Homeಕರ್ನಾಟಕಕನ್ನಡದ ತನಿಖಾ ವೆಬ್‌ಸೈಟ್‌ ‘ದಿ ಫೈಲ್‌’ ವರದಿ ‘ಬಿಬಿಸಿ’ಯಲ್ಲಿ ಉಲ್ಲೇಖ

ಕನ್ನಡದ ತನಿಖಾ ವೆಬ್‌ಸೈಟ್‌ ‘ದಿ ಫೈಲ್‌’ ವರದಿ ‘ಬಿಬಿಸಿ’ಯಲ್ಲಿ ಉಲ್ಲೇಖ

- Advertisement -
- Advertisement -

ತನಿಖಾ ವರದಿಗಳ ಮೂಲಕ ಗಮನ ಸೆಳೆದಿರುವ, ಈಗಾಗಲೇ ಎರಡು ವರ್ಷ ಪೂರೈಸಿ ಮೂರನೇ ವರ್ಷಕ್ಕೆ ಕಾಲಿಟ್ಟಿರುವ ಕನ್ನಡದ ‘ದಿ ಫೈಲ್‌’ ಜಾಲತಾಣದ ಕಾರ್ಯವನ್ನು ಅಂತಾರಾಷ್ಟ್ರೀಯ ಸುದ್ದಿ ಜಾಲತಾಣ ‘ಬಿಬಿಸಿ’ (ಇಂಗ್ಲಿಷ್‌) ಉಲ್ಲೇಖಿಸಿದೆ.

ಪತ್ರಕರ್ತ ಜಿ.ಮಹಾಂತೇಶ್ ಅವರು ಮುನ್ನಡೆಸುತ್ತಿರುವ ‘ದಿ ಫೈಲ್‌’ ತನಿಖಾ ವರದಿಗಳಿಗೆ ಹೆಸರಾಗಿದೆ. ಎರಡು ವರ್ಷಗಳಿಂದ ಹಲವಾರು ಹಗರಣಗಳನ್ನು ಜನರ ಮುಂದೆ ತೆರೆದಿಟ್ಟಿದೆ. ಭ್ರಷ್ಟ ಸರ್ಕಾರದ ಹಲವಾರು ಮುಖಗಳು ‘ದಿ ಫೈಲ್‌’ನಲ್ಲಿ ಅನಾವರಣಗೊಂಡಿವೆ.

‘Bangalore: How polarisation is dividing India’s Silicon Valley’ ಎಂಬ ಶೀರ್ಷಿಕೆಯಲ್ಲಿ ಬಿಬಿಸಿಯ ಭಾರತದ ವರದಿಗಾರ ಸೌತಿಕ್ ಬಿಸ್ವಾಸ್ ಬರೆದಿರುವ ವರದಿಯಲ್ಲಿ ‘ದಿ ಫೈಲ್‌’ ಉಲ್ಲೇಖಗೊಂಡಿದೆ. ಸೌತಿಕ್ ಅವರು ಅಫ್ಘಾನಿಸ್ತಾನ ಮತ್ತು ಶ್ರೀಲಂಕಾದಲ್ಲಿನ ಚುನಾವಣೆಗಳು, 2005ರಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ಅಪ್ಪಳಿದ ಸುನಾಮಿ, ಕಾಶ್ಮೀರದಲ್ಲಿನ ಭಯೋತ್ಪಾದನೆ ಸೇರಿದಂತೆ ಹಲವಾರು ವರದಿಗಳನ್ನು ಮಾಡಿ ಗುರುತಿಸಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಬಿಬಿಸಿ’ ವರದಿಯಲ್ಲಿ ಏನಿದೆ?

“ಕರ್ನಾಟಕ ರಾಜ್ಯವು ಯಾವಾಗಲೂ ಎಲ್ಲರನ್ನೂ ಒಳಗೊಳ್ಳುವ ಆರ್ಥಿಕ ಅಭಿವೃದ್ಧಿಯನ್ನು ರೂಪಿಸುತ್ತದೆ. ಕೋಮುವಾದ ಪ್ರೇರಿತ ಹೊರಗಿಡುವಿಕೆಗೆ ಅವಕಾಶ ನೀಡಬಾರದು. ಐಟಿಬಿಟಿ ಕ್ಷೇತ್ರವೇನಾದರೂ ಕೋಮುವಾದೀಕರಣಗೊಂಡರೆ ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಇತ್ತೀಚೆಗೆ ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಮಾಡಿರುವ ಟ್ವೀಟ್ ಉಲ್ಲೇಖಿಸಿ ಆರಂಭವಾಗುವ ಬಿಬಿಸಿ ವರದಿಯು, ಕರ್ನಾಟಕದಲ್ಲಿ ಹಿಂದುತ್ವ ರಾಜಕಾರಣ ಹುಟ್ಟುಹಾಕುತ್ತಿರುವ ಹಲವಾರು ವಿವಾದಗಳನ್ನು ಉಲ್ಲೇಖಿಸಿದೆ.

ಇದನ್ನೂ ಓದಿರಿ: ಚಂದ್ರು ಕೊಲೆ ಪ್ರಕರಣ: ಕೋಮು ದ್ವೇಷದ ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ

ದೇವಾಲಯದ ಬಳಿ ಮುಸ್ಲಿಂ ವ್ಯಾಪಾರಿಗಳಿಗೆ ತಡೆ, ಹಿಂದೂಗಳು ಮುಸ್ಲಿಮರ ಬಳಿ ಮಾಂಸ ಖರೀದಿಸದಂತೆ ಪ್ರಚಾರ, ತರಗತಿಗಳಲ್ಲಿ ಹಿಜಾಬ್ ಧರಿಸದಂತೆ ನಿರ್ಬಂಧ, ಪರೀಕ್ಷೆಯಿಂದ ವಿದ್ಯಾರ್ಥಿನಿಯರು ಹೊರಗುಳಿದಿರುವುದು, ಗೋ ಹತ್ಯೆ ನಿಷೇಧ, ಪಠ್ಯದಲ್ಲಿ ಟಿಪ್ಪು ಇತಿಹಾಸಕ್ಕೆ ಕಡಿವಾಣ, ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವ ಪ್ರಸ್ತಾಪದ ಜೊತೆಗೆ ಆರ್ಥಿಕತೆಯ ದೃಷ್ಟಿಯಿಂದ ಕಿರಣ್ ಮಜುಂದಾರ್‌ ಶಾ ವ್ಯಕ್ತಪಡಿಸಿರುವ ಆತಂಕ ಸೇರಿದಂತೆ ಹಲವಾರು ವಿಷಯಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು, ಅರ್ಥಶಾಸ್ತ್ರ ಪ್ರಾಧ್ಯಾಪಕ ನರೇಂದ್ರ ಪಾಣಿ, ಸಮಾಜಶಾಸ್ತ್ರ ಪ್ರಾಧ್ಯಾಪಕ ಚಂದನ್‌ ಗೌಡ ಅವರ ಅಭಿಪ್ರಾಯಗಳನ್ನು ದಾಖಲಿಸಲಾಗಿದೆ.

ಸರ್ಕಾರದ ಕಳಪೆ ಸಾಧನೆಯ ಬಗ್ಗೆ ಹೇಳುತ್ತಾ, “61 ವರ್ಷದ ರಾಜಕಾರಣಿ ಬೊಮ್ಮಾಯಿ ಅವರು ಯಡಿಯೂರಪ್ಪನವರ ಬಳಿಕ ಅಧಿಕಾರ ಸ್ವೀಕರಿಸಿದರು. ಬೊಮ್ಮಾಯಿ ನೇತೃತ್ವದ ಸರ್ಕಾರದ ಸಾಧನೆ ಕೆಳಮಟ್ಟದ್ದಾಗಿದೆ ಎಂದು ಟೀಕಾಕಾರರು ಹೇಳುತ್ತಾರೆ. ಕೋವಿಡ್ ಬಿಕ್ಕಟ್ಟನ್ನು ಸರಿಯಾಗಿ ನಿರ್ವಹಿಸದ ಆರೋಪಗಳಿವೆ. ಗೌರವಾನ್ವಿತ ಸ್ಥಳೀಯ ಸುದ್ದಿ ಮಾಧ್ಯಮ ಮತ್ತು ತನಿಖಾ ವೆಬ್‌ಸೈಟ್ ‘ದಿ ಫೈಲ್‌’ನಲ್ಲಿನ ವರದಿಯ ಪ್ರಕಾರ, ಸರ್ಕಾರದ ಅರ್ಧದಷ್ಟು ಇಲಾಖೆಗಳು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಆಂತರಿಕ ಪರಿಶೀಲನೆಗಳು ಹೇಳುತ್ತವೆ” ಎಂದು ಬಿಬಿಸಿ ವರದಿ ಮಾಡಿದೆ.

ಜವಾಬ್ದಾರಿ ಹೆಚ್ಚಿದೆ: ಜಿ.ಮಹಾಂತೇಶ್‌

‘ಬಿಬಿಸಿ’ಯಲ್ಲಿ ‘ದಿ ಫೈಲ್‌’ ವರದಿ ಉಲ್ಲೇಖಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಪತ್ರಕರ್ತ ಜಿ.ಮಹಾಂತೇಶ್‌, “ಇದು ನಿಜಕ್ಕೂ ನಮ್ಮೆಲ್ಲರ ಖುಷಿಯನ್ನು ಇಮ್ಮಡಿಗೊಳಿಸಿದೆ ಮತ್ತು ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ” ಎಂದಿದ್ದಾರೆ.

‘ದಿ ಫೈಲ್‌’ ಜಾಲತಾಣದ ಸಂಪಾದಕ ಜಿ.ಮಹಾಂತೇಶ್‌

“ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ನೀತಿ ನಿರೂಪಣೆಯಲ್ಲಿ ಲೋಪದೋಷಗಳು, ಈಗಿನ ಸರ್ಕಾರ ಹೇಗೆ ನಡೆಯುತ್ತಿದೆ, ಎತ್ತ ಸಾಗುತ್ತಿದೆ ಎಂಬುದನ್ನು ಕಳೆದ 2 ವರ್ಷಗಳಿಂದಲೂ ನಿರಂತರವಾಗಿ ದಾಖಲೆ ಸಮೇತ ವಸ್ತುನಿಷ್ಠವಾಗಿ, ಪ್ರಾಮಾಣಿಕವಾಗಿ ದಾಖಲಿಸುತ್ತ ಬರಲಾಗಿದೆ. ಇದೀಗ ಅಂತಾರಾಷ್ಟ್ರೀಯ ಸುದ್ದಿ ಜಾಲತಾಣ ಬಿಬಿಸಿಯಲ್ಲಿಯೂ ‘ದಿ ಫೈಲ್‌’ ವರದಿಗಳು ಉಲ್ಲೇಖಗೊಂಡಿವೆ” ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

“ಈಗಿನ ಸರ್ಕಾರವು ಹಿಜಾಬ್‌, ಹಲಾಲ್‌ ಕಟ್‌, ಜಟ್ಕಾ ಕಟ್‌, ಮಸೀದಿ, ಲೌಡ್‌ ಸ್ಪೀಕರ್‌, ಕೋಮು ಪ್ರಚೋದಕ ವಿಚಾರಗಳಲ್ಲಿಯೇ ಮುಳುಗಿರುವ ಕಾರಣ ಅಭಿವೃದ್ದಿ ವಿಚಾರದಲ್ಲಿ ಕನಿಷ್ಠ ಪ್ರಗತಿ ಸಾಧಿಸಿದೆ ಎಂಬುದನ್ನು ‘ದಿ ಫೈಲ್‌’ ಕಳೆದ 2 ವರ್ಷಗಳಿಂದಲೂ ಕೆಡಿಪಿ ಸಭೆಯ ನಡವಳಿಗಳನ್ನಾಧರಿಸಿ ವರದಿ ಮಾಡಿತ್ತು. ಅದನ್ನೀಗ ಬಿಬಿಸಿ ತನ್ನ ವರದಿಯಲ್ಲಿಯೂ ಪ್ರಸ್ತಾಪಿಸುವ ಮೂಲಕ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ. ಸ್ವತಂತ್ರ ನೋಟ, ಸ್ವತಂತ್ರ ಕರ್ನಾಟಕ, ಸ್ವತಂತ್ರ ಭಾರತಕ್ಕಾಗಿ ಸ್ವತಂತ್ರ ಮಾಧ್ಯಮವನ್ನು ನೀವು ಹೀಗೆಯೇ ಬೆಂಬಲಿಸುತ್ತೀರಿ ಎಂದು ನಂಬಿದ್ದೇವೆ” ಎಂದು ಮಹಾಂತೇಶ್ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...