Homeಅಂಕಣಗಳುಬಿಬಿಸಿ ಸಾಕ್ಷ್ಯಚಿತ್ರ; ಪ್ರಶ್ನಿಸುವುದನ್ನೇ ದಮನಿಸುತ್ತಿರುವ ಪ್ರಭುತ್ವ

ಬಿಬಿಸಿ ಸಾಕ್ಷ್ಯಚಿತ್ರ; ಪ್ರಶ್ನಿಸುವುದನ್ನೇ ದಮನಿಸುತ್ತಿರುವ ಪ್ರಭುತ್ವ

- Advertisement -
- Advertisement -

ಕೊಲಿಜಿಯಂ ಮುಂತಾದ ವಿಷಯಗಳನ್ನು ಮುಂದುಮಾಡಿ ಒಂದು ಕಡೆಗೆ ಸುಪ್ರೀಂ ಕೋರ್ಟ್ ಮೇಲೆ ಪರೋಕ್ಷ ದಾಳಿ; ಮತ್ತೊಂದು ಕಡೆಗೆ ಸುಪ್ರೀಂ ಕೋರ್ಟ್ ತೀರ್ಪಿತ್ತಿರುವುದರಿಂದ ಗುಜರಾತಿನ 2002ರ ನರಮೇಧದ ಬಗ್ಗೆ ಯಾವ ಪ್ರಶ್ನೆಯನ್ನೂ ಕೇಳುವಂತಿಲ್ಲ ಎಂಬ ಸೆನ್ಸಾರ್. ’ವಿಶ್ವ ಮಾಧ್ಯಮ  ಸ್ವಾತಂತ್ರ್ಯ’ ದಿನದಂದು ’ಪ್ರಜಾಪ್ರಭುತ್ವಕ್ಕೆ ಅತ್ಯಗತ್ಯವಾದ ಮುಕ್ತ ಮತ್ತು ಕ್ರಿಯಾಶೀಲ ಮಾಧ್ಯಮಕ್ಕೆ ನಮ್ಮ ಅಚಲ ಬೆಂಬಲವನ್ನು ಒತ್ತಿಹೇಳುವ ದಿನವಿದು’ ಎಂದು ಪ್ರಧಾನಿ ಟ್ವೀಟ್ ಮಾಡುವುದು; ಅದೇ ಟ್ವಿಟರ್ ವೇದಿಕೆಯಲ್ಲಿ ತಮ್ಮನ್ನು ಪ್ರಶ್ನಿಸುವ ಯಾವುದೇ ಕಂಟೆಂಟ್‌ಅನ್ನು ಮುಲಾಜಿಲ್ಲದೆ ತೆಗಿಸಲು ಕಾರ್ಯಪ್ರವೃತ್ತರಾಗುವುದು. ವಿರೋಧ ಪಕ್ಷಗಳ ಬಗ್ಗೆ ಸುಳ್ಳೋಪಳ್ಳೋ ಏನು ಬೇಕಾದರೂ ಆಪಾದನೆ ಮಾಡುವುದು; ಆಡಳಿತ ರೂಢ ಬಿಜೆಪಿ ವಿರುದ್ಧವಿರುವ ಯಾವುದೇ ಸುದ್ದಿ ಅಥವಾ ವಿಡಿಯೋಗಳನ್ನು ’ಪಿಐಬಿ ಫ್ಯಾಕ್ಟ್‌ಚೆಕ್’ ಹೆಸರಿನಲ್ಲಿ ಸಾಮಾಜಿಕ ಮಾಧ್ಯಮ ಮತ್ತು ಆನ್‌ಲೈನ್ ಸುದ್ದಿ ಮಾಧ್ಯಮಗಳಿಂದ ತೆಗೆಸುವುದು. ಅಂತಹ ಸುದ್ದಿಗಳನ್ನು ಹಂಚಿಕೊಳ್ಳುವ ವಿರೋಧ ಪಕ್ಷಗಳ ರಾಜಕೀಯ ಮುಖಂಡರು ಮತ್ತು ಸಾಮಾಜಿಕ ಕಾರ್ಯಕರ್ತರ ವಿರುದ್ಧ ವಿಚ್‌ಹಂಟ್‌ಗೆ ಇಳಿಯುವುದು. ಇದು ಪ್ರಸಕ್ತ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ಕುಟಿಲ ನೀತಿ. ಯುಕೆ ಮೂಲದ ಬಿಬಿಸಿ ಸುದ್ದಿ ಮಾಧ್ಯಮದವರು ಇತ್ತೀಚೆಗೆ ಬಿಡುಗಡೆ ಮಾಡಿದ ’ಇಂಡಿಯಾ: ದ ಮೋದಿ ಕೊಶ್ಚನ್’ ಸಾಕ್ಷ್ಯಚಿತ್ರವನ್ನು ದಮನ ಮಾಡಲು ಬಳಸುತ್ತಿರುವ ಅಧಿಕಾರ ದುರುಪಯೋಗವನ್ನು ನೋಡಿದರೆ ಇದು ಇನ್ನಷ್ಟು ನಿಚ್ಚಳವಾಗುತ್ತದೆ. ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ, ಐಟಿ ನಿಯಮಗಳು 2021ರ ತುರ್ತು ಅಧಿಕಾರವನ್ನು ಬಳಸಿ ಪ್ರಶ್ನೆಯಲ್ಲಿರುವ ಸಾಕ್ಷ್ಯಚಿತ್ರವನ್ನು ಯಾರೂ ಪ್ರಸಾರ ಮಾಡದಂತೆ ತಡೆ ಒಡ್ಡುತ್ತಿದೆ. ಅದಕ್ಕೆ ನಿಖರ ಕಾರಣಗಳನ್ನು ನೀಡಲು ಮಾತ್ರ ಇಲ್ಲಿಯವರೆಗೂ ಮುಂದಾಗಿಲ್ಲ!

ಮಾಹಿತಿ ಮತ್ತು ಪ್ರಸಾರ ಖಾತೆಯ ಹಿರಿಯ ಸಲಹೆಗಾರರಾಗಿರುವ ಕಾಂಚನ್ ಗುಪ್ತಾ ಅವರು ಜನವರಿ 21ರಂದು ನೀಡಿರುವ ಹೇಳಿಕೆಯ ಪ್ರಕಾರ, ’ಭಾರತದ ಸಮಗ್ರತೆ ಮತ್ತು ಸಾರ್ವಭೌಮತೆಯನ್ನು ಅಲ್ಲಗೆಳೆಯುವುದರಿಂದ’ ಮತ್ತು ’ಸಮರ್ಥನೆಯಿಲ್ಲದ ಆರೋಪಗಳನ್ನು ಮಾಡಿರುವುದರಿಂದ’ ಸರ್ಕಾರ ಈ ಸಾಕ್ಷ್ಯಚಿತ್ರವನ್ನು ಹಂಚಿಕೊಳ್ಳುವ ಎಲ್ಲಾ ಲಿಂಕ್‌ಗಳನ್ನು ತೆಗೆಯುವಂತೆ ಸಾಮಾಜಿಕ ಮಾಧ್ಯಮಗಳಿಗೆ ಸೂಚಿಸಿದೆ ಎಂದಿದ್ದಾರೆ.

2002ರ ಗುಜರಾತ್ ನರಮೇಧದದ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ವಿಮರ್ಶಿಸುವ ಈ ಸಾಕ್ಷ್ಯಚಿತ್ರ, ನರಮೇಧದ ಸಮಯದ ಹಲವು ದೃಶ್ಯಾವಳಿಗಳನ್ನು ಪೋಣಿಸಿ, ಹಲವರನ್ನು ಸಂದರ್ಶಿಸಿ (ನರೇಂದ್ರ ಮೋದಿಯವರನ್ನು ಸಮರ್ಥಿಸಿಕೊಳ್ಳುವವರನ್ನೂ ಸಂದರ್ಶಿಸಲಾಗಿದೆ), ಇಷ್ಟೆಲ್ಲಾ ಸಮಯ ಕಳೆದಮೇಲೂ ಉಳಿದಿರುವ ಪ್ರಶ್ನೆಗಳನ್ನು ವೀಕ್ಷಕರ ಮುಂದಿಡುತ್ತದೆ. ಇದು ಯಾವುದೇ ಪಕ್ಷದ ಪ್ರಾಯೋಜಿತ ಕಾರ್ಯಕ್ರಮವಾಗಿರದೆ, ಮಾಧ್ಯಮವೊಂದು ಸ್ವತಂತ್ರವಾಗಿ ನಡೆಸಿದ ವರದಿಗಾರಿಕೆ, ತನಿಖೆ ಮತ್ತು ಸಂದರ್ಶನಗಳ ಮೇಲೆ ಚಿತ್ರಿತವಾಗಿರುವ ಸಾಕ್ಷ್ಯಚಿತ್ರ. ಈ ಸಾಕ್ಷ್ಯಚಿತ್ರ ಮಾಡಿರುವ ಆರೋಪಗಳಿಗೆ ತಮ್ಮ ಪ್ರತಿಕ್ರಿಯೆಗಾಗಿ ಸರ್ಕಾರವನ್ನು ಕೇಳಿದಾಗ, ಸರ್ಕಾರ ಪ್ರತಿಕ್ರಿಯಿಸಲು ನಿರಾಕರಿಸಿದೆ ಎಂದು ಕೂಡ ಬಿಬಿಸಿ ಹೇಳಿದೆ. ಹೀಗಿರುವಾಗ, ಸುಪ್ರೀಂ ಕೋರ್ಟ್ ತೀರ್ಪನ್ನು ಮುಂದೆ ಮಾಡಿ ಈ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸುವುದು ಯಾವ ಪಂಚಾಯಿತಿ ನ್ಯಾಯ? ಪತ್ರಿಕೋದ್ಯಮದ ಮಾನದಂಡಗಳನ್ನು ಅನುಸರಿಸದೆ ಏಕಪಕ್ಷೀಯವಾದ ಸಾಕ್ಷ್ಯಚಿತ್ರವನ್ನು ಬಿಬಿಸಿ ನಿರ್ಮಿಸಿದ್ದರೆ ಆಗ ಸರ್ಕಾರ ತನ್ನ ಪ್ರಶ್ನೆಗಳನ್ನು ಬಿಬಿಸಿಗೆ ಎಸೆಯಬಹುದಿತ್ತು! ಆದರೆ ತಾನೇ ಪ್ರಶ್ನೆಗಳಿಂದ ನುಣುಚಿಕೊಂಡು ಸೆನ್ಸಾರ್ ಮೊರೆ ಹೋದರೆ ಏನನ್ನೋ ಮುಚ್ಚಿಡುವ ಪ್ರಯತ್ನದಂತೆ ಕಾಣುವುದಿಲ್ಲವೇ?

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ವಿಚಾರ: ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ ಉಳಿಸಲು ಇದು ಸಕಾಲ ಎಂದ ಅಮೆರಿಕ

ಗುಜರಾತಿನ 2002ರ ನರಮೇಧಕ್ಕೆ ಅಂದಿನ ಮುಖ್ಯಮಂತ್ರಿ ಮೋದಿಯವರ ವೈಫಲ್ಯತೆ ಕಾರಣವಲ್ಲ ಅಥವಾ ಅದರಲ್ಲಿ ಅವರ ಪಾತ್ರವಿರಲಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪನ್ನು ನೀಡಿರಬಹುದು. ಆದರೆ ಪತ್ರಿಕೋದ್ಯಮದ ಕೆಲಸ ಹೊಸ ಸಾಕ್ಷ್ಯಗಳನ್ನು ಹುಡುಕುವುದು ಮತ್ತು ತನ್ನ ಪ್ರಶ್ನಿಸುವ ಮನೋಭಾವವನ್ನು ಸದಾ ಉಳಿಸಿಕೊಳ್ಳುವುದು. ಈ ನಿಟ್ಟಿನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಸುಪ್ರೀಂ ಕೋರ್ಟ್ ತೀರ್ಪನ್ನೇನೂ ಮರೆಮಾಚದೆ, ತನ್ನ ವರದಿಗಾರಿಕೆಯ ಹಿನ್ನೆಲೆಯಲ್ಲಿ ಉಳಿದುಕೊಂಡಿರುವ ಪ್ರಶ್ನೆಗಳನ್ನು ಮತ್ತೆ ಕೇಳುವ ದಿಟ್ಟತನ ತೋರಿದೆ. ಇದಕ್ಕೆ ಮೋದಿಯವರೋ ಅಥವಾ ಸರ್ಕಾರದ ಪ್ರತಿನಿಧಿಗಳೋ ಉತ್ತರಿಸಬಹುದಿತ್ತು. ಆರೋಪ ಮತ್ತು ಅದಕ್ಕೆ ಸರ್ಕಾರ ನೀಡುವ ಉತ್ತರಗಳನ್ನು ತಾಳೆ ಹಾಕಿ ಡಾಕ್ಯುಮೆಂಟರಿಯನ್ನು ವೀಕ್ಷಿಸಿದ ಜನರು ತಮ್ಮ ತೀರ್ಮಾನಕ್ಕೆ ಬರಲು ಸಾಧ್ಯವಾಗುತ್ತಿತ್ತು. ಇದನ್ನು ಬಲವಂತದಿಂದ ನಿಯಂತ್ರಿಸುವ ಹುನ್ನಾರ ಮಾಧ್ಯಮಗಳ ಸ್ವಾತಂತ್ರ್ಯದ ಮೇಲೆ ನಡೆಸುವ ದಾಳಿಯಲ್ಲದೆ ಮತ್ತೇನು? ಕೋಮುವಾದಿಗಳು ಸುಟ್ಟುಹಾಕಿದ ಮಾಜಿ ಸಂಸದ ಎಶಾನ್ ಜಾಫ್ರಿಯವರ ಕೊಲೆಗೆ ನ್ಯಾಯ ಸಿಕ್ಕಿಲ್ಲ ಎಂದು ಕೇಳುವುದು ಅಪರಾಧವಾಗಿಹೋಗಿದೆಯೇ?

ಒಂದು ಕಡೆ ಸಲ್ಲದ ಕಾರಣಗಳಿಗೆ ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ನಟಿಸಿರುವ ’ಪಠಾನ್’ ಚಿತ್ರವನ್ನು ಬಹಿಷ್ಕಾರ ಮಾಡುವಂತೆ ಕೊಡುತ್ತಿರುವ ಕರೆಗಳನ್ನು ವಿರೋಧಿಸುವ ಪ್ರಾಥಮಿಕ ಕರ್ತವ್ಯವನ್ನೂ ಪಾಲಿಸುತ್ತಿಲ್ಲ; ಸಿನಿಮಾ ಪ್ರದರ್ಶನಕ್ಕೆ ಅಗತ್ಯ ರಕ್ಷಣೆ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸುವ ಮಾತುಗಳನ್ನೂ ಆಡದ ಕೇಂದ್ರ ಸರ್ಕಾರ ಈಗ ತನಗೆ ಅಪಥ್ಯವಾದ ಒಂದು ಸಾಕ್ಷ್ಯಚಿತ್ರವನ್ನು ಭಾರತದ ಜನತೆಯಿಂದ ಮರೆಮಾಚಲು ಸಕ್ರಿಯವಾಗಿದೆ. ಒಂದೊಂದು ಲಿಂಕಿನಿಂದಲೂ ಆ ಸಾಕ್ಷ್ಯಚಿತ್ರವನ್ನು ತೆಗೆದುಹಾಕುವ ಸೂಚನೆ ಬರುತ್ತಿದ್ದಂತೆ ಅದು ಬೇರೇಬೇರೆ ಲಿಂಕುಗಳಲ್ಲಿ ಪ್ರತ್ಯಕ್ಷವಾಗುತ್ತಿರುವುದಂತೂ ಸತ್ಯ. ಅಂತರ್ಜಾಲದಲ್ಲಿ ನಿರ್ಬಂಧಿಸುವುದು ಎಂದರೆ ಪ್ರವಾಹದ ಸಮಯದಲ್ಲಿ ಅಣೆಕಟ್ಟು ಕಟ್ಟಲು ಶ್ರಮಪಟ್ಟಂತೆ. ಹೊಸಹೊಸ ಲಿಂಕುಗಳನ್ನು ಸಂಸದರಾದ ಟಿಎಂಸಿ ನಾಯಕಿ ಮೊಹುವಾ ಮೊಯಿತ್ರಾ ಸೇರಿದಂತೆ ಹಲವು ಪ್ರಾಜ್ಞರು ಮತ್ತೆಮತ್ತೆ ಟ್ವೀಟ್ ಮಾಡಿದ್ದಾರೆ. ಹೈದರಾಬಾದ್ ಸೆಂಟ್ರಲ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಸಮೂಹ ಈ ಸಾಕ್ಷ್ಯಚಿತ್ರದ ಸಾರ್ವಜನಿಕ ಪ್ರದರ್ಶನವನ್ನು ಏರ್ಪಡಿಸಿತ್ತು. ಜೆಎನ್‌ಯು ಇದರ ಪ್ರದರ್ಶನ ಏರ್ಪಡಿಸಿದಾಗ ವಿದ್ಯುತ್‌ಚ್ಛಕ್ತಿ ನಿಲ್ಲಿಸಿದ ವರದಿಗಳಿವೆ. ಕೇರಳದಲ್ಲಿ ಕೆಲವು ಸಾರ್ವಜನಿಕ ಪ್ರದರ್ಶನಗಳು ನಡೆದಿವೆ. ಹೀಗೆ ಕೇಂದ್ರ ಸರ್ಕಾರದ ನಡೆಗೆ ಪ್ರತಿರೋಧವನ್ನು ಹಲವರು ತೋರಿಸುತ್ತಿದ್ದಾರೆ. ’ತಮ್ಮ ಸುರಕ್ಷತೆಯ ಬಗೆಗಿನ ಭಯದಿಂದ ಸುಮಾರು 30ಕ್ಕೂ ಹೆಚ್ಚು ಜನ ಈ ಸಾಕ್ಷ್ಯಚಿತ್ರದ ಸಂದರ್ಶನದಲ್ಲಿ ಭಾಗವಹಿಸಲು ನಿರಾಕರಿಸಿದರು’ ಎಂದು ಸಾಕ್ಷ್ಯಚಿತ್ರದಲ್ಲಿ ಒಂದು ಕಡೆ ಬರುತ್ತದೆ. ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಜನ ಆತಂಕ ಪಡುವ ಸ್ಥಿತಿ ಭಾರತದಲ್ಲಿದೆ ಎಂಬುದು ಜಗತ್ತಿಗೆ ಈ ದೇಶದ ಬಗ್ಗೆ ಎಂತಹ ಚಿತ್ರಣವನ್ನು ಕಟ್ಟಿಕೊಡುತ್ತದೆ ಎಂಬುದರ ಬಗ್ಗೆ ಒಕ್ಕೂಟ ಸರ್ಕಾರಕ್ಕೆ ಅರಿವಿದೆಯೇ? ಈ ಭಯವನ್ನು ಮೀರಿದ ಯುವಜನರು ಎಚ್‌ಸಿಯು ಅಂತಹ ಜಾಗದಲ್ಲಿ ಸಾರ್ವಜನಿಕ ಪ್ರದರ್ಶನ ಏರ್ಪಡಿಸುತ್ತಾರೆ ಎಂಬ ಸಂಗತಿಯಾದರೂ ಈ ಸರ್ಕಾರದ ಮಂದಿಗೆ ವಿವೇಕ ನೀಡಲಿ. ದಮನಕಾರಿ ದುರುಳತನ ಕೊನೆಯಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...