Homeಮುಖಪುಟಬಿಬಿಸಿ 2024ರ ಸ್ಪೂರ್ತಿದಾಯಕ ಮಹಿಳೆ ಪಟ್ಟಿ | ಭಾರತದ ವಿನೇಶ್ ಫೋಗಟ್ ಸೇರಿ ಮೂವರಿಗೆ ಸ್ಥಾನ

ಬಿಬಿಸಿ 2024ರ ಸ್ಪೂರ್ತಿದಾಯಕ ಮಹಿಳೆ ಪಟ್ಟಿ | ಭಾರತದ ವಿನೇಶ್ ಫೋಗಟ್ ಸೇರಿ ಮೂವರಿಗೆ ಸ್ಥಾನ

- Advertisement -
- Advertisement -

ಬಿಬಿಸಿ 2024ರ ಅತ್ಯಂತ ಪ್ರಭಾವಶಾಲಿ ಮತ್ತು ಸ್ಪೂರ್ತಿದಾಯಕ 100 ಮಹಿಳೆಯರ ಪಟ್ಟಿಯಲ್ಲಿ ಭಾರತದ ಮೂವರು ಸ್ಥಾನ ಪಡೆದಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಕೊಡುಗೆ ನೀಡಿರುವ 100 ಪ್ರಮುಖ ಮಹಿಳೆಯರ ಈ ಪಟ್ಟಿಯಲ್ಲಿ ಭಾರತದ ಸಾಮಾಜಿಕ ಹೋರಾಟಗಾರ್ತಿ ಅರುಣಾ ರಾಯ್, ಕುಸ್ತಿಪಟು-ರಾಜಕಾರಣಿ ವಿನೇಶ್ ಫೋಗಟ್ ಮತ್ತು ಅಂತ್ಯಕ್ರಿಯೆಯ ಪ್ರವರ್ತಕಿ ಪೂಜಾ ಶರ್ಮಾ ಕಾಣಿಸಿಕೊಂಡಿದ್ದಾರೆ

ಅರುಣಾ ರಾಯ್ ಅವರು ಸರ್ಕಾರಿ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವಕ್ಕಾಗಿ ಹೋರಾಟ ಮಾಡುತ್ತಿದ್ದು, ಜೊತೆಗೆ ಸಾಮಾಜಿಕ ನ್ಯಾಯ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ಕೂಡಾ ಕೆಲಸ ಮಾಡುತ್ತಿದ್ದಾರೆ. ಇತ್ತಿಚೆಗಷ್ಟೆ ಶಾಸಕಿಯಾಗಿ ಆಯ್ಕೆಯಾದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಮಹಿಳಾ ಹಕ್ಕುಗಳಿಗಾಗಿ ಮತ್ತು ಮಹಿಳಾ ಕುಸ್ತಿಪಟುಗಳ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಅಂತ್ಯಕ್ರಿಯೆಯ ವಿಧಿಗಳಿಗೆ ಹೊಸ ವಿಧಾನವನ್ನು ಪ್ರವರ್ತಿಸಿದ ಪೂಜಾ ಶರ್ಮಾ, ಸಾವು ಮತ್ತು ಶೋಕವನ್ನು ಸುತ್ತುವರೆದಿರುವ ಸಾಮಾಜಿಕ ನಿಯಮಗಳು ಮತ್ತು ಆಚರಣೆಗಳನ್ನು ಮರುವ್ಯಾಖ್ಯಾನಿಸುವ ಕೆಲಸವನ್ನು ಮಾಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಬಿಸಿ 2024ರ 100 ಮಹಿಳೆಯರ ಪಟ್ಟಿಯಲ್ಲಿ ಗಗನಯಾತ್ರಿ ಸುನೀತಾ ವಿಲಿಯಮ್ಸ್, ಹಾಲಿವುಡ್ ತಾರೆ ಶರೋನ್ ಸ್ಟೋನ್, ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ನಾಡಿಯಾ ಮುರಾದ್ ಮತ್ತು ಹವಾಮಾನ ಹೋರಾಟಗಾರ್ತಿ ಅಡೆನಿಕೆ ಒಲಾಡೋಸು ಅವರಂತಹ ಅಂತರರಾಷ್ಟ್ರೀಯ ವ್ಯಕ್ತಿಗಳು ಕೂಡಾ ಇದ್ದಾರೆ.

ಅರುಣಾ ರಾಯ್

ಅರುಣಾ ರಾಯ್ ಭಾರತದ ಅತ್ಯಂತ ಪ್ರಭಾವಿ ಸಾಮಾಜಿಕ ಹೋರಾಟಗಾರರಾಗಿದ್ದು ಮತ್ತು ಮಾಹಿತಿ ಹಕ್ಕು (ಆರ್‌ಟಿಐ) ಆಂದೋಲನದ ಪ್ರಮುಖ ವ್ಯಕ್ತಿಯಾಗಿದ್ದಾರೆ. 2005 ರಲ್ಲಿ ಜಾರಿಗೆ ಬಂದ ಮಾಹಿತಿ ಹಕ್ಕು ಕಾಯಿದೆಯ ರಚನೆಯಲ್ಲಿ ಅವರ ಪ್ರಯತ್ನಗಳು ಪ್ರಮುಖ ಪಾತ್ರವನ್ನು ವಹಿಸಿದ್ದವು. ಅರುಣಾ ಅವರು ಮಾಜಿ ಐಎಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಪೂರ್ಣ ಕಾಲಿಕ ಸಾಮಾಜಿಕ ಹೋರಾಟಗಾರ್ತಿಯಾಗಿದ್ದಾರೆ. ತನ್ನ ಪ್ರತಿಷ್ಠಿತ ಸರ್ಕಾರಿ ಕೆಲಸವನ್ನು ತೊರೆದ ನಂತರ, ಅವರು ಸುಮಾರು ನಾಲ್ಕು ದಶಕಗಳ ಕಾಲ ಭಾರತದಾದ್ಯಂತ ಗ್ರಾಮೀಣ ಸಮುದಾಯಗಳೊಂದಿಗೆ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಕೆಲಸಗಳಲ್ಲಿ ಪಾರದರ್ಶಕತೆ ಮತ್ತು ತಳಮಟ್ಟದಲ್ಲಿ ಇರುವವರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದಾರೆ.

ವಿನೇಶ್ ಫೋಗಟ್

ಮೂರು ಬಾರಿ ಒಲಿಂಪಿಯನ್ ಆಗಿರುವ ಮತ್ತು ಭಾರತದ ಅತ್ಯಂತ ಖ್ಯಾತ ಕುಸ್ತಿಪಟುಗಳಲ್ಲಿ ಒಬ್ಬರಾದ ವಿನೇಶ್ ಫೋಗಟ್ ಅವರು, ತಮ್ಮ ಕ್ರೀಡಾ ಸಾಧನೆಗಳಿಗೆ ಮಾತ್ರವಲ್ಲದೆ ಕ್ರೀಡೆಯಲ್ಲಿನ ಲಿಂಗ ಪಕ್ಷಪಾತದ ವಿರುದ್ಧದ ಹೋರಾಟಗಳಿಗೂ ಹೆಸರುವಾಸಿಯಾಗಿದ್ದಾರೆ. ಅವರು ವಿಶ್ವ ಚಾಂಪಿಯನ್‌ಶಿಪ್, ಕಾಮನ್‌ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್‌ಗಳಲ್ಲಿ ಪದಕಗಳನ್ನು ಗೆದ್ದಿದ್ದಾರೆ. 2024 ಒಲಿಂಪಿಕ್ಸ್‌ನಲ್ಲಿ ಫೈನಲ್ ತಲುಪಿದ್ದ ಅವರು, ಕುಸ್ತಿಯಲ್ಲಿ ಫೈನಲ್ ತಲುಪಿದ ಭಾರತದ ಮೊದಲ ಮಹಿಳಾ ಕುಸ್ತಿಪಟು ಎಂಬ ಇತಿಹಾಸವನ್ನು ನಿರ್ಮಿಸಿದ್ದರು.

ಮಹಿಳಾ ಹಕ್ಕುಗಳ ಪ್ರಮುಖ ಹೋರಾಟಗಾರ್ತಿಯಾದ ಅವರ ಭಾರತೀಯ ಕುಸ್ತಿ ಫಡರೇಷನ್‌ನಲ್ಲಿ, ಅದರ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕ್ರೀಡಾಪಟುಗಳಿಗೆ ನೀಡುತ್ತಿದ್ದ ಲೈಂಗಿಕ ಕಿರುಕುಳವನ್ನು ವಿರೋಧಿಸಿ ನಡೆಸಲಾಗಿದ್ದ ಭಾರಿ ಪ್ರತಿಭಟನೆಯ ನೇತೃತ್ವ ವಹಿಸಿದ್ದವರಲ್ಲಿ ಒಬ್ಬರಾಗಿದ್ದರು. ಈ ಪ್ರತಿಭಟನೆಯು ವಿಶ್ವ ಗಮನ ಸೆಳೆಯಿತು.

ಪೂಜಾ ಶರ್ಮಾ

ಪೂಜಾ ಶರ್ಮಾ ಅವರು ಕಳೆದ ಮೂರು ವರ್ಷಗಳಿಂದ ದೆಹಲಿಯಲ್ಲಿ ಯಾವುದೆ ವಾರಿಸುದಾರರು ಇಲ್ಲದ ಮೃತದೇಹಗಳಿಗೆ ಅಂತಿಮ ವಿಧಿಗಳನ್ನು ಮಾಡುವ ಮೂಲಕ ಸಮಾಜ ಸೇವೆ ಮಾಡುವವರಾಗಿದ್ದಾರೆ. ಅವರ ಈ ಪ್ರಯಾಣವು 2022 ರಲ್ಲಿ ತನ್ನ ಮುಂದೆಯೆ ಬರ್ಬರವಾಗಿ ಹತ್ಯೆಗೀಡಾದ ತನ್ನ ಸಹೋದರ ದುರಂತದೊಂದಿಗೆ ಪ್ರಾರಂಭವಾಯಿತು. ಈ ವೇಳೆ ಅವರ ಸಹೋದರನ ಅಂತ್ಯಕ್ರಿಯೆಗೆ ಸಹಾಯ ಮಾಡಲು ಯಾರೂ ಮುಂದೆ ಬರಲಿಲ್ಲ. ಅವರ ಈ ಅನುಭವವು ಏಕಾಂಗಿಯಾಗಿ ಸಾಯುವವರಿಗೆ ಸಹಾಯ ಮಾಡುವ ಪ್ರತಿಜ್ಞೆ ಮಾಡುವಂತೆ ಮಾಡಿತು.

ಅದಾಗ್ಯೂ, ಪೂಜಾ ಅವರ ಈ ಕೆಲಸವು ಅವರ ಸಮುದಾಯ ಮತ್ತು ಧಾರ್ಮಿಕ ಜನರಿಂದ ಭಾರಿ ಪ್ರತಿರೋಧ ಎದುರಿಸಿತು. ಸಾಂಪ್ರದಾಯಿಕವಾಗಿ, ಹಿಂದೂ ಧರ್ಮದಲ್ಲಿ ಅಂತ್ಯಕ್ರಿಯೆಯ ವಿಧಿಗಳನ್ನು ಪುರುಷರಿಗೆ ಮೀಸಲಿಡಲಾಗಿದೆ. ಇದರ ಹೊರತಾಗಿಯೂ, ಅವರು ವಿವಿಧ ಧಾರ್ಮಿಕ ಹಿನ್ನೆಲೆಯ 4,000 ಕ್ಕೂ ಹೆಚ್ಚು ಜನರಿಗೆ ಅಂತಿಮ ವಿಧಿಗಳನ್ನು ನೆರವೇರಿಸಿದ್ದಾರೆ. ಈ ಮೂಲಕ ಎಲ್ಲರಿಗೂ ಸಾವಿನಲ್ಲೂ ಘನತೆಯ ಅಗತ್ಯವನ್ನು ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ: “ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

“ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...