Homeಕರ್ನಾಟಕಗುರುತಿನ ಚೀಟಿ ನವೀಕರಣಕ್ಕೆ ಆಗ್ರಹಿಸಿ ಬೀದಿ ವ್ಯಾಪಾರಿಗಳಿಂದ ‘ಬಿಬಿಎಂಪಿ ಚಲೋ’

ಗುರುತಿನ ಚೀಟಿ ನವೀಕರಣಕ್ಕೆ ಆಗ್ರಹಿಸಿ ಬೀದಿ ವ್ಯಾಪಾರಿಗಳಿಂದ ‘ಬಿಬಿಎಂಪಿ ಚಲೋ’

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಬೀದಿ ವ್ಯಾಪಾರಿಗಳಿಗೆ ವಿತರಿಸುವ ಗುರುತಿನ ಚೀಟಿ ಹಾಗೂ ವ್ಯಾಪಾರ ಪ್ರಮಾಣ ಪತ್ರ ನವೀಕರಣ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟದಿಂದ ಮಂಗಳವಾರ ‘ಬಿಬಿಎಂಪಿ ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಯನಗರ ಬಿಡಿಎ ಕಾಂಪ್ಲೆಕ್ಸ್, ಕೆಆರ್ ಮಾರ್ಕೆಟ್, ಬನಶಂಕರಿ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಬೀದಿ ಬದಿ ವ್ಯಾಪಾರ ಮಾಡುತ್ತಿರುವರಿಗೆ ಬಿಬಿಎಂಪಿ ನೀಡಿರುವ ಗುರುತಿನ ಚೀಟಿ ಕಾಲಾವಧಿ (ಐದು ವರ್ಷ) ಮುಗಿದಿದ್ದು, ಇದೀಗ ವ್ಯಾಪಾರ ಮಾಡದಂತೆ ಅಧಿಕಾರಿಗಳು ಹಾಗೂ ಮಾರ್ಷಲ್‌ಗಳು ವ್ಯಾಪಾರಿಗಳಿಗೆ ತೊಂದರೆ ಕೊಡುತ್ತಿದ್ದಾರೆ. ಆದ್ದರಿಂದ, ಕೂಡಲೇ ಬೀದಿ ವ್ಯಪಾರಿಗಳ ಸರ್ವೆ ನಡೆಸಿ ಗುರುತಿನ ಚೀಟಿ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟಿಸಲು ಮುಂದಾಗಿದ್ದಾರೆ.

ಈ ಕುರಿತು ‘ನಾನು ಗೌರಿ’ ಪ್ರತಿನಿಧಿ ಜತೆಗೆ ಮಾತನಾಡಿದ ‘ಜಿಲ್ಲಾ ಬೀದಿ ವ್ಯಾಪಾರಿಗಳ ಸಂಘ’ದ ಅಧ್ಯಕ್ಷ ಬಾಬು. ‘ಜಯನಗರ ಬಿಬಿಎಂಪಿ ಕಾಂಪ್ಲೆಕ್ಸ್ ಸೇರಿದಂತೆ ಕೂಡಲೇ ವಿವಿಧ ಪ್ರದೇಶಗಳಲ್ಲಿ ವ್ಯಾಪಾರಿಗಳ ಎತ್ತಂಗಡಿ ಮಾಡುತ್ತಿರುವುದನ್ನು ನಿಲ್ಲಿಸಬೇಕು. ಐದು ವರ್ಷಗಳ ಹಿಂದೆ ನೀಡಿದ್ದ ಗುರುತಿನ ಚೀಟಿ ಅವಧಿ ಕಳೆದ ಫೆಬ್ರವರಿಯಲ್ಲೇ ಮುಗಿದಿದ್ದು, 2022ರ ಡಿಸೆಂಬರ್‌ನಲ್ಲಿ ನವೀಕರಣಕ್ಕೆ ಮನವಿ ಪತ್ರ ಕೊಟ್ಟಿದ್ದರೂ ಅಧಿಕಾರಿಗಳು ಗಮನ ಹರಿಸಿಲ್ಲ’ ಎಂದರು.

ಜನಯನಗರ ಕಾಂಪ್ಲೆಕ್ಸ್‌ ಬಳಿಯಲ್ಲಿ ಬಿಬಿಎಂಪಿ ನಿಯೋಜಿಸಿರುವ ಮಾರ್ಷಲ್‌ಗಳು

‘ಜಯನಗರ 4ನೇ ಬ್ಲಾಕ್‌ನಲ್ಲಿರುವ ಕಾಂಪ್ಲೆಕ್ಸ್ ಸುತ್ತಮುತ್ತ ಇದ್ದ ಬೀದಿ ವ್ಯಾಪಾರಿಗಳನ್ನು ಒಂದು ವರ್ಷದ ಮುಂಚೆಯೇ ಅಲ್ಲಿಂದ ಎತ್ತಂಗಡಿ ಮಾಡಿಸಿದ್ದಾರೆ. ಅಂಗಡಿ ತೆರವುಗೊಳಿಸಿದ ನಂತರ ಕೈನಲ್ಲಿ ವಸ್ತುಗಳನ್ನು ಹಿಡಿದು ಮಾರಾಟ ಮಾಡಲು ಸಹ ಅಧಿಕಾರಿಗಳು ಹಾಗೂ ಮಾರ್ಷಲ್‌ಗಳು ಅಡ್ಡಿಪಡಿಸುತ್ತಿದ್ದಾರೆ. ಅವರನ್ನು ಮುಂದೆ ಬಿಟ್ಟು ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ. ಕೈನಲ್ಲಿ ವಸ್ತು ಹಿಡಿದು ವ್ಯಾಪಾರ ಮಾಡುವವರನ್ನು ಓಡಿಸುತ್ತಾರೆ. ಪ್ರತಿದಿನ ಮಾರ್ಷಲ್‌ಗಳ ಜತೆಗೆ ಘರ್ಷಣೆ ನಡೆಯುತ್ತಲೇ ಇರುತ್ತದೆ’ ಎಂದರು.

‘ಬಿಬಿಎಂಪಿ ಕೂಡಲೇ ಹೊಸದಾಗಿ ಬೀದಿ ವ್ಯಾಪಾರಿಗಳ ಸಮೀಕ್ಷೆ ಮಾಡಬೇಕು; ಅದನ್ನು ಯಾವುದೇ ಮೂರನೇ ವ್ಯಕ್ತಿ ಸಂಸ್ಥೆಗಳಿಗೆ ವಹಿಸಬಾರದು. ಐದು ವರ್ಷಗಳ ಹಿಂದೆ ಸಮೀಕ್ಷೆ ಮಾಡಿ ಗುರುತಿನ ಚೀಟಿ ನೀಡಲಾಗಿದ್ದು, ಫೆಬ್ರವರಿಯಲ್ಲೇ ಅದರ ಅವಧಿ ಮುಗಿದಿದೆ. ಸರ್ಕಾರದ ಸೌಲಭ್ಯಗಳಿಗಿಂತ ನಮಗೆ ಭದ್ರತೆ ಮುಖ್ಯವಾಗಿದ್ದು, ನಮಗೆ ಆದಷ್ಟು ಬೇಗ ಗುರುತಿನ ಚೀಟಿ ಕೊಡಬೇಕು. ಅದಕ್ಕಾಗಿ ಬಿಬಿಎಂಪಿ ಚಲೋ ಹಮ್ಮಿಕೊಂಡಿದ್ದೇವೆ. ಬೀದಿ ವ್ಯಾಪಾರಿಗಳನ್ನು ಸಂಘಟಿಸುತ್ತಿದ್ದೇವೆ’ ಎಂದು ಮಾಹಿತಿ ನೀಡಿದರು.

ಬೀದಿ ವ್ಯಾಪಾರಿಗಳ ಸಂಘ ಕೊಟ್ಟಿರುವ ಮನವಿ ಪತ್ರ

ಬೀದಿ ವ್ಯಾಪಾರ ಸಂವಿಧಾನ ಕೊಟ್ಟಿರುವ ಹಕ್ಕು:

‘ಬೆಂಗಳೂರಿನಲ್ಲಿ ಎಲ್ಲರಿಗೂ ಬದುಕುವ ಹಕ್ಕಿದ್ದು, ನಗರವನ್ನು ನಿರ್ಮಾಣ ಮಾಡಿರುವುದೆ ಶ್ರಮಿಕ ವರ್ಗ. ಬೀದಿಗಳಲ್ಲಿ ವ್ಯಾಪಾರ ಮಾಡುತ್ತಾ ನಮ್ಮ ಕುಟುಂಬಗಳನ್ನು ಸಾಕುವ ನಾವು, ಬೀದಿ-ರಸ್ತೆಗಳಲ್ಲಿ ಮಾರಾಟ ಮಾಡದಿದ್ದರೆ, ನಗರದ ಮಧ್ಯಮ ವರ್ಗದವರು ಮತ್ತು ಬಡವರು ಎಲ್ಲಿ ಹೋಗುತ್ತಾರೆ? ಎಲ್ಲರಿಗೂ ಆನ್‌ಲೈನ್, ಮಾಲ್‌ಗಳಲ್ಲಿ ಮತ್ತು ಮಾರ್ಟ್‌ಗಳಲ್ಲಿ ಕೊಳ್ಳಲು ಸಾಧ್ಯವೇ? ಇದನ್ನು ಸರ್ಕಾರಗಳು ಹಾಗೂ ಶ್ರೀಮಂತರು ಅರ್ಥ ಮಾಡಿಕೊಳ್ಳಲು ಏಕೆ ಕಷ್ಟ ಪಡುತ್ತಿದ್ದಾರೆ’ ಎಂದು ಬೀದಿ ವ್ಯಾಪಾರಿಗಳ ಸಂಘಟನೆ ಪ್ರಶ್ನಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆ, ‘ಸಂವಿಧಾನವೆ ನಮಗೆ ಬೀದಿ ವ್ಯಾಪಾರ ಮಾಡುವ ಹಕ್ಕು ಕೊಟ್ಟಿದೆ. ಬೀದಿ ವ್ಯಾಪಾರಿಗಳ ಜೀವನೋಪಾಯದ ರಕ್ಷಣೆ ಮತ್ತು ನಿಯಂತ್ರಣ ಕಾಯ್ದೆ-2014 ಜಾರಿಗೊಳಿಸಲಾಗಿದೆ. ಬೀದಿಯಲ್ಲಿ ವ್ಯಾಪಾರ ಮಾಡುವುದು ನಮ್ಮ ಹಕ್ಕು, ಬೀದಿಬದಿ ವ್ಯಾಪಾರಸ್ಥರ ಹಕ್ಕುಗಳನ್ನು ರಕ್ಷಿಸಬೇಕೆಂದು ಹಲವಾರು ನ್ಯಾಯಾಲಯದ ತೀರ್ಪುಗಳು ಸಹ ಹೇಳಿರುತ್ತದೆ’ ಎಂದು ಹೇಳಿದೆ.

‘ಆದರೆ, ಬಿಬಿಎಂಪಿ ಕಾನೂನನ್ನು ಬಹಿರಂಗವಾಗಿ ಉಲ್ಲಂಘಿಸಿ ನಮ್ಮನ್ನು ಎತ್ತಂಗಡಿ ಮಾಡುತ್ತಿದೆ. ಸೆಪ್ಟೆಂಬರ್ 2017 ರಲ್ಲಿ ಬಿಬಿಎಂಪಿ ವತಿಯಿಂದ 20 ಸಾವಿರ ಬೀದಿ ವ್ಯಾಪಾರಿಗಳನ್ನು ಗುರುತಿಸಿ, ಅವರಿಗೆ ಗುರುತಿನ ಚೀಟಿ ಮತ್ತು ವ್ಯಾಪಾರದ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಬೆಂಗಳೂರಿನಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನರು ಬೀದಿ ವ್ಯಾಪಾರದ ಮೇಲೆ ಅವಲಂಬಿತರಾಗಿದ್ದಾರೆ. ಆದರೆ, ಉಳಿದ ವ್ಯಾಪಾರಿಗಳನ್ನು ಬಿಬಿಎಂಪಿ ಸಮೀಕ್ಷೆ ಒಳಗೊಳ್ಳಲಿಲ್ಲ. ಕಾನೂನಿನ ಪ್ರಕಾರ ಪ್ರತಿ 5 ವರ್ಷಕ್ಕೆ ಬೀದಿ ವ್ಯಾಪಾರಿಗಳ ಸಮೀಕ್ಷೆ ನಡೆಸಬೇಕು. ಈಗ 5 ವರ್ಷಗಳು ಕಳೆದಿದ್ದು, ಬಿಬಿಎಂಪಿಯು ಸಮೀಕ್ಷೆ ಶುರು ಮಾಡಲು ಮುಂದಾಗುತ್ತಿಲ್ಲ. ಮುಂಚೆ ನೀಡಿದ ಗುರುತಿನ ಚೀಟಿ ಹಾಗೂ ವ್ಯಾಪಾರದ ಪ್ರಮಾಣ ಪತ್ರದ ಸಿಂಧುತ್ವ ಮುಗಿದಿರುತ್ತದೆ. ಅದರ ನವೀಕರಣದ ಕುರಿತು ಬಿಬಿಎಂಪಿಯು ಯಾವುದೇ ರೀತಿಯ ಕ್ರಮ ವಹಿಸುತ್ತಿಲ್ಲ’ ಎಂದು ಅಳಲು ತೋಡಿಕೊಂಡಿದ್ದಾರೆ.

‘ಬೆಂಗಳೂರು ನಗರ ಅತಿವೇಗದಲ್ಲಿ ಬೆಳೆಯುತ್ತಿದೆ. ಮೆಟ್ರೋ, ಮಾಲುಗಳು, ಸ್ಮಾರ್ಟ್ ಫುಟ್ಪಾತ್ ಗಳು, ಕ್ಲೀನ್ ಸಿಟಿಯಾಗಿ ಹೆಸರುಗಳಿಸುತ್ತಿದೆ. ಈ ‘ಬ್ರಾಂಡ್ ಬೆಂಗಳೂರು’ನಲ್ಲಿ ಬೀದಿ ವ್ಯಾಪಾರಿಗಳಿಗೆ ಜಾಗವಿಲ್ಲವೇ? ಕಡಲೇಕಾಯಿ ಪರಿಷೆ, ಚಿತ್ರಸಂತೆ ಸೇರಿದಂತೆ ಬೆಂಗಳೂರಿನಲ್ಲಿ ಹೆಸರಾಂತ ಮೇಳಗಳು ನಡೆಯುತ್ತವೆ. ಇಲ್ಲಿ ಮಾಧ್ಯಮ ವರ್ಗದವರು ಮತ್ತು ಶ್ರೀಮಂತರು ಹೋಗುತ್ತಾರೆ. ಆದರೆ, ದಿನನಿತ್ಯ ತಮ್ಮ ಹೊಟ್ಟೆಪಾಡಿಗಾಗಿ ಬೀದಿ ವ್ಯಾಪಾರ ಮಾಡುವವರನ್ನು ಏಕೆ ಭಿನ್ನವಾಗಿ ಪರಿಗಣಿಸಲಾಗುತ್ತದೆ? ಬೀದಿ ವ್ಯಾಪಾರಿಗಳನ್ನು ಒಳಗೊಳ್ಳದಿದ್ದರೆ, ಇದು ಎಂಥಹ ನಗರವಾಗಿ ಬೆಳೆಯಬೇಕು ಎಂದು ನಾವೆಲ್ಲರೂ ಉತ್ತರಿಸಬೇಕಾಗಿದೆ’ ಎಂದು ಹೇಳಿದೆ.

ಜಯನಗರದಲ್ಲಿ ಬೀದಿ ವ್ಯಾಪಾರಿಗಳ ಅಂಗಡಿಗಳನ್ನು ತೆರವುಗೊಳಿಸುತ್ತಿರುವ ಬಿಬಿಎಂಪಿ ನೌಕರರು.

ಬೀದಿ ವ್ಯಾಪಾರಿಗಳ ಬೇಡಿಕೆಗಳೇನು?

1. ಜಯನಗರ, ಮಹದೇವಪುರ, ಮಲ್ಲೇಶ್ವರ, ಬನಶಂಕರಿ, ಮೂಡಲಪಾಳ್ಯ ಹಾಗು ಇತರೆ ಪ್ರದೇಶಗಳಲ್ಲಿ ಎತ್ತಂಗಡಿ ಮಾಡಿದ ವ್ಯಾಪಾರಿಗಳಿಗೆ ಅದೇ ಸ್ಥಳದಲ್ಲಿ ವ್ಯಾಪಾರ ಮಾಡುವಂತೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಇಷ್ಟು ದಿವಸ ಅವರಿಗೆ ಆದ ನಷ್ಟಕ್ಕೆ ಪಾಲಿಕೆ ಪರಿಹಾರ ಕೊಡಬೇಕು.

2. ಪಟ್ಟಣ ವ್ಯಾಪಾರ ಸಮಿತಿ ಅಡಿಯಲ್ಲಿ ಪ್ರತಿ ಬೀದಿ ವ್ಯಾಪಾರಿಗಳ ಸಮೀಕ್ಷೆ ನಡೆಯಬೇಕು.

3. ಸಮೀಕ್ಷೆಯು ಬಿಬಿಎಂಪಿಯ ನೇತೃತ್ವದಲ್ಲಿ ನಡೆಯಬೇಕು; ಯಾವುದೇ ಕಾರಣಕ್ಕೂ ಹೊರಗುತ್ತಿಗೆಗೆ ನೀಡಬಾರದು.

4. ಸಮೀಕ್ಷೆ ನಡೆಯುವ ತನಕ ಯಾವುದೇ ಬೀದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಬಾರದು.

5. ಈಗಾಗಲೇ ನೀಡಿರುವ ಗುರುತಿನ ಚೀಟಿ/ವ್ಯಾಪಾರದ ಪ್ರಮಾಣ ಪತ್ರಗಳನ್ನು ಶೀಘ್ರದಲ್ಲೇ ನವೀಕರಿಸಬೇಕು.

6. ಸಮೀಕ್ಷೆ ಕುರಿತು ಬೀದಿ ವ್ಯಾಪಾರಿಗಳ ಸಂಘಟನೆಗಳೊಂದಿಗೆ ಸಭೆ ನಡೆಸಿ, ಸಲಹೆ-ಸೂಚನೆ ಪಡೆಯಬೇಕು.

ಇದನ್ನೂ ಓದಿ; ‘ಕೋವಿಡ್ ರೂಪಾಂತರಿ ಉಲ್ಬಣಕ್ಕೆ ಡಬ್ಲ್ಯೂಎಚ್ಒ ಆತಂಕ; 60 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...