Homeಕರ್ನಾಟಕಬಿಬಿಎಂಪಿ: 243 ವಾರ್ಡ್‌ ವಿಂಗಡನೆಗೆ ಅಂತಿಮ ಅಧಿಸೂಚನೆ

ಬಿಬಿಎಂಪಿ: 243 ವಾರ್ಡ್‌ ವಿಂಗಡನೆಗೆ ಅಂತಿಮ ಅಧಿಸೂಚನೆ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ 243 ವಾರ್ಡ್‌ಗಳ ಅಂತಿಮ ಡಿಲಿಮಿಟೇಶನ್ ವರದಿಯನ್ನು ರಾಜ್ಯ ಸರ್ಕಾರ ಗುರುವಾರ ಅಧಿಸೂಚನೆ ನೀಡಿದೆ. ಬಿಬಿಎಂಪಿ ಚುನಾವಣೆಯನ್ನು ಎರಡು ವರ್ಷಗಳ ಕಾಲ ವಿಳಂಬಗೊಳಿಸಿದ್ದ ಕಸರತ್ತು ಕೊನೆಗೂ ಪೂರ್ಣಗೊಂಡಿದೆ.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಒಂದು ವಾರ್ಡ್‌ಗೆ ಸ್ಯಾಂಡಲ್‌ವುಡ್ ಸ್ಟಾರ್ ದಿವಂಗತ ಪುನೀತ್ ರಾಜ್‌ಕುಮಾರ್ ಹೆಸರಿಡಲಾಗಿದೆ ಎಂಬುದು ವರದಿಯ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. 3,833 ಆಕ್ಷೇಪಣೆಗಳ ಪೈಕಿ 1,800 ಕ್ಕಿಂತ ಹೆಚ್ಚು ಆಕ್ಷೇಪಣೆಗಳನ್ನು ಅಂತಿಮ ವರದಿಯಲ್ಲಿ ಪರಿಗಣಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

243 ವಾರ್ಡ್‌ಗಳಿಗೆ ಗಡಿಗಳ ಅಂತಿಮಗೊಳಿಸುವಿಕೆಯು ಬಿಬಿಎಂಪಿಗೆ ಚುನಾವಣಾ ಪ್ರಕ್ರಿಯೆಯನ್ನು ವೇಗವಾಗಿ ಮಾಡುವ ನಿರೀಕ್ಷೆಯಿದೆ. ಬಿಬಿಎಂಪಿಯ ಅವಧಿಯು ಸೆಪ್ಟೆಂಬರ್ 2020 ರಲ್ಲಿ ಮುಕ್ತಾಯಗೊಂಡಿತ್ತು. ಉಳಿದಿರುವಂತೆ, ವಾರ್ಡ್‌ಗಳ ಮೀಸಲಾತಿಯನ್ನು ಮುಂದಿನ ಒಂದು ಅಥವಾ ಎರಡು ವಾರಗಳಲ್ಲಿ ಪ್ರಕಟಿಸಬಹುದು ಎಂದು ವರದಿಯಾಗಿದೆ.

ನಾಗರಿಕರು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಗಣಿಸಿ ಸಿದ್ಧಪಡಿಸಿದ ಅಂತಿಮ ವರದಿಯಲ್ಲಿ ಕನಿಷ್ಠ 18 ವಾರ್ಡ್‌ಗಳ ಹೆಸರನ್ನು ಬದಲಾಯಿಸಲಾಗಿದೆ. ಜೊತೆಗೆ 42 ವಾರ್ಡ್‌ಗಳಿಗೆ ಮತ್ತೊಮ್ಮೆ ಗಡಿಯನ್ನು ಮರು ರಚಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್‌‌ ವರದಿ ತಿಳಿಸಿವೆ. ಆಕ್ಷೇಪಣೆಗಳ ಆಧಾರದ ಮೇಲೆ ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

3,833 ಆಕ್ಷೇಪಣೆಗಳಲ್ಲಿ ಅರ್ಧದಷ್ಟು ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಬಂದಿವೆ. ಇವುಗಳಲ್ಲಿ ಹೆಚ್ಚಿನ ಆಕ್ಷೇಪಣೆಗಳು ವಾರ್ಡ್‌ನ ಹೆಸರು ಬದಲಾವಣೆಗೆ ವಿರುದ್ಧವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಆರ್ ಪುರಂನಿಂದ 479 ಆಕ್ಷೇಪಣೆಗಳು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹುತಾತ್ಮ ಚೌಕ ಸಂರಕ್ಷಣೆಗೆ ಆಗ್ರಹ; ಸಹಿ ಸಂಗ್ರಹ ಅಭಿಯಾನ ಆರಂಭ

ಗಾಂಧಿನಗರ ಮತ್ತು ಆನೇಕಲ್ ವಿಧಾನಸಭಾ ಕ್ಷೇತ್ರಗಳಿಂದ ಯಾವುದೇ ಆಕ್ಷೇಪ ವ್ಯಕ್ತವಾಗಿಲ್ಲ ಎಂಬುದು ಕುತೂಹಲ ಮೂಡಿಸಿದೆ. ಆಕ್ಷೇಪಣೆಗಳನ್ನು ಅಧ್ಯಯನ ಮಾಡಲು ನಗರಾಭಿವೃದ್ಧಿ ಇಲಾಖೆಯು ಬಿಬಿಎಂಪಿಯ ವಿಶೇಷ ಆಯುಕ್ತ (ಕಂದಾಯ) ದೀಪಕ್ ಆರ್ ಎಲ್ ಅವರ ಅಧ್ಯಕ್ಷತೆಯಲ್ಲಿ ಉಪ ಸಮಿತಿಯನ್ನು ರಚಿಸಿದೆ.

ಹೆಚ್ಚಿನ ಆಕ್ಷೇಪಣೆಗಳು ಹೊಸ ಗಡಿಗಳಿಗೆ ಸಂಬಂಧಿಸಿವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. “ವಾರ್ಡ್‌ನ್ನು ಎರಡು ಭಾಗಗಳಾಗಿ ವಿಭಜಿಸುವ ರಾಷ್ಟ್ರೀಯ ಹೆದ್ದಾರಿ ಗೊಂದಲಕ್ಕೆ ಕಾರಣವಾಗಲಿದೆ ಎಂದು ಕೆಲವು ನಿವಾಸಿಗಳು ಆಕ್ಷೇಪಿಸಿದ್ದಾರೆ. ಆ ಆಕ್ಷೇಪಣೆಗಳ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಲಿದೆ” ಎಂದು ಹೇಳಿದ್ದಾರೆ.

ಕರ್ನಾಟಕ ನಗರಾಭಿವೃದ್ಧಿ ಇಲಾಖೆ ಜೂನ್ 23 ರಂದು ವಿಂಗಡಣೆ ಮಾಡಲಾದ ವಾರ್ಡ್‌ಗಳ ಕರಡನ್ನು ಅಧಿಸೂಚಿಸಿತ್ತು. ವಾರ್ಡ್‌ಗಳ ಸಂಖ್ಯೆಯನ್ನು 198 ರಿಂದ 243 ಕ್ಕೆ ಹೆಚ್ಚಿಸಿ, ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಿತ್ತು.

ಇದನ್ನೂ ಓದಿ: ಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

ಹಿಂದಿನ ವಾರ್ಡ್‌ಗಳು 28,000 ರಿಂದ 1 ಲಕ್ಷದವರೆಗಿನ ಜನಸಂಖ್ಯೆಯೊಂದಿಗೆ ಭಾರಿ ಅಸಮಾನತೆಯನ್ನು ಹೊಂದಿದ್ದರೆ, ಹೊಸ ವಾರ್ಡ್‌ಗಳು ಸರಾಸರಿ 34,700 ಜನಸಂಖ್ಯೆಯನ್ನು ಹೊಂದಿವೆ. ಆದಾಗ್ಯೂ, 2011 ರ ಜನಗಣತಿಯ ಆಧಾರದ ಮೇಲೆ ಡಿಲಿಮಿಟೇಶನ್ ಪ್ರಕ್ರಿಯೆಯು ಹಳೆಯ ಜನಸಂಖ್ಯೆಯ ಆಧಾರವಾಗಿ ಮಾಡಲಾಗಿದೆ ಎಂಬ ಟೀಕೆಗೆ ಒಳಗಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...