Homeಕರ್ನಾಟಕಕನ್ನಡದ ತನಿಖಾ ವೆಬ್‌ಸೈಟ್‌ ‘ದಿ ಫೈಲ್‌’ ವರದಿ ‘ಬಿಬಿಸಿ’ಯಲ್ಲಿ ಉಲ್ಲೇಖ

ಕನ್ನಡದ ತನಿಖಾ ವೆಬ್‌ಸೈಟ್‌ ‘ದಿ ಫೈಲ್‌’ ವರದಿ ‘ಬಿಬಿಸಿ’ಯಲ್ಲಿ ಉಲ್ಲೇಖ

- Advertisement -
- Advertisement -

ತನಿಖಾ ವರದಿಗಳ ಮೂಲಕ ಗಮನ ಸೆಳೆದಿರುವ, ಈಗಾಗಲೇ ಎರಡು ವರ್ಷ ಪೂರೈಸಿ ಮೂರನೇ ವರ್ಷಕ್ಕೆ ಕಾಲಿಟ್ಟಿರುವ ಕನ್ನಡದ ‘ದಿ ಫೈಲ್‌’ ಜಾಲತಾಣದ ಕಾರ್ಯವನ್ನು ಅಂತಾರಾಷ್ಟ್ರೀಯ ಸುದ್ದಿ ಜಾಲತಾಣ ‘ಬಿಬಿಸಿ’ (ಇಂಗ್ಲಿಷ್‌) ಉಲ್ಲೇಖಿಸಿದೆ.

ಪತ್ರಕರ್ತ ಜಿ.ಮಹಾಂತೇಶ್ ಅವರು ಮುನ್ನಡೆಸುತ್ತಿರುವ ‘ದಿ ಫೈಲ್‌’ ತನಿಖಾ ವರದಿಗಳಿಗೆ ಹೆಸರಾಗಿದೆ. ಎರಡು ವರ್ಷಗಳಿಂದ ಹಲವಾರು ಹಗರಣಗಳನ್ನು ಜನರ ಮುಂದೆ ತೆರೆದಿಟ್ಟಿದೆ. ಭ್ರಷ್ಟ ಸರ್ಕಾರದ ಹಲವಾರು ಮುಖಗಳು ‘ದಿ ಫೈಲ್‌’ನಲ್ಲಿ ಅನಾವರಣಗೊಂಡಿವೆ.

‘Bangalore: How polarisation is dividing India’s Silicon Valley’ ಎಂಬ ಶೀರ್ಷಿಕೆಯಲ್ಲಿ ಬಿಬಿಸಿಯ ಭಾರತದ ವರದಿಗಾರ ಸೌತಿಕ್ ಬಿಸ್ವಾಸ್ ಬರೆದಿರುವ ವರದಿಯಲ್ಲಿ ‘ದಿ ಫೈಲ್‌’ ಉಲ್ಲೇಖಗೊಂಡಿದೆ. ಸೌತಿಕ್ ಅವರು ಅಫ್ಘಾನಿಸ್ತಾನ ಮತ್ತು ಶ್ರೀಲಂಕಾದಲ್ಲಿನ ಚುನಾವಣೆಗಳು, 2005ರಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ಅಪ್ಪಳಿದ ಸುನಾಮಿ, ಕಾಶ್ಮೀರದಲ್ಲಿನ ಭಯೋತ್ಪಾದನೆ ಸೇರಿದಂತೆ ಹಲವಾರು ವರದಿಗಳನ್ನು ಮಾಡಿ ಗುರುತಿಸಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಬಿಬಿಸಿ’ ವರದಿಯಲ್ಲಿ ಏನಿದೆ?

“ಕರ್ನಾಟಕ ರಾಜ್ಯವು ಯಾವಾಗಲೂ ಎಲ್ಲರನ್ನೂ ಒಳಗೊಳ್ಳುವ ಆರ್ಥಿಕ ಅಭಿವೃದ್ಧಿಯನ್ನು ರೂಪಿಸುತ್ತದೆ. ಕೋಮುವಾದ ಪ್ರೇರಿತ ಹೊರಗಿಡುವಿಕೆಗೆ ಅವಕಾಶ ನೀಡಬಾರದು. ಐಟಿಬಿಟಿ ಕ್ಷೇತ್ರವೇನಾದರೂ ಕೋಮುವಾದೀಕರಣಗೊಂಡರೆ ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಇತ್ತೀಚೆಗೆ ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಮಾಡಿರುವ ಟ್ವೀಟ್ ಉಲ್ಲೇಖಿಸಿ ಆರಂಭವಾಗುವ ಬಿಬಿಸಿ ವರದಿಯು, ಕರ್ನಾಟಕದಲ್ಲಿ ಹಿಂದುತ್ವ ರಾಜಕಾರಣ ಹುಟ್ಟುಹಾಕುತ್ತಿರುವ ಹಲವಾರು ವಿವಾದಗಳನ್ನು ಉಲ್ಲೇಖಿಸಿದೆ.

ಇದನ್ನೂ ಓದಿರಿ: ಚಂದ್ರು ಕೊಲೆ ಪ್ರಕರಣ: ಕೋಮು ದ್ವೇಷದ ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ

ದೇವಾಲಯದ ಬಳಿ ಮುಸ್ಲಿಂ ವ್ಯಾಪಾರಿಗಳಿಗೆ ತಡೆ, ಹಿಂದೂಗಳು ಮುಸ್ಲಿಮರ ಬಳಿ ಮಾಂಸ ಖರೀದಿಸದಂತೆ ಪ್ರಚಾರ, ತರಗತಿಗಳಲ್ಲಿ ಹಿಜಾಬ್ ಧರಿಸದಂತೆ ನಿರ್ಬಂಧ, ಪರೀಕ್ಷೆಯಿಂದ ವಿದ್ಯಾರ್ಥಿನಿಯರು ಹೊರಗುಳಿದಿರುವುದು, ಗೋ ಹತ್ಯೆ ನಿಷೇಧ, ಪಠ್ಯದಲ್ಲಿ ಟಿಪ್ಪು ಇತಿಹಾಸಕ್ಕೆ ಕಡಿವಾಣ, ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವ ಪ್ರಸ್ತಾಪದ ಜೊತೆಗೆ ಆರ್ಥಿಕತೆಯ ದೃಷ್ಟಿಯಿಂದ ಕಿರಣ್ ಮಜುಂದಾರ್‌ ಶಾ ವ್ಯಕ್ತಪಡಿಸಿರುವ ಆತಂಕ ಸೇರಿದಂತೆ ಹಲವಾರು ವಿಷಯಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು, ಅರ್ಥಶಾಸ್ತ್ರ ಪ್ರಾಧ್ಯಾಪಕ ನರೇಂದ್ರ ಪಾಣಿ, ಸಮಾಜಶಾಸ್ತ್ರ ಪ್ರಾಧ್ಯಾಪಕ ಚಂದನ್‌ ಗೌಡ ಅವರ ಅಭಿಪ್ರಾಯಗಳನ್ನು ದಾಖಲಿಸಲಾಗಿದೆ.

ಸರ್ಕಾರದ ಕಳಪೆ ಸಾಧನೆಯ ಬಗ್ಗೆ ಹೇಳುತ್ತಾ, “61 ವರ್ಷದ ರಾಜಕಾರಣಿ ಬೊಮ್ಮಾಯಿ ಅವರು ಯಡಿಯೂರಪ್ಪನವರ ಬಳಿಕ ಅಧಿಕಾರ ಸ್ವೀಕರಿಸಿದರು. ಬೊಮ್ಮಾಯಿ ನೇತೃತ್ವದ ಸರ್ಕಾರದ ಸಾಧನೆ ಕೆಳಮಟ್ಟದ್ದಾಗಿದೆ ಎಂದು ಟೀಕಾಕಾರರು ಹೇಳುತ್ತಾರೆ. ಕೋವಿಡ್ ಬಿಕ್ಕಟ್ಟನ್ನು ಸರಿಯಾಗಿ ನಿರ್ವಹಿಸದ ಆರೋಪಗಳಿವೆ. ಗೌರವಾನ್ವಿತ ಸ್ಥಳೀಯ ಸುದ್ದಿ ಮಾಧ್ಯಮ ಮತ್ತು ತನಿಖಾ ವೆಬ್‌ಸೈಟ್ ‘ದಿ ಫೈಲ್‌’ನಲ್ಲಿನ ವರದಿಯ ಪ್ರಕಾರ, ಸರ್ಕಾರದ ಅರ್ಧದಷ್ಟು ಇಲಾಖೆಗಳು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಆಂತರಿಕ ಪರಿಶೀಲನೆಗಳು ಹೇಳುತ್ತವೆ” ಎಂದು ಬಿಬಿಸಿ ವರದಿ ಮಾಡಿದೆ.

ಜವಾಬ್ದಾರಿ ಹೆಚ್ಚಿದೆ: ಜಿ.ಮಹಾಂತೇಶ್‌

‘ಬಿಬಿಸಿ’ಯಲ್ಲಿ ‘ದಿ ಫೈಲ್‌’ ವರದಿ ಉಲ್ಲೇಖಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಪತ್ರಕರ್ತ ಜಿ.ಮಹಾಂತೇಶ್‌, “ಇದು ನಿಜಕ್ಕೂ ನಮ್ಮೆಲ್ಲರ ಖುಷಿಯನ್ನು ಇಮ್ಮಡಿಗೊಳಿಸಿದೆ ಮತ್ತು ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ” ಎಂದಿದ್ದಾರೆ.

‘ದಿ ಫೈಲ್‌’ ಜಾಲತಾಣದ ಸಂಪಾದಕ ಜಿ.ಮಹಾಂತೇಶ್‌

“ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ನೀತಿ ನಿರೂಪಣೆಯಲ್ಲಿ ಲೋಪದೋಷಗಳು, ಈಗಿನ ಸರ್ಕಾರ ಹೇಗೆ ನಡೆಯುತ್ತಿದೆ, ಎತ್ತ ಸಾಗುತ್ತಿದೆ ಎಂಬುದನ್ನು ಕಳೆದ 2 ವರ್ಷಗಳಿಂದಲೂ ನಿರಂತರವಾಗಿ ದಾಖಲೆ ಸಮೇತ ವಸ್ತುನಿಷ್ಠವಾಗಿ, ಪ್ರಾಮಾಣಿಕವಾಗಿ ದಾಖಲಿಸುತ್ತ ಬರಲಾಗಿದೆ. ಇದೀಗ ಅಂತಾರಾಷ್ಟ್ರೀಯ ಸುದ್ದಿ ಜಾಲತಾಣ ಬಿಬಿಸಿಯಲ್ಲಿಯೂ ‘ದಿ ಫೈಲ್‌’ ವರದಿಗಳು ಉಲ್ಲೇಖಗೊಂಡಿವೆ” ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

“ಈಗಿನ ಸರ್ಕಾರವು ಹಿಜಾಬ್‌, ಹಲಾಲ್‌ ಕಟ್‌, ಜಟ್ಕಾ ಕಟ್‌, ಮಸೀದಿ, ಲೌಡ್‌ ಸ್ಪೀಕರ್‌, ಕೋಮು ಪ್ರಚೋದಕ ವಿಚಾರಗಳಲ್ಲಿಯೇ ಮುಳುಗಿರುವ ಕಾರಣ ಅಭಿವೃದ್ದಿ ವಿಚಾರದಲ್ಲಿ ಕನಿಷ್ಠ ಪ್ರಗತಿ ಸಾಧಿಸಿದೆ ಎಂಬುದನ್ನು ‘ದಿ ಫೈಲ್‌’ ಕಳೆದ 2 ವರ್ಷಗಳಿಂದಲೂ ಕೆಡಿಪಿ ಸಭೆಯ ನಡವಳಿಗಳನ್ನಾಧರಿಸಿ ವರದಿ ಮಾಡಿತ್ತು. ಅದನ್ನೀಗ ಬಿಬಿಸಿ ತನ್ನ ವರದಿಯಲ್ಲಿಯೂ ಪ್ರಸ್ತಾಪಿಸುವ ಮೂಲಕ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ. ಸ್ವತಂತ್ರ ನೋಟ, ಸ್ವತಂತ್ರ ಕರ್ನಾಟಕ, ಸ್ವತಂತ್ರ ಭಾರತಕ್ಕಾಗಿ ಸ್ವತಂತ್ರ ಮಾಧ್ಯಮವನ್ನು ನೀವು ಹೀಗೆಯೇ ಬೆಂಬಲಿಸುತ್ತೀರಿ ಎಂದು ನಂಬಿದ್ದೇವೆ” ಎಂದು ಮಹಾಂತೇಶ್ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....