾರ್ಥಿಯನ್ನ ಡಿಬಾರ್ ಮಾಡಿದ್ದೇಕೆ?; ದೆಹಲಿ ವಿವಿಗೆ ಹೈಕೋರ್ಟ್ ನೋಟಿಸ್

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಸಂಶೋದನ ವಿದ್ಯಾರ್ಥಿಯನ್ನ ಡಿಬಾರ್ ಮಾಡಿದ್ದೇಕೆ?; ದೆಹಲಿ ವಿವಿಗೆ ಹೈಕೋರ್ಟ್ ನೋಟಿಸ್

- Advertisement -
- Advertisement -

ಗುಜರಾತ್ ಹತ್ಯಾಕಾಂಡ ಘಟನೆಯ ಕುರಿತು ‘ಇಂಡಿಯಾ: ದಿ ಮೋದಿ ಕ್ವಶ್ಚನ್’ ಎನ್ನುವ ಸಾಕ್ಷ್ಯಚಿತ್ರವನ್ನು ಬಿಬಿಸಿ ಬಿಡುಗಡೆ ಮಾಡಿತ್ತು. ಈ ಸಾಕ್ಷ್ಯಚಿತ್ರವನ್ನು ದೆಹಲಿ ವಿಶ್ವವಿದ್ಯಾಲಯದಲ್ಲಿ ಪ್ರದರ್ಶನದ ಪ್ರಯತ್ನ ಮಾಡಿರುವುದಕ್ಕೆ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿಯೊಬ್ಬರನ್ನು ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತಂದ ಆರೋಪದಲ್ಲಿ ಒಂದು ವರ್ಷ ಡಿಬಾರ್ ಮಾಡಲಾಗಿತ್ತು. ವಿಶ್ವವಿದ್ಯಾಲಯದ ಈ ನಿರ್ಧಾರದ ವಿರುದ್ಧ ಸಂಶೋಧನಾ ವಿದ್ಯಾರ್ಥಿ ದೆಹಲಿ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದು, ಗುರುವಾರ ಹೈಕೋರ್ಟ್, ದೆಹಲಿ ವಿಶ್ವವಿದ್ಯಾಲಯದ ನಿಲುವು ಏನು? ಎಂದು ಕೇಳಿದೆ.

ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿ ಮತ್ತು ಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ಲೋಕೇಶ್ ಚುಗ್ ಅವರ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರವ್ ಅವರ ಏಕಸದಸ್ಯ ಪೀಠವು, ದೆಹಲಿ ವಿಶ್ವವಿದ್ಯಾಲಯಕ್ಕೆ ನೋಟಿಸ್ ಜಾರಿಗೊಳಿಸಿ, ವಿಶ್ವವಿದ್ಯಾಲಯದ ಪರ ವಕೀಲರಿಗೆ ಉತ್ತರವನ್ನು ಸಲ್ಲಿಸುವಂತೆ ಕೇಳದೆ. ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿದೆ.

ಜನವರಿ 27ರಂದು ದೆಹಲಿ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್‌ನಲ್ಲಿ ಕೆಲವು ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಆಯೋಜಿಸಿದ್ದರು. ಈ ಸಂದರ್ಭದಲ್ಲಿ “ನಿಷೇಧಿಸಲಾದ BBC ಸಾಕ್ಷ್ಯಚಿತ್ರ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಅನ್ನು ಸಾರ್ವಜನಿಕರಿಗೆ ಪ್ರದರ್ಶಿಸಲಾಯಿತು ಎಂದು ಚುಗ್ ಅವರ ಮನವಿಯಲ್ಲಿ ತಿಳಿಸಲಾಗಿದೆ. ಆ ಸಂದರ್ಭದಲ್ಲಿ ಚುಗ್ ಪ್ರತಿಭಟನಾ ಸ್ಥಳದಲ್ಲಿ ಇರಲಿಲ್ಲ ಮತ್ತು ಯಾವುದೇ ರೀತಿಯಲ್ಲಿ ಪ್ರದರ್ಶನದಲ್ಲಿ ಭಾಗವಹಿಸಿರಲಿಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ. ಚುಗ್ ಅವರು ವಿಜ್ಞಾನ ವಿಭಾಗದ ಮಾನವಶಾಸ್ತ್ರ ವಿಭಾಗದಿಂದ ತಮ್ಮ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರಕ್ಕೆ ತಡೆ ವಿವಾದ; ಮೂರು ವಾರಗಳಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

”ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವಾಗ ಕಲಾ ವಿಭಾಗದ ಹೊರಗೆ ತಾನು ಮಾಧ್ಯಮಗಳಿಗೆ ನೇರ ಸಂದರ್ಶನ ನೀಡುತ್ತಿದ್ದೆ. ಅಲ್ಲಿ ಶಾಂತಿ ಕದಡುವ ಕೆಲವು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದರು. ಆದರೆ ನಾನು ಯಾವುದೇ ರೀತಿಯ ಪ್ರಚೋದನೆ, ಹಿಂಸೆ ಅಥವಾ ಶಾಂತಿ ಭಂಗ ತಂದಿಲ್ಲ ಹಾಗಾಗಿ ಆಗ ಪೊಲೀಸರು ನನ್ನನ್ನು ಬಂಧಿಸಿಲ್ಲ ಮತ್ತು ನನ್ನ ಮೇಲೆ ಯಾವ ಆರೋಪವನ್ನೂ ಹೊರಿಸಿಲ್ಲ” ಎಂದು ಅವರ ಮನವಿಯಲ್ಲಿ ತಿಳಿಸಿದ್ದಾರೆ.

ಫೆಬ್ರವರಿ 16ರಂದು ಸಾಕ್ಷ್ಯಚಿತ್ರದ ಪ್ರದರ್ಶನದ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಅವರ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ವಿಶ್ವಿದ್ಯಾಲಯದ ಶಿಸ್ತುಪಾಲನಾಧಿಕಾರಿ ಶೋಕಾಸ್ ನೋಟಿಸ್ ನೀಡಿದ್ದರು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಫೆಬ್ರವರಿ 20ರಂದು ಅವರು ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸಿರುವ ಬಗ್ಗೆಯೂ ಚುಗ್ ಅವರ ಮನವಿಯಲ್ಲಿ ಹೇಳಲಾಗಿದೆ.

ಮಾರ್ಚ್ 3ರಂದು, ಅವರು ತಮ್ಮ ಪಿಎಚ್‌ಡಿ ಪ್ರಬಂಧವನ್ನು ಸಲ್ಲಿಸಿದರು. ಆದರೆ, ರಿಜಿಸ್ಟಾರ್ ಅವರು, ಮಾರ್ಚ್ 10ರಂದು, ಒಂದು ವರ್ಷದವರೆಗೆ ಯಾವುದೇ ವಿಶ್ವವಿದ್ಯಾಲಯ/ಕಾಲೇಜು/ಇಲಾಖೆ ಪರೀಕ್ಷೆಯನ್ನು ತೆಗೆದುಕೊಳ್ಳದಂತೆ ಡಿಬಾರ್‌ಮೆಂಟ್ ದಂಡವನ್ನು ವಿಧಿಸುವ ಮೆಮೊರಾಂಡಮ್ ಅನ್ನು ಹೊರಡಿಸಿದರು ಎಂದು ತಿಳಿಸಿದ್ದಾರೆ.

ಚುಗ್ ಅವರು ದೆಹಲಿ ವಿಶ್ವವಿದ್ಯಾಲಯದ ಪ್ರಾಮಾಣಿಕ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದಾರೆ. ಡಿಬಾರ್ ಮಾಡುವ ಮೂಲಕ ಅವರ ಶಿಕ್ಷಣ ಮತ್ತು ವೃತ್ತಿಪರ ಅವಕಾಶಗಳನ್ನು ಕಸಿದುಕೊಳ್ಳುವ ಸಾಧ್ಯತೆಯಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.

ಮಾರ್ಚ್ 10ರ ಡಿಬಾರ್ ಪತ್ರವನ್ನು ರದ್ದುಗೊಳಿಸುವುದು, ಫೆಬ್ರವರಿ 16ರ ಶೋಕಾಸ್ ನೋಟಿಸ್ ರದ್ದುಗೊಳಿಸಬೇಕು ಎಂದು ಮನವಿಯಲ್ಲಿ ತಿಳಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...