Homeಮುಖಪುಟಬಿಬಿಸಿ 2024ರ ಸ್ಪೂರ್ತಿದಾಯಕ ಮಹಿಳೆ ಪಟ್ಟಿ | ಭಾರತದ ವಿನೇಶ್ ಫೋಗಟ್ ಸೇರಿ ಮೂವರಿಗೆ ಸ್ಥಾನ

ಬಿಬಿಸಿ 2024ರ ಸ್ಪೂರ್ತಿದಾಯಕ ಮಹಿಳೆ ಪಟ್ಟಿ | ಭಾರತದ ವಿನೇಶ್ ಫೋಗಟ್ ಸೇರಿ ಮೂವರಿಗೆ ಸ್ಥಾನ

- Advertisement -
- Advertisement -

ಬಿಬಿಸಿ 2024ರ ಅತ್ಯಂತ ಪ್ರಭಾವಶಾಲಿ ಮತ್ತು ಸ್ಪೂರ್ತಿದಾಯಕ 100 ಮಹಿಳೆಯರ ಪಟ್ಟಿಯಲ್ಲಿ ಭಾರತದ ಮೂವರು ಸ್ಥಾನ ಪಡೆದಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಕೊಡುಗೆ ನೀಡಿರುವ 100 ಪ್ರಮುಖ ಮಹಿಳೆಯರ ಈ ಪಟ್ಟಿಯಲ್ಲಿ ಭಾರತದ ಸಾಮಾಜಿಕ ಹೋರಾಟಗಾರ್ತಿ ಅರುಣಾ ರಾಯ್, ಕುಸ್ತಿಪಟು-ರಾಜಕಾರಣಿ ವಿನೇಶ್ ಫೋಗಟ್ ಮತ್ತು ಅಂತ್ಯಕ್ರಿಯೆಯ ಪ್ರವರ್ತಕಿ ಪೂಜಾ ಶರ್ಮಾ ಕಾಣಿಸಿಕೊಂಡಿದ್ದಾರೆ

ಅರುಣಾ ರಾಯ್ ಅವರು ಸರ್ಕಾರಿ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವಕ್ಕಾಗಿ ಹೋರಾಟ ಮಾಡುತ್ತಿದ್ದು, ಜೊತೆಗೆ ಸಾಮಾಜಿಕ ನ್ಯಾಯ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ಕೂಡಾ ಕೆಲಸ ಮಾಡುತ್ತಿದ್ದಾರೆ. ಇತ್ತಿಚೆಗಷ್ಟೆ ಶಾಸಕಿಯಾಗಿ ಆಯ್ಕೆಯಾದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಮಹಿಳಾ ಹಕ್ಕುಗಳಿಗಾಗಿ ಮತ್ತು ಮಹಿಳಾ ಕುಸ್ತಿಪಟುಗಳ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಅಂತ್ಯಕ್ರಿಯೆಯ ವಿಧಿಗಳಿಗೆ ಹೊಸ ವಿಧಾನವನ್ನು ಪ್ರವರ್ತಿಸಿದ ಪೂಜಾ ಶರ್ಮಾ, ಸಾವು ಮತ್ತು ಶೋಕವನ್ನು ಸುತ್ತುವರೆದಿರುವ ಸಾಮಾಜಿಕ ನಿಯಮಗಳು ಮತ್ತು ಆಚರಣೆಗಳನ್ನು ಮರುವ್ಯಾಖ್ಯಾನಿಸುವ ಕೆಲಸವನ್ನು ಮಾಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಬಿಸಿ 2024ರ 100 ಮಹಿಳೆಯರ ಪಟ್ಟಿಯಲ್ಲಿ ಗಗನಯಾತ್ರಿ ಸುನೀತಾ ವಿಲಿಯಮ್ಸ್, ಹಾಲಿವುಡ್ ತಾರೆ ಶರೋನ್ ಸ್ಟೋನ್, ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ನಾಡಿಯಾ ಮುರಾದ್ ಮತ್ತು ಹವಾಮಾನ ಹೋರಾಟಗಾರ್ತಿ ಅಡೆನಿಕೆ ಒಲಾಡೋಸು ಅವರಂತಹ ಅಂತರರಾಷ್ಟ್ರೀಯ ವ್ಯಕ್ತಿಗಳು ಕೂಡಾ ಇದ್ದಾರೆ.

ಅರುಣಾ ರಾಯ್

ಅರುಣಾ ರಾಯ್ ಭಾರತದ ಅತ್ಯಂತ ಪ್ರಭಾವಿ ಸಾಮಾಜಿಕ ಹೋರಾಟಗಾರರಾಗಿದ್ದು ಮತ್ತು ಮಾಹಿತಿ ಹಕ್ಕು (ಆರ್‌ಟಿಐ) ಆಂದೋಲನದ ಪ್ರಮುಖ ವ್ಯಕ್ತಿಯಾಗಿದ್ದಾರೆ. 2005 ರಲ್ಲಿ ಜಾರಿಗೆ ಬಂದ ಮಾಹಿತಿ ಹಕ್ಕು ಕಾಯಿದೆಯ ರಚನೆಯಲ್ಲಿ ಅವರ ಪ್ರಯತ್ನಗಳು ಪ್ರಮುಖ ಪಾತ್ರವನ್ನು ವಹಿಸಿದ್ದವು. ಅರುಣಾ ಅವರು ಮಾಜಿ ಐಎಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಪೂರ್ಣ ಕಾಲಿಕ ಸಾಮಾಜಿಕ ಹೋರಾಟಗಾರ್ತಿಯಾಗಿದ್ದಾರೆ. ತನ್ನ ಪ್ರತಿಷ್ಠಿತ ಸರ್ಕಾರಿ ಕೆಲಸವನ್ನು ತೊರೆದ ನಂತರ, ಅವರು ಸುಮಾರು ನಾಲ್ಕು ದಶಕಗಳ ಕಾಲ ಭಾರತದಾದ್ಯಂತ ಗ್ರಾಮೀಣ ಸಮುದಾಯಗಳೊಂದಿಗೆ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಕೆಲಸಗಳಲ್ಲಿ ಪಾರದರ್ಶಕತೆ ಮತ್ತು ತಳಮಟ್ಟದಲ್ಲಿ ಇರುವವರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದಾರೆ.

ವಿನೇಶ್ ಫೋಗಟ್

ಮೂರು ಬಾರಿ ಒಲಿಂಪಿಯನ್ ಆಗಿರುವ ಮತ್ತು ಭಾರತದ ಅತ್ಯಂತ ಖ್ಯಾತ ಕುಸ್ತಿಪಟುಗಳಲ್ಲಿ ಒಬ್ಬರಾದ ವಿನೇಶ್ ಫೋಗಟ್ ಅವರು, ತಮ್ಮ ಕ್ರೀಡಾ ಸಾಧನೆಗಳಿಗೆ ಮಾತ್ರವಲ್ಲದೆ ಕ್ರೀಡೆಯಲ್ಲಿನ ಲಿಂಗ ಪಕ್ಷಪಾತದ ವಿರುದ್ಧದ ಹೋರಾಟಗಳಿಗೂ ಹೆಸರುವಾಸಿಯಾಗಿದ್ದಾರೆ. ಅವರು ವಿಶ್ವ ಚಾಂಪಿಯನ್‌ಶಿಪ್, ಕಾಮನ್‌ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್‌ಗಳಲ್ಲಿ ಪದಕಗಳನ್ನು ಗೆದ್ದಿದ್ದಾರೆ. 2024 ಒಲಿಂಪಿಕ್ಸ್‌ನಲ್ಲಿ ಫೈನಲ್ ತಲುಪಿದ್ದ ಅವರು, ಕುಸ್ತಿಯಲ್ಲಿ ಫೈನಲ್ ತಲುಪಿದ ಭಾರತದ ಮೊದಲ ಮಹಿಳಾ ಕುಸ್ತಿಪಟು ಎಂಬ ಇತಿಹಾಸವನ್ನು ನಿರ್ಮಿಸಿದ್ದರು.

ಮಹಿಳಾ ಹಕ್ಕುಗಳ ಪ್ರಮುಖ ಹೋರಾಟಗಾರ್ತಿಯಾದ ಅವರ ಭಾರತೀಯ ಕುಸ್ತಿ ಫಡರೇಷನ್‌ನಲ್ಲಿ, ಅದರ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕ್ರೀಡಾಪಟುಗಳಿಗೆ ನೀಡುತ್ತಿದ್ದ ಲೈಂಗಿಕ ಕಿರುಕುಳವನ್ನು ವಿರೋಧಿಸಿ ನಡೆಸಲಾಗಿದ್ದ ಭಾರಿ ಪ್ರತಿಭಟನೆಯ ನೇತೃತ್ವ ವಹಿಸಿದ್ದವರಲ್ಲಿ ಒಬ್ಬರಾಗಿದ್ದರು. ಈ ಪ್ರತಿಭಟನೆಯು ವಿಶ್ವ ಗಮನ ಸೆಳೆಯಿತು.

ಪೂಜಾ ಶರ್ಮಾ

ಪೂಜಾ ಶರ್ಮಾ ಅವರು ಕಳೆದ ಮೂರು ವರ್ಷಗಳಿಂದ ದೆಹಲಿಯಲ್ಲಿ ಯಾವುದೆ ವಾರಿಸುದಾರರು ಇಲ್ಲದ ಮೃತದೇಹಗಳಿಗೆ ಅಂತಿಮ ವಿಧಿಗಳನ್ನು ಮಾಡುವ ಮೂಲಕ ಸಮಾಜ ಸೇವೆ ಮಾಡುವವರಾಗಿದ್ದಾರೆ. ಅವರ ಈ ಪ್ರಯಾಣವು 2022 ರಲ್ಲಿ ತನ್ನ ಮುಂದೆಯೆ ಬರ್ಬರವಾಗಿ ಹತ್ಯೆಗೀಡಾದ ತನ್ನ ಸಹೋದರ ದುರಂತದೊಂದಿಗೆ ಪ್ರಾರಂಭವಾಯಿತು. ಈ ವೇಳೆ ಅವರ ಸಹೋದರನ ಅಂತ್ಯಕ್ರಿಯೆಗೆ ಸಹಾಯ ಮಾಡಲು ಯಾರೂ ಮುಂದೆ ಬರಲಿಲ್ಲ. ಅವರ ಈ ಅನುಭವವು ಏಕಾಂಗಿಯಾಗಿ ಸಾಯುವವರಿಗೆ ಸಹಾಯ ಮಾಡುವ ಪ್ರತಿಜ್ಞೆ ಮಾಡುವಂತೆ ಮಾಡಿತು.

ಅದಾಗ್ಯೂ, ಪೂಜಾ ಅವರ ಈ ಕೆಲಸವು ಅವರ ಸಮುದಾಯ ಮತ್ತು ಧಾರ್ಮಿಕ ಜನರಿಂದ ಭಾರಿ ಪ್ರತಿರೋಧ ಎದುರಿಸಿತು. ಸಾಂಪ್ರದಾಯಿಕವಾಗಿ, ಹಿಂದೂ ಧರ್ಮದಲ್ಲಿ ಅಂತ್ಯಕ್ರಿಯೆಯ ವಿಧಿಗಳನ್ನು ಪುರುಷರಿಗೆ ಮೀಸಲಿಡಲಾಗಿದೆ. ಇದರ ಹೊರತಾಗಿಯೂ, ಅವರು ವಿವಿಧ ಧಾರ್ಮಿಕ ಹಿನ್ನೆಲೆಯ 4,000 ಕ್ಕೂ ಹೆಚ್ಚು ಜನರಿಗೆ ಅಂತಿಮ ವಿಧಿಗಳನ್ನು ನೆರವೇರಿಸಿದ್ದಾರೆ. ಈ ಮೂಲಕ ಎಲ್ಲರಿಗೂ ಸಾವಿನಲ್ಲೂ ಘನತೆಯ ಅಗತ್ಯವನ್ನು ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ: “ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

“ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...