Homeಮುಖಪುಟಬಿಬಿಸಿ ಸಾಕ್ಷ್ಯಾಚಿತ್ರ: ಭಾಗ ಎರಡರಲ್ಲಿ ಪ್ರಧಾನಿ ಮೋದಿ ಕುರಿತು ಹೇಳಿರುವುದೇನು?

ಬಿಬಿಸಿ ಸಾಕ್ಷ್ಯಾಚಿತ್ರ: ಭಾಗ ಎರಡರಲ್ಲಿ ಪ್ರಧಾನಿ ಮೋದಿ ಕುರಿತು ಹೇಳಿರುವುದೇನು?

ಮೊದಲ ಭಾಗದಲ್ಲಿ ಗುಜರಾತ್ ಗಲಭೆಯ ಕುರಿತು ಚಿತ್ರಿಸಿದ್ದರೆ, ಮೋದಿ ಪ್ರಧಾನಿಯಾದ ಬಳಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಆಗಿರುವ ಬೆಳವಣಿಗೆಗಳ ಕುರಿತು ಎರಡನೇ ಭಾಗ ಚರ್ಚಿಸಿದೆ.

- Advertisement -
- Advertisement -

ಲಂಡನ್: ಪ್ರಧಾನಿ ಮೋದಿಯರವರ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರವಾದ ‘ಇಂಡಿಯಾ: ದಿ ಮೋದಿ ಕ್ವಶ್ಚನ್‌’ ಎರಡನೇ ಭಾಗ ಬಿಡುಗಡೆಯಾಗಿದೆ. ಮೊದಲ ಭಾಗದಲ್ಲಿ 2002ರ ಗುಜರಾತ್‌ ಗಲಭೆಯ ಕುರಿತು ಬೆಳಕು ಚೆಲ್ಲಿದ್ದು ಸಾಕ್ಷ್ಯಾಚಿತ್ರ ವಿವಾದಕ್ಕೆ ಕಾರಣವಾಗಿತ್ತು. ಮೋದಿಯವರು ಪ್ರಧಾನಿಯಾದ ಬಳಿಕ ಭಾರತದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಆಗಿರುವ ಬೆಳವಣಿಗೆಗಳನ್ನು ಸಾಕ್ಷ್ಯಾಚಿತ್ರದ ಎರಡನೇ (ಹಾಗೂ ಕೊನೆಯ) ಭಾಗದಲ್ಲಿ ಚರ್ಚಿಸಲಾಗಿದೆ.

ಮುಸ್ಲಿಮರ ಮೇಲೆ ಮಾಬ್‌ ಲಿಂಚಿಂಗ್‌, ಆರ್ಟಿಕಲ್ 370 ಮತ್ತು ವಿವಾದಾತ್ಮಕ ಪೌರತ್ವ (ತಿದ್ದುಪಡಿ) ಕಾಯಿದೆ, 2020ರಲ್ಲಿ ಈಶಾನ್ಯ ದೆಹಲಿಯಲ್ಲಿದ್ದಾಗ ಕೋಮು ಹಿಂಸಾಚಾರದ ಕುರಿತು ಈ ಸಾಕ್ಷ್ಯಾಚಿತ್ರ ಚರ್ಚಿಸಿದೆ. ಈ ಅಂತಿಮ ಸರಣಿಯಲ್ಲಿ ಬಿಬಿಸಿ ಮಾಧ್ಯಮವು ಸ್ವತಂತ್ರ ವರದಿಗಳು, ಸಾಕ್ಷ್ಯಗಳು, ಬಾಧಿತರು, ಶಿಕ್ಷಣ ತಜ್ಞರು, ಪತ್ರಿಕರ್ತರು ಮತ್ತು ನಾಗರಿಕ ಸಮಾಜದ ಅಭಿಪ್ರಾಯಗಳನ್ನು ದಾಖಲಿಸಿದೆ. ಬಿಜೆಪಿಯ ದೃಷ್ಟಿಕೋನವನ್ನು ಪ್ರತಿನಿಧಿಸುವ ಮೂರು ವ್ಯಕ್ತಿಗಳ ಅಭಿಪ್ರಾಯಗಳನ್ನೂ ಇದು ಒಳಗೊಂಡಿದೆ. ಪ್ರಮುಖವಾಗಿ ಪತ್ರಕರ್ತ ಮತ್ತು ಬಿಜೆಪಿಯ ಮಾಜಿ ಸಂಸದ ಸ್ವಪನ್ ದಾಸ್‌ಗುಪ್ತಾ ಅವರ ಹೇಳಿಕೆಗಳು ಇಲ್ಲಿವೆ.

‘ಅಭ್ಯುದಯದ ಹೊಸ ಯುಗ’ ಮತ್ತು ‘ನವ ಭಾರತ’ದ ಭರವಸೆಯನ್ನು ಮೋದಿಯವರು ನೀಡಿದರೂ, ಅವರ ಅಧಿಕಾರವಧಿಯಲ್ಲಿ ದೇಶವು ‘ಧಾರ್ಮಿಕ ಪ್ರಕ್ಷುಬ್ಧತೆಯಿಂದ ಹಾಳಾಗಿದೆ’ ಎಂದು ಸಾಕ್ಷ್ಯಚಿತ್ರ ಪ್ರತಿಪಾದಿಸುತ್ತದೆ. ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಅವರ ವಿರುದ್ಧದ ಎಲ್ಲಾ ಆರೋಪಗಳನ್ನು ಭಾರತದ ಅತ್ಯುನ್ನತ ನ್ಯಾಯಾಲಯವು ತೆರವುಗೊಳಿಸಿದ್ದರೂ, ‘ಆತಂಕಗಳು ದೂರವಾಗುವುದಿಲ್ಲ’ ಎಂದು ಹೊಸ ಸಂಚಿಕೆ ಪ್ರತಿಪಾದಿಸಿದೆ.

ಮಾಬ್ ಲಿಂಚಿಂಗ್‌ (ಗೋರಕ್ಷಣೆ ನೆಪದಲ್ಲಿ ಹಿಂಸೆಗಳು)

2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೂರು ವರ್ಷಗಳ ನಂತರ, ಮುಸ್ಲಿಮರ ವಿರುದ್ಧ ವ್ಯಾಪಕವಾಗಿ ಹಲ್ಲೆ ಪ್ರಕರಣಗಳು ನಡೆದಿವೆ. ಗೋಮಾಂಸ ಸಾಗಣೆ ವಿಚಾರ ಹೆಚ್ಚಾಗಿ ವಿವಾದಾಸ್ಪದವಾಗಿದೆ.  ನಂತರ ಅನೇಕ ಭಾರತೀಯ ರಾಜ್ಯಗಳಲ್ಲಿ ಗೋಮಾಂಸವನ್ನು ಕಾನೂನುಬಾಹಿರ ಮಾಡಲಾಯಿತು. ಏಕೆಂದರೆ ಗೋವುಗಳನ್ನು ಹಿಂದೂಗಳು ಪವಿತ್ರವೆಂದು ಪರಿಗಣಿಸುತ್ತಾರೆ. ಗೋವಿನ ರಕ್ಷಣೆ ವಿಷಯವನ್ನು ಕೇಂದ್ರೀಕರಿಸುವ ಈ ಭಾಗವು 2017ರಲ್ಲಿ ಗೋರಕ್ಷಕರಿಂದ ಕೊಲ್ಲಲ್ಪಟ್ಟ ಅಲಿಮುದ್ದೀನ್ ಅನ್ಸಾರಿ ಅವರ ಕಥೆಯನ್ನು ಹೇಳುತ್ತದೆ. ಸುದೀರ್ಘ ಮೌನದ ನಂತರ ಪ್ರಧಾನಿ ಮೋದಿಯವರು ಈ ಕುರಿತು ಮಾತನಾಡಿದ್ದರು.

ಅಲಿಮುದ್ದೀನ್‌ನ ಹತ್ಯೆಯಲ್ಲಿ ಬಿಜೆಪಿ ವಕ್ತಾರ ನಿತ್ಯಾನಂದ ಮಹತೋ ಹೇಗೆ ತಪ್ಪಿತಸ್ಥರೆಂದು ಸಾಬೀತಾಯಿತು ಮತ್ತು ಜೀವಾವಧಿ ಶಿಕ್ಷೆಗೆ ಗುರಿಯಾದರು ಎಂಬುದನ್ನು ಸಾಕ್ಷ್ಯಚಿತ್ರವು ವರದಿ ಮಾಡಿದೆ. ಆದರೆ ಮೋದಿಯವರ ಮಂತ್ರಿಗಳಲ್ಲಿ ಒಬ್ಬರು ಅವರಿಗೆ ಸಹಾಯ ಮಾಡಿದ್ದನ್ನು, ತಪ್ಪಿತಸ್ತರಿಗೆ ಹೂವಿನ ಹಾರ ಹಾಕಿ ಸ್ವಾಗತಿಸಿದ ಬೆಳವಣಿಗೆಗಳ ಕುರಿತು ಇಲ್ಲಿ ದಾಖಲಿಸಲಾಗಿದೆ.

“ಅವರು ಇಡೀ ದೇಶದ ಆಡಳಿತಗಾರರು. ಅಂಥವರು ಈ ಜನರನ್ನು ಬೆಂಬಲಿಸಿದಾಗ, ನಾವು ಬಡವರು ಏನನ್ನೂ ಮಾಡಲು ಸಾಧ್ಯವಿಲ್ಲ” ಎಂದು ಚಿತ್ರದಲ್ಲಿ ಅನ್ಸಾರಿ ಅವರ ಪತ್ನಿ ಅಳಲು ತೋಡಿಕೊಂಡಿದ್ದಾರೆ. ಹಲ್ಲೆ ನಡೆಸಿದವರು ನಾಲ್ಕು ವರ್ಷಗಳ ನಂತರವೂ ಸ್ವತಂತ್ರರಾಗಿದ್ದಾರೆ ಎಂದು ವಿಷಾದಿಸಿದ್ದಾರೆ.

ಹ್ಯೂಮನ್‌ ರೈಟ್ಸ್‌ ವಾಚ್ ಪ್ರಕಾರ, “ಮೇ 2015 ಮತ್ತು ಡಿಸೆಂಬರ್ 2018ರ ನಡುವೆ ಮೂರೂವರೆ ವರ್ಷಗಳಲ್ಲಿ, ಗೋರಕ್ಷಕರು, ಗೋಸಂಬಂಧಿ ಹಿಂಸಾಚಾರದಲ್ಲಿ 44 ಜನರನ್ನು ಕೊಂದು ಸುಮಾರು 280 ಮಂದಿಯನ್ನು ಗಾಯಗೊಳಿಸಿದ್ದಾರೆ, ಅದರಲ್ಲಿ ಹೆಚ್ಚಿನ ಬಲಿಪಶುಗಳು ಮುಸ್ಲಿಮರು” ಎನ್ನುತ್ತದೆ. ಈ ವಿಷಯಗಳನ್ನು ಸಾಕ್ಷ್ಯಾಚಿತ್ರ ದಾಖಲಿಸಿದೆ.

ವಿಧಿ 370 ರದ್ಧತಿ

ಕಾಶ್ಮೀರಕ್ಕೆ ಸಂಬಂಧಿಸಿದ 370ನೇ ವಿಧಿಯನ್ನು ಆಗಸ್ಟ್ 2019ರಲ್ಲಿ ರದ್ದುಗೊಳಿಸಿ, ಕೇಂದ್ರಾಡಳಿತ ಪ್ರದೇಶಗಳನ್ನು ರೂಪಿಸಿದ್ದರ ಕುರಿತು ಸಾಕ್ಷಾಚಿತ್ರ ಮಾತನಾಡುತ್ತದೆ.  “ಮೋದಿಯವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಒಂಬತ್ತು ವಾರಗಳ ನಂತರ” ಸೇನಾ ಬಲ ಹೆಚ್ಚಿಸಲಾಯಿತು. ಕೇಂದ್ರದ ಹಿಡಿತಕ್ಕೆ ಕಾಶ್ಮೀರವನ್ನು ತೆಗೆದುಕೊಳ್ಳಲಾಯಿತು. ಆದಾಗ್ಯೂ, ಸರ್ಕಾರವು ತನ್ನ ನೀತಿಗಳಿಂದ ಈ ಪ್ರದೇಶದಲ್ಲಿ “ಶಾಂತಿ ಮತ್ತು ಅಭಿವೃದ್ಧಿ ಸಾಧ್ಯವಾಗುತ್ತಿದೆ” ಎಂದು ಹೇಳಿಕೊಂಡಿದೆ.

ವಿದ್ವಾಂಸ, ಲೇಖಕ ಕ್ರಿಸ್ಟೋಫ್ ಜಾಫ್ರೆಲಾಟ್ ಪ್ರಕಾರ, “ಭಾರತೀಕರಣ”ದ ಹೊಸ ನೀತಿಯು ನಡೆಯುತ್ತಿದೆ. ಆರ್ಟಿಕಲ್ 370 ರದ್ದುಗೊಳಿಸಲಾದ ಬಳಿಕ “ಮೊದಲ ತಿಂಗಳಲ್ಲೇ ಸುಮಾರು 4,000 ಜನರನ್ನು ಬಂಧಿಸಲಾಗಿದೆ” ಎಂದು ಹೇಳಲಾಗಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಈ ಸಾಕ್ಷ್ಯಾಚಿತ್ರ ಎರಡನೇ ಭಾಗ ಮಾತನಾಡಿದೆ.

ಸಿಎಎ ಮತ್ತು ಈಶಾನ್ಯ ದೆಹಲಿ ಹಿಂಸಾಚಾರ

ಭಾರತದ ಪೌರತ್ವದೊಂದಿಗೆ ಧರ್ಮವನ್ನು ಥಳುಕು ಹಾಕಿದ್ದರಿಂದ ‘ಪೌರತ್ವ ತಿದ್ದುಪಡಿ ಕಾಯ್ದೆ’ (ಸಿಸಿಎ) ವಿರುದ್ಧ ದೊಡ್ಡ ಮಟ್ಟದ ಪ್ರತಿಭಟನೆಗಳು ಭುಗಿಲೆದ್ದವು. ಇದು ಮಹತ್ವದ ವಿಭಾಗಗಳಲ್ಲಿ ಎಚ್ಚರಿಕೆಯ ಗಂಟೆಗಳನ್ನು ಬಾರಿಸಿತು. ಫೆಬ್ರವರಿ 2020ರಲ್ಲಿ ದೆಹಲಿಯಲ್ಲಿ ಕನಿಷ್ಠ 53 ಜೀವಗಳನ್ನು ಬಲಿ ತೆಗೆದುಕೊಂಡ ಕೋಮು ಹಿಂಸಾಚಾರದ ಕುರಿತು ಸಾಕ್ಷ್ಯಾಚಿತ್ರವು ಆತಂಕ ವ್ಯಕ್ತಪಡಿಸಿದೆ. “ಕಟ್ಟರ್‌ ಹಿಂದುತ್ವ ಧರ್ಮಗುರುಗಳು ಮುಸ್ಲಿಂ ಪ್ರತಿಭಟನಾಕಾರರ ವಿರುದ್ಧ ಬೆದರಿಕೆ ಹಾಕಿದರು” ಎನ್ನುತ್ತದೆ.

ಫೈಜಾನ್ ಎಂಬ 23 ವರ್ಷದ ಮುಸ್ಲಿಂ ಯುವಕನನ್ನು “ಪೊಲೀಸರು ಹೊಡೆದು ಸಾಯಿಸಿದ್ದಾರೆ” ಎಂದು ಸಾಕ್ಷ್ಯಚಿತ್ರವು ವೈರಲ್ ವೀಡಿಯೊವೊಂದನ್ನು ಉಲ್ಲೇಖಿಸುತ್ತದೆ. ಫೈಜಾನ್‌ನ ತಾಯಿ ಮಾತನಾಡಿದ್ದು, “ನನಗೆ ಮತ್ತು ನನ್ನ ಮಗನಿಗೆ ನ್ಯಾಯ ಬೇಕು. ಆತ ನಿರಪರಾಧಿ ಮತ್ತು ಯಾವುದೇ ಕಾರಣವಿಲ್ಲದೆ ಕೊಲೆಯಾಗಿದ್ದಾನೆ” ಎಂದಿದ್ದಾರೆ.

ಇದನ್ನೂ ಓದಿರಿ: ಜನರು ದೂರದರ್ಶನ ನಂಬದಿದ್ದರೂ BBC ನಂಬುತ್ತಾರೆ: ಮೋದಿಯ ಹಳೆಯ ವಿಡಿಯೊ ವೈರಲ್‌

“2020ರ ದೆಹಲಿ ಹಿಂಸಾಚಾರದಲ್ಲಿ ಸತ್ತವರಲ್ಲಿ ಮೂರನೇ ಎರಡರಷ್ಟು ಜನರು ಮುಸ್ಲಿಮರಾಗಿದ್ದಾರೆ ಎಂದು ವರದಿಯಾಗಿದೆ” ಎಂದು ಸಾಕ್ಷ್ಯಾಚಿತ್ರ ಹೇಳುತ್ತದೆ. ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ ಸಂಸ್ಥೆಯ ತನಿಖೆಯನ್ನು ಉಲ್ಲೇಖಿಸುತ್ತದೆ. “ಪೊಲೀಸರು ಚಿತ್ರಹಿಂಸೆ ನೀಡಿದರು, ಪ್ರತಿಭಟನಾಕಾರರ ಮೇಲೆ ಅತಿಯಾದ ಮತ್ತು ಅನಿಯಂತ್ರಿತ ಬಲ ಪ್ರಯೋಗ ಮಾಡಿದರು, ಹಿಂಸಾಚಾರದಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಸೇರಿದಂತೆ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯಾಯಿತು” ಎಂದು ಅಮ್ನೆಸ್ಟಿ ಹೇಳಿದೆ.

ಆಮ್ನೆಸ್ಟಿ ಇಂಟರ್‌ನ್ಯಾಶನಲ್ ಇಂಡಿಯಾದ ಅಧ್ಯಕ್ಷ ಆಕರ್ ಪಟೇಲ್, “ದೆಹಲಿಯಲ್ಲಿ ನಡೆದ ಹಿಂಸಾಚಾರದ ಕುರಿತು ಆಮ್ನೆಸ್ಟಿ ವರದಿಯು ಪೊಲೀಸರು ನಡೆದುಕೊಳ್ಳಬೇಕಾದಂತೆ ನಡೆದುಕೊಂಡಿಲ್ಲ ಎಂದು ತೋರಿಸಿದೆ” ಎಂದಿದ್ದಾರೆ.

ಕೊನೆಯಲ್ಲಿ…

“ಪತ್ರಕರ್ತರು ತಮ್ಮ ವೃತ್ತಿ ಕಾರಣಗಳಿಂದಾಗಿ ಹಿಂಸೆ, ಬೆದರಿಕೆ ಮತ್ತು ಬಂಧನವನ್ನು ಎದುರಿಸುತ್ತಿದ್ದಾರೆ. ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಪತ್ರಿಕಾ ಸ್ವಾತಂತ್ರ್ಯ ಕ್ಷೀಣಿಸಿದೆ ಮತ್ತು ಈಗ ಬಿಕ್ಕಟ್ಟಿನಲ್ಲಿದೆ ಎಂದು ಹೋರಾಟಗಾರರು ಹೇಳುತ್ತಾರೆ. ಮಾನವ ಹಕ್ಕುಗಳ ಹೋರಾಟಗಾರರು ತಮ್ಮ ಮೇಲೆ ದಾಳಿ ನಡೆಯುತ್ತಿವೆ” ಎನ್ನುವುದನ್ನು ಡಾಕ್ಯುಮೆಂಟರಿ ಒಳಗೊಂಡಿದೆ.

(ಈ ವರದಿಯು ‘ದಿ ವೈರ್‌’ನಲ್ಲಿ ಪ್ರಕಟಿಸಲಾದ ಬರಹದಿಂದ ಆಯ್ದ ಅಂಶಗಳನ್ನು ಒಳಗೊಂಡಿದೆ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...