Homeಕರ್ನಾಟಕಕನ್ನಡದ ತನಿಖಾ ವೆಬ್‌ಸೈಟ್‌ ‘ದಿ ಫೈಲ್‌’ ವರದಿ ‘ಬಿಬಿಸಿ’ಯಲ್ಲಿ ಉಲ್ಲೇಖ

ಕನ್ನಡದ ತನಿಖಾ ವೆಬ್‌ಸೈಟ್‌ ‘ದಿ ಫೈಲ್‌’ ವರದಿ ‘ಬಿಬಿಸಿ’ಯಲ್ಲಿ ಉಲ್ಲೇಖ

- Advertisement -
- Advertisement -

ತನಿಖಾ ವರದಿಗಳ ಮೂಲಕ ಗಮನ ಸೆಳೆದಿರುವ, ಈಗಾಗಲೇ ಎರಡು ವರ್ಷ ಪೂರೈಸಿ ಮೂರನೇ ವರ್ಷಕ್ಕೆ ಕಾಲಿಟ್ಟಿರುವ ಕನ್ನಡದ ‘ದಿ ಫೈಲ್‌’ ಜಾಲತಾಣದ ಕಾರ್ಯವನ್ನು ಅಂತಾರಾಷ್ಟ್ರೀಯ ಸುದ್ದಿ ಜಾಲತಾಣ ‘ಬಿಬಿಸಿ’ (ಇಂಗ್ಲಿಷ್‌) ಉಲ್ಲೇಖಿಸಿದೆ.

ಪತ್ರಕರ್ತ ಜಿ.ಮಹಾಂತೇಶ್ ಅವರು ಮುನ್ನಡೆಸುತ್ತಿರುವ ‘ದಿ ಫೈಲ್‌’ ತನಿಖಾ ವರದಿಗಳಿಗೆ ಹೆಸರಾಗಿದೆ. ಎರಡು ವರ್ಷಗಳಿಂದ ಹಲವಾರು ಹಗರಣಗಳನ್ನು ಜನರ ಮುಂದೆ ತೆರೆದಿಟ್ಟಿದೆ. ಭ್ರಷ್ಟ ಸರ್ಕಾರದ ಹಲವಾರು ಮುಖಗಳು ‘ದಿ ಫೈಲ್‌’ನಲ್ಲಿ ಅನಾವರಣಗೊಂಡಿವೆ.

‘Bangalore: How polarisation is dividing India’s Silicon Valley’ ಎಂಬ ಶೀರ್ಷಿಕೆಯಲ್ಲಿ ಬಿಬಿಸಿಯ ಭಾರತದ ವರದಿಗಾರ ಸೌತಿಕ್ ಬಿಸ್ವಾಸ್ ಬರೆದಿರುವ ವರದಿಯಲ್ಲಿ ‘ದಿ ಫೈಲ್‌’ ಉಲ್ಲೇಖಗೊಂಡಿದೆ. ಸೌತಿಕ್ ಅವರು ಅಫ್ಘಾನಿಸ್ತಾನ ಮತ್ತು ಶ್ರೀಲಂಕಾದಲ್ಲಿನ ಚುನಾವಣೆಗಳು, 2005ರಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ಅಪ್ಪಳಿದ ಸುನಾಮಿ, ಕಾಶ್ಮೀರದಲ್ಲಿನ ಭಯೋತ್ಪಾದನೆ ಸೇರಿದಂತೆ ಹಲವಾರು ವರದಿಗಳನ್ನು ಮಾಡಿ ಗುರುತಿಸಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಬಿಬಿಸಿ’ ವರದಿಯಲ್ಲಿ ಏನಿದೆ?

“ಕರ್ನಾಟಕ ರಾಜ್ಯವು ಯಾವಾಗಲೂ ಎಲ್ಲರನ್ನೂ ಒಳಗೊಳ್ಳುವ ಆರ್ಥಿಕ ಅಭಿವೃದ್ಧಿಯನ್ನು ರೂಪಿಸುತ್ತದೆ. ಕೋಮುವಾದ ಪ್ರೇರಿತ ಹೊರಗಿಡುವಿಕೆಗೆ ಅವಕಾಶ ನೀಡಬಾರದು. ಐಟಿಬಿಟಿ ಕ್ಷೇತ್ರವೇನಾದರೂ ಕೋಮುವಾದೀಕರಣಗೊಂಡರೆ ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಇತ್ತೀಚೆಗೆ ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಮಾಡಿರುವ ಟ್ವೀಟ್ ಉಲ್ಲೇಖಿಸಿ ಆರಂಭವಾಗುವ ಬಿಬಿಸಿ ವರದಿಯು, ಕರ್ನಾಟಕದಲ್ಲಿ ಹಿಂದುತ್ವ ರಾಜಕಾರಣ ಹುಟ್ಟುಹಾಕುತ್ತಿರುವ ಹಲವಾರು ವಿವಾದಗಳನ್ನು ಉಲ್ಲೇಖಿಸಿದೆ.

ಇದನ್ನೂ ಓದಿರಿ: ಚಂದ್ರು ಕೊಲೆ ಪ್ರಕರಣ: ಕೋಮು ದ್ವೇಷದ ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ

ದೇವಾಲಯದ ಬಳಿ ಮುಸ್ಲಿಂ ವ್ಯಾಪಾರಿಗಳಿಗೆ ತಡೆ, ಹಿಂದೂಗಳು ಮುಸ್ಲಿಮರ ಬಳಿ ಮಾಂಸ ಖರೀದಿಸದಂತೆ ಪ್ರಚಾರ, ತರಗತಿಗಳಲ್ಲಿ ಹಿಜಾಬ್ ಧರಿಸದಂತೆ ನಿರ್ಬಂಧ, ಪರೀಕ್ಷೆಯಿಂದ ವಿದ್ಯಾರ್ಥಿನಿಯರು ಹೊರಗುಳಿದಿರುವುದು, ಗೋ ಹತ್ಯೆ ನಿಷೇಧ, ಪಠ್ಯದಲ್ಲಿ ಟಿಪ್ಪು ಇತಿಹಾಸಕ್ಕೆ ಕಡಿವಾಣ, ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವ ಪ್ರಸ್ತಾಪದ ಜೊತೆಗೆ ಆರ್ಥಿಕತೆಯ ದೃಷ್ಟಿಯಿಂದ ಕಿರಣ್ ಮಜುಂದಾರ್‌ ಶಾ ವ್ಯಕ್ತಪಡಿಸಿರುವ ಆತಂಕ ಸೇರಿದಂತೆ ಹಲವಾರು ವಿಷಯಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು, ಅರ್ಥಶಾಸ್ತ್ರ ಪ್ರಾಧ್ಯಾಪಕ ನರೇಂದ್ರ ಪಾಣಿ, ಸಮಾಜಶಾಸ್ತ್ರ ಪ್ರಾಧ್ಯಾಪಕ ಚಂದನ್‌ ಗೌಡ ಅವರ ಅಭಿಪ್ರಾಯಗಳನ್ನು ದಾಖಲಿಸಲಾಗಿದೆ.

ಸರ್ಕಾರದ ಕಳಪೆ ಸಾಧನೆಯ ಬಗ್ಗೆ ಹೇಳುತ್ತಾ, “61 ವರ್ಷದ ರಾಜಕಾರಣಿ ಬೊಮ್ಮಾಯಿ ಅವರು ಯಡಿಯೂರಪ್ಪನವರ ಬಳಿಕ ಅಧಿಕಾರ ಸ್ವೀಕರಿಸಿದರು. ಬೊಮ್ಮಾಯಿ ನೇತೃತ್ವದ ಸರ್ಕಾರದ ಸಾಧನೆ ಕೆಳಮಟ್ಟದ್ದಾಗಿದೆ ಎಂದು ಟೀಕಾಕಾರರು ಹೇಳುತ್ತಾರೆ. ಕೋವಿಡ್ ಬಿಕ್ಕಟ್ಟನ್ನು ಸರಿಯಾಗಿ ನಿರ್ವಹಿಸದ ಆರೋಪಗಳಿವೆ. ಗೌರವಾನ್ವಿತ ಸ್ಥಳೀಯ ಸುದ್ದಿ ಮಾಧ್ಯಮ ಮತ್ತು ತನಿಖಾ ವೆಬ್‌ಸೈಟ್ ‘ದಿ ಫೈಲ್‌’ನಲ್ಲಿನ ವರದಿಯ ಪ್ರಕಾರ, ಸರ್ಕಾರದ ಅರ್ಧದಷ್ಟು ಇಲಾಖೆಗಳು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಆಂತರಿಕ ಪರಿಶೀಲನೆಗಳು ಹೇಳುತ್ತವೆ” ಎಂದು ಬಿಬಿಸಿ ವರದಿ ಮಾಡಿದೆ.

ಜವಾಬ್ದಾರಿ ಹೆಚ್ಚಿದೆ: ಜಿ.ಮಹಾಂತೇಶ್‌

‘ಬಿಬಿಸಿ’ಯಲ್ಲಿ ‘ದಿ ಫೈಲ್‌’ ವರದಿ ಉಲ್ಲೇಖಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಪತ್ರಕರ್ತ ಜಿ.ಮಹಾಂತೇಶ್‌, “ಇದು ನಿಜಕ್ಕೂ ನಮ್ಮೆಲ್ಲರ ಖುಷಿಯನ್ನು ಇಮ್ಮಡಿಗೊಳಿಸಿದೆ ಮತ್ತು ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ” ಎಂದಿದ್ದಾರೆ.

‘ದಿ ಫೈಲ್‌’ ಜಾಲತಾಣದ ಸಂಪಾದಕ ಜಿ.ಮಹಾಂತೇಶ್‌

“ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ನೀತಿ ನಿರೂಪಣೆಯಲ್ಲಿ ಲೋಪದೋಷಗಳು, ಈಗಿನ ಸರ್ಕಾರ ಹೇಗೆ ನಡೆಯುತ್ತಿದೆ, ಎತ್ತ ಸಾಗುತ್ತಿದೆ ಎಂಬುದನ್ನು ಕಳೆದ 2 ವರ್ಷಗಳಿಂದಲೂ ನಿರಂತರವಾಗಿ ದಾಖಲೆ ಸಮೇತ ವಸ್ತುನಿಷ್ಠವಾಗಿ, ಪ್ರಾಮಾಣಿಕವಾಗಿ ದಾಖಲಿಸುತ್ತ ಬರಲಾಗಿದೆ. ಇದೀಗ ಅಂತಾರಾಷ್ಟ್ರೀಯ ಸುದ್ದಿ ಜಾಲತಾಣ ಬಿಬಿಸಿಯಲ್ಲಿಯೂ ‘ದಿ ಫೈಲ್‌’ ವರದಿಗಳು ಉಲ್ಲೇಖಗೊಂಡಿವೆ” ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

“ಈಗಿನ ಸರ್ಕಾರವು ಹಿಜಾಬ್‌, ಹಲಾಲ್‌ ಕಟ್‌, ಜಟ್ಕಾ ಕಟ್‌, ಮಸೀದಿ, ಲೌಡ್‌ ಸ್ಪೀಕರ್‌, ಕೋಮು ಪ್ರಚೋದಕ ವಿಚಾರಗಳಲ್ಲಿಯೇ ಮುಳುಗಿರುವ ಕಾರಣ ಅಭಿವೃದ್ದಿ ವಿಚಾರದಲ್ಲಿ ಕನಿಷ್ಠ ಪ್ರಗತಿ ಸಾಧಿಸಿದೆ ಎಂಬುದನ್ನು ‘ದಿ ಫೈಲ್‌’ ಕಳೆದ 2 ವರ್ಷಗಳಿಂದಲೂ ಕೆಡಿಪಿ ಸಭೆಯ ನಡವಳಿಗಳನ್ನಾಧರಿಸಿ ವರದಿ ಮಾಡಿತ್ತು. ಅದನ್ನೀಗ ಬಿಬಿಸಿ ತನ್ನ ವರದಿಯಲ್ಲಿಯೂ ಪ್ರಸ್ತಾಪಿಸುವ ಮೂಲಕ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ. ಸ್ವತಂತ್ರ ನೋಟ, ಸ್ವತಂತ್ರ ಕರ್ನಾಟಕ, ಸ್ವತಂತ್ರ ಭಾರತಕ್ಕಾಗಿ ಸ್ವತಂತ್ರ ಮಾಧ್ಯಮವನ್ನು ನೀವು ಹೀಗೆಯೇ ಬೆಂಬಲಿಸುತ್ತೀರಿ ಎಂದು ನಂಬಿದ್ದೇವೆ” ಎಂದು ಮಹಾಂತೇಶ್ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...