Homeಕರ್ನಾಟಕಗುರುತಿನ ಚೀಟಿ ನವೀಕರಣಕ್ಕೆ ಆಗ್ರಹಿಸಿ ಬೀದಿ ವ್ಯಾಪಾರಿಗಳಿಂದ ‘ಬಿಬಿಎಂಪಿ ಚಲೋ’

ಗುರುತಿನ ಚೀಟಿ ನವೀಕರಣಕ್ಕೆ ಆಗ್ರಹಿಸಿ ಬೀದಿ ವ್ಯಾಪಾರಿಗಳಿಂದ ‘ಬಿಬಿಎಂಪಿ ಚಲೋ’

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಬೀದಿ ವ್ಯಾಪಾರಿಗಳಿಗೆ ವಿತರಿಸುವ ಗುರುತಿನ ಚೀಟಿ ಹಾಗೂ ವ್ಯಾಪಾರ ಪ್ರಮಾಣ ಪತ್ರ ನವೀಕರಣ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟದಿಂದ ಮಂಗಳವಾರ ‘ಬಿಬಿಎಂಪಿ ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಯನಗರ ಬಿಡಿಎ ಕಾಂಪ್ಲೆಕ್ಸ್, ಕೆಆರ್ ಮಾರ್ಕೆಟ್, ಬನಶಂಕರಿ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಬೀದಿ ಬದಿ ವ್ಯಾಪಾರ ಮಾಡುತ್ತಿರುವರಿಗೆ ಬಿಬಿಎಂಪಿ ನೀಡಿರುವ ಗುರುತಿನ ಚೀಟಿ ಕಾಲಾವಧಿ (ಐದು ವರ್ಷ) ಮುಗಿದಿದ್ದು, ಇದೀಗ ವ್ಯಾಪಾರ ಮಾಡದಂತೆ ಅಧಿಕಾರಿಗಳು ಹಾಗೂ ಮಾರ್ಷಲ್‌ಗಳು ವ್ಯಾಪಾರಿಗಳಿಗೆ ತೊಂದರೆ ಕೊಡುತ್ತಿದ್ದಾರೆ. ಆದ್ದರಿಂದ, ಕೂಡಲೇ ಬೀದಿ ವ್ಯಪಾರಿಗಳ ಸರ್ವೆ ನಡೆಸಿ ಗುರುತಿನ ಚೀಟಿ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟಿಸಲು ಮುಂದಾಗಿದ್ದಾರೆ.

ಈ ಕುರಿತು ‘ನಾನು ಗೌರಿ’ ಪ್ರತಿನಿಧಿ ಜತೆಗೆ ಮಾತನಾಡಿದ ‘ಜಿಲ್ಲಾ ಬೀದಿ ವ್ಯಾಪಾರಿಗಳ ಸಂಘ’ದ ಅಧ್ಯಕ್ಷ ಬಾಬು. ‘ಜಯನಗರ ಬಿಬಿಎಂಪಿ ಕಾಂಪ್ಲೆಕ್ಸ್ ಸೇರಿದಂತೆ ಕೂಡಲೇ ವಿವಿಧ ಪ್ರದೇಶಗಳಲ್ಲಿ ವ್ಯಾಪಾರಿಗಳ ಎತ್ತಂಗಡಿ ಮಾಡುತ್ತಿರುವುದನ್ನು ನಿಲ್ಲಿಸಬೇಕು. ಐದು ವರ್ಷಗಳ ಹಿಂದೆ ನೀಡಿದ್ದ ಗುರುತಿನ ಚೀಟಿ ಅವಧಿ ಕಳೆದ ಫೆಬ್ರವರಿಯಲ್ಲೇ ಮುಗಿದಿದ್ದು, 2022ರ ಡಿಸೆಂಬರ್‌ನಲ್ಲಿ ನವೀಕರಣಕ್ಕೆ ಮನವಿ ಪತ್ರ ಕೊಟ್ಟಿದ್ದರೂ ಅಧಿಕಾರಿಗಳು ಗಮನ ಹರಿಸಿಲ್ಲ’ ಎಂದರು.

ಜನಯನಗರ ಕಾಂಪ್ಲೆಕ್ಸ್‌ ಬಳಿಯಲ್ಲಿ ಬಿಬಿಎಂಪಿ ನಿಯೋಜಿಸಿರುವ ಮಾರ್ಷಲ್‌ಗಳು

‘ಜಯನಗರ 4ನೇ ಬ್ಲಾಕ್‌ನಲ್ಲಿರುವ ಕಾಂಪ್ಲೆಕ್ಸ್ ಸುತ್ತಮುತ್ತ ಇದ್ದ ಬೀದಿ ವ್ಯಾಪಾರಿಗಳನ್ನು ಒಂದು ವರ್ಷದ ಮುಂಚೆಯೇ ಅಲ್ಲಿಂದ ಎತ್ತಂಗಡಿ ಮಾಡಿಸಿದ್ದಾರೆ. ಅಂಗಡಿ ತೆರವುಗೊಳಿಸಿದ ನಂತರ ಕೈನಲ್ಲಿ ವಸ್ತುಗಳನ್ನು ಹಿಡಿದು ಮಾರಾಟ ಮಾಡಲು ಸಹ ಅಧಿಕಾರಿಗಳು ಹಾಗೂ ಮಾರ್ಷಲ್‌ಗಳು ಅಡ್ಡಿಪಡಿಸುತ್ತಿದ್ದಾರೆ. ಅವರನ್ನು ಮುಂದೆ ಬಿಟ್ಟು ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ. ಕೈನಲ್ಲಿ ವಸ್ತು ಹಿಡಿದು ವ್ಯಾಪಾರ ಮಾಡುವವರನ್ನು ಓಡಿಸುತ್ತಾರೆ. ಪ್ರತಿದಿನ ಮಾರ್ಷಲ್‌ಗಳ ಜತೆಗೆ ಘರ್ಷಣೆ ನಡೆಯುತ್ತಲೇ ಇರುತ್ತದೆ’ ಎಂದರು.

‘ಬಿಬಿಎಂಪಿ ಕೂಡಲೇ ಹೊಸದಾಗಿ ಬೀದಿ ವ್ಯಾಪಾರಿಗಳ ಸಮೀಕ್ಷೆ ಮಾಡಬೇಕು; ಅದನ್ನು ಯಾವುದೇ ಮೂರನೇ ವ್ಯಕ್ತಿ ಸಂಸ್ಥೆಗಳಿಗೆ ವಹಿಸಬಾರದು. ಐದು ವರ್ಷಗಳ ಹಿಂದೆ ಸಮೀಕ್ಷೆ ಮಾಡಿ ಗುರುತಿನ ಚೀಟಿ ನೀಡಲಾಗಿದ್ದು, ಫೆಬ್ರವರಿಯಲ್ಲೇ ಅದರ ಅವಧಿ ಮುಗಿದಿದೆ. ಸರ್ಕಾರದ ಸೌಲಭ್ಯಗಳಿಗಿಂತ ನಮಗೆ ಭದ್ರತೆ ಮುಖ್ಯವಾಗಿದ್ದು, ನಮಗೆ ಆದಷ್ಟು ಬೇಗ ಗುರುತಿನ ಚೀಟಿ ಕೊಡಬೇಕು. ಅದಕ್ಕಾಗಿ ಬಿಬಿಎಂಪಿ ಚಲೋ ಹಮ್ಮಿಕೊಂಡಿದ್ದೇವೆ. ಬೀದಿ ವ್ಯಾಪಾರಿಗಳನ್ನು ಸಂಘಟಿಸುತ್ತಿದ್ದೇವೆ’ ಎಂದು ಮಾಹಿತಿ ನೀಡಿದರು.

ಬೀದಿ ವ್ಯಾಪಾರಿಗಳ ಸಂಘ ಕೊಟ್ಟಿರುವ ಮನವಿ ಪತ್ರ

ಬೀದಿ ವ್ಯಾಪಾರ ಸಂವಿಧಾನ ಕೊಟ್ಟಿರುವ ಹಕ್ಕು:

‘ಬೆಂಗಳೂರಿನಲ್ಲಿ ಎಲ್ಲರಿಗೂ ಬದುಕುವ ಹಕ್ಕಿದ್ದು, ನಗರವನ್ನು ನಿರ್ಮಾಣ ಮಾಡಿರುವುದೆ ಶ್ರಮಿಕ ವರ್ಗ. ಬೀದಿಗಳಲ್ಲಿ ವ್ಯಾಪಾರ ಮಾಡುತ್ತಾ ನಮ್ಮ ಕುಟುಂಬಗಳನ್ನು ಸಾಕುವ ನಾವು, ಬೀದಿ-ರಸ್ತೆಗಳಲ್ಲಿ ಮಾರಾಟ ಮಾಡದಿದ್ದರೆ, ನಗರದ ಮಧ್ಯಮ ವರ್ಗದವರು ಮತ್ತು ಬಡವರು ಎಲ್ಲಿ ಹೋಗುತ್ತಾರೆ? ಎಲ್ಲರಿಗೂ ಆನ್‌ಲೈನ್, ಮಾಲ್‌ಗಳಲ್ಲಿ ಮತ್ತು ಮಾರ್ಟ್‌ಗಳಲ್ಲಿ ಕೊಳ್ಳಲು ಸಾಧ್ಯವೇ? ಇದನ್ನು ಸರ್ಕಾರಗಳು ಹಾಗೂ ಶ್ರೀಮಂತರು ಅರ್ಥ ಮಾಡಿಕೊಳ್ಳಲು ಏಕೆ ಕಷ್ಟ ಪಡುತ್ತಿದ್ದಾರೆ’ ಎಂದು ಬೀದಿ ವ್ಯಾಪಾರಿಗಳ ಸಂಘಟನೆ ಪ್ರಶ್ನಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆ, ‘ಸಂವಿಧಾನವೆ ನಮಗೆ ಬೀದಿ ವ್ಯಾಪಾರ ಮಾಡುವ ಹಕ್ಕು ಕೊಟ್ಟಿದೆ. ಬೀದಿ ವ್ಯಾಪಾರಿಗಳ ಜೀವನೋಪಾಯದ ರಕ್ಷಣೆ ಮತ್ತು ನಿಯಂತ್ರಣ ಕಾಯ್ದೆ-2014 ಜಾರಿಗೊಳಿಸಲಾಗಿದೆ. ಬೀದಿಯಲ್ಲಿ ವ್ಯಾಪಾರ ಮಾಡುವುದು ನಮ್ಮ ಹಕ್ಕು, ಬೀದಿಬದಿ ವ್ಯಾಪಾರಸ್ಥರ ಹಕ್ಕುಗಳನ್ನು ರಕ್ಷಿಸಬೇಕೆಂದು ಹಲವಾರು ನ್ಯಾಯಾಲಯದ ತೀರ್ಪುಗಳು ಸಹ ಹೇಳಿರುತ್ತದೆ’ ಎಂದು ಹೇಳಿದೆ.

‘ಆದರೆ, ಬಿಬಿಎಂಪಿ ಕಾನೂನನ್ನು ಬಹಿರಂಗವಾಗಿ ಉಲ್ಲಂಘಿಸಿ ನಮ್ಮನ್ನು ಎತ್ತಂಗಡಿ ಮಾಡುತ್ತಿದೆ. ಸೆಪ್ಟೆಂಬರ್ 2017 ರಲ್ಲಿ ಬಿಬಿಎಂಪಿ ವತಿಯಿಂದ 20 ಸಾವಿರ ಬೀದಿ ವ್ಯಾಪಾರಿಗಳನ್ನು ಗುರುತಿಸಿ, ಅವರಿಗೆ ಗುರುತಿನ ಚೀಟಿ ಮತ್ತು ವ್ಯಾಪಾರದ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಬೆಂಗಳೂರಿನಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನರು ಬೀದಿ ವ್ಯಾಪಾರದ ಮೇಲೆ ಅವಲಂಬಿತರಾಗಿದ್ದಾರೆ. ಆದರೆ, ಉಳಿದ ವ್ಯಾಪಾರಿಗಳನ್ನು ಬಿಬಿಎಂಪಿ ಸಮೀಕ್ಷೆ ಒಳಗೊಳ್ಳಲಿಲ್ಲ. ಕಾನೂನಿನ ಪ್ರಕಾರ ಪ್ರತಿ 5 ವರ್ಷಕ್ಕೆ ಬೀದಿ ವ್ಯಾಪಾರಿಗಳ ಸಮೀಕ್ಷೆ ನಡೆಸಬೇಕು. ಈಗ 5 ವರ್ಷಗಳು ಕಳೆದಿದ್ದು, ಬಿಬಿಎಂಪಿಯು ಸಮೀಕ್ಷೆ ಶುರು ಮಾಡಲು ಮುಂದಾಗುತ್ತಿಲ್ಲ. ಮುಂಚೆ ನೀಡಿದ ಗುರುತಿನ ಚೀಟಿ ಹಾಗೂ ವ್ಯಾಪಾರದ ಪ್ರಮಾಣ ಪತ್ರದ ಸಿಂಧುತ್ವ ಮುಗಿದಿರುತ್ತದೆ. ಅದರ ನವೀಕರಣದ ಕುರಿತು ಬಿಬಿಎಂಪಿಯು ಯಾವುದೇ ರೀತಿಯ ಕ್ರಮ ವಹಿಸುತ್ತಿಲ್ಲ’ ಎಂದು ಅಳಲು ತೋಡಿಕೊಂಡಿದ್ದಾರೆ.

‘ಬೆಂಗಳೂರು ನಗರ ಅತಿವೇಗದಲ್ಲಿ ಬೆಳೆಯುತ್ತಿದೆ. ಮೆಟ್ರೋ, ಮಾಲುಗಳು, ಸ್ಮಾರ್ಟ್ ಫುಟ್ಪಾತ್ ಗಳು, ಕ್ಲೀನ್ ಸಿಟಿಯಾಗಿ ಹೆಸರುಗಳಿಸುತ್ತಿದೆ. ಈ ‘ಬ್ರಾಂಡ್ ಬೆಂಗಳೂರು’ನಲ್ಲಿ ಬೀದಿ ವ್ಯಾಪಾರಿಗಳಿಗೆ ಜಾಗವಿಲ್ಲವೇ? ಕಡಲೇಕಾಯಿ ಪರಿಷೆ, ಚಿತ್ರಸಂತೆ ಸೇರಿದಂತೆ ಬೆಂಗಳೂರಿನಲ್ಲಿ ಹೆಸರಾಂತ ಮೇಳಗಳು ನಡೆಯುತ್ತವೆ. ಇಲ್ಲಿ ಮಾಧ್ಯಮ ವರ್ಗದವರು ಮತ್ತು ಶ್ರೀಮಂತರು ಹೋಗುತ್ತಾರೆ. ಆದರೆ, ದಿನನಿತ್ಯ ತಮ್ಮ ಹೊಟ್ಟೆಪಾಡಿಗಾಗಿ ಬೀದಿ ವ್ಯಾಪಾರ ಮಾಡುವವರನ್ನು ಏಕೆ ಭಿನ್ನವಾಗಿ ಪರಿಗಣಿಸಲಾಗುತ್ತದೆ? ಬೀದಿ ವ್ಯಾಪಾರಿಗಳನ್ನು ಒಳಗೊಳ್ಳದಿದ್ದರೆ, ಇದು ಎಂಥಹ ನಗರವಾಗಿ ಬೆಳೆಯಬೇಕು ಎಂದು ನಾವೆಲ್ಲರೂ ಉತ್ತರಿಸಬೇಕಾಗಿದೆ’ ಎಂದು ಹೇಳಿದೆ.

ಜಯನಗರದಲ್ಲಿ ಬೀದಿ ವ್ಯಾಪಾರಿಗಳ ಅಂಗಡಿಗಳನ್ನು ತೆರವುಗೊಳಿಸುತ್ತಿರುವ ಬಿಬಿಎಂಪಿ ನೌಕರರು.

ಬೀದಿ ವ್ಯಾಪಾರಿಗಳ ಬೇಡಿಕೆಗಳೇನು?

1. ಜಯನಗರ, ಮಹದೇವಪುರ, ಮಲ್ಲೇಶ್ವರ, ಬನಶಂಕರಿ, ಮೂಡಲಪಾಳ್ಯ ಹಾಗು ಇತರೆ ಪ್ರದೇಶಗಳಲ್ಲಿ ಎತ್ತಂಗಡಿ ಮಾಡಿದ ವ್ಯಾಪಾರಿಗಳಿಗೆ ಅದೇ ಸ್ಥಳದಲ್ಲಿ ವ್ಯಾಪಾರ ಮಾಡುವಂತೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಇಷ್ಟು ದಿವಸ ಅವರಿಗೆ ಆದ ನಷ್ಟಕ್ಕೆ ಪಾಲಿಕೆ ಪರಿಹಾರ ಕೊಡಬೇಕು.

2. ಪಟ್ಟಣ ವ್ಯಾಪಾರ ಸಮಿತಿ ಅಡಿಯಲ್ಲಿ ಪ್ರತಿ ಬೀದಿ ವ್ಯಾಪಾರಿಗಳ ಸಮೀಕ್ಷೆ ನಡೆಯಬೇಕು.

3. ಸಮೀಕ್ಷೆಯು ಬಿಬಿಎಂಪಿಯ ನೇತೃತ್ವದಲ್ಲಿ ನಡೆಯಬೇಕು; ಯಾವುದೇ ಕಾರಣಕ್ಕೂ ಹೊರಗುತ್ತಿಗೆಗೆ ನೀಡಬಾರದು.

4. ಸಮೀಕ್ಷೆ ನಡೆಯುವ ತನಕ ಯಾವುದೇ ಬೀದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಬಾರದು.

5. ಈಗಾಗಲೇ ನೀಡಿರುವ ಗುರುತಿನ ಚೀಟಿ/ವ್ಯಾಪಾರದ ಪ್ರಮಾಣ ಪತ್ರಗಳನ್ನು ಶೀಘ್ರದಲ್ಲೇ ನವೀಕರಿಸಬೇಕು.

6. ಸಮೀಕ್ಷೆ ಕುರಿತು ಬೀದಿ ವ್ಯಾಪಾರಿಗಳ ಸಂಘಟನೆಗಳೊಂದಿಗೆ ಸಭೆ ನಡೆಸಿ, ಸಲಹೆ-ಸೂಚನೆ ಪಡೆಯಬೇಕು.

ಇದನ್ನೂ ಓದಿ; ‘ಕೋವಿಡ್ ರೂಪಾಂತರಿ ಉಲ್ಬಣಕ್ಕೆ ಡಬ್ಲ್ಯೂಎಚ್ಒ ಆತಂಕ; 60 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...