Homeಮುಖಪುಟಬಿಬಿಸಿ 2024ರ ಸ್ಪೂರ್ತಿದಾಯಕ ಮಹಿಳೆ ಪಟ್ಟಿ | ಭಾರತದ ವಿನೇಶ್ ಫೋಗಟ್ ಸೇರಿ ಮೂವರಿಗೆ ಸ್ಥಾನ

ಬಿಬಿಸಿ 2024ರ ಸ್ಪೂರ್ತಿದಾಯಕ ಮಹಿಳೆ ಪಟ್ಟಿ | ಭಾರತದ ವಿನೇಶ್ ಫೋಗಟ್ ಸೇರಿ ಮೂವರಿಗೆ ಸ್ಥಾನ

- Advertisement -
- Advertisement -

ಬಿಬಿಸಿ 2024ರ ಅತ್ಯಂತ ಪ್ರಭಾವಶಾಲಿ ಮತ್ತು ಸ್ಪೂರ್ತಿದಾಯಕ 100 ಮಹಿಳೆಯರ ಪಟ್ಟಿಯಲ್ಲಿ ಭಾರತದ ಮೂವರು ಸ್ಥಾನ ಪಡೆದಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಕೊಡುಗೆ ನೀಡಿರುವ 100 ಪ್ರಮುಖ ಮಹಿಳೆಯರ ಈ ಪಟ್ಟಿಯಲ್ಲಿ ಭಾರತದ ಸಾಮಾಜಿಕ ಹೋರಾಟಗಾರ್ತಿ ಅರುಣಾ ರಾಯ್, ಕುಸ್ತಿಪಟು-ರಾಜಕಾರಣಿ ವಿನೇಶ್ ಫೋಗಟ್ ಮತ್ತು ಅಂತ್ಯಕ್ರಿಯೆಯ ಪ್ರವರ್ತಕಿ ಪೂಜಾ ಶರ್ಮಾ ಕಾಣಿಸಿಕೊಂಡಿದ್ದಾರೆ

ಅರುಣಾ ರಾಯ್ ಅವರು ಸರ್ಕಾರಿ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವಕ್ಕಾಗಿ ಹೋರಾಟ ಮಾಡುತ್ತಿದ್ದು, ಜೊತೆಗೆ ಸಾಮಾಜಿಕ ನ್ಯಾಯ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ಕೂಡಾ ಕೆಲಸ ಮಾಡುತ್ತಿದ್ದಾರೆ. ಇತ್ತಿಚೆಗಷ್ಟೆ ಶಾಸಕಿಯಾಗಿ ಆಯ್ಕೆಯಾದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಮಹಿಳಾ ಹಕ್ಕುಗಳಿಗಾಗಿ ಮತ್ತು ಮಹಿಳಾ ಕುಸ್ತಿಪಟುಗಳ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಅಂತ್ಯಕ್ರಿಯೆಯ ವಿಧಿಗಳಿಗೆ ಹೊಸ ವಿಧಾನವನ್ನು ಪ್ರವರ್ತಿಸಿದ ಪೂಜಾ ಶರ್ಮಾ, ಸಾವು ಮತ್ತು ಶೋಕವನ್ನು ಸುತ್ತುವರೆದಿರುವ ಸಾಮಾಜಿಕ ನಿಯಮಗಳು ಮತ್ತು ಆಚರಣೆಗಳನ್ನು ಮರುವ್ಯಾಖ್ಯಾನಿಸುವ ಕೆಲಸವನ್ನು ಮಾಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಬಿಸಿ 2024ರ 100 ಮಹಿಳೆಯರ ಪಟ್ಟಿಯಲ್ಲಿ ಗಗನಯಾತ್ರಿ ಸುನೀತಾ ವಿಲಿಯಮ್ಸ್, ಹಾಲಿವುಡ್ ತಾರೆ ಶರೋನ್ ಸ್ಟೋನ್, ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ನಾಡಿಯಾ ಮುರಾದ್ ಮತ್ತು ಹವಾಮಾನ ಹೋರಾಟಗಾರ್ತಿ ಅಡೆನಿಕೆ ಒಲಾಡೋಸು ಅವರಂತಹ ಅಂತರರಾಷ್ಟ್ರೀಯ ವ್ಯಕ್ತಿಗಳು ಕೂಡಾ ಇದ್ದಾರೆ.

ಅರುಣಾ ರಾಯ್

ಅರುಣಾ ರಾಯ್ ಭಾರತದ ಅತ್ಯಂತ ಪ್ರಭಾವಿ ಸಾಮಾಜಿಕ ಹೋರಾಟಗಾರರಾಗಿದ್ದು ಮತ್ತು ಮಾಹಿತಿ ಹಕ್ಕು (ಆರ್‌ಟಿಐ) ಆಂದೋಲನದ ಪ್ರಮುಖ ವ್ಯಕ್ತಿಯಾಗಿದ್ದಾರೆ. 2005 ರಲ್ಲಿ ಜಾರಿಗೆ ಬಂದ ಮಾಹಿತಿ ಹಕ್ಕು ಕಾಯಿದೆಯ ರಚನೆಯಲ್ಲಿ ಅವರ ಪ್ರಯತ್ನಗಳು ಪ್ರಮುಖ ಪಾತ್ರವನ್ನು ವಹಿಸಿದ್ದವು. ಅರುಣಾ ಅವರು ಮಾಜಿ ಐಎಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಪೂರ್ಣ ಕಾಲಿಕ ಸಾಮಾಜಿಕ ಹೋರಾಟಗಾರ್ತಿಯಾಗಿದ್ದಾರೆ. ತನ್ನ ಪ್ರತಿಷ್ಠಿತ ಸರ್ಕಾರಿ ಕೆಲಸವನ್ನು ತೊರೆದ ನಂತರ, ಅವರು ಸುಮಾರು ನಾಲ್ಕು ದಶಕಗಳ ಕಾಲ ಭಾರತದಾದ್ಯಂತ ಗ್ರಾಮೀಣ ಸಮುದಾಯಗಳೊಂದಿಗೆ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಕೆಲಸಗಳಲ್ಲಿ ಪಾರದರ್ಶಕತೆ ಮತ್ತು ತಳಮಟ್ಟದಲ್ಲಿ ಇರುವವರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದಾರೆ.

ವಿನೇಶ್ ಫೋಗಟ್

ಮೂರು ಬಾರಿ ಒಲಿಂಪಿಯನ್ ಆಗಿರುವ ಮತ್ತು ಭಾರತದ ಅತ್ಯಂತ ಖ್ಯಾತ ಕುಸ್ತಿಪಟುಗಳಲ್ಲಿ ಒಬ್ಬರಾದ ವಿನೇಶ್ ಫೋಗಟ್ ಅವರು, ತಮ್ಮ ಕ್ರೀಡಾ ಸಾಧನೆಗಳಿಗೆ ಮಾತ್ರವಲ್ಲದೆ ಕ್ರೀಡೆಯಲ್ಲಿನ ಲಿಂಗ ಪಕ್ಷಪಾತದ ವಿರುದ್ಧದ ಹೋರಾಟಗಳಿಗೂ ಹೆಸರುವಾಸಿಯಾಗಿದ್ದಾರೆ. ಅವರು ವಿಶ್ವ ಚಾಂಪಿಯನ್‌ಶಿಪ್, ಕಾಮನ್‌ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್‌ಗಳಲ್ಲಿ ಪದಕಗಳನ್ನು ಗೆದ್ದಿದ್ದಾರೆ. 2024 ಒಲಿಂಪಿಕ್ಸ್‌ನಲ್ಲಿ ಫೈನಲ್ ತಲುಪಿದ್ದ ಅವರು, ಕುಸ್ತಿಯಲ್ಲಿ ಫೈನಲ್ ತಲುಪಿದ ಭಾರತದ ಮೊದಲ ಮಹಿಳಾ ಕುಸ್ತಿಪಟು ಎಂಬ ಇತಿಹಾಸವನ್ನು ನಿರ್ಮಿಸಿದ್ದರು.

ಮಹಿಳಾ ಹಕ್ಕುಗಳ ಪ್ರಮುಖ ಹೋರಾಟಗಾರ್ತಿಯಾದ ಅವರ ಭಾರತೀಯ ಕುಸ್ತಿ ಫಡರೇಷನ್‌ನಲ್ಲಿ, ಅದರ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕ್ರೀಡಾಪಟುಗಳಿಗೆ ನೀಡುತ್ತಿದ್ದ ಲೈಂಗಿಕ ಕಿರುಕುಳವನ್ನು ವಿರೋಧಿಸಿ ನಡೆಸಲಾಗಿದ್ದ ಭಾರಿ ಪ್ರತಿಭಟನೆಯ ನೇತೃತ್ವ ವಹಿಸಿದ್ದವರಲ್ಲಿ ಒಬ್ಬರಾಗಿದ್ದರು. ಈ ಪ್ರತಿಭಟನೆಯು ವಿಶ್ವ ಗಮನ ಸೆಳೆಯಿತು.

ಪೂಜಾ ಶರ್ಮಾ

ಪೂಜಾ ಶರ್ಮಾ ಅವರು ಕಳೆದ ಮೂರು ವರ್ಷಗಳಿಂದ ದೆಹಲಿಯಲ್ಲಿ ಯಾವುದೆ ವಾರಿಸುದಾರರು ಇಲ್ಲದ ಮೃತದೇಹಗಳಿಗೆ ಅಂತಿಮ ವಿಧಿಗಳನ್ನು ಮಾಡುವ ಮೂಲಕ ಸಮಾಜ ಸೇವೆ ಮಾಡುವವರಾಗಿದ್ದಾರೆ. ಅವರ ಈ ಪ್ರಯಾಣವು 2022 ರಲ್ಲಿ ತನ್ನ ಮುಂದೆಯೆ ಬರ್ಬರವಾಗಿ ಹತ್ಯೆಗೀಡಾದ ತನ್ನ ಸಹೋದರ ದುರಂತದೊಂದಿಗೆ ಪ್ರಾರಂಭವಾಯಿತು. ಈ ವೇಳೆ ಅವರ ಸಹೋದರನ ಅಂತ್ಯಕ್ರಿಯೆಗೆ ಸಹಾಯ ಮಾಡಲು ಯಾರೂ ಮುಂದೆ ಬರಲಿಲ್ಲ. ಅವರ ಈ ಅನುಭವವು ಏಕಾಂಗಿಯಾಗಿ ಸಾಯುವವರಿಗೆ ಸಹಾಯ ಮಾಡುವ ಪ್ರತಿಜ್ಞೆ ಮಾಡುವಂತೆ ಮಾಡಿತು.

ಅದಾಗ್ಯೂ, ಪೂಜಾ ಅವರ ಈ ಕೆಲಸವು ಅವರ ಸಮುದಾಯ ಮತ್ತು ಧಾರ್ಮಿಕ ಜನರಿಂದ ಭಾರಿ ಪ್ರತಿರೋಧ ಎದುರಿಸಿತು. ಸಾಂಪ್ರದಾಯಿಕವಾಗಿ, ಹಿಂದೂ ಧರ್ಮದಲ್ಲಿ ಅಂತ್ಯಕ್ರಿಯೆಯ ವಿಧಿಗಳನ್ನು ಪುರುಷರಿಗೆ ಮೀಸಲಿಡಲಾಗಿದೆ. ಇದರ ಹೊರತಾಗಿಯೂ, ಅವರು ವಿವಿಧ ಧಾರ್ಮಿಕ ಹಿನ್ನೆಲೆಯ 4,000 ಕ್ಕೂ ಹೆಚ್ಚು ಜನರಿಗೆ ಅಂತಿಮ ವಿಧಿಗಳನ್ನು ನೆರವೇರಿಸಿದ್ದಾರೆ. ಈ ಮೂಲಕ ಎಲ್ಲರಿಗೂ ಸಾವಿನಲ್ಲೂ ಘನತೆಯ ಅಗತ್ಯವನ್ನು ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ: “ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

“ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...