Homeಮುಖಪುಟಬಿಬಿಸಿ 2024ರ ಸ್ಪೂರ್ತಿದಾಯಕ ಮಹಿಳೆ ಪಟ್ಟಿ | ಭಾರತದ ವಿನೇಶ್ ಫೋಗಟ್ ಸೇರಿ ಮೂವರಿಗೆ ಸ್ಥಾನ

ಬಿಬಿಸಿ 2024ರ ಸ್ಪೂರ್ತಿದಾಯಕ ಮಹಿಳೆ ಪಟ್ಟಿ | ಭಾರತದ ವಿನೇಶ್ ಫೋಗಟ್ ಸೇರಿ ಮೂವರಿಗೆ ಸ್ಥಾನ

- Advertisement -
- Advertisement -

ಬಿಬಿಸಿ 2024ರ ಅತ್ಯಂತ ಪ್ರಭಾವಶಾಲಿ ಮತ್ತು ಸ್ಪೂರ್ತಿದಾಯಕ 100 ಮಹಿಳೆಯರ ಪಟ್ಟಿಯಲ್ಲಿ ಭಾರತದ ಮೂವರು ಸ್ಥಾನ ಪಡೆದಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಕೊಡುಗೆ ನೀಡಿರುವ 100 ಪ್ರಮುಖ ಮಹಿಳೆಯರ ಈ ಪಟ್ಟಿಯಲ್ಲಿ ಭಾರತದ ಸಾಮಾಜಿಕ ಹೋರಾಟಗಾರ್ತಿ ಅರುಣಾ ರಾಯ್, ಕುಸ್ತಿಪಟು-ರಾಜಕಾರಣಿ ವಿನೇಶ್ ಫೋಗಟ್ ಮತ್ತು ಅಂತ್ಯಕ್ರಿಯೆಯ ಪ್ರವರ್ತಕಿ ಪೂಜಾ ಶರ್ಮಾ ಕಾಣಿಸಿಕೊಂಡಿದ್ದಾರೆ

ಅರುಣಾ ರಾಯ್ ಅವರು ಸರ್ಕಾರಿ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವಕ್ಕಾಗಿ ಹೋರಾಟ ಮಾಡುತ್ತಿದ್ದು, ಜೊತೆಗೆ ಸಾಮಾಜಿಕ ನ್ಯಾಯ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ಕೂಡಾ ಕೆಲಸ ಮಾಡುತ್ತಿದ್ದಾರೆ. ಇತ್ತಿಚೆಗಷ್ಟೆ ಶಾಸಕಿಯಾಗಿ ಆಯ್ಕೆಯಾದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಮಹಿಳಾ ಹಕ್ಕುಗಳಿಗಾಗಿ ಮತ್ತು ಮಹಿಳಾ ಕುಸ್ತಿಪಟುಗಳ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಅಂತ್ಯಕ್ರಿಯೆಯ ವಿಧಿಗಳಿಗೆ ಹೊಸ ವಿಧಾನವನ್ನು ಪ್ರವರ್ತಿಸಿದ ಪೂಜಾ ಶರ್ಮಾ, ಸಾವು ಮತ್ತು ಶೋಕವನ್ನು ಸುತ್ತುವರೆದಿರುವ ಸಾಮಾಜಿಕ ನಿಯಮಗಳು ಮತ್ತು ಆಚರಣೆಗಳನ್ನು ಮರುವ್ಯಾಖ್ಯಾನಿಸುವ ಕೆಲಸವನ್ನು ಮಾಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಬಿಸಿ 2024ರ 100 ಮಹಿಳೆಯರ ಪಟ್ಟಿಯಲ್ಲಿ ಗಗನಯಾತ್ರಿ ಸುನೀತಾ ವಿಲಿಯಮ್ಸ್, ಹಾಲಿವುಡ್ ತಾರೆ ಶರೋನ್ ಸ್ಟೋನ್, ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ನಾಡಿಯಾ ಮುರಾದ್ ಮತ್ತು ಹವಾಮಾನ ಹೋರಾಟಗಾರ್ತಿ ಅಡೆನಿಕೆ ಒಲಾಡೋಸು ಅವರಂತಹ ಅಂತರರಾಷ್ಟ್ರೀಯ ವ್ಯಕ್ತಿಗಳು ಕೂಡಾ ಇದ್ದಾರೆ.

ಅರುಣಾ ರಾಯ್

ಅರುಣಾ ರಾಯ್ ಭಾರತದ ಅತ್ಯಂತ ಪ್ರಭಾವಿ ಸಾಮಾಜಿಕ ಹೋರಾಟಗಾರರಾಗಿದ್ದು ಮತ್ತು ಮಾಹಿತಿ ಹಕ್ಕು (ಆರ್‌ಟಿಐ) ಆಂದೋಲನದ ಪ್ರಮುಖ ವ್ಯಕ್ತಿಯಾಗಿದ್ದಾರೆ. 2005 ರಲ್ಲಿ ಜಾರಿಗೆ ಬಂದ ಮಾಹಿತಿ ಹಕ್ಕು ಕಾಯಿದೆಯ ರಚನೆಯಲ್ಲಿ ಅವರ ಪ್ರಯತ್ನಗಳು ಪ್ರಮುಖ ಪಾತ್ರವನ್ನು ವಹಿಸಿದ್ದವು. ಅರುಣಾ ಅವರು ಮಾಜಿ ಐಎಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಪೂರ್ಣ ಕಾಲಿಕ ಸಾಮಾಜಿಕ ಹೋರಾಟಗಾರ್ತಿಯಾಗಿದ್ದಾರೆ. ತನ್ನ ಪ್ರತಿಷ್ಠಿತ ಸರ್ಕಾರಿ ಕೆಲಸವನ್ನು ತೊರೆದ ನಂತರ, ಅವರು ಸುಮಾರು ನಾಲ್ಕು ದಶಕಗಳ ಕಾಲ ಭಾರತದಾದ್ಯಂತ ಗ್ರಾಮೀಣ ಸಮುದಾಯಗಳೊಂದಿಗೆ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಕೆಲಸಗಳಲ್ಲಿ ಪಾರದರ್ಶಕತೆ ಮತ್ತು ತಳಮಟ್ಟದಲ್ಲಿ ಇರುವವರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದಾರೆ.

ವಿನೇಶ್ ಫೋಗಟ್

ಮೂರು ಬಾರಿ ಒಲಿಂಪಿಯನ್ ಆಗಿರುವ ಮತ್ತು ಭಾರತದ ಅತ್ಯಂತ ಖ್ಯಾತ ಕುಸ್ತಿಪಟುಗಳಲ್ಲಿ ಒಬ್ಬರಾದ ವಿನೇಶ್ ಫೋಗಟ್ ಅವರು, ತಮ್ಮ ಕ್ರೀಡಾ ಸಾಧನೆಗಳಿಗೆ ಮಾತ್ರವಲ್ಲದೆ ಕ್ರೀಡೆಯಲ್ಲಿನ ಲಿಂಗ ಪಕ್ಷಪಾತದ ವಿರುದ್ಧದ ಹೋರಾಟಗಳಿಗೂ ಹೆಸರುವಾಸಿಯಾಗಿದ್ದಾರೆ. ಅವರು ವಿಶ್ವ ಚಾಂಪಿಯನ್‌ಶಿಪ್, ಕಾಮನ್‌ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್‌ಗಳಲ್ಲಿ ಪದಕಗಳನ್ನು ಗೆದ್ದಿದ್ದಾರೆ. 2024 ಒಲಿಂಪಿಕ್ಸ್‌ನಲ್ಲಿ ಫೈನಲ್ ತಲುಪಿದ್ದ ಅವರು, ಕುಸ್ತಿಯಲ್ಲಿ ಫೈನಲ್ ತಲುಪಿದ ಭಾರತದ ಮೊದಲ ಮಹಿಳಾ ಕುಸ್ತಿಪಟು ಎಂಬ ಇತಿಹಾಸವನ್ನು ನಿರ್ಮಿಸಿದ್ದರು.

ಮಹಿಳಾ ಹಕ್ಕುಗಳ ಪ್ರಮುಖ ಹೋರಾಟಗಾರ್ತಿಯಾದ ಅವರ ಭಾರತೀಯ ಕುಸ್ತಿ ಫಡರೇಷನ್‌ನಲ್ಲಿ, ಅದರ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕ್ರೀಡಾಪಟುಗಳಿಗೆ ನೀಡುತ್ತಿದ್ದ ಲೈಂಗಿಕ ಕಿರುಕುಳವನ್ನು ವಿರೋಧಿಸಿ ನಡೆಸಲಾಗಿದ್ದ ಭಾರಿ ಪ್ರತಿಭಟನೆಯ ನೇತೃತ್ವ ವಹಿಸಿದ್ದವರಲ್ಲಿ ಒಬ್ಬರಾಗಿದ್ದರು. ಈ ಪ್ರತಿಭಟನೆಯು ವಿಶ್ವ ಗಮನ ಸೆಳೆಯಿತು.

ಪೂಜಾ ಶರ್ಮಾ

ಪೂಜಾ ಶರ್ಮಾ ಅವರು ಕಳೆದ ಮೂರು ವರ್ಷಗಳಿಂದ ದೆಹಲಿಯಲ್ಲಿ ಯಾವುದೆ ವಾರಿಸುದಾರರು ಇಲ್ಲದ ಮೃತದೇಹಗಳಿಗೆ ಅಂತಿಮ ವಿಧಿಗಳನ್ನು ಮಾಡುವ ಮೂಲಕ ಸಮಾಜ ಸೇವೆ ಮಾಡುವವರಾಗಿದ್ದಾರೆ. ಅವರ ಈ ಪ್ರಯಾಣವು 2022 ರಲ್ಲಿ ತನ್ನ ಮುಂದೆಯೆ ಬರ್ಬರವಾಗಿ ಹತ್ಯೆಗೀಡಾದ ತನ್ನ ಸಹೋದರ ದುರಂತದೊಂದಿಗೆ ಪ್ರಾರಂಭವಾಯಿತು. ಈ ವೇಳೆ ಅವರ ಸಹೋದರನ ಅಂತ್ಯಕ್ರಿಯೆಗೆ ಸಹಾಯ ಮಾಡಲು ಯಾರೂ ಮುಂದೆ ಬರಲಿಲ್ಲ. ಅವರ ಈ ಅನುಭವವು ಏಕಾಂಗಿಯಾಗಿ ಸಾಯುವವರಿಗೆ ಸಹಾಯ ಮಾಡುವ ಪ್ರತಿಜ್ಞೆ ಮಾಡುವಂತೆ ಮಾಡಿತು.

ಅದಾಗ್ಯೂ, ಪೂಜಾ ಅವರ ಈ ಕೆಲಸವು ಅವರ ಸಮುದಾಯ ಮತ್ತು ಧಾರ್ಮಿಕ ಜನರಿಂದ ಭಾರಿ ಪ್ರತಿರೋಧ ಎದುರಿಸಿತು. ಸಾಂಪ್ರದಾಯಿಕವಾಗಿ, ಹಿಂದೂ ಧರ್ಮದಲ್ಲಿ ಅಂತ್ಯಕ್ರಿಯೆಯ ವಿಧಿಗಳನ್ನು ಪುರುಷರಿಗೆ ಮೀಸಲಿಡಲಾಗಿದೆ. ಇದರ ಹೊರತಾಗಿಯೂ, ಅವರು ವಿವಿಧ ಧಾರ್ಮಿಕ ಹಿನ್ನೆಲೆಯ 4,000 ಕ್ಕೂ ಹೆಚ್ಚು ಜನರಿಗೆ ಅಂತಿಮ ವಿಧಿಗಳನ್ನು ನೆರವೇರಿಸಿದ್ದಾರೆ. ಈ ಮೂಲಕ ಎಲ್ಲರಿಗೂ ಸಾವಿನಲ್ಲೂ ಘನತೆಯ ಅಗತ್ಯವನ್ನು ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ: “ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

“ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....