Homeಮುಖಪುಟಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಇಮೇಜ್‌ಗೆ ಧಕ್ಕೆ ತಂದಿದ್ದಕ್ಕೆ ಬಿಬಿಸಿ ಕಚೇರಿಗಳ ಮೇಲೆ ದಾಳಿ: ದಿಗ್ವಿಜಯ ಸಿಂಗ್

ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಇಮೇಜ್‌ಗೆ ಧಕ್ಕೆ ತಂದಿದ್ದಕ್ಕೆ ಬಿಬಿಸಿ ಕಚೇರಿಗಳ ಮೇಲೆ ದಾಳಿ: ದಿಗ್ವಿಜಯ ಸಿಂಗ್

- Advertisement -
- Advertisement -

ಮಂಗಳವಾರ ಬೆಳಿಗ್ಗೆ ಮುಂಬೈ ಮತ್ತು ದೆಹಲಿಯಲ್ಲಿರುವ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಮೀಕ್ಷೆಯ ನೆಪದಲ್ಲಿ ದಾಳಿ ಮಾಡಿದ್ದಾರೆ. ನೀವು ಅಂತರಾಷ್ಟೀಯ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಇರುವ ಇಮೇಜ್‌ನ್ನು ಕೆಡಸಿದ್ದಕ್ಕಾಗಿ ನಿಮ್ಮ ಮೇಲೆ ಸಮೀಕ್ಷೆಯ ನೆಪದಲ್ಲಿ ದಾಳಿ ಮಾಡಲಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಹೇಳಿದ್ದಾರೆ.

“ಬಹುಶಃ, ಬಿಬಿಸಿಯ 100 ವರ್ಷಗಳ ಇತಿಹಾಸದಲ್ಲಿ ವಿಶ್ವದ ಯಾವ ಭಾಗದಲ್ಲೂ ಇಂತಹ ದಾಳಿಯನ್ನು ಎದುರಿಸಿಲ್ಲ, ಇದೇ ಮೊದಲ ಬಾರಿಗೆ ಎಂದೆನಿಸುತ್ತದೆ. ಅವರು ಮಾಡಿದ ಏಕೈಕ ತಪ್ಪು ಎಂದರೆ, 2002ರ ಗುಜರಾತ್ ಗಲಭೆಗಳ ಕುರಿತು ಸಾಕ್ಷ್ಯಚಿತ್ರವನ್ನು ಮಾಡಿದ್ದು.. ಅದರಲ್ಲಿ ಅವರು ಸತ್ಯ ಹೇಳಿದ್ದಾರೆ. ಇದರಿಂದ ಪ್ರಧಾನಿ ನರೇಂದ್ರ ಮೋದಿಯವರ ಅಂತರಾಷ್ಟ್ರೀಯ ಇಮೇಜ್‌ಗೆ ಧಕ್ಕೆಯಾಗುವುದಿಲ್ಲವೇ?” ಎಂದು ಕೇಳಿದ್ದಾರೆ.

ಬಿಬಿಸಿ ಕಚೇರಿಗಳ ಮೇಲೆ ಮಂಗಳವಾರ ಆದಾಯ ತೆರಿಗೆ ಅಧಿಕಾರಿಗಳು ಸಮೀಕ್ಷೆಯ ಹೆಸರಿನಲ್ಲಿ ದಾಳಿ ನಡೆಸಿರುವುದನ್ನು ಇದು ”ಬೆದರಿಕೆ ತಂತ್ರ” ಎಂದು ಕಾಂಗ್ರೆಸ್ ಬಣ್ಣಿಸಿದೆ. ಮೋದಿ ಸರ್ಕಾರ ಟೀಕೆಗಳಿಗೆ ಹೆದರಿ ಈ ಕ್ರಮ ತೆಗೆದುಕೊಂಡಿದೆ ಎಂಬುದನ್ನು ಇದು ತೋರಿಸುತ್ತದೆ ಎಂದು ಆರೋಪಿಸಿದೆ.

ಇದನ್ನೂ ಓದಿ: ಮಾಧ್ಯಮಗಳ ಮೇಲೆ ಬೆದರಿಕೆ ಸಲ್ಲದು: ಬಿಬಿಸಿ ಮೇಲಿನ ಐಟಿ ದಾಳಿಗೆ ಎಡಿಟರ್ಸ್ ಗಿಲ್ಡ್ ಖಂಡನೆ

ತೆರಿಗೆ ವಂಚನೆ ಆರೋಪದ ತನಿಖೆಯ ಭಾಗವಾಗಿ ಐಟಿ ಇಲಾಖೆ ಮಂಗಳವಾರ ದೆಹಲಿ, ಮುಂಬೈ ಮತ್ತು ಇತರ ಎರಡು ಸಂಪರ್ಕಿತ ಸ್ಥಳಗಳಲ್ಲಿನ ಬಿಬಿಸಿ ಕಚೇರಿಗಳಲ್ಲಿ ಹತ್ತು ಗಂಟೆಗಳ ಕಾಲ ಸಮೀಕ್ಷೆ ಕಾರ್ಯಾಚರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಪಕ್ಷದ ಅನೇಕ ನಾಯಕರು ಮೋದಿ ಸರ್ಕರದ ವಿರುದ್ದ ಟೀಕೆಗಳನ್ನು ಮಾಡಿದ್ದಾರೆ. ಸಂಸದೆ ಮಹುವಾ ಮೊಯಿತ್ರಾ ಅವರು ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ. ”ಈ ವ್ಯಾಲೆಂಟೈನ್ ಡೇ ಸಮೀಕ್ಷೆಗಳನ್ನು ಆದಾಯ ತೆರಿಗೆ ಇಲಾಖೆ, SEBI ಮತ್ತು ಜಾರಿ ನಿರ್ದೇಶನಾಲಯ ಏಜೆನ್ಸಿಗಳು ಮಾಡುವುದರಿಂದ ಸರ್ಕಾರದ ಅತ್ಯಂತ ಮೌಲ್ಯಯುತ ಪ್ರಿಯತಮೆ‍ಯಾಗಿರುವ ‘ಮಿಸ್ಟರ್ ಎ’ ಮೇಲೆ ಹೇಗೆ ನಡೆಸುತ್ತದೆ?” ಎಂದು ಟ್ವೀಟ್ ಮಾಡುವ ಮೂಲಕ, ಅದಾನಿಯ ಬಗ್ಗೆ ಸರ್ಕಾರ ಮೌನವಾಗಿರುವುದರ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ…

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇಲ್ಲಿ ನಾವು ಅದಾನಿ ವಿಚಾರದಲ್ಲಿ ಜೆಪಿಸಿಗೆ ಬೇಡಿಕೆ ಇಡುತ್ತಿದ್ದೇವೆ. ಆದರೆ ಸರ್ಕಾರ ಬಿಬಿಸಿಯ ಬೆನ್ನುಬಿದ್ದಿದೆ. ”ವಿನಾಶ ಕಾಲಕ್ಕೆ ವಿಪರೀತ ಬುದ್ದಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...