Homeಕರ್ನಾಟಕಗುರುತಿನ ಚೀಟಿ ನವೀಕರಣಕ್ಕೆ ಆಗ್ರಹಿಸಿ ಬೀದಿ ವ್ಯಾಪಾರಿಗಳಿಂದ ‘ಬಿಬಿಎಂಪಿ ಚಲೋ’

ಗುರುತಿನ ಚೀಟಿ ನವೀಕರಣಕ್ಕೆ ಆಗ್ರಹಿಸಿ ಬೀದಿ ವ್ಯಾಪಾರಿಗಳಿಂದ ‘ಬಿಬಿಎಂಪಿ ಚಲೋ’

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಬೀದಿ ವ್ಯಾಪಾರಿಗಳಿಗೆ ವಿತರಿಸುವ ಗುರುತಿನ ಚೀಟಿ ಹಾಗೂ ವ್ಯಾಪಾರ ಪ್ರಮಾಣ ಪತ್ರ ನವೀಕರಣ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟದಿಂದ ಮಂಗಳವಾರ ‘ಬಿಬಿಎಂಪಿ ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಯನಗರ ಬಿಡಿಎ ಕಾಂಪ್ಲೆಕ್ಸ್, ಕೆಆರ್ ಮಾರ್ಕೆಟ್, ಬನಶಂಕರಿ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಬೀದಿ ಬದಿ ವ್ಯಾಪಾರ ಮಾಡುತ್ತಿರುವರಿಗೆ ಬಿಬಿಎಂಪಿ ನೀಡಿರುವ ಗುರುತಿನ ಚೀಟಿ ಕಾಲಾವಧಿ (ಐದು ವರ್ಷ) ಮುಗಿದಿದ್ದು, ಇದೀಗ ವ್ಯಾಪಾರ ಮಾಡದಂತೆ ಅಧಿಕಾರಿಗಳು ಹಾಗೂ ಮಾರ್ಷಲ್‌ಗಳು ವ್ಯಾಪಾರಿಗಳಿಗೆ ತೊಂದರೆ ಕೊಡುತ್ತಿದ್ದಾರೆ. ಆದ್ದರಿಂದ, ಕೂಡಲೇ ಬೀದಿ ವ್ಯಪಾರಿಗಳ ಸರ್ವೆ ನಡೆಸಿ ಗುರುತಿನ ಚೀಟಿ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟಿಸಲು ಮುಂದಾಗಿದ್ದಾರೆ.

ಈ ಕುರಿತು ‘ನಾನು ಗೌರಿ’ ಪ್ರತಿನಿಧಿ ಜತೆಗೆ ಮಾತನಾಡಿದ ‘ಜಿಲ್ಲಾ ಬೀದಿ ವ್ಯಾಪಾರಿಗಳ ಸಂಘ’ದ ಅಧ್ಯಕ್ಷ ಬಾಬು. ‘ಜಯನಗರ ಬಿಬಿಎಂಪಿ ಕಾಂಪ್ಲೆಕ್ಸ್ ಸೇರಿದಂತೆ ಕೂಡಲೇ ವಿವಿಧ ಪ್ರದೇಶಗಳಲ್ಲಿ ವ್ಯಾಪಾರಿಗಳ ಎತ್ತಂಗಡಿ ಮಾಡುತ್ತಿರುವುದನ್ನು ನಿಲ್ಲಿಸಬೇಕು. ಐದು ವರ್ಷಗಳ ಹಿಂದೆ ನೀಡಿದ್ದ ಗುರುತಿನ ಚೀಟಿ ಅವಧಿ ಕಳೆದ ಫೆಬ್ರವರಿಯಲ್ಲೇ ಮುಗಿದಿದ್ದು, 2022ರ ಡಿಸೆಂಬರ್‌ನಲ್ಲಿ ನವೀಕರಣಕ್ಕೆ ಮನವಿ ಪತ್ರ ಕೊಟ್ಟಿದ್ದರೂ ಅಧಿಕಾರಿಗಳು ಗಮನ ಹರಿಸಿಲ್ಲ’ ಎಂದರು.

ಜನಯನಗರ ಕಾಂಪ್ಲೆಕ್ಸ್‌ ಬಳಿಯಲ್ಲಿ ಬಿಬಿಎಂಪಿ ನಿಯೋಜಿಸಿರುವ ಮಾರ್ಷಲ್‌ಗಳು

‘ಜಯನಗರ 4ನೇ ಬ್ಲಾಕ್‌ನಲ್ಲಿರುವ ಕಾಂಪ್ಲೆಕ್ಸ್ ಸುತ್ತಮುತ್ತ ಇದ್ದ ಬೀದಿ ವ್ಯಾಪಾರಿಗಳನ್ನು ಒಂದು ವರ್ಷದ ಮುಂಚೆಯೇ ಅಲ್ಲಿಂದ ಎತ್ತಂಗಡಿ ಮಾಡಿಸಿದ್ದಾರೆ. ಅಂಗಡಿ ತೆರವುಗೊಳಿಸಿದ ನಂತರ ಕೈನಲ್ಲಿ ವಸ್ತುಗಳನ್ನು ಹಿಡಿದು ಮಾರಾಟ ಮಾಡಲು ಸಹ ಅಧಿಕಾರಿಗಳು ಹಾಗೂ ಮಾರ್ಷಲ್‌ಗಳು ಅಡ್ಡಿಪಡಿಸುತ್ತಿದ್ದಾರೆ. ಅವರನ್ನು ಮುಂದೆ ಬಿಟ್ಟು ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ. ಕೈನಲ್ಲಿ ವಸ್ತು ಹಿಡಿದು ವ್ಯಾಪಾರ ಮಾಡುವವರನ್ನು ಓಡಿಸುತ್ತಾರೆ. ಪ್ರತಿದಿನ ಮಾರ್ಷಲ್‌ಗಳ ಜತೆಗೆ ಘರ್ಷಣೆ ನಡೆಯುತ್ತಲೇ ಇರುತ್ತದೆ’ ಎಂದರು.

‘ಬಿಬಿಎಂಪಿ ಕೂಡಲೇ ಹೊಸದಾಗಿ ಬೀದಿ ವ್ಯಾಪಾರಿಗಳ ಸಮೀಕ್ಷೆ ಮಾಡಬೇಕು; ಅದನ್ನು ಯಾವುದೇ ಮೂರನೇ ವ್ಯಕ್ತಿ ಸಂಸ್ಥೆಗಳಿಗೆ ವಹಿಸಬಾರದು. ಐದು ವರ್ಷಗಳ ಹಿಂದೆ ಸಮೀಕ್ಷೆ ಮಾಡಿ ಗುರುತಿನ ಚೀಟಿ ನೀಡಲಾಗಿದ್ದು, ಫೆಬ್ರವರಿಯಲ್ಲೇ ಅದರ ಅವಧಿ ಮುಗಿದಿದೆ. ಸರ್ಕಾರದ ಸೌಲಭ್ಯಗಳಿಗಿಂತ ನಮಗೆ ಭದ್ರತೆ ಮುಖ್ಯವಾಗಿದ್ದು, ನಮಗೆ ಆದಷ್ಟು ಬೇಗ ಗುರುತಿನ ಚೀಟಿ ಕೊಡಬೇಕು. ಅದಕ್ಕಾಗಿ ಬಿಬಿಎಂಪಿ ಚಲೋ ಹಮ್ಮಿಕೊಂಡಿದ್ದೇವೆ. ಬೀದಿ ವ್ಯಾಪಾರಿಗಳನ್ನು ಸಂಘಟಿಸುತ್ತಿದ್ದೇವೆ’ ಎಂದು ಮಾಹಿತಿ ನೀಡಿದರು.

ಬೀದಿ ವ್ಯಾಪಾರಿಗಳ ಸಂಘ ಕೊಟ್ಟಿರುವ ಮನವಿ ಪತ್ರ

ಬೀದಿ ವ್ಯಾಪಾರ ಸಂವಿಧಾನ ಕೊಟ್ಟಿರುವ ಹಕ್ಕು:

‘ಬೆಂಗಳೂರಿನಲ್ಲಿ ಎಲ್ಲರಿಗೂ ಬದುಕುವ ಹಕ್ಕಿದ್ದು, ನಗರವನ್ನು ನಿರ್ಮಾಣ ಮಾಡಿರುವುದೆ ಶ್ರಮಿಕ ವರ್ಗ. ಬೀದಿಗಳಲ್ಲಿ ವ್ಯಾಪಾರ ಮಾಡುತ್ತಾ ನಮ್ಮ ಕುಟುಂಬಗಳನ್ನು ಸಾಕುವ ನಾವು, ಬೀದಿ-ರಸ್ತೆಗಳಲ್ಲಿ ಮಾರಾಟ ಮಾಡದಿದ್ದರೆ, ನಗರದ ಮಧ್ಯಮ ವರ್ಗದವರು ಮತ್ತು ಬಡವರು ಎಲ್ಲಿ ಹೋಗುತ್ತಾರೆ? ಎಲ್ಲರಿಗೂ ಆನ್‌ಲೈನ್, ಮಾಲ್‌ಗಳಲ್ಲಿ ಮತ್ತು ಮಾರ್ಟ್‌ಗಳಲ್ಲಿ ಕೊಳ್ಳಲು ಸಾಧ್ಯವೇ? ಇದನ್ನು ಸರ್ಕಾರಗಳು ಹಾಗೂ ಶ್ರೀಮಂತರು ಅರ್ಥ ಮಾಡಿಕೊಳ್ಳಲು ಏಕೆ ಕಷ್ಟ ಪಡುತ್ತಿದ್ದಾರೆ’ ಎಂದು ಬೀದಿ ವ್ಯಾಪಾರಿಗಳ ಸಂಘಟನೆ ಪ್ರಶ್ನಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆ, ‘ಸಂವಿಧಾನವೆ ನಮಗೆ ಬೀದಿ ವ್ಯಾಪಾರ ಮಾಡುವ ಹಕ್ಕು ಕೊಟ್ಟಿದೆ. ಬೀದಿ ವ್ಯಾಪಾರಿಗಳ ಜೀವನೋಪಾಯದ ರಕ್ಷಣೆ ಮತ್ತು ನಿಯಂತ್ರಣ ಕಾಯ್ದೆ-2014 ಜಾರಿಗೊಳಿಸಲಾಗಿದೆ. ಬೀದಿಯಲ್ಲಿ ವ್ಯಾಪಾರ ಮಾಡುವುದು ನಮ್ಮ ಹಕ್ಕು, ಬೀದಿಬದಿ ವ್ಯಾಪಾರಸ್ಥರ ಹಕ್ಕುಗಳನ್ನು ರಕ್ಷಿಸಬೇಕೆಂದು ಹಲವಾರು ನ್ಯಾಯಾಲಯದ ತೀರ್ಪುಗಳು ಸಹ ಹೇಳಿರುತ್ತದೆ’ ಎಂದು ಹೇಳಿದೆ.

‘ಆದರೆ, ಬಿಬಿಎಂಪಿ ಕಾನೂನನ್ನು ಬಹಿರಂಗವಾಗಿ ಉಲ್ಲಂಘಿಸಿ ನಮ್ಮನ್ನು ಎತ್ತಂಗಡಿ ಮಾಡುತ್ತಿದೆ. ಸೆಪ್ಟೆಂಬರ್ 2017 ರಲ್ಲಿ ಬಿಬಿಎಂಪಿ ವತಿಯಿಂದ 20 ಸಾವಿರ ಬೀದಿ ವ್ಯಾಪಾರಿಗಳನ್ನು ಗುರುತಿಸಿ, ಅವರಿಗೆ ಗುರುತಿನ ಚೀಟಿ ಮತ್ತು ವ್ಯಾಪಾರದ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಬೆಂಗಳೂರಿನಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನರು ಬೀದಿ ವ್ಯಾಪಾರದ ಮೇಲೆ ಅವಲಂಬಿತರಾಗಿದ್ದಾರೆ. ಆದರೆ, ಉಳಿದ ವ್ಯಾಪಾರಿಗಳನ್ನು ಬಿಬಿಎಂಪಿ ಸಮೀಕ್ಷೆ ಒಳಗೊಳ್ಳಲಿಲ್ಲ. ಕಾನೂನಿನ ಪ್ರಕಾರ ಪ್ರತಿ 5 ವರ್ಷಕ್ಕೆ ಬೀದಿ ವ್ಯಾಪಾರಿಗಳ ಸಮೀಕ್ಷೆ ನಡೆಸಬೇಕು. ಈಗ 5 ವರ್ಷಗಳು ಕಳೆದಿದ್ದು, ಬಿಬಿಎಂಪಿಯು ಸಮೀಕ್ಷೆ ಶುರು ಮಾಡಲು ಮುಂದಾಗುತ್ತಿಲ್ಲ. ಮುಂಚೆ ನೀಡಿದ ಗುರುತಿನ ಚೀಟಿ ಹಾಗೂ ವ್ಯಾಪಾರದ ಪ್ರಮಾಣ ಪತ್ರದ ಸಿಂಧುತ್ವ ಮುಗಿದಿರುತ್ತದೆ. ಅದರ ನವೀಕರಣದ ಕುರಿತು ಬಿಬಿಎಂಪಿಯು ಯಾವುದೇ ರೀತಿಯ ಕ್ರಮ ವಹಿಸುತ್ತಿಲ್ಲ’ ಎಂದು ಅಳಲು ತೋಡಿಕೊಂಡಿದ್ದಾರೆ.

‘ಬೆಂಗಳೂರು ನಗರ ಅತಿವೇಗದಲ್ಲಿ ಬೆಳೆಯುತ್ತಿದೆ. ಮೆಟ್ರೋ, ಮಾಲುಗಳು, ಸ್ಮಾರ್ಟ್ ಫುಟ್ಪಾತ್ ಗಳು, ಕ್ಲೀನ್ ಸಿಟಿಯಾಗಿ ಹೆಸರುಗಳಿಸುತ್ತಿದೆ. ಈ ‘ಬ್ರಾಂಡ್ ಬೆಂಗಳೂರು’ನಲ್ಲಿ ಬೀದಿ ವ್ಯಾಪಾರಿಗಳಿಗೆ ಜಾಗವಿಲ್ಲವೇ? ಕಡಲೇಕಾಯಿ ಪರಿಷೆ, ಚಿತ್ರಸಂತೆ ಸೇರಿದಂತೆ ಬೆಂಗಳೂರಿನಲ್ಲಿ ಹೆಸರಾಂತ ಮೇಳಗಳು ನಡೆಯುತ್ತವೆ. ಇಲ್ಲಿ ಮಾಧ್ಯಮ ವರ್ಗದವರು ಮತ್ತು ಶ್ರೀಮಂತರು ಹೋಗುತ್ತಾರೆ. ಆದರೆ, ದಿನನಿತ್ಯ ತಮ್ಮ ಹೊಟ್ಟೆಪಾಡಿಗಾಗಿ ಬೀದಿ ವ್ಯಾಪಾರ ಮಾಡುವವರನ್ನು ಏಕೆ ಭಿನ್ನವಾಗಿ ಪರಿಗಣಿಸಲಾಗುತ್ತದೆ? ಬೀದಿ ವ್ಯಾಪಾರಿಗಳನ್ನು ಒಳಗೊಳ್ಳದಿದ್ದರೆ, ಇದು ಎಂಥಹ ನಗರವಾಗಿ ಬೆಳೆಯಬೇಕು ಎಂದು ನಾವೆಲ್ಲರೂ ಉತ್ತರಿಸಬೇಕಾಗಿದೆ’ ಎಂದು ಹೇಳಿದೆ.

ಜಯನಗರದಲ್ಲಿ ಬೀದಿ ವ್ಯಾಪಾರಿಗಳ ಅಂಗಡಿಗಳನ್ನು ತೆರವುಗೊಳಿಸುತ್ತಿರುವ ಬಿಬಿಎಂಪಿ ನೌಕರರು.

ಬೀದಿ ವ್ಯಾಪಾರಿಗಳ ಬೇಡಿಕೆಗಳೇನು?

1. ಜಯನಗರ, ಮಹದೇವಪುರ, ಮಲ್ಲೇಶ್ವರ, ಬನಶಂಕರಿ, ಮೂಡಲಪಾಳ್ಯ ಹಾಗು ಇತರೆ ಪ್ರದೇಶಗಳಲ್ಲಿ ಎತ್ತಂಗಡಿ ಮಾಡಿದ ವ್ಯಾಪಾರಿಗಳಿಗೆ ಅದೇ ಸ್ಥಳದಲ್ಲಿ ವ್ಯಾಪಾರ ಮಾಡುವಂತೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಇಷ್ಟು ದಿವಸ ಅವರಿಗೆ ಆದ ನಷ್ಟಕ್ಕೆ ಪಾಲಿಕೆ ಪರಿಹಾರ ಕೊಡಬೇಕು.

2. ಪಟ್ಟಣ ವ್ಯಾಪಾರ ಸಮಿತಿ ಅಡಿಯಲ್ಲಿ ಪ್ರತಿ ಬೀದಿ ವ್ಯಾಪಾರಿಗಳ ಸಮೀಕ್ಷೆ ನಡೆಯಬೇಕು.

3. ಸಮೀಕ್ಷೆಯು ಬಿಬಿಎಂಪಿಯ ನೇತೃತ್ವದಲ್ಲಿ ನಡೆಯಬೇಕು; ಯಾವುದೇ ಕಾರಣಕ್ಕೂ ಹೊರಗುತ್ತಿಗೆಗೆ ನೀಡಬಾರದು.

4. ಸಮೀಕ್ಷೆ ನಡೆಯುವ ತನಕ ಯಾವುದೇ ಬೀದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಬಾರದು.

5. ಈಗಾಗಲೇ ನೀಡಿರುವ ಗುರುತಿನ ಚೀಟಿ/ವ್ಯಾಪಾರದ ಪ್ರಮಾಣ ಪತ್ರಗಳನ್ನು ಶೀಘ್ರದಲ್ಲೇ ನವೀಕರಿಸಬೇಕು.

6. ಸಮೀಕ್ಷೆ ಕುರಿತು ಬೀದಿ ವ್ಯಾಪಾರಿಗಳ ಸಂಘಟನೆಗಳೊಂದಿಗೆ ಸಭೆ ನಡೆಸಿ, ಸಲಹೆ-ಸೂಚನೆ ಪಡೆಯಬೇಕು.

ಇದನ್ನೂ ಓದಿ; ‘ಕೋವಿಡ್ ರೂಪಾಂತರಿ ಉಲ್ಬಣಕ್ಕೆ ಡಬ್ಲ್ಯೂಎಚ್ಒ ಆತಂಕ; 60 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...