Homeಮುಖಪುಟಬಿಬಿಸಿ 2024ರ ಸ್ಪೂರ್ತಿದಾಯಕ ಮಹಿಳೆ ಪಟ್ಟಿ | ಭಾರತದ ವಿನೇಶ್ ಫೋಗಟ್ ಸೇರಿ ಮೂವರಿಗೆ ಸ್ಥಾನ

ಬಿಬಿಸಿ 2024ರ ಸ್ಪೂರ್ತಿದಾಯಕ ಮಹಿಳೆ ಪಟ್ಟಿ | ಭಾರತದ ವಿನೇಶ್ ಫೋಗಟ್ ಸೇರಿ ಮೂವರಿಗೆ ಸ್ಥಾನ

- Advertisement -
- Advertisement -

ಬಿಬಿಸಿ 2024ರ ಅತ್ಯಂತ ಪ್ರಭಾವಶಾಲಿ ಮತ್ತು ಸ್ಪೂರ್ತಿದಾಯಕ 100 ಮಹಿಳೆಯರ ಪಟ್ಟಿಯಲ್ಲಿ ಭಾರತದ ಮೂವರು ಸ್ಥಾನ ಪಡೆದಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಕೊಡುಗೆ ನೀಡಿರುವ 100 ಪ್ರಮುಖ ಮಹಿಳೆಯರ ಈ ಪಟ್ಟಿಯಲ್ಲಿ ಭಾರತದ ಸಾಮಾಜಿಕ ಹೋರಾಟಗಾರ್ತಿ ಅರುಣಾ ರಾಯ್, ಕುಸ್ತಿಪಟು-ರಾಜಕಾರಣಿ ವಿನೇಶ್ ಫೋಗಟ್ ಮತ್ತು ಅಂತ್ಯಕ್ರಿಯೆಯ ಪ್ರವರ್ತಕಿ ಪೂಜಾ ಶರ್ಮಾ ಕಾಣಿಸಿಕೊಂಡಿದ್ದಾರೆ

ಅರುಣಾ ರಾಯ್ ಅವರು ಸರ್ಕಾರಿ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವಕ್ಕಾಗಿ ಹೋರಾಟ ಮಾಡುತ್ತಿದ್ದು, ಜೊತೆಗೆ ಸಾಮಾಜಿಕ ನ್ಯಾಯ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ಕೂಡಾ ಕೆಲಸ ಮಾಡುತ್ತಿದ್ದಾರೆ. ಇತ್ತಿಚೆಗಷ್ಟೆ ಶಾಸಕಿಯಾಗಿ ಆಯ್ಕೆಯಾದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಮಹಿಳಾ ಹಕ್ಕುಗಳಿಗಾಗಿ ಮತ್ತು ಮಹಿಳಾ ಕುಸ್ತಿಪಟುಗಳ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಅಂತ್ಯಕ್ರಿಯೆಯ ವಿಧಿಗಳಿಗೆ ಹೊಸ ವಿಧಾನವನ್ನು ಪ್ರವರ್ತಿಸಿದ ಪೂಜಾ ಶರ್ಮಾ, ಸಾವು ಮತ್ತು ಶೋಕವನ್ನು ಸುತ್ತುವರೆದಿರುವ ಸಾಮಾಜಿಕ ನಿಯಮಗಳು ಮತ್ತು ಆಚರಣೆಗಳನ್ನು ಮರುವ್ಯಾಖ್ಯಾನಿಸುವ ಕೆಲಸವನ್ನು ಮಾಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಬಿಸಿ 2024ರ 100 ಮಹಿಳೆಯರ ಪಟ್ಟಿಯಲ್ಲಿ ಗಗನಯಾತ್ರಿ ಸುನೀತಾ ವಿಲಿಯಮ್ಸ್, ಹಾಲಿವುಡ್ ತಾರೆ ಶರೋನ್ ಸ್ಟೋನ್, ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ನಾಡಿಯಾ ಮುರಾದ್ ಮತ್ತು ಹವಾಮಾನ ಹೋರಾಟಗಾರ್ತಿ ಅಡೆನಿಕೆ ಒಲಾಡೋಸು ಅವರಂತಹ ಅಂತರರಾಷ್ಟ್ರೀಯ ವ್ಯಕ್ತಿಗಳು ಕೂಡಾ ಇದ್ದಾರೆ.

ಅರುಣಾ ರಾಯ್

ಅರುಣಾ ರಾಯ್ ಭಾರತದ ಅತ್ಯಂತ ಪ್ರಭಾವಿ ಸಾಮಾಜಿಕ ಹೋರಾಟಗಾರರಾಗಿದ್ದು ಮತ್ತು ಮಾಹಿತಿ ಹಕ್ಕು (ಆರ್‌ಟಿಐ) ಆಂದೋಲನದ ಪ್ರಮುಖ ವ್ಯಕ್ತಿಯಾಗಿದ್ದಾರೆ. 2005 ರಲ್ಲಿ ಜಾರಿಗೆ ಬಂದ ಮಾಹಿತಿ ಹಕ್ಕು ಕಾಯಿದೆಯ ರಚನೆಯಲ್ಲಿ ಅವರ ಪ್ರಯತ್ನಗಳು ಪ್ರಮುಖ ಪಾತ್ರವನ್ನು ವಹಿಸಿದ್ದವು. ಅರುಣಾ ಅವರು ಮಾಜಿ ಐಎಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಪೂರ್ಣ ಕಾಲಿಕ ಸಾಮಾಜಿಕ ಹೋರಾಟಗಾರ್ತಿಯಾಗಿದ್ದಾರೆ. ತನ್ನ ಪ್ರತಿಷ್ಠಿತ ಸರ್ಕಾರಿ ಕೆಲಸವನ್ನು ತೊರೆದ ನಂತರ, ಅವರು ಸುಮಾರು ನಾಲ್ಕು ದಶಕಗಳ ಕಾಲ ಭಾರತದಾದ್ಯಂತ ಗ್ರಾಮೀಣ ಸಮುದಾಯಗಳೊಂದಿಗೆ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಕೆಲಸಗಳಲ್ಲಿ ಪಾರದರ್ಶಕತೆ ಮತ್ತು ತಳಮಟ್ಟದಲ್ಲಿ ಇರುವವರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದಾರೆ.

ವಿನೇಶ್ ಫೋಗಟ್

ಮೂರು ಬಾರಿ ಒಲಿಂಪಿಯನ್ ಆಗಿರುವ ಮತ್ತು ಭಾರತದ ಅತ್ಯಂತ ಖ್ಯಾತ ಕುಸ್ತಿಪಟುಗಳಲ್ಲಿ ಒಬ್ಬರಾದ ವಿನೇಶ್ ಫೋಗಟ್ ಅವರು, ತಮ್ಮ ಕ್ರೀಡಾ ಸಾಧನೆಗಳಿಗೆ ಮಾತ್ರವಲ್ಲದೆ ಕ್ರೀಡೆಯಲ್ಲಿನ ಲಿಂಗ ಪಕ್ಷಪಾತದ ವಿರುದ್ಧದ ಹೋರಾಟಗಳಿಗೂ ಹೆಸರುವಾಸಿಯಾಗಿದ್ದಾರೆ. ಅವರು ವಿಶ್ವ ಚಾಂಪಿಯನ್‌ಶಿಪ್, ಕಾಮನ್‌ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್‌ಗಳಲ್ಲಿ ಪದಕಗಳನ್ನು ಗೆದ್ದಿದ್ದಾರೆ. 2024 ಒಲಿಂಪಿಕ್ಸ್‌ನಲ್ಲಿ ಫೈನಲ್ ತಲುಪಿದ್ದ ಅವರು, ಕುಸ್ತಿಯಲ್ಲಿ ಫೈನಲ್ ತಲುಪಿದ ಭಾರತದ ಮೊದಲ ಮಹಿಳಾ ಕುಸ್ತಿಪಟು ಎಂಬ ಇತಿಹಾಸವನ್ನು ನಿರ್ಮಿಸಿದ್ದರು.

ಮಹಿಳಾ ಹಕ್ಕುಗಳ ಪ್ರಮುಖ ಹೋರಾಟಗಾರ್ತಿಯಾದ ಅವರ ಭಾರತೀಯ ಕುಸ್ತಿ ಫಡರೇಷನ್‌ನಲ್ಲಿ, ಅದರ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕ್ರೀಡಾಪಟುಗಳಿಗೆ ನೀಡುತ್ತಿದ್ದ ಲೈಂಗಿಕ ಕಿರುಕುಳವನ್ನು ವಿರೋಧಿಸಿ ನಡೆಸಲಾಗಿದ್ದ ಭಾರಿ ಪ್ರತಿಭಟನೆಯ ನೇತೃತ್ವ ವಹಿಸಿದ್ದವರಲ್ಲಿ ಒಬ್ಬರಾಗಿದ್ದರು. ಈ ಪ್ರತಿಭಟನೆಯು ವಿಶ್ವ ಗಮನ ಸೆಳೆಯಿತು.

ಪೂಜಾ ಶರ್ಮಾ

ಪೂಜಾ ಶರ್ಮಾ ಅವರು ಕಳೆದ ಮೂರು ವರ್ಷಗಳಿಂದ ದೆಹಲಿಯಲ್ಲಿ ಯಾವುದೆ ವಾರಿಸುದಾರರು ಇಲ್ಲದ ಮೃತದೇಹಗಳಿಗೆ ಅಂತಿಮ ವಿಧಿಗಳನ್ನು ಮಾಡುವ ಮೂಲಕ ಸಮಾಜ ಸೇವೆ ಮಾಡುವವರಾಗಿದ್ದಾರೆ. ಅವರ ಈ ಪ್ರಯಾಣವು 2022 ರಲ್ಲಿ ತನ್ನ ಮುಂದೆಯೆ ಬರ್ಬರವಾಗಿ ಹತ್ಯೆಗೀಡಾದ ತನ್ನ ಸಹೋದರ ದುರಂತದೊಂದಿಗೆ ಪ್ರಾರಂಭವಾಯಿತು. ಈ ವೇಳೆ ಅವರ ಸಹೋದರನ ಅಂತ್ಯಕ್ರಿಯೆಗೆ ಸಹಾಯ ಮಾಡಲು ಯಾರೂ ಮುಂದೆ ಬರಲಿಲ್ಲ. ಅವರ ಈ ಅನುಭವವು ಏಕಾಂಗಿಯಾಗಿ ಸಾಯುವವರಿಗೆ ಸಹಾಯ ಮಾಡುವ ಪ್ರತಿಜ್ಞೆ ಮಾಡುವಂತೆ ಮಾಡಿತು.

ಅದಾಗ್ಯೂ, ಪೂಜಾ ಅವರ ಈ ಕೆಲಸವು ಅವರ ಸಮುದಾಯ ಮತ್ತು ಧಾರ್ಮಿಕ ಜನರಿಂದ ಭಾರಿ ಪ್ರತಿರೋಧ ಎದುರಿಸಿತು. ಸಾಂಪ್ರದಾಯಿಕವಾಗಿ, ಹಿಂದೂ ಧರ್ಮದಲ್ಲಿ ಅಂತ್ಯಕ್ರಿಯೆಯ ವಿಧಿಗಳನ್ನು ಪುರುಷರಿಗೆ ಮೀಸಲಿಡಲಾಗಿದೆ. ಇದರ ಹೊರತಾಗಿಯೂ, ಅವರು ವಿವಿಧ ಧಾರ್ಮಿಕ ಹಿನ್ನೆಲೆಯ 4,000 ಕ್ಕೂ ಹೆಚ್ಚು ಜನರಿಗೆ ಅಂತಿಮ ವಿಧಿಗಳನ್ನು ನೆರವೇರಿಸಿದ್ದಾರೆ. ಈ ಮೂಲಕ ಎಲ್ಲರಿಗೂ ಸಾವಿನಲ್ಲೂ ಘನತೆಯ ಅಗತ್ಯವನ್ನು ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ: “ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

“ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...