Homeಮುಖಪುಟಬಿಬಿಸಿ 2024ರ ಸ್ಪೂರ್ತಿದಾಯಕ ಮಹಿಳೆ ಪಟ್ಟಿ | ಭಾರತದ ವಿನೇಶ್ ಫೋಗಟ್ ಸೇರಿ ಮೂವರಿಗೆ ಸ್ಥಾನ

ಬಿಬಿಸಿ 2024ರ ಸ್ಪೂರ್ತಿದಾಯಕ ಮಹಿಳೆ ಪಟ್ಟಿ | ಭಾರತದ ವಿನೇಶ್ ಫೋಗಟ್ ಸೇರಿ ಮೂವರಿಗೆ ಸ್ಥಾನ

- Advertisement -
- Advertisement -

ಬಿಬಿಸಿ 2024ರ ಅತ್ಯಂತ ಪ್ರಭಾವಶಾಲಿ ಮತ್ತು ಸ್ಪೂರ್ತಿದಾಯಕ 100 ಮಹಿಳೆಯರ ಪಟ್ಟಿಯಲ್ಲಿ ಭಾರತದ ಮೂವರು ಸ್ಥಾನ ಪಡೆದಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಕೊಡುಗೆ ನೀಡಿರುವ 100 ಪ್ರಮುಖ ಮಹಿಳೆಯರ ಈ ಪಟ್ಟಿಯಲ್ಲಿ ಭಾರತದ ಸಾಮಾಜಿಕ ಹೋರಾಟಗಾರ್ತಿ ಅರುಣಾ ರಾಯ್, ಕುಸ್ತಿಪಟು-ರಾಜಕಾರಣಿ ವಿನೇಶ್ ಫೋಗಟ್ ಮತ್ತು ಅಂತ್ಯಕ್ರಿಯೆಯ ಪ್ರವರ್ತಕಿ ಪೂಜಾ ಶರ್ಮಾ ಕಾಣಿಸಿಕೊಂಡಿದ್ದಾರೆ

ಅರುಣಾ ರಾಯ್ ಅವರು ಸರ್ಕಾರಿ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವಕ್ಕಾಗಿ ಹೋರಾಟ ಮಾಡುತ್ತಿದ್ದು, ಜೊತೆಗೆ ಸಾಮಾಜಿಕ ನ್ಯಾಯ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ಕೂಡಾ ಕೆಲಸ ಮಾಡುತ್ತಿದ್ದಾರೆ. ಇತ್ತಿಚೆಗಷ್ಟೆ ಶಾಸಕಿಯಾಗಿ ಆಯ್ಕೆಯಾದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಮಹಿಳಾ ಹಕ್ಕುಗಳಿಗಾಗಿ ಮತ್ತು ಮಹಿಳಾ ಕುಸ್ತಿಪಟುಗಳ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಅಂತ್ಯಕ್ರಿಯೆಯ ವಿಧಿಗಳಿಗೆ ಹೊಸ ವಿಧಾನವನ್ನು ಪ್ರವರ್ತಿಸಿದ ಪೂಜಾ ಶರ್ಮಾ, ಸಾವು ಮತ್ತು ಶೋಕವನ್ನು ಸುತ್ತುವರೆದಿರುವ ಸಾಮಾಜಿಕ ನಿಯಮಗಳು ಮತ್ತು ಆಚರಣೆಗಳನ್ನು ಮರುವ್ಯಾಖ್ಯಾನಿಸುವ ಕೆಲಸವನ್ನು ಮಾಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಬಿಸಿ 2024ರ 100 ಮಹಿಳೆಯರ ಪಟ್ಟಿಯಲ್ಲಿ ಗಗನಯಾತ್ರಿ ಸುನೀತಾ ವಿಲಿಯಮ್ಸ್, ಹಾಲಿವುಡ್ ತಾರೆ ಶರೋನ್ ಸ್ಟೋನ್, ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ನಾಡಿಯಾ ಮುರಾದ್ ಮತ್ತು ಹವಾಮಾನ ಹೋರಾಟಗಾರ್ತಿ ಅಡೆನಿಕೆ ಒಲಾಡೋಸು ಅವರಂತಹ ಅಂತರರಾಷ್ಟ್ರೀಯ ವ್ಯಕ್ತಿಗಳು ಕೂಡಾ ಇದ್ದಾರೆ.

ಅರುಣಾ ರಾಯ್

ಅರುಣಾ ರಾಯ್ ಭಾರತದ ಅತ್ಯಂತ ಪ್ರಭಾವಿ ಸಾಮಾಜಿಕ ಹೋರಾಟಗಾರರಾಗಿದ್ದು ಮತ್ತು ಮಾಹಿತಿ ಹಕ್ಕು (ಆರ್‌ಟಿಐ) ಆಂದೋಲನದ ಪ್ರಮುಖ ವ್ಯಕ್ತಿಯಾಗಿದ್ದಾರೆ. 2005 ರಲ್ಲಿ ಜಾರಿಗೆ ಬಂದ ಮಾಹಿತಿ ಹಕ್ಕು ಕಾಯಿದೆಯ ರಚನೆಯಲ್ಲಿ ಅವರ ಪ್ರಯತ್ನಗಳು ಪ್ರಮುಖ ಪಾತ್ರವನ್ನು ವಹಿಸಿದ್ದವು. ಅರುಣಾ ಅವರು ಮಾಜಿ ಐಎಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಪೂರ್ಣ ಕಾಲಿಕ ಸಾಮಾಜಿಕ ಹೋರಾಟಗಾರ್ತಿಯಾಗಿದ್ದಾರೆ. ತನ್ನ ಪ್ರತಿಷ್ಠಿತ ಸರ್ಕಾರಿ ಕೆಲಸವನ್ನು ತೊರೆದ ನಂತರ, ಅವರು ಸುಮಾರು ನಾಲ್ಕು ದಶಕಗಳ ಕಾಲ ಭಾರತದಾದ್ಯಂತ ಗ್ರಾಮೀಣ ಸಮುದಾಯಗಳೊಂದಿಗೆ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಕೆಲಸಗಳಲ್ಲಿ ಪಾರದರ್ಶಕತೆ ಮತ್ತು ತಳಮಟ್ಟದಲ್ಲಿ ಇರುವವರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದಾರೆ.

ವಿನೇಶ್ ಫೋಗಟ್

ಮೂರು ಬಾರಿ ಒಲಿಂಪಿಯನ್ ಆಗಿರುವ ಮತ್ತು ಭಾರತದ ಅತ್ಯಂತ ಖ್ಯಾತ ಕುಸ್ತಿಪಟುಗಳಲ್ಲಿ ಒಬ್ಬರಾದ ವಿನೇಶ್ ಫೋಗಟ್ ಅವರು, ತಮ್ಮ ಕ್ರೀಡಾ ಸಾಧನೆಗಳಿಗೆ ಮಾತ್ರವಲ್ಲದೆ ಕ್ರೀಡೆಯಲ್ಲಿನ ಲಿಂಗ ಪಕ್ಷಪಾತದ ವಿರುದ್ಧದ ಹೋರಾಟಗಳಿಗೂ ಹೆಸರುವಾಸಿಯಾಗಿದ್ದಾರೆ. ಅವರು ವಿಶ್ವ ಚಾಂಪಿಯನ್‌ಶಿಪ್, ಕಾಮನ್‌ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್‌ಗಳಲ್ಲಿ ಪದಕಗಳನ್ನು ಗೆದ್ದಿದ್ದಾರೆ. 2024 ಒಲಿಂಪಿಕ್ಸ್‌ನಲ್ಲಿ ಫೈನಲ್ ತಲುಪಿದ್ದ ಅವರು, ಕುಸ್ತಿಯಲ್ಲಿ ಫೈನಲ್ ತಲುಪಿದ ಭಾರತದ ಮೊದಲ ಮಹಿಳಾ ಕುಸ್ತಿಪಟು ಎಂಬ ಇತಿಹಾಸವನ್ನು ನಿರ್ಮಿಸಿದ್ದರು.

ಮಹಿಳಾ ಹಕ್ಕುಗಳ ಪ್ರಮುಖ ಹೋರಾಟಗಾರ್ತಿಯಾದ ಅವರ ಭಾರತೀಯ ಕುಸ್ತಿ ಫಡರೇಷನ್‌ನಲ್ಲಿ, ಅದರ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕ್ರೀಡಾಪಟುಗಳಿಗೆ ನೀಡುತ್ತಿದ್ದ ಲೈಂಗಿಕ ಕಿರುಕುಳವನ್ನು ವಿರೋಧಿಸಿ ನಡೆಸಲಾಗಿದ್ದ ಭಾರಿ ಪ್ರತಿಭಟನೆಯ ನೇತೃತ್ವ ವಹಿಸಿದ್ದವರಲ್ಲಿ ಒಬ್ಬರಾಗಿದ್ದರು. ಈ ಪ್ರತಿಭಟನೆಯು ವಿಶ್ವ ಗಮನ ಸೆಳೆಯಿತು.

ಪೂಜಾ ಶರ್ಮಾ

ಪೂಜಾ ಶರ್ಮಾ ಅವರು ಕಳೆದ ಮೂರು ವರ್ಷಗಳಿಂದ ದೆಹಲಿಯಲ್ಲಿ ಯಾವುದೆ ವಾರಿಸುದಾರರು ಇಲ್ಲದ ಮೃತದೇಹಗಳಿಗೆ ಅಂತಿಮ ವಿಧಿಗಳನ್ನು ಮಾಡುವ ಮೂಲಕ ಸಮಾಜ ಸೇವೆ ಮಾಡುವವರಾಗಿದ್ದಾರೆ. ಅವರ ಈ ಪ್ರಯಾಣವು 2022 ರಲ್ಲಿ ತನ್ನ ಮುಂದೆಯೆ ಬರ್ಬರವಾಗಿ ಹತ್ಯೆಗೀಡಾದ ತನ್ನ ಸಹೋದರ ದುರಂತದೊಂದಿಗೆ ಪ್ರಾರಂಭವಾಯಿತು. ಈ ವೇಳೆ ಅವರ ಸಹೋದರನ ಅಂತ್ಯಕ್ರಿಯೆಗೆ ಸಹಾಯ ಮಾಡಲು ಯಾರೂ ಮುಂದೆ ಬರಲಿಲ್ಲ. ಅವರ ಈ ಅನುಭವವು ಏಕಾಂಗಿಯಾಗಿ ಸಾಯುವವರಿಗೆ ಸಹಾಯ ಮಾಡುವ ಪ್ರತಿಜ್ಞೆ ಮಾಡುವಂತೆ ಮಾಡಿತು.

ಅದಾಗ್ಯೂ, ಪೂಜಾ ಅವರ ಈ ಕೆಲಸವು ಅವರ ಸಮುದಾಯ ಮತ್ತು ಧಾರ್ಮಿಕ ಜನರಿಂದ ಭಾರಿ ಪ್ರತಿರೋಧ ಎದುರಿಸಿತು. ಸಾಂಪ್ರದಾಯಿಕವಾಗಿ, ಹಿಂದೂ ಧರ್ಮದಲ್ಲಿ ಅಂತ್ಯಕ್ರಿಯೆಯ ವಿಧಿಗಳನ್ನು ಪುರುಷರಿಗೆ ಮೀಸಲಿಡಲಾಗಿದೆ. ಇದರ ಹೊರತಾಗಿಯೂ, ಅವರು ವಿವಿಧ ಧಾರ್ಮಿಕ ಹಿನ್ನೆಲೆಯ 4,000 ಕ್ಕೂ ಹೆಚ್ಚು ಜನರಿಗೆ ಅಂತಿಮ ವಿಧಿಗಳನ್ನು ನೆರವೇರಿಸಿದ್ದಾರೆ. ಈ ಮೂಲಕ ಎಲ್ಲರಿಗೂ ಸಾವಿನಲ್ಲೂ ಘನತೆಯ ಅಗತ್ಯವನ್ನು ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ: “ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

“ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...