Homeಕರ್ನಾಟಕಬೆಂಗಳೂರಿನ ಗುಂಡಿಗಳನ್ನು ತುಂಬುವಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲ: ರಾಜ್ಯ ಹೈಕೋರ್ಟ್ ಕಿಡಿ

ಬೆಂಗಳೂರಿನ ಗುಂಡಿಗಳನ್ನು ತುಂಬುವಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲ: ರಾಜ್ಯ ಹೈಕೋರ್ಟ್ ಕಿಡಿ

- Advertisement -
- Advertisement -

ಬೆಂಗಳೂರಿನ ರಸ್ತೆ ಗುಂಡಿ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ತ್ರೀವ್ರ ತರಾಟೆಗೆ ತೆಗೆದುಕೊಂಡಿದೆ. ಈ ಸಂಬಂಧ ನ್ಯಾಯಾಲಯ ನೀಡಿರುವ ಆದೇಶವನ್ನು ಪಾಲಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ ಎಂದು ನ್ಯಾಯಾಲಯ ಆಕ್ರೋಶ ವ್ಯಕ್ತಪಡಿಸಿದೆ.

ರಸ್ತೆ ಗುಂಡಿಗಳ ಸಮಸ್ಯೆಗೆ ಸಂಬಂಧಿಸಿದಂತೆ ವಿಜಯ್ ಮೆನನ್ ಮತ್ತು ಇತರರು ಸಲ್ಲಿಸಿರುವ ಅರ್ಜಿಗಳ ಪರಿಶೀಲನೆ ವೇಳೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ನೇತೃತ್ವದ ವಿಭಾಗೀಯ ಪೀಠವು ಅಸಮಾಧಾನ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಬೆಂಗಳೂರಿನ ಗುಂಡಿಗಳಿಂದ ಕೂಡಿದ ರಸ್ತೆಗಳಿಂದಾಗಿ ಸಾವಿನ ಸಂಖ್ಯೆ ಹೆಚ್ಚುತ್ತಿದ್ದು, ಗುಂಡಿಗಳನ್ನು ತುಂಬಲು ಬಿಬಿಎಂಪಿ ಸೂಕ್ತ ತಂತ್ರಜ್ಞಾನವನ್ನು ಬಳಸಿಕೊಂಡಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಅಕ್ಟೋಬರ್ 31’: ಪ್ರಮುಖ ಯೋಜನೆಗಳನ್ನು ಪೂರ್ಣಗೊಳಿಸಲು ಗಡುವು ನಿಗದಿಪಡಿಸಿದ ಬಿಬಿಎಂಪಿ

ರಸ್ತೆ ಗುಂಡಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ವಿಭಾಗೀಯ ಪೀಠವು ಗುಂಡಿ ಮುಚ್ಚುವ ವಿಚಾರದಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ. ಈ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಮತ್ತು ಎಷ್ಟು ಗುಂಡಿಗಳನ್ನು ತುಂಬಲಾಗಿದೆ ಎಂಬುದರ ಕುರಿತು ವಿವರವಾದ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಅಧಿಕಾರಿಗಳಿಗೆ ಸೂಚಿಸಿದೆ.

ಬಿಬಿಎಂಪಿ ಪರ ವಾದ ಮಂಡಿಸಿದ ವಕೀಲರು ಮಧ್ಯಪ್ರವೇಶಿಸಿ, ಬೆಂಗಳೂರಿನಲ್ಲಿ ಗುಂಡಿಗಳನ್ನು ತುಂಬುವ ಕುರಿತು ಕ್ರಮ ಕೈಗೊಂಡಿರುವ ವಿವರವಾದ ವರದಿಯನ್ನು ಸಲ್ಲಿಸಿದ್ದಾರೆ. ಈ ವಿಷಯದ ಬಗ್ಗೆ ವಾದ ಮಾಡಲು ಸಮಯಾವಕಾಶವನ್ನೂ ವಕೀಲರು ಕೋರಿದ್ದು, ವಿಚಾರಣೆಗೆ ಒಪ್ಪಿಗೆ ಸೂಚಿಸಿದ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಿದೆ.

ಈ ಹಿಂದೆ ಸೆಪ್ಟೆಂಬರ್ 19 ರಂದು, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ವಿಭಾಗೀಯ ಪೀಠವು ಬಿಬಿಎಂಪಿಯಿಂದ ಗುರುತಿಸಲಾದ ಪ್ರಮುಖ ರಸ್ತೆಗಳಲ್ಲಿನ 221 ಗುಂಡಿಗಳನ್ನು ಸರಿಪಡಿಸಲು ಅಥವಾ ಭರ್ತಿ ಮಾಡಲು ಬಿಬಿಎಂಪಿಗೆ 10 ದಿನಗಳ ಗಡುವು ನೀಡಿತ್ತು.

ಇದನ್ನೂ ಓದಿ: ಬಿಬಿಎಂಪಿ: ಡಿಸೆಂಬರ್ 31ರೊಳಗೆ ಚುನಾವಣೆ ಪೂರ್ಣಗೊಳಿಸಲು ಹೈಕೋರ್ಟ್‌ ಗಡುವು

ಅರ್ಜಿದಾರ ವಿಜಯ್ ಮೆನನ್ ಅವರು 2015ರಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ, ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಲು ಮತ್ತು ಮಳೆನೀರು ಚರಂಡಿಗಳ ಅತಿಕ್ರಮಣಗಳನ್ನು ತೆಗೆದುಹಾಕಲು ಕ್ರಮ ಕೈಗೊಳ್ಳುವಂತೆ ಕೋರಿ ಪೀಠವು ಹೇಳಿತ್ತು. ಮುಂದಿನ ವಿಚಾರಣೆಗೆ ಮುನ್ನ ಛಾಯಾಚಿತ್ರಗಳ ಸಹಿತ ಗುಂಡಿಗಳನ್ನು ತುಂಬಿರುವ ಬಗ್ಗೆ ಅನುಪಾಲನಾ ವರದಿಯನ್ನು ಸಲ್ಲಿಸುವಂತೆ ಪೀಠವು ಬಿಬಿಎಂಪಿಗೆ ಆದೇಶಿಸಿದೆ.

“ಬಿಬಿಎಂಪಿ ಶಾಸನಬದ್ಧ ಸಂಸ್ಥೆಯಾಗಿದ್ದು, ರಸ್ತೆಗಳ ನಿರ್ವಹಣೆ ಮತ್ತು ದುರಸ್ತಿ ಮಾಡುವ ಜವಾಬ್ದಾರಿಯನ್ನು ಹೊಂದಿದೆ. ಹೊಂಡಗಳಿಲ್ಲದ ರಸ್ತೆಗಳನ್ನು ಹೊಂದಲು ನಾಗರಿಕರಿಗೆ ಹಕ್ಕಿದೆ” ಎಂದು ಪೀಠವು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...