Homeಕರ್ನಾಟಕಕನ್ನಡದ ತನಿಖಾ ವೆಬ್‌ಸೈಟ್‌ ‘ದಿ ಫೈಲ್‌’ ವರದಿ ‘ಬಿಬಿಸಿ’ಯಲ್ಲಿ ಉಲ್ಲೇಖ

ಕನ್ನಡದ ತನಿಖಾ ವೆಬ್‌ಸೈಟ್‌ ‘ದಿ ಫೈಲ್‌’ ವರದಿ ‘ಬಿಬಿಸಿ’ಯಲ್ಲಿ ಉಲ್ಲೇಖ

- Advertisement -
- Advertisement -

ತನಿಖಾ ವರದಿಗಳ ಮೂಲಕ ಗಮನ ಸೆಳೆದಿರುವ, ಈಗಾಗಲೇ ಎರಡು ವರ್ಷ ಪೂರೈಸಿ ಮೂರನೇ ವರ್ಷಕ್ಕೆ ಕಾಲಿಟ್ಟಿರುವ ಕನ್ನಡದ ‘ದಿ ಫೈಲ್‌’ ಜಾಲತಾಣದ ಕಾರ್ಯವನ್ನು ಅಂತಾರಾಷ್ಟ್ರೀಯ ಸುದ್ದಿ ಜಾಲತಾಣ ‘ಬಿಬಿಸಿ’ (ಇಂಗ್ಲಿಷ್‌) ಉಲ್ಲೇಖಿಸಿದೆ.

ಪತ್ರಕರ್ತ ಜಿ.ಮಹಾಂತೇಶ್ ಅವರು ಮುನ್ನಡೆಸುತ್ತಿರುವ ‘ದಿ ಫೈಲ್‌’ ತನಿಖಾ ವರದಿಗಳಿಗೆ ಹೆಸರಾಗಿದೆ. ಎರಡು ವರ್ಷಗಳಿಂದ ಹಲವಾರು ಹಗರಣಗಳನ್ನು ಜನರ ಮುಂದೆ ತೆರೆದಿಟ್ಟಿದೆ. ಭ್ರಷ್ಟ ಸರ್ಕಾರದ ಹಲವಾರು ಮುಖಗಳು ‘ದಿ ಫೈಲ್‌’ನಲ್ಲಿ ಅನಾವರಣಗೊಂಡಿವೆ.

‘Bangalore: How polarisation is dividing India’s Silicon Valley’ ಎಂಬ ಶೀರ್ಷಿಕೆಯಲ್ಲಿ ಬಿಬಿಸಿಯ ಭಾರತದ ವರದಿಗಾರ ಸೌತಿಕ್ ಬಿಸ್ವಾಸ್ ಬರೆದಿರುವ ವರದಿಯಲ್ಲಿ ‘ದಿ ಫೈಲ್‌’ ಉಲ್ಲೇಖಗೊಂಡಿದೆ. ಸೌತಿಕ್ ಅವರು ಅಫ್ಘಾನಿಸ್ತಾನ ಮತ್ತು ಶ್ರೀಲಂಕಾದಲ್ಲಿನ ಚುನಾವಣೆಗಳು, 2005ರಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ಅಪ್ಪಳಿದ ಸುನಾಮಿ, ಕಾಶ್ಮೀರದಲ್ಲಿನ ಭಯೋತ್ಪಾದನೆ ಸೇರಿದಂತೆ ಹಲವಾರು ವರದಿಗಳನ್ನು ಮಾಡಿ ಗುರುತಿಸಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಬಿಬಿಸಿ’ ವರದಿಯಲ್ಲಿ ಏನಿದೆ?

“ಕರ್ನಾಟಕ ರಾಜ್ಯವು ಯಾವಾಗಲೂ ಎಲ್ಲರನ್ನೂ ಒಳಗೊಳ್ಳುವ ಆರ್ಥಿಕ ಅಭಿವೃದ್ಧಿಯನ್ನು ರೂಪಿಸುತ್ತದೆ. ಕೋಮುವಾದ ಪ್ರೇರಿತ ಹೊರಗಿಡುವಿಕೆಗೆ ಅವಕಾಶ ನೀಡಬಾರದು. ಐಟಿಬಿಟಿ ಕ್ಷೇತ್ರವೇನಾದರೂ ಕೋಮುವಾದೀಕರಣಗೊಂಡರೆ ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಇತ್ತೀಚೆಗೆ ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಮಾಡಿರುವ ಟ್ವೀಟ್ ಉಲ್ಲೇಖಿಸಿ ಆರಂಭವಾಗುವ ಬಿಬಿಸಿ ವರದಿಯು, ಕರ್ನಾಟಕದಲ್ಲಿ ಹಿಂದುತ್ವ ರಾಜಕಾರಣ ಹುಟ್ಟುಹಾಕುತ್ತಿರುವ ಹಲವಾರು ವಿವಾದಗಳನ್ನು ಉಲ್ಲೇಖಿಸಿದೆ.

ಇದನ್ನೂ ಓದಿರಿ: ಚಂದ್ರು ಕೊಲೆ ಪ್ರಕರಣ: ಕೋಮು ದ್ವೇಷದ ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ

ದೇವಾಲಯದ ಬಳಿ ಮುಸ್ಲಿಂ ವ್ಯಾಪಾರಿಗಳಿಗೆ ತಡೆ, ಹಿಂದೂಗಳು ಮುಸ್ಲಿಮರ ಬಳಿ ಮಾಂಸ ಖರೀದಿಸದಂತೆ ಪ್ರಚಾರ, ತರಗತಿಗಳಲ್ಲಿ ಹಿಜಾಬ್ ಧರಿಸದಂತೆ ನಿರ್ಬಂಧ, ಪರೀಕ್ಷೆಯಿಂದ ವಿದ್ಯಾರ್ಥಿನಿಯರು ಹೊರಗುಳಿದಿರುವುದು, ಗೋ ಹತ್ಯೆ ನಿಷೇಧ, ಪಠ್ಯದಲ್ಲಿ ಟಿಪ್ಪು ಇತಿಹಾಸಕ್ಕೆ ಕಡಿವಾಣ, ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವ ಪ್ರಸ್ತಾಪದ ಜೊತೆಗೆ ಆರ್ಥಿಕತೆಯ ದೃಷ್ಟಿಯಿಂದ ಕಿರಣ್ ಮಜುಂದಾರ್‌ ಶಾ ವ್ಯಕ್ತಪಡಿಸಿರುವ ಆತಂಕ ಸೇರಿದಂತೆ ಹಲವಾರು ವಿಷಯಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು, ಅರ್ಥಶಾಸ್ತ್ರ ಪ್ರಾಧ್ಯಾಪಕ ನರೇಂದ್ರ ಪಾಣಿ, ಸಮಾಜಶಾಸ್ತ್ರ ಪ್ರಾಧ್ಯಾಪಕ ಚಂದನ್‌ ಗೌಡ ಅವರ ಅಭಿಪ್ರಾಯಗಳನ್ನು ದಾಖಲಿಸಲಾಗಿದೆ.

ಸರ್ಕಾರದ ಕಳಪೆ ಸಾಧನೆಯ ಬಗ್ಗೆ ಹೇಳುತ್ತಾ, “61 ವರ್ಷದ ರಾಜಕಾರಣಿ ಬೊಮ್ಮಾಯಿ ಅವರು ಯಡಿಯೂರಪ್ಪನವರ ಬಳಿಕ ಅಧಿಕಾರ ಸ್ವೀಕರಿಸಿದರು. ಬೊಮ್ಮಾಯಿ ನೇತೃತ್ವದ ಸರ್ಕಾರದ ಸಾಧನೆ ಕೆಳಮಟ್ಟದ್ದಾಗಿದೆ ಎಂದು ಟೀಕಾಕಾರರು ಹೇಳುತ್ತಾರೆ. ಕೋವಿಡ್ ಬಿಕ್ಕಟ್ಟನ್ನು ಸರಿಯಾಗಿ ನಿರ್ವಹಿಸದ ಆರೋಪಗಳಿವೆ. ಗೌರವಾನ್ವಿತ ಸ್ಥಳೀಯ ಸುದ್ದಿ ಮಾಧ್ಯಮ ಮತ್ತು ತನಿಖಾ ವೆಬ್‌ಸೈಟ್ ‘ದಿ ಫೈಲ್‌’ನಲ್ಲಿನ ವರದಿಯ ಪ್ರಕಾರ, ಸರ್ಕಾರದ ಅರ್ಧದಷ್ಟು ಇಲಾಖೆಗಳು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಆಂತರಿಕ ಪರಿಶೀಲನೆಗಳು ಹೇಳುತ್ತವೆ” ಎಂದು ಬಿಬಿಸಿ ವರದಿ ಮಾಡಿದೆ.

ಜವಾಬ್ದಾರಿ ಹೆಚ್ಚಿದೆ: ಜಿ.ಮಹಾಂತೇಶ್‌

‘ಬಿಬಿಸಿ’ಯಲ್ಲಿ ‘ದಿ ಫೈಲ್‌’ ವರದಿ ಉಲ್ಲೇಖಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಪತ್ರಕರ್ತ ಜಿ.ಮಹಾಂತೇಶ್‌, “ಇದು ನಿಜಕ್ಕೂ ನಮ್ಮೆಲ್ಲರ ಖುಷಿಯನ್ನು ಇಮ್ಮಡಿಗೊಳಿಸಿದೆ ಮತ್ತು ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ” ಎಂದಿದ್ದಾರೆ.

‘ದಿ ಫೈಲ್‌’ ಜಾಲತಾಣದ ಸಂಪಾದಕ ಜಿ.ಮಹಾಂತೇಶ್‌

“ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ನೀತಿ ನಿರೂಪಣೆಯಲ್ಲಿ ಲೋಪದೋಷಗಳು, ಈಗಿನ ಸರ್ಕಾರ ಹೇಗೆ ನಡೆಯುತ್ತಿದೆ, ಎತ್ತ ಸಾಗುತ್ತಿದೆ ಎಂಬುದನ್ನು ಕಳೆದ 2 ವರ್ಷಗಳಿಂದಲೂ ನಿರಂತರವಾಗಿ ದಾಖಲೆ ಸಮೇತ ವಸ್ತುನಿಷ್ಠವಾಗಿ, ಪ್ರಾಮಾಣಿಕವಾಗಿ ದಾಖಲಿಸುತ್ತ ಬರಲಾಗಿದೆ. ಇದೀಗ ಅಂತಾರಾಷ್ಟ್ರೀಯ ಸುದ್ದಿ ಜಾಲತಾಣ ಬಿಬಿಸಿಯಲ್ಲಿಯೂ ‘ದಿ ಫೈಲ್‌’ ವರದಿಗಳು ಉಲ್ಲೇಖಗೊಂಡಿವೆ” ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

“ಈಗಿನ ಸರ್ಕಾರವು ಹಿಜಾಬ್‌, ಹಲಾಲ್‌ ಕಟ್‌, ಜಟ್ಕಾ ಕಟ್‌, ಮಸೀದಿ, ಲೌಡ್‌ ಸ್ಪೀಕರ್‌, ಕೋಮು ಪ್ರಚೋದಕ ವಿಚಾರಗಳಲ್ಲಿಯೇ ಮುಳುಗಿರುವ ಕಾರಣ ಅಭಿವೃದ್ದಿ ವಿಚಾರದಲ್ಲಿ ಕನಿಷ್ಠ ಪ್ರಗತಿ ಸಾಧಿಸಿದೆ ಎಂಬುದನ್ನು ‘ದಿ ಫೈಲ್‌’ ಕಳೆದ 2 ವರ್ಷಗಳಿಂದಲೂ ಕೆಡಿಪಿ ಸಭೆಯ ನಡವಳಿಗಳನ್ನಾಧರಿಸಿ ವರದಿ ಮಾಡಿತ್ತು. ಅದನ್ನೀಗ ಬಿಬಿಸಿ ತನ್ನ ವರದಿಯಲ್ಲಿಯೂ ಪ್ರಸ್ತಾಪಿಸುವ ಮೂಲಕ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ. ಸ್ವತಂತ್ರ ನೋಟ, ಸ್ವತಂತ್ರ ಕರ್ನಾಟಕ, ಸ್ವತಂತ್ರ ಭಾರತಕ್ಕಾಗಿ ಸ್ವತಂತ್ರ ಮಾಧ್ಯಮವನ್ನು ನೀವು ಹೀಗೆಯೇ ಬೆಂಬಲಿಸುತ್ತೀರಿ ಎಂದು ನಂಬಿದ್ದೇವೆ” ಎಂದು ಮಹಾಂತೇಶ್ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...