Homeಮುಖಪುಟಬಿಬಿಸಿ ಸಾಕ್ಷ್ಯಾಚಿತ್ರ: ಭಾಗ ಎರಡರಲ್ಲಿ ಪ್ರಧಾನಿ ಮೋದಿ ಕುರಿತು ಹೇಳಿರುವುದೇನು?

ಬಿಬಿಸಿ ಸಾಕ್ಷ್ಯಾಚಿತ್ರ: ಭಾಗ ಎರಡರಲ್ಲಿ ಪ್ರಧಾನಿ ಮೋದಿ ಕುರಿತು ಹೇಳಿರುವುದೇನು?

ಮೊದಲ ಭಾಗದಲ್ಲಿ ಗುಜರಾತ್ ಗಲಭೆಯ ಕುರಿತು ಚಿತ್ರಿಸಿದ್ದರೆ, ಮೋದಿ ಪ್ರಧಾನಿಯಾದ ಬಳಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಆಗಿರುವ ಬೆಳವಣಿಗೆಗಳ ಕುರಿತು ಎರಡನೇ ಭಾಗ ಚರ್ಚಿಸಿದೆ.

- Advertisement -
- Advertisement -

ಲಂಡನ್: ಪ್ರಧಾನಿ ಮೋದಿಯರವರ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರವಾದ ‘ಇಂಡಿಯಾ: ದಿ ಮೋದಿ ಕ್ವಶ್ಚನ್‌’ ಎರಡನೇ ಭಾಗ ಬಿಡುಗಡೆಯಾಗಿದೆ. ಮೊದಲ ಭಾಗದಲ್ಲಿ 2002ರ ಗುಜರಾತ್‌ ಗಲಭೆಯ ಕುರಿತು ಬೆಳಕು ಚೆಲ್ಲಿದ್ದು ಸಾಕ್ಷ್ಯಾಚಿತ್ರ ವಿವಾದಕ್ಕೆ ಕಾರಣವಾಗಿತ್ತು. ಮೋದಿಯವರು ಪ್ರಧಾನಿಯಾದ ಬಳಿಕ ಭಾರತದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಆಗಿರುವ ಬೆಳವಣಿಗೆಗಳನ್ನು ಸಾಕ್ಷ್ಯಾಚಿತ್ರದ ಎರಡನೇ (ಹಾಗೂ ಕೊನೆಯ) ಭಾಗದಲ್ಲಿ ಚರ್ಚಿಸಲಾಗಿದೆ.

ಮುಸ್ಲಿಮರ ಮೇಲೆ ಮಾಬ್‌ ಲಿಂಚಿಂಗ್‌, ಆರ್ಟಿಕಲ್ 370 ಮತ್ತು ವಿವಾದಾತ್ಮಕ ಪೌರತ್ವ (ತಿದ್ದುಪಡಿ) ಕಾಯಿದೆ, 2020ರಲ್ಲಿ ಈಶಾನ್ಯ ದೆಹಲಿಯಲ್ಲಿದ್ದಾಗ ಕೋಮು ಹಿಂಸಾಚಾರದ ಕುರಿತು ಈ ಸಾಕ್ಷ್ಯಾಚಿತ್ರ ಚರ್ಚಿಸಿದೆ. ಈ ಅಂತಿಮ ಸರಣಿಯಲ್ಲಿ ಬಿಬಿಸಿ ಮಾಧ್ಯಮವು ಸ್ವತಂತ್ರ ವರದಿಗಳು, ಸಾಕ್ಷ್ಯಗಳು, ಬಾಧಿತರು, ಶಿಕ್ಷಣ ತಜ್ಞರು, ಪತ್ರಿಕರ್ತರು ಮತ್ತು ನಾಗರಿಕ ಸಮಾಜದ ಅಭಿಪ್ರಾಯಗಳನ್ನು ದಾಖಲಿಸಿದೆ. ಬಿಜೆಪಿಯ ದೃಷ್ಟಿಕೋನವನ್ನು ಪ್ರತಿನಿಧಿಸುವ ಮೂರು ವ್ಯಕ್ತಿಗಳ ಅಭಿಪ್ರಾಯಗಳನ್ನೂ ಇದು ಒಳಗೊಂಡಿದೆ. ಪ್ರಮುಖವಾಗಿ ಪತ್ರಕರ್ತ ಮತ್ತು ಬಿಜೆಪಿಯ ಮಾಜಿ ಸಂಸದ ಸ್ವಪನ್ ದಾಸ್‌ಗುಪ್ತಾ ಅವರ ಹೇಳಿಕೆಗಳು ಇಲ್ಲಿವೆ.

‘ಅಭ್ಯುದಯದ ಹೊಸ ಯುಗ’ ಮತ್ತು ‘ನವ ಭಾರತ’ದ ಭರವಸೆಯನ್ನು ಮೋದಿಯವರು ನೀಡಿದರೂ, ಅವರ ಅಧಿಕಾರವಧಿಯಲ್ಲಿ ದೇಶವು ‘ಧಾರ್ಮಿಕ ಪ್ರಕ್ಷುಬ್ಧತೆಯಿಂದ ಹಾಳಾಗಿದೆ’ ಎಂದು ಸಾಕ್ಷ್ಯಚಿತ್ರ ಪ್ರತಿಪಾದಿಸುತ್ತದೆ. ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಅವರ ವಿರುದ್ಧದ ಎಲ್ಲಾ ಆರೋಪಗಳನ್ನು ಭಾರತದ ಅತ್ಯುನ್ನತ ನ್ಯಾಯಾಲಯವು ತೆರವುಗೊಳಿಸಿದ್ದರೂ, ‘ಆತಂಕಗಳು ದೂರವಾಗುವುದಿಲ್ಲ’ ಎಂದು ಹೊಸ ಸಂಚಿಕೆ ಪ್ರತಿಪಾದಿಸಿದೆ.

ಮಾಬ್ ಲಿಂಚಿಂಗ್‌ (ಗೋರಕ್ಷಣೆ ನೆಪದಲ್ಲಿ ಹಿಂಸೆಗಳು)

2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೂರು ವರ್ಷಗಳ ನಂತರ, ಮುಸ್ಲಿಮರ ವಿರುದ್ಧ ವ್ಯಾಪಕವಾಗಿ ಹಲ್ಲೆ ಪ್ರಕರಣಗಳು ನಡೆದಿವೆ. ಗೋಮಾಂಸ ಸಾಗಣೆ ವಿಚಾರ ಹೆಚ್ಚಾಗಿ ವಿವಾದಾಸ್ಪದವಾಗಿದೆ.  ನಂತರ ಅನೇಕ ಭಾರತೀಯ ರಾಜ್ಯಗಳಲ್ಲಿ ಗೋಮಾಂಸವನ್ನು ಕಾನೂನುಬಾಹಿರ ಮಾಡಲಾಯಿತು. ಏಕೆಂದರೆ ಗೋವುಗಳನ್ನು ಹಿಂದೂಗಳು ಪವಿತ್ರವೆಂದು ಪರಿಗಣಿಸುತ್ತಾರೆ. ಗೋವಿನ ರಕ್ಷಣೆ ವಿಷಯವನ್ನು ಕೇಂದ್ರೀಕರಿಸುವ ಈ ಭಾಗವು 2017ರಲ್ಲಿ ಗೋರಕ್ಷಕರಿಂದ ಕೊಲ್ಲಲ್ಪಟ್ಟ ಅಲಿಮುದ್ದೀನ್ ಅನ್ಸಾರಿ ಅವರ ಕಥೆಯನ್ನು ಹೇಳುತ್ತದೆ. ಸುದೀರ್ಘ ಮೌನದ ನಂತರ ಪ್ರಧಾನಿ ಮೋದಿಯವರು ಈ ಕುರಿತು ಮಾತನಾಡಿದ್ದರು.

ಅಲಿಮುದ್ದೀನ್‌ನ ಹತ್ಯೆಯಲ್ಲಿ ಬಿಜೆಪಿ ವಕ್ತಾರ ನಿತ್ಯಾನಂದ ಮಹತೋ ಹೇಗೆ ತಪ್ಪಿತಸ್ಥರೆಂದು ಸಾಬೀತಾಯಿತು ಮತ್ತು ಜೀವಾವಧಿ ಶಿಕ್ಷೆಗೆ ಗುರಿಯಾದರು ಎಂಬುದನ್ನು ಸಾಕ್ಷ್ಯಚಿತ್ರವು ವರದಿ ಮಾಡಿದೆ. ಆದರೆ ಮೋದಿಯವರ ಮಂತ್ರಿಗಳಲ್ಲಿ ಒಬ್ಬರು ಅವರಿಗೆ ಸಹಾಯ ಮಾಡಿದ್ದನ್ನು, ತಪ್ಪಿತಸ್ತರಿಗೆ ಹೂವಿನ ಹಾರ ಹಾಕಿ ಸ್ವಾಗತಿಸಿದ ಬೆಳವಣಿಗೆಗಳ ಕುರಿತು ಇಲ್ಲಿ ದಾಖಲಿಸಲಾಗಿದೆ.

“ಅವರು ಇಡೀ ದೇಶದ ಆಡಳಿತಗಾರರು. ಅಂಥವರು ಈ ಜನರನ್ನು ಬೆಂಬಲಿಸಿದಾಗ, ನಾವು ಬಡವರು ಏನನ್ನೂ ಮಾಡಲು ಸಾಧ್ಯವಿಲ್ಲ” ಎಂದು ಚಿತ್ರದಲ್ಲಿ ಅನ್ಸಾರಿ ಅವರ ಪತ್ನಿ ಅಳಲು ತೋಡಿಕೊಂಡಿದ್ದಾರೆ. ಹಲ್ಲೆ ನಡೆಸಿದವರು ನಾಲ್ಕು ವರ್ಷಗಳ ನಂತರವೂ ಸ್ವತಂತ್ರರಾಗಿದ್ದಾರೆ ಎಂದು ವಿಷಾದಿಸಿದ್ದಾರೆ.

ಹ್ಯೂಮನ್‌ ರೈಟ್ಸ್‌ ವಾಚ್ ಪ್ರಕಾರ, “ಮೇ 2015 ಮತ್ತು ಡಿಸೆಂಬರ್ 2018ರ ನಡುವೆ ಮೂರೂವರೆ ವರ್ಷಗಳಲ್ಲಿ, ಗೋರಕ್ಷಕರು, ಗೋಸಂಬಂಧಿ ಹಿಂಸಾಚಾರದಲ್ಲಿ 44 ಜನರನ್ನು ಕೊಂದು ಸುಮಾರು 280 ಮಂದಿಯನ್ನು ಗಾಯಗೊಳಿಸಿದ್ದಾರೆ, ಅದರಲ್ಲಿ ಹೆಚ್ಚಿನ ಬಲಿಪಶುಗಳು ಮುಸ್ಲಿಮರು” ಎನ್ನುತ್ತದೆ. ಈ ವಿಷಯಗಳನ್ನು ಸಾಕ್ಷ್ಯಾಚಿತ್ರ ದಾಖಲಿಸಿದೆ.

ವಿಧಿ 370 ರದ್ಧತಿ

ಕಾಶ್ಮೀರಕ್ಕೆ ಸಂಬಂಧಿಸಿದ 370ನೇ ವಿಧಿಯನ್ನು ಆಗಸ್ಟ್ 2019ರಲ್ಲಿ ರದ್ದುಗೊಳಿಸಿ, ಕೇಂದ್ರಾಡಳಿತ ಪ್ರದೇಶಗಳನ್ನು ರೂಪಿಸಿದ್ದರ ಕುರಿತು ಸಾಕ್ಷಾಚಿತ್ರ ಮಾತನಾಡುತ್ತದೆ.  “ಮೋದಿಯವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಒಂಬತ್ತು ವಾರಗಳ ನಂತರ” ಸೇನಾ ಬಲ ಹೆಚ್ಚಿಸಲಾಯಿತು. ಕೇಂದ್ರದ ಹಿಡಿತಕ್ಕೆ ಕಾಶ್ಮೀರವನ್ನು ತೆಗೆದುಕೊಳ್ಳಲಾಯಿತು. ಆದಾಗ್ಯೂ, ಸರ್ಕಾರವು ತನ್ನ ನೀತಿಗಳಿಂದ ಈ ಪ್ರದೇಶದಲ್ಲಿ “ಶಾಂತಿ ಮತ್ತು ಅಭಿವೃದ್ಧಿ ಸಾಧ್ಯವಾಗುತ್ತಿದೆ” ಎಂದು ಹೇಳಿಕೊಂಡಿದೆ.

ವಿದ್ವಾಂಸ, ಲೇಖಕ ಕ್ರಿಸ್ಟೋಫ್ ಜಾಫ್ರೆಲಾಟ್ ಪ್ರಕಾರ, “ಭಾರತೀಕರಣ”ದ ಹೊಸ ನೀತಿಯು ನಡೆಯುತ್ತಿದೆ. ಆರ್ಟಿಕಲ್ 370 ರದ್ದುಗೊಳಿಸಲಾದ ಬಳಿಕ “ಮೊದಲ ತಿಂಗಳಲ್ಲೇ ಸುಮಾರು 4,000 ಜನರನ್ನು ಬಂಧಿಸಲಾಗಿದೆ” ಎಂದು ಹೇಳಲಾಗಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಈ ಸಾಕ್ಷ್ಯಾಚಿತ್ರ ಎರಡನೇ ಭಾಗ ಮಾತನಾಡಿದೆ.

ಸಿಎಎ ಮತ್ತು ಈಶಾನ್ಯ ದೆಹಲಿ ಹಿಂಸಾಚಾರ

ಭಾರತದ ಪೌರತ್ವದೊಂದಿಗೆ ಧರ್ಮವನ್ನು ಥಳುಕು ಹಾಕಿದ್ದರಿಂದ ‘ಪೌರತ್ವ ತಿದ್ದುಪಡಿ ಕಾಯ್ದೆ’ (ಸಿಸಿಎ) ವಿರುದ್ಧ ದೊಡ್ಡ ಮಟ್ಟದ ಪ್ರತಿಭಟನೆಗಳು ಭುಗಿಲೆದ್ದವು. ಇದು ಮಹತ್ವದ ವಿಭಾಗಗಳಲ್ಲಿ ಎಚ್ಚರಿಕೆಯ ಗಂಟೆಗಳನ್ನು ಬಾರಿಸಿತು. ಫೆಬ್ರವರಿ 2020ರಲ್ಲಿ ದೆಹಲಿಯಲ್ಲಿ ಕನಿಷ್ಠ 53 ಜೀವಗಳನ್ನು ಬಲಿ ತೆಗೆದುಕೊಂಡ ಕೋಮು ಹಿಂಸಾಚಾರದ ಕುರಿತು ಸಾಕ್ಷ್ಯಾಚಿತ್ರವು ಆತಂಕ ವ್ಯಕ್ತಪಡಿಸಿದೆ. “ಕಟ್ಟರ್‌ ಹಿಂದುತ್ವ ಧರ್ಮಗುರುಗಳು ಮುಸ್ಲಿಂ ಪ್ರತಿಭಟನಾಕಾರರ ವಿರುದ್ಧ ಬೆದರಿಕೆ ಹಾಕಿದರು” ಎನ್ನುತ್ತದೆ.

ಫೈಜಾನ್ ಎಂಬ 23 ವರ್ಷದ ಮುಸ್ಲಿಂ ಯುವಕನನ್ನು “ಪೊಲೀಸರು ಹೊಡೆದು ಸಾಯಿಸಿದ್ದಾರೆ” ಎಂದು ಸಾಕ್ಷ್ಯಚಿತ್ರವು ವೈರಲ್ ವೀಡಿಯೊವೊಂದನ್ನು ಉಲ್ಲೇಖಿಸುತ್ತದೆ. ಫೈಜಾನ್‌ನ ತಾಯಿ ಮಾತನಾಡಿದ್ದು, “ನನಗೆ ಮತ್ತು ನನ್ನ ಮಗನಿಗೆ ನ್ಯಾಯ ಬೇಕು. ಆತ ನಿರಪರಾಧಿ ಮತ್ತು ಯಾವುದೇ ಕಾರಣವಿಲ್ಲದೆ ಕೊಲೆಯಾಗಿದ್ದಾನೆ” ಎಂದಿದ್ದಾರೆ.

ಇದನ್ನೂ ಓದಿರಿ: ಜನರು ದೂರದರ್ಶನ ನಂಬದಿದ್ದರೂ BBC ನಂಬುತ್ತಾರೆ: ಮೋದಿಯ ಹಳೆಯ ವಿಡಿಯೊ ವೈರಲ್‌

“2020ರ ದೆಹಲಿ ಹಿಂಸಾಚಾರದಲ್ಲಿ ಸತ್ತವರಲ್ಲಿ ಮೂರನೇ ಎರಡರಷ್ಟು ಜನರು ಮುಸ್ಲಿಮರಾಗಿದ್ದಾರೆ ಎಂದು ವರದಿಯಾಗಿದೆ” ಎಂದು ಸಾಕ್ಷ್ಯಾಚಿತ್ರ ಹೇಳುತ್ತದೆ. ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ ಸಂಸ್ಥೆಯ ತನಿಖೆಯನ್ನು ಉಲ್ಲೇಖಿಸುತ್ತದೆ. “ಪೊಲೀಸರು ಚಿತ್ರಹಿಂಸೆ ನೀಡಿದರು, ಪ್ರತಿಭಟನಾಕಾರರ ಮೇಲೆ ಅತಿಯಾದ ಮತ್ತು ಅನಿಯಂತ್ರಿತ ಬಲ ಪ್ರಯೋಗ ಮಾಡಿದರು, ಹಿಂಸಾಚಾರದಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಸೇರಿದಂತೆ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯಾಯಿತು” ಎಂದು ಅಮ್ನೆಸ್ಟಿ ಹೇಳಿದೆ.

ಆಮ್ನೆಸ್ಟಿ ಇಂಟರ್‌ನ್ಯಾಶನಲ್ ಇಂಡಿಯಾದ ಅಧ್ಯಕ್ಷ ಆಕರ್ ಪಟೇಲ್, “ದೆಹಲಿಯಲ್ಲಿ ನಡೆದ ಹಿಂಸಾಚಾರದ ಕುರಿತು ಆಮ್ನೆಸ್ಟಿ ವರದಿಯು ಪೊಲೀಸರು ನಡೆದುಕೊಳ್ಳಬೇಕಾದಂತೆ ನಡೆದುಕೊಂಡಿಲ್ಲ ಎಂದು ತೋರಿಸಿದೆ” ಎಂದಿದ್ದಾರೆ.

ಕೊನೆಯಲ್ಲಿ…

“ಪತ್ರಕರ್ತರು ತಮ್ಮ ವೃತ್ತಿ ಕಾರಣಗಳಿಂದಾಗಿ ಹಿಂಸೆ, ಬೆದರಿಕೆ ಮತ್ತು ಬಂಧನವನ್ನು ಎದುರಿಸುತ್ತಿದ್ದಾರೆ. ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಪತ್ರಿಕಾ ಸ್ವಾತಂತ್ರ್ಯ ಕ್ಷೀಣಿಸಿದೆ ಮತ್ತು ಈಗ ಬಿಕ್ಕಟ್ಟಿನಲ್ಲಿದೆ ಎಂದು ಹೋರಾಟಗಾರರು ಹೇಳುತ್ತಾರೆ. ಮಾನವ ಹಕ್ಕುಗಳ ಹೋರಾಟಗಾರರು ತಮ್ಮ ಮೇಲೆ ದಾಳಿ ನಡೆಯುತ್ತಿವೆ” ಎನ್ನುವುದನ್ನು ಡಾಕ್ಯುಮೆಂಟರಿ ಒಳಗೊಂಡಿದೆ.

(ಈ ವರದಿಯು ‘ದಿ ವೈರ್‌’ನಲ್ಲಿ ಪ್ರಕಟಿಸಲಾದ ಬರಹದಿಂದ ಆಯ್ದ ಅಂಶಗಳನ್ನು ಒಳಗೊಂಡಿದೆ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...