Homeಕರ್ನಾಟಕಕನ್ನಡದ ತನಿಖಾ ವೆಬ್‌ಸೈಟ್‌ ‘ದಿ ಫೈಲ್‌’ ವರದಿ ‘ಬಿಬಿಸಿ’ಯಲ್ಲಿ ಉಲ್ಲೇಖ

ಕನ್ನಡದ ತನಿಖಾ ವೆಬ್‌ಸೈಟ್‌ ‘ದಿ ಫೈಲ್‌’ ವರದಿ ‘ಬಿಬಿಸಿ’ಯಲ್ಲಿ ಉಲ್ಲೇಖ

- Advertisement -
- Advertisement -

ತನಿಖಾ ವರದಿಗಳ ಮೂಲಕ ಗಮನ ಸೆಳೆದಿರುವ, ಈಗಾಗಲೇ ಎರಡು ವರ್ಷ ಪೂರೈಸಿ ಮೂರನೇ ವರ್ಷಕ್ಕೆ ಕಾಲಿಟ್ಟಿರುವ ಕನ್ನಡದ ‘ದಿ ಫೈಲ್‌’ ಜಾಲತಾಣದ ಕಾರ್ಯವನ್ನು ಅಂತಾರಾಷ್ಟ್ರೀಯ ಸುದ್ದಿ ಜಾಲತಾಣ ‘ಬಿಬಿಸಿ’ (ಇಂಗ್ಲಿಷ್‌) ಉಲ್ಲೇಖಿಸಿದೆ.

ಪತ್ರಕರ್ತ ಜಿ.ಮಹಾಂತೇಶ್ ಅವರು ಮುನ್ನಡೆಸುತ್ತಿರುವ ‘ದಿ ಫೈಲ್‌’ ತನಿಖಾ ವರದಿಗಳಿಗೆ ಹೆಸರಾಗಿದೆ. ಎರಡು ವರ್ಷಗಳಿಂದ ಹಲವಾರು ಹಗರಣಗಳನ್ನು ಜನರ ಮುಂದೆ ತೆರೆದಿಟ್ಟಿದೆ. ಭ್ರಷ್ಟ ಸರ್ಕಾರದ ಹಲವಾರು ಮುಖಗಳು ‘ದಿ ಫೈಲ್‌’ನಲ್ಲಿ ಅನಾವರಣಗೊಂಡಿವೆ.

‘Bangalore: How polarisation is dividing India’s Silicon Valley’ ಎಂಬ ಶೀರ್ಷಿಕೆಯಲ್ಲಿ ಬಿಬಿಸಿಯ ಭಾರತದ ವರದಿಗಾರ ಸೌತಿಕ್ ಬಿಸ್ವಾಸ್ ಬರೆದಿರುವ ವರದಿಯಲ್ಲಿ ‘ದಿ ಫೈಲ್‌’ ಉಲ್ಲೇಖಗೊಂಡಿದೆ. ಸೌತಿಕ್ ಅವರು ಅಫ್ಘಾನಿಸ್ತಾನ ಮತ್ತು ಶ್ರೀಲಂಕಾದಲ್ಲಿನ ಚುನಾವಣೆಗಳು, 2005ರಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ಅಪ್ಪಳಿದ ಸುನಾಮಿ, ಕಾಶ್ಮೀರದಲ್ಲಿನ ಭಯೋತ್ಪಾದನೆ ಸೇರಿದಂತೆ ಹಲವಾರು ವರದಿಗಳನ್ನು ಮಾಡಿ ಗುರುತಿಸಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಬಿಬಿಸಿ’ ವರದಿಯಲ್ಲಿ ಏನಿದೆ?

“ಕರ್ನಾಟಕ ರಾಜ್ಯವು ಯಾವಾಗಲೂ ಎಲ್ಲರನ್ನೂ ಒಳಗೊಳ್ಳುವ ಆರ್ಥಿಕ ಅಭಿವೃದ್ಧಿಯನ್ನು ರೂಪಿಸುತ್ತದೆ. ಕೋಮುವಾದ ಪ್ರೇರಿತ ಹೊರಗಿಡುವಿಕೆಗೆ ಅವಕಾಶ ನೀಡಬಾರದು. ಐಟಿಬಿಟಿ ಕ್ಷೇತ್ರವೇನಾದರೂ ಕೋಮುವಾದೀಕರಣಗೊಂಡರೆ ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಇತ್ತೀಚೆಗೆ ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಮಾಡಿರುವ ಟ್ವೀಟ್ ಉಲ್ಲೇಖಿಸಿ ಆರಂಭವಾಗುವ ಬಿಬಿಸಿ ವರದಿಯು, ಕರ್ನಾಟಕದಲ್ಲಿ ಹಿಂದುತ್ವ ರಾಜಕಾರಣ ಹುಟ್ಟುಹಾಕುತ್ತಿರುವ ಹಲವಾರು ವಿವಾದಗಳನ್ನು ಉಲ್ಲೇಖಿಸಿದೆ.

ಇದನ್ನೂ ಓದಿರಿ: ಚಂದ್ರು ಕೊಲೆ ಪ್ರಕರಣ: ಕೋಮು ದ್ವೇಷದ ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ

ದೇವಾಲಯದ ಬಳಿ ಮುಸ್ಲಿಂ ವ್ಯಾಪಾರಿಗಳಿಗೆ ತಡೆ, ಹಿಂದೂಗಳು ಮುಸ್ಲಿಮರ ಬಳಿ ಮಾಂಸ ಖರೀದಿಸದಂತೆ ಪ್ರಚಾರ, ತರಗತಿಗಳಲ್ಲಿ ಹಿಜಾಬ್ ಧರಿಸದಂತೆ ನಿರ್ಬಂಧ, ಪರೀಕ್ಷೆಯಿಂದ ವಿದ್ಯಾರ್ಥಿನಿಯರು ಹೊರಗುಳಿದಿರುವುದು, ಗೋ ಹತ್ಯೆ ನಿಷೇಧ, ಪಠ್ಯದಲ್ಲಿ ಟಿಪ್ಪು ಇತಿಹಾಸಕ್ಕೆ ಕಡಿವಾಣ, ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವ ಪ್ರಸ್ತಾಪದ ಜೊತೆಗೆ ಆರ್ಥಿಕತೆಯ ದೃಷ್ಟಿಯಿಂದ ಕಿರಣ್ ಮಜುಂದಾರ್‌ ಶಾ ವ್ಯಕ್ತಪಡಿಸಿರುವ ಆತಂಕ ಸೇರಿದಂತೆ ಹಲವಾರು ವಿಷಯಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು, ಅರ್ಥಶಾಸ್ತ್ರ ಪ್ರಾಧ್ಯಾಪಕ ನರೇಂದ್ರ ಪಾಣಿ, ಸಮಾಜಶಾಸ್ತ್ರ ಪ್ರಾಧ್ಯಾಪಕ ಚಂದನ್‌ ಗೌಡ ಅವರ ಅಭಿಪ್ರಾಯಗಳನ್ನು ದಾಖಲಿಸಲಾಗಿದೆ.

ಸರ್ಕಾರದ ಕಳಪೆ ಸಾಧನೆಯ ಬಗ್ಗೆ ಹೇಳುತ್ತಾ, “61 ವರ್ಷದ ರಾಜಕಾರಣಿ ಬೊಮ್ಮಾಯಿ ಅವರು ಯಡಿಯೂರಪ್ಪನವರ ಬಳಿಕ ಅಧಿಕಾರ ಸ್ವೀಕರಿಸಿದರು. ಬೊಮ್ಮಾಯಿ ನೇತೃತ್ವದ ಸರ್ಕಾರದ ಸಾಧನೆ ಕೆಳಮಟ್ಟದ್ದಾಗಿದೆ ಎಂದು ಟೀಕಾಕಾರರು ಹೇಳುತ್ತಾರೆ. ಕೋವಿಡ್ ಬಿಕ್ಕಟ್ಟನ್ನು ಸರಿಯಾಗಿ ನಿರ್ವಹಿಸದ ಆರೋಪಗಳಿವೆ. ಗೌರವಾನ್ವಿತ ಸ್ಥಳೀಯ ಸುದ್ದಿ ಮಾಧ್ಯಮ ಮತ್ತು ತನಿಖಾ ವೆಬ್‌ಸೈಟ್ ‘ದಿ ಫೈಲ್‌’ನಲ್ಲಿನ ವರದಿಯ ಪ್ರಕಾರ, ಸರ್ಕಾರದ ಅರ್ಧದಷ್ಟು ಇಲಾಖೆಗಳು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಆಂತರಿಕ ಪರಿಶೀಲನೆಗಳು ಹೇಳುತ್ತವೆ” ಎಂದು ಬಿಬಿಸಿ ವರದಿ ಮಾಡಿದೆ.

ಜವಾಬ್ದಾರಿ ಹೆಚ್ಚಿದೆ: ಜಿ.ಮಹಾಂತೇಶ್‌

‘ಬಿಬಿಸಿ’ಯಲ್ಲಿ ‘ದಿ ಫೈಲ್‌’ ವರದಿ ಉಲ್ಲೇಖಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಪತ್ರಕರ್ತ ಜಿ.ಮಹಾಂತೇಶ್‌, “ಇದು ನಿಜಕ್ಕೂ ನಮ್ಮೆಲ್ಲರ ಖುಷಿಯನ್ನು ಇಮ್ಮಡಿಗೊಳಿಸಿದೆ ಮತ್ತು ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ” ಎಂದಿದ್ದಾರೆ.

‘ದಿ ಫೈಲ್‌’ ಜಾಲತಾಣದ ಸಂಪಾದಕ ಜಿ.ಮಹಾಂತೇಶ್‌

“ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ನೀತಿ ನಿರೂಪಣೆಯಲ್ಲಿ ಲೋಪದೋಷಗಳು, ಈಗಿನ ಸರ್ಕಾರ ಹೇಗೆ ನಡೆಯುತ್ತಿದೆ, ಎತ್ತ ಸಾಗುತ್ತಿದೆ ಎಂಬುದನ್ನು ಕಳೆದ 2 ವರ್ಷಗಳಿಂದಲೂ ನಿರಂತರವಾಗಿ ದಾಖಲೆ ಸಮೇತ ವಸ್ತುನಿಷ್ಠವಾಗಿ, ಪ್ರಾಮಾಣಿಕವಾಗಿ ದಾಖಲಿಸುತ್ತ ಬರಲಾಗಿದೆ. ಇದೀಗ ಅಂತಾರಾಷ್ಟ್ರೀಯ ಸುದ್ದಿ ಜಾಲತಾಣ ಬಿಬಿಸಿಯಲ್ಲಿಯೂ ‘ದಿ ಫೈಲ್‌’ ವರದಿಗಳು ಉಲ್ಲೇಖಗೊಂಡಿವೆ” ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

“ಈಗಿನ ಸರ್ಕಾರವು ಹಿಜಾಬ್‌, ಹಲಾಲ್‌ ಕಟ್‌, ಜಟ್ಕಾ ಕಟ್‌, ಮಸೀದಿ, ಲೌಡ್‌ ಸ್ಪೀಕರ್‌, ಕೋಮು ಪ್ರಚೋದಕ ವಿಚಾರಗಳಲ್ಲಿಯೇ ಮುಳುಗಿರುವ ಕಾರಣ ಅಭಿವೃದ್ದಿ ವಿಚಾರದಲ್ಲಿ ಕನಿಷ್ಠ ಪ್ರಗತಿ ಸಾಧಿಸಿದೆ ಎಂಬುದನ್ನು ‘ದಿ ಫೈಲ್‌’ ಕಳೆದ 2 ವರ್ಷಗಳಿಂದಲೂ ಕೆಡಿಪಿ ಸಭೆಯ ನಡವಳಿಗಳನ್ನಾಧರಿಸಿ ವರದಿ ಮಾಡಿತ್ತು. ಅದನ್ನೀಗ ಬಿಬಿಸಿ ತನ್ನ ವರದಿಯಲ್ಲಿಯೂ ಪ್ರಸ್ತಾಪಿಸುವ ಮೂಲಕ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ. ಸ್ವತಂತ್ರ ನೋಟ, ಸ್ವತಂತ್ರ ಕರ್ನಾಟಕ, ಸ್ವತಂತ್ರ ಭಾರತಕ್ಕಾಗಿ ಸ್ವತಂತ್ರ ಮಾಧ್ಯಮವನ್ನು ನೀವು ಹೀಗೆಯೇ ಬೆಂಬಲಿಸುತ್ತೀರಿ ಎಂದು ನಂಬಿದ್ದೇವೆ” ಎಂದು ಮಹಾಂತೇಶ್ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...