Homeಕರ್ನಾಟಕಕನ್ನಡದ ತನಿಖಾ ವೆಬ್‌ಸೈಟ್‌ ‘ದಿ ಫೈಲ್‌’ ವರದಿ ‘ಬಿಬಿಸಿ’ಯಲ್ಲಿ ಉಲ್ಲೇಖ

ಕನ್ನಡದ ತನಿಖಾ ವೆಬ್‌ಸೈಟ್‌ ‘ದಿ ಫೈಲ್‌’ ವರದಿ ‘ಬಿಬಿಸಿ’ಯಲ್ಲಿ ಉಲ್ಲೇಖ

- Advertisement -
- Advertisement -

ತನಿಖಾ ವರದಿಗಳ ಮೂಲಕ ಗಮನ ಸೆಳೆದಿರುವ, ಈಗಾಗಲೇ ಎರಡು ವರ್ಷ ಪೂರೈಸಿ ಮೂರನೇ ವರ್ಷಕ್ಕೆ ಕಾಲಿಟ್ಟಿರುವ ಕನ್ನಡದ ‘ದಿ ಫೈಲ್‌’ ಜಾಲತಾಣದ ಕಾರ್ಯವನ್ನು ಅಂತಾರಾಷ್ಟ್ರೀಯ ಸುದ್ದಿ ಜಾಲತಾಣ ‘ಬಿಬಿಸಿ’ (ಇಂಗ್ಲಿಷ್‌) ಉಲ್ಲೇಖಿಸಿದೆ.

ಪತ್ರಕರ್ತ ಜಿ.ಮಹಾಂತೇಶ್ ಅವರು ಮುನ್ನಡೆಸುತ್ತಿರುವ ‘ದಿ ಫೈಲ್‌’ ತನಿಖಾ ವರದಿಗಳಿಗೆ ಹೆಸರಾಗಿದೆ. ಎರಡು ವರ್ಷಗಳಿಂದ ಹಲವಾರು ಹಗರಣಗಳನ್ನು ಜನರ ಮುಂದೆ ತೆರೆದಿಟ್ಟಿದೆ. ಭ್ರಷ್ಟ ಸರ್ಕಾರದ ಹಲವಾರು ಮುಖಗಳು ‘ದಿ ಫೈಲ್‌’ನಲ್ಲಿ ಅನಾವರಣಗೊಂಡಿವೆ.

‘Bangalore: How polarisation is dividing India’s Silicon Valley’ ಎಂಬ ಶೀರ್ಷಿಕೆಯಲ್ಲಿ ಬಿಬಿಸಿಯ ಭಾರತದ ವರದಿಗಾರ ಸೌತಿಕ್ ಬಿಸ್ವಾಸ್ ಬರೆದಿರುವ ವರದಿಯಲ್ಲಿ ‘ದಿ ಫೈಲ್‌’ ಉಲ್ಲೇಖಗೊಂಡಿದೆ. ಸೌತಿಕ್ ಅವರು ಅಫ್ಘಾನಿಸ್ತಾನ ಮತ್ತು ಶ್ರೀಲಂಕಾದಲ್ಲಿನ ಚುನಾವಣೆಗಳು, 2005ರಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ಅಪ್ಪಳಿದ ಸುನಾಮಿ, ಕಾಶ್ಮೀರದಲ್ಲಿನ ಭಯೋತ್ಪಾದನೆ ಸೇರಿದಂತೆ ಹಲವಾರು ವರದಿಗಳನ್ನು ಮಾಡಿ ಗುರುತಿಸಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಬಿಬಿಸಿ’ ವರದಿಯಲ್ಲಿ ಏನಿದೆ?

“ಕರ್ನಾಟಕ ರಾಜ್ಯವು ಯಾವಾಗಲೂ ಎಲ್ಲರನ್ನೂ ಒಳಗೊಳ್ಳುವ ಆರ್ಥಿಕ ಅಭಿವೃದ್ಧಿಯನ್ನು ರೂಪಿಸುತ್ತದೆ. ಕೋಮುವಾದ ಪ್ರೇರಿತ ಹೊರಗಿಡುವಿಕೆಗೆ ಅವಕಾಶ ನೀಡಬಾರದು. ಐಟಿಬಿಟಿ ಕ್ಷೇತ್ರವೇನಾದರೂ ಕೋಮುವಾದೀಕರಣಗೊಂಡರೆ ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಇತ್ತೀಚೆಗೆ ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಮಾಡಿರುವ ಟ್ವೀಟ್ ಉಲ್ಲೇಖಿಸಿ ಆರಂಭವಾಗುವ ಬಿಬಿಸಿ ವರದಿಯು, ಕರ್ನಾಟಕದಲ್ಲಿ ಹಿಂದುತ್ವ ರಾಜಕಾರಣ ಹುಟ್ಟುಹಾಕುತ್ತಿರುವ ಹಲವಾರು ವಿವಾದಗಳನ್ನು ಉಲ್ಲೇಖಿಸಿದೆ.

ಇದನ್ನೂ ಓದಿರಿ: ಚಂದ್ರು ಕೊಲೆ ಪ್ರಕರಣ: ಕೋಮು ದ್ವೇಷದ ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ

ದೇವಾಲಯದ ಬಳಿ ಮುಸ್ಲಿಂ ವ್ಯಾಪಾರಿಗಳಿಗೆ ತಡೆ, ಹಿಂದೂಗಳು ಮುಸ್ಲಿಮರ ಬಳಿ ಮಾಂಸ ಖರೀದಿಸದಂತೆ ಪ್ರಚಾರ, ತರಗತಿಗಳಲ್ಲಿ ಹಿಜಾಬ್ ಧರಿಸದಂತೆ ನಿರ್ಬಂಧ, ಪರೀಕ್ಷೆಯಿಂದ ವಿದ್ಯಾರ್ಥಿನಿಯರು ಹೊರಗುಳಿದಿರುವುದು, ಗೋ ಹತ್ಯೆ ನಿಷೇಧ, ಪಠ್ಯದಲ್ಲಿ ಟಿಪ್ಪು ಇತಿಹಾಸಕ್ಕೆ ಕಡಿವಾಣ, ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವ ಪ್ರಸ್ತಾಪದ ಜೊತೆಗೆ ಆರ್ಥಿಕತೆಯ ದೃಷ್ಟಿಯಿಂದ ಕಿರಣ್ ಮಜುಂದಾರ್‌ ಶಾ ವ್ಯಕ್ತಪಡಿಸಿರುವ ಆತಂಕ ಸೇರಿದಂತೆ ಹಲವಾರು ವಿಷಯಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು, ಅರ್ಥಶಾಸ್ತ್ರ ಪ್ರಾಧ್ಯಾಪಕ ನರೇಂದ್ರ ಪಾಣಿ, ಸಮಾಜಶಾಸ್ತ್ರ ಪ್ರಾಧ್ಯಾಪಕ ಚಂದನ್‌ ಗೌಡ ಅವರ ಅಭಿಪ್ರಾಯಗಳನ್ನು ದಾಖಲಿಸಲಾಗಿದೆ.

ಸರ್ಕಾರದ ಕಳಪೆ ಸಾಧನೆಯ ಬಗ್ಗೆ ಹೇಳುತ್ತಾ, “61 ವರ್ಷದ ರಾಜಕಾರಣಿ ಬೊಮ್ಮಾಯಿ ಅವರು ಯಡಿಯೂರಪ್ಪನವರ ಬಳಿಕ ಅಧಿಕಾರ ಸ್ವೀಕರಿಸಿದರು. ಬೊಮ್ಮಾಯಿ ನೇತೃತ್ವದ ಸರ್ಕಾರದ ಸಾಧನೆ ಕೆಳಮಟ್ಟದ್ದಾಗಿದೆ ಎಂದು ಟೀಕಾಕಾರರು ಹೇಳುತ್ತಾರೆ. ಕೋವಿಡ್ ಬಿಕ್ಕಟ್ಟನ್ನು ಸರಿಯಾಗಿ ನಿರ್ವಹಿಸದ ಆರೋಪಗಳಿವೆ. ಗೌರವಾನ್ವಿತ ಸ್ಥಳೀಯ ಸುದ್ದಿ ಮಾಧ್ಯಮ ಮತ್ತು ತನಿಖಾ ವೆಬ್‌ಸೈಟ್ ‘ದಿ ಫೈಲ್‌’ನಲ್ಲಿನ ವರದಿಯ ಪ್ರಕಾರ, ಸರ್ಕಾರದ ಅರ್ಧದಷ್ಟು ಇಲಾಖೆಗಳು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಆಂತರಿಕ ಪರಿಶೀಲನೆಗಳು ಹೇಳುತ್ತವೆ” ಎಂದು ಬಿಬಿಸಿ ವರದಿ ಮಾಡಿದೆ.

ಜವಾಬ್ದಾರಿ ಹೆಚ್ಚಿದೆ: ಜಿ.ಮಹಾಂತೇಶ್‌

‘ಬಿಬಿಸಿ’ಯಲ್ಲಿ ‘ದಿ ಫೈಲ್‌’ ವರದಿ ಉಲ್ಲೇಖಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಪತ್ರಕರ್ತ ಜಿ.ಮಹಾಂತೇಶ್‌, “ಇದು ನಿಜಕ್ಕೂ ನಮ್ಮೆಲ್ಲರ ಖುಷಿಯನ್ನು ಇಮ್ಮಡಿಗೊಳಿಸಿದೆ ಮತ್ತು ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ” ಎಂದಿದ್ದಾರೆ.

‘ದಿ ಫೈಲ್‌’ ಜಾಲತಾಣದ ಸಂಪಾದಕ ಜಿ.ಮಹಾಂತೇಶ್‌

“ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ನೀತಿ ನಿರೂಪಣೆಯಲ್ಲಿ ಲೋಪದೋಷಗಳು, ಈಗಿನ ಸರ್ಕಾರ ಹೇಗೆ ನಡೆಯುತ್ತಿದೆ, ಎತ್ತ ಸಾಗುತ್ತಿದೆ ಎಂಬುದನ್ನು ಕಳೆದ 2 ವರ್ಷಗಳಿಂದಲೂ ನಿರಂತರವಾಗಿ ದಾಖಲೆ ಸಮೇತ ವಸ್ತುನಿಷ್ಠವಾಗಿ, ಪ್ರಾಮಾಣಿಕವಾಗಿ ದಾಖಲಿಸುತ್ತ ಬರಲಾಗಿದೆ. ಇದೀಗ ಅಂತಾರಾಷ್ಟ್ರೀಯ ಸುದ್ದಿ ಜಾಲತಾಣ ಬಿಬಿಸಿಯಲ್ಲಿಯೂ ‘ದಿ ಫೈಲ್‌’ ವರದಿಗಳು ಉಲ್ಲೇಖಗೊಂಡಿವೆ” ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

“ಈಗಿನ ಸರ್ಕಾರವು ಹಿಜಾಬ್‌, ಹಲಾಲ್‌ ಕಟ್‌, ಜಟ್ಕಾ ಕಟ್‌, ಮಸೀದಿ, ಲೌಡ್‌ ಸ್ಪೀಕರ್‌, ಕೋಮು ಪ್ರಚೋದಕ ವಿಚಾರಗಳಲ್ಲಿಯೇ ಮುಳುಗಿರುವ ಕಾರಣ ಅಭಿವೃದ್ದಿ ವಿಚಾರದಲ್ಲಿ ಕನಿಷ್ಠ ಪ್ರಗತಿ ಸಾಧಿಸಿದೆ ಎಂಬುದನ್ನು ‘ದಿ ಫೈಲ್‌’ ಕಳೆದ 2 ವರ್ಷಗಳಿಂದಲೂ ಕೆಡಿಪಿ ಸಭೆಯ ನಡವಳಿಗಳನ್ನಾಧರಿಸಿ ವರದಿ ಮಾಡಿತ್ತು. ಅದನ್ನೀಗ ಬಿಬಿಸಿ ತನ್ನ ವರದಿಯಲ್ಲಿಯೂ ಪ್ರಸ್ತಾಪಿಸುವ ಮೂಲಕ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ. ಸ್ವತಂತ್ರ ನೋಟ, ಸ್ವತಂತ್ರ ಕರ್ನಾಟಕ, ಸ್ವತಂತ್ರ ಭಾರತಕ್ಕಾಗಿ ಸ್ವತಂತ್ರ ಮಾಧ್ಯಮವನ್ನು ನೀವು ಹೀಗೆಯೇ ಬೆಂಬಲಿಸುತ್ತೀರಿ ಎಂದು ನಂಬಿದ್ದೇವೆ” ಎಂದು ಮಹಾಂತೇಶ್ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...