Homeಅಂಕಣಗಳುಬಿಬಿಸಿ ಸಾಕ್ಷ್ಯಚಿತ್ರ; ಪ್ರಶ್ನಿಸುವುದನ್ನೇ ದಮನಿಸುತ್ತಿರುವ ಪ್ರಭುತ್ವ

ಬಿಬಿಸಿ ಸಾಕ್ಷ್ಯಚಿತ್ರ; ಪ್ರಶ್ನಿಸುವುದನ್ನೇ ದಮನಿಸುತ್ತಿರುವ ಪ್ರಭುತ್ವ

- Advertisement -
- Advertisement -

ಕೊಲಿಜಿಯಂ ಮುಂತಾದ ವಿಷಯಗಳನ್ನು ಮುಂದುಮಾಡಿ ಒಂದು ಕಡೆಗೆ ಸುಪ್ರೀಂ ಕೋರ್ಟ್ ಮೇಲೆ ಪರೋಕ್ಷ ದಾಳಿ; ಮತ್ತೊಂದು ಕಡೆಗೆ ಸುಪ್ರೀಂ ಕೋರ್ಟ್ ತೀರ್ಪಿತ್ತಿರುವುದರಿಂದ ಗುಜರಾತಿನ 2002ರ ನರಮೇಧದ ಬಗ್ಗೆ ಯಾವ ಪ್ರಶ್ನೆಯನ್ನೂ ಕೇಳುವಂತಿಲ್ಲ ಎಂಬ ಸೆನ್ಸಾರ್. ’ವಿಶ್ವ ಮಾಧ್ಯಮ  ಸ್ವಾತಂತ್ರ್ಯ’ ದಿನದಂದು ’ಪ್ರಜಾಪ್ರಭುತ್ವಕ್ಕೆ ಅತ್ಯಗತ್ಯವಾದ ಮುಕ್ತ ಮತ್ತು ಕ್ರಿಯಾಶೀಲ ಮಾಧ್ಯಮಕ್ಕೆ ನಮ್ಮ ಅಚಲ ಬೆಂಬಲವನ್ನು ಒತ್ತಿಹೇಳುವ ದಿನವಿದು’ ಎಂದು ಪ್ರಧಾನಿ ಟ್ವೀಟ್ ಮಾಡುವುದು; ಅದೇ ಟ್ವಿಟರ್ ವೇದಿಕೆಯಲ್ಲಿ ತಮ್ಮನ್ನು ಪ್ರಶ್ನಿಸುವ ಯಾವುದೇ ಕಂಟೆಂಟ್‌ಅನ್ನು ಮುಲಾಜಿಲ್ಲದೆ ತೆಗಿಸಲು ಕಾರ್ಯಪ್ರವೃತ್ತರಾಗುವುದು. ವಿರೋಧ ಪಕ್ಷಗಳ ಬಗ್ಗೆ ಸುಳ್ಳೋಪಳ್ಳೋ ಏನು ಬೇಕಾದರೂ ಆಪಾದನೆ ಮಾಡುವುದು; ಆಡಳಿತ ರೂಢ ಬಿಜೆಪಿ ವಿರುದ್ಧವಿರುವ ಯಾವುದೇ ಸುದ್ದಿ ಅಥವಾ ವಿಡಿಯೋಗಳನ್ನು ’ಪಿಐಬಿ ಫ್ಯಾಕ್ಟ್‌ಚೆಕ್’ ಹೆಸರಿನಲ್ಲಿ ಸಾಮಾಜಿಕ ಮಾಧ್ಯಮ ಮತ್ತು ಆನ್‌ಲೈನ್ ಸುದ್ದಿ ಮಾಧ್ಯಮಗಳಿಂದ ತೆಗೆಸುವುದು. ಅಂತಹ ಸುದ್ದಿಗಳನ್ನು ಹಂಚಿಕೊಳ್ಳುವ ವಿರೋಧ ಪಕ್ಷಗಳ ರಾಜಕೀಯ ಮುಖಂಡರು ಮತ್ತು ಸಾಮಾಜಿಕ ಕಾರ್ಯಕರ್ತರ ವಿರುದ್ಧ ವಿಚ್‌ಹಂಟ್‌ಗೆ ಇಳಿಯುವುದು. ಇದು ಪ್ರಸಕ್ತ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ಕುಟಿಲ ನೀತಿ. ಯುಕೆ ಮೂಲದ ಬಿಬಿಸಿ ಸುದ್ದಿ ಮಾಧ್ಯಮದವರು ಇತ್ತೀಚೆಗೆ ಬಿಡುಗಡೆ ಮಾಡಿದ ’ಇಂಡಿಯಾ: ದ ಮೋದಿ ಕೊಶ್ಚನ್’ ಸಾಕ್ಷ್ಯಚಿತ್ರವನ್ನು ದಮನ ಮಾಡಲು ಬಳಸುತ್ತಿರುವ ಅಧಿಕಾರ ದುರುಪಯೋಗವನ್ನು ನೋಡಿದರೆ ಇದು ಇನ್ನಷ್ಟು ನಿಚ್ಚಳವಾಗುತ್ತದೆ. ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ, ಐಟಿ ನಿಯಮಗಳು 2021ರ ತುರ್ತು ಅಧಿಕಾರವನ್ನು ಬಳಸಿ ಪ್ರಶ್ನೆಯಲ್ಲಿರುವ ಸಾಕ್ಷ್ಯಚಿತ್ರವನ್ನು ಯಾರೂ ಪ್ರಸಾರ ಮಾಡದಂತೆ ತಡೆ ಒಡ್ಡುತ್ತಿದೆ. ಅದಕ್ಕೆ ನಿಖರ ಕಾರಣಗಳನ್ನು ನೀಡಲು ಮಾತ್ರ ಇಲ್ಲಿಯವರೆಗೂ ಮುಂದಾಗಿಲ್ಲ!

ಮಾಹಿತಿ ಮತ್ತು ಪ್ರಸಾರ ಖಾತೆಯ ಹಿರಿಯ ಸಲಹೆಗಾರರಾಗಿರುವ ಕಾಂಚನ್ ಗುಪ್ತಾ ಅವರು ಜನವರಿ 21ರಂದು ನೀಡಿರುವ ಹೇಳಿಕೆಯ ಪ್ರಕಾರ, ’ಭಾರತದ ಸಮಗ್ರತೆ ಮತ್ತು ಸಾರ್ವಭೌಮತೆಯನ್ನು ಅಲ್ಲಗೆಳೆಯುವುದರಿಂದ’ ಮತ್ತು ’ಸಮರ್ಥನೆಯಿಲ್ಲದ ಆರೋಪಗಳನ್ನು ಮಾಡಿರುವುದರಿಂದ’ ಸರ್ಕಾರ ಈ ಸಾಕ್ಷ್ಯಚಿತ್ರವನ್ನು ಹಂಚಿಕೊಳ್ಳುವ ಎಲ್ಲಾ ಲಿಂಕ್‌ಗಳನ್ನು ತೆಗೆಯುವಂತೆ ಸಾಮಾಜಿಕ ಮಾಧ್ಯಮಗಳಿಗೆ ಸೂಚಿಸಿದೆ ಎಂದಿದ್ದಾರೆ.

2002ರ ಗುಜರಾತ್ ನರಮೇಧದದ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ವಿಮರ್ಶಿಸುವ ಈ ಸಾಕ್ಷ್ಯಚಿತ್ರ, ನರಮೇಧದ ಸಮಯದ ಹಲವು ದೃಶ್ಯಾವಳಿಗಳನ್ನು ಪೋಣಿಸಿ, ಹಲವರನ್ನು ಸಂದರ್ಶಿಸಿ (ನರೇಂದ್ರ ಮೋದಿಯವರನ್ನು ಸಮರ್ಥಿಸಿಕೊಳ್ಳುವವರನ್ನೂ ಸಂದರ್ಶಿಸಲಾಗಿದೆ), ಇಷ್ಟೆಲ್ಲಾ ಸಮಯ ಕಳೆದಮೇಲೂ ಉಳಿದಿರುವ ಪ್ರಶ್ನೆಗಳನ್ನು ವೀಕ್ಷಕರ ಮುಂದಿಡುತ್ತದೆ. ಇದು ಯಾವುದೇ ಪಕ್ಷದ ಪ್ರಾಯೋಜಿತ ಕಾರ್ಯಕ್ರಮವಾಗಿರದೆ, ಮಾಧ್ಯಮವೊಂದು ಸ್ವತಂತ್ರವಾಗಿ ನಡೆಸಿದ ವರದಿಗಾರಿಕೆ, ತನಿಖೆ ಮತ್ತು ಸಂದರ್ಶನಗಳ ಮೇಲೆ ಚಿತ್ರಿತವಾಗಿರುವ ಸಾಕ್ಷ್ಯಚಿತ್ರ. ಈ ಸಾಕ್ಷ್ಯಚಿತ್ರ ಮಾಡಿರುವ ಆರೋಪಗಳಿಗೆ ತಮ್ಮ ಪ್ರತಿಕ್ರಿಯೆಗಾಗಿ ಸರ್ಕಾರವನ್ನು ಕೇಳಿದಾಗ, ಸರ್ಕಾರ ಪ್ರತಿಕ್ರಿಯಿಸಲು ನಿರಾಕರಿಸಿದೆ ಎಂದು ಕೂಡ ಬಿಬಿಸಿ ಹೇಳಿದೆ. ಹೀಗಿರುವಾಗ, ಸುಪ್ರೀಂ ಕೋರ್ಟ್ ತೀರ್ಪನ್ನು ಮುಂದೆ ಮಾಡಿ ಈ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸುವುದು ಯಾವ ಪಂಚಾಯಿತಿ ನ್ಯಾಯ? ಪತ್ರಿಕೋದ್ಯಮದ ಮಾನದಂಡಗಳನ್ನು ಅನುಸರಿಸದೆ ಏಕಪಕ್ಷೀಯವಾದ ಸಾಕ್ಷ್ಯಚಿತ್ರವನ್ನು ಬಿಬಿಸಿ ನಿರ್ಮಿಸಿದ್ದರೆ ಆಗ ಸರ್ಕಾರ ತನ್ನ ಪ್ರಶ್ನೆಗಳನ್ನು ಬಿಬಿಸಿಗೆ ಎಸೆಯಬಹುದಿತ್ತು! ಆದರೆ ತಾನೇ ಪ್ರಶ್ನೆಗಳಿಂದ ನುಣುಚಿಕೊಂಡು ಸೆನ್ಸಾರ್ ಮೊರೆ ಹೋದರೆ ಏನನ್ನೋ ಮುಚ್ಚಿಡುವ ಪ್ರಯತ್ನದಂತೆ ಕಾಣುವುದಿಲ್ಲವೇ?

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ವಿಚಾರ: ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ ಉಳಿಸಲು ಇದು ಸಕಾಲ ಎಂದ ಅಮೆರಿಕ

ಗುಜರಾತಿನ 2002ರ ನರಮೇಧಕ್ಕೆ ಅಂದಿನ ಮುಖ್ಯಮಂತ್ರಿ ಮೋದಿಯವರ ವೈಫಲ್ಯತೆ ಕಾರಣವಲ್ಲ ಅಥವಾ ಅದರಲ್ಲಿ ಅವರ ಪಾತ್ರವಿರಲಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪನ್ನು ನೀಡಿರಬಹುದು. ಆದರೆ ಪತ್ರಿಕೋದ್ಯಮದ ಕೆಲಸ ಹೊಸ ಸಾಕ್ಷ್ಯಗಳನ್ನು ಹುಡುಕುವುದು ಮತ್ತು ತನ್ನ ಪ್ರಶ್ನಿಸುವ ಮನೋಭಾವವನ್ನು ಸದಾ ಉಳಿಸಿಕೊಳ್ಳುವುದು. ಈ ನಿಟ್ಟಿನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಸುಪ್ರೀಂ ಕೋರ್ಟ್ ತೀರ್ಪನ್ನೇನೂ ಮರೆಮಾಚದೆ, ತನ್ನ ವರದಿಗಾರಿಕೆಯ ಹಿನ್ನೆಲೆಯಲ್ಲಿ ಉಳಿದುಕೊಂಡಿರುವ ಪ್ರಶ್ನೆಗಳನ್ನು ಮತ್ತೆ ಕೇಳುವ ದಿಟ್ಟತನ ತೋರಿದೆ. ಇದಕ್ಕೆ ಮೋದಿಯವರೋ ಅಥವಾ ಸರ್ಕಾರದ ಪ್ರತಿನಿಧಿಗಳೋ ಉತ್ತರಿಸಬಹುದಿತ್ತು. ಆರೋಪ ಮತ್ತು ಅದಕ್ಕೆ ಸರ್ಕಾರ ನೀಡುವ ಉತ್ತರಗಳನ್ನು ತಾಳೆ ಹಾಕಿ ಡಾಕ್ಯುಮೆಂಟರಿಯನ್ನು ವೀಕ್ಷಿಸಿದ ಜನರು ತಮ್ಮ ತೀರ್ಮಾನಕ್ಕೆ ಬರಲು ಸಾಧ್ಯವಾಗುತ್ತಿತ್ತು. ಇದನ್ನು ಬಲವಂತದಿಂದ ನಿಯಂತ್ರಿಸುವ ಹುನ್ನಾರ ಮಾಧ್ಯಮಗಳ ಸ್ವಾತಂತ್ರ್ಯದ ಮೇಲೆ ನಡೆಸುವ ದಾಳಿಯಲ್ಲದೆ ಮತ್ತೇನು? ಕೋಮುವಾದಿಗಳು ಸುಟ್ಟುಹಾಕಿದ ಮಾಜಿ ಸಂಸದ ಎಶಾನ್ ಜಾಫ್ರಿಯವರ ಕೊಲೆಗೆ ನ್ಯಾಯ ಸಿಕ್ಕಿಲ್ಲ ಎಂದು ಕೇಳುವುದು ಅಪರಾಧವಾಗಿಹೋಗಿದೆಯೇ?

ಒಂದು ಕಡೆ ಸಲ್ಲದ ಕಾರಣಗಳಿಗೆ ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ನಟಿಸಿರುವ ’ಪಠಾನ್’ ಚಿತ್ರವನ್ನು ಬಹಿಷ್ಕಾರ ಮಾಡುವಂತೆ ಕೊಡುತ್ತಿರುವ ಕರೆಗಳನ್ನು ವಿರೋಧಿಸುವ ಪ್ರಾಥಮಿಕ ಕರ್ತವ್ಯವನ್ನೂ ಪಾಲಿಸುತ್ತಿಲ್ಲ; ಸಿನಿಮಾ ಪ್ರದರ್ಶನಕ್ಕೆ ಅಗತ್ಯ ರಕ್ಷಣೆ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸುವ ಮಾತುಗಳನ್ನೂ ಆಡದ ಕೇಂದ್ರ ಸರ್ಕಾರ ಈಗ ತನಗೆ ಅಪಥ್ಯವಾದ ಒಂದು ಸಾಕ್ಷ್ಯಚಿತ್ರವನ್ನು ಭಾರತದ ಜನತೆಯಿಂದ ಮರೆಮಾಚಲು ಸಕ್ರಿಯವಾಗಿದೆ. ಒಂದೊಂದು ಲಿಂಕಿನಿಂದಲೂ ಆ ಸಾಕ್ಷ್ಯಚಿತ್ರವನ್ನು ತೆಗೆದುಹಾಕುವ ಸೂಚನೆ ಬರುತ್ತಿದ್ದಂತೆ ಅದು ಬೇರೇಬೇರೆ ಲಿಂಕುಗಳಲ್ಲಿ ಪ್ರತ್ಯಕ್ಷವಾಗುತ್ತಿರುವುದಂತೂ ಸತ್ಯ. ಅಂತರ್ಜಾಲದಲ್ಲಿ ನಿರ್ಬಂಧಿಸುವುದು ಎಂದರೆ ಪ್ರವಾಹದ ಸಮಯದಲ್ಲಿ ಅಣೆಕಟ್ಟು ಕಟ್ಟಲು ಶ್ರಮಪಟ್ಟಂತೆ. ಹೊಸಹೊಸ ಲಿಂಕುಗಳನ್ನು ಸಂಸದರಾದ ಟಿಎಂಸಿ ನಾಯಕಿ ಮೊಹುವಾ ಮೊಯಿತ್ರಾ ಸೇರಿದಂತೆ ಹಲವು ಪ್ರಾಜ್ಞರು ಮತ್ತೆಮತ್ತೆ ಟ್ವೀಟ್ ಮಾಡಿದ್ದಾರೆ. ಹೈದರಾಬಾದ್ ಸೆಂಟ್ರಲ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಸಮೂಹ ಈ ಸಾಕ್ಷ್ಯಚಿತ್ರದ ಸಾರ್ವಜನಿಕ ಪ್ರದರ್ಶನವನ್ನು ಏರ್ಪಡಿಸಿತ್ತು. ಜೆಎನ್‌ಯು ಇದರ ಪ್ರದರ್ಶನ ಏರ್ಪಡಿಸಿದಾಗ ವಿದ್ಯುತ್‌ಚ್ಛಕ್ತಿ ನಿಲ್ಲಿಸಿದ ವರದಿಗಳಿವೆ. ಕೇರಳದಲ್ಲಿ ಕೆಲವು ಸಾರ್ವಜನಿಕ ಪ್ರದರ್ಶನಗಳು ನಡೆದಿವೆ. ಹೀಗೆ ಕೇಂದ್ರ ಸರ್ಕಾರದ ನಡೆಗೆ ಪ್ರತಿರೋಧವನ್ನು ಹಲವರು ತೋರಿಸುತ್ತಿದ್ದಾರೆ. ’ತಮ್ಮ ಸುರಕ್ಷತೆಯ ಬಗೆಗಿನ ಭಯದಿಂದ ಸುಮಾರು 30ಕ್ಕೂ ಹೆಚ್ಚು ಜನ ಈ ಸಾಕ್ಷ್ಯಚಿತ್ರದ ಸಂದರ್ಶನದಲ್ಲಿ ಭಾಗವಹಿಸಲು ನಿರಾಕರಿಸಿದರು’ ಎಂದು ಸಾಕ್ಷ್ಯಚಿತ್ರದಲ್ಲಿ ಒಂದು ಕಡೆ ಬರುತ್ತದೆ. ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಜನ ಆತಂಕ ಪಡುವ ಸ್ಥಿತಿ ಭಾರತದಲ್ಲಿದೆ ಎಂಬುದು ಜಗತ್ತಿಗೆ ಈ ದೇಶದ ಬಗ್ಗೆ ಎಂತಹ ಚಿತ್ರಣವನ್ನು ಕಟ್ಟಿಕೊಡುತ್ತದೆ ಎಂಬುದರ ಬಗ್ಗೆ ಒಕ್ಕೂಟ ಸರ್ಕಾರಕ್ಕೆ ಅರಿವಿದೆಯೇ? ಈ ಭಯವನ್ನು ಮೀರಿದ ಯುವಜನರು ಎಚ್‌ಸಿಯು ಅಂತಹ ಜಾಗದಲ್ಲಿ ಸಾರ್ವಜನಿಕ ಪ್ರದರ್ಶನ ಏರ್ಪಡಿಸುತ್ತಾರೆ ಎಂಬ ಸಂಗತಿಯಾದರೂ ಈ ಸರ್ಕಾರದ ಮಂದಿಗೆ ವಿವೇಕ ನೀಡಲಿ. ದಮನಕಾರಿ ದುರುಳತನ ಕೊನೆಯಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...