Homeಮುಖಪುಟಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಇಮೇಜ್‌ಗೆ ಧಕ್ಕೆ ತಂದಿದ್ದಕ್ಕೆ ಬಿಬಿಸಿ ಕಚೇರಿಗಳ ಮೇಲೆ ದಾಳಿ: ದಿಗ್ವಿಜಯ ಸಿಂಗ್

ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಇಮೇಜ್‌ಗೆ ಧಕ್ಕೆ ತಂದಿದ್ದಕ್ಕೆ ಬಿಬಿಸಿ ಕಚೇರಿಗಳ ಮೇಲೆ ದಾಳಿ: ದಿಗ್ವಿಜಯ ಸಿಂಗ್

- Advertisement -
- Advertisement -

ಮಂಗಳವಾರ ಬೆಳಿಗ್ಗೆ ಮುಂಬೈ ಮತ್ತು ದೆಹಲಿಯಲ್ಲಿರುವ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಮೀಕ್ಷೆಯ ನೆಪದಲ್ಲಿ ದಾಳಿ ಮಾಡಿದ್ದಾರೆ. ನೀವು ಅಂತರಾಷ್ಟೀಯ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಇರುವ ಇಮೇಜ್‌ನ್ನು ಕೆಡಸಿದ್ದಕ್ಕಾಗಿ ನಿಮ್ಮ ಮೇಲೆ ಸಮೀಕ್ಷೆಯ ನೆಪದಲ್ಲಿ ದಾಳಿ ಮಾಡಲಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಹೇಳಿದ್ದಾರೆ.

“ಬಹುಶಃ, ಬಿಬಿಸಿಯ 100 ವರ್ಷಗಳ ಇತಿಹಾಸದಲ್ಲಿ ವಿಶ್ವದ ಯಾವ ಭಾಗದಲ್ಲೂ ಇಂತಹ ದಾಳಿಯನ್ನು ಎದುರಿಸಿಲ್ಲ, ಇದೇ ಮೊದಲ ಬಾರಿಗೆ ಎಂದೆನಿಸುತ್ತದೆ. ಅವರು ಮಾಡಿದ ಏಕೈಕ ತಪ್ಪು ಎಂದರೆ, 2002ರ ಗುಜರಾತ್ ಗಲಭೆಗಳ ಕುರಿತು ಸಾಕ್ಷ್ಯಚಿತ್ರವನ್ನು ಮಾಡಿದ್ದು.. ಅದರಲ್ಲಿ ಅವರು ಸತ್ಯ ಹೇಳಿದ್ದಾರೆ. ಇದರಿಂದ ಪ್ರಧಾನಿ ನರೇಂದ್ರ ಮೋದಿಯವರ ಅಂತರಾಷ್ಟ್ರೀಯ ಇಮೇಜ್‌ಗೆ ಧಕ್ಕೆಯಾಗುವುದಿಲ್ಲವೇ?” ಎಂದು ಕೇಳಿದ್ದಾರೆ.

ಬಿಬಿಸಿ ಕಚೇರಿಗಳ ಮೇಲೆ ಮಂಗಳವಾರ ಆದಾಯ ತೆರಿಗೆ ಅಧಿಕಾರಿಗಳು ಸಮೀಕ್ಷೆಯ ಹೆಸರಿನಲ್ಲಿ ದಾಳಿ ನಡೆಸಿರುವುದನ್ನು ಇದು ”ಬೆದರಿಕೆ ತಂತ್ರ” ಎಂದು ಕಾಂಗ್ರೆಸ್ ಬಣ್ಣಿಸಿದೆ. ಮೋದಿ ಸರ್ಕಾರ ಟೀಕೆಗಳಿಗೆ ಹೆದರಿ ಈ ಕ್ರಮ ತೆಗೆದುಕೊಂಡಿದೆ ಎಂಬುದನ್ನು ಇದು ತೋರಿಸುತ್ತದೆ ಎಂದು ಆರೋಪಿಸಿದೆ.

ಇದನ್ನೂ ಓದಿ: ಮಾಧ್ಯಮಗಳ ಮೇಲೆ ಬೆದರಿಕೆ ಸಲ್ಲದು: ಬಿಬಿಸಿ ಮೇಲಿನ ಐಟಿ ದಾಳಿಗೆ ಎಡಿಟರ್ಸ್ ಗಿಲ್ಡ್ ಖಂಡನೆ

ತೆರಿಗೆ ವಂಚನೆ ಆರೋಪದ ತನಿಖೆಯ ಭಾಗವಾಗಿ ಐಟಿ ಇಲಾಖೆ ಮಂಗಳವಾರ ದೆಹಲಿ, ಮುಂಬೈ ಮತ್ತು ಇತರ ಎರಡು ಸಂಪರ್ಕಿತ ಸ್ಥಳಗಳಲ್ಲಿನ ಬಿಬಿಸಿ ಕಚೇರಿಗಳಲ್ಲಿ ಹತ್ತು ಗಂಟೆಗಳ ಕಾಲ ಸಮೀಕ್ಷೆ ಕಾರ್ಯಾಚರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಪಕ್ಷದ ಅನೇಕ ನಾಯಕರು ಮೋದಿ ಸರ್ಕರದ ವಿರುದ್ದ ಟೀಕೆಗಳನ್ನು ಮಾಡಿದ್ದಾರೆ. ಸಂಸದೆ ಮಹುವಾ ಮೊಯಿತ್ರಾ ಅವರು ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ. ”ಈ ವ್ಯಾಲೆಂಟೈನ್ ಡೇ ಸಮೀಕ್ಷೆಗಳನ್ನು ಆದಾಯ ತೆರಿಗೆ ಇಲಾಖೆ, SEBI ಮತ್ತು ಜಾರಿ ನಿರ್ದೇಶನಾಲಯ ಏಜೆನ್ಸಿಗಳು ಮಾಡುವುದರಿಂದ ಸರ್ಕಾರದ ಅತ್ಯಂತ ಮೌಲ್ಯಯುತ ಪ್ರಿಯತಮೆ‍ಯಾಗಿರುವ ‘ಮಿಸ್ಟರ್ ಎ’ ಮೇಲೆ ಹೇಗೆ ನಡೆಸುತ್ತದೆ?” ಎಂದು ಟ್ವೀಟ್ ಮಾಡುವ ಮೂಲಕ, ಅದಾನಿಯ ಬಗ್ಗೆ ಸರ್ಕಾರ ಮೌನವಾಗಿರುವುದರ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ…

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇಲ್ಲಿ ನಾವು ಅದಾನಿ ವಿಚಾರದಲ್ಲಿ ಜೆಪಿಸಿಗೆ ಬೇಡಿಕೆ ಇಡುತ್ತಿದ್ದೇವೆ. ಆದರೆ ಸರ್ಕಾರ ಬಿಬಿಸಿಯ ಬೆನ್ನುಬಿದ್ದಿದೆ. ”ವಿನಾಶ ಕಾಲಕ್ಕೆ ವಿಪರೀತ ಬುದ್ದಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...