Homeಕರ್ನಾಟಕಬಿಬಿಎಂಪಿ: 243 ವಾರ್ಡ್‌ ವಿಂಗಡನೆಗೆ ಅಂತಿಮ ಅಧಿಸೂಚನೆ

ಬಿಬಿಎಂಪಿ: 243 ವಾರ್ಡ್‌ ವಿಂಗಡನೆಗೆ ಅಂತಿಮ ಅಧಿಸೂಚನೆ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ 243 ವಾರ್ಡ್‌ಗಳ ಅಂತಿಮ ಡಿಲಿಮಿಟೇಶನ್ ವರದಿಯನ್ನು ರಾಜ್ಯ ಸರ್ಕಾರ ಗುರುವಾರ ಅಧಿಸೂಚನೆ ನೀಡಿದೆ. ಬಿಬಿಎಂಪಿ ಚುನಾವಣೆಯನ್ನು ಎರಡು ವರ್ಷಗಳ ಕಾಲ ವಿಳಂಬಗೊಳಿಸಿದ್ದ ಕಸರತ್ತು ಕೊನೆಗೂ ಪೂರ್ಣಗೊಂಡಿದೆ.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಒಂದು ವಾರ್ಡ್‌ಗೆ ಸ್ಯಾಂಡಲ್‌ವುಡ್ ಸ್ಟಾರ್ ದಿವಂಗತ ಪುನೀತ್ ರಾಜ್‌ಕುಮಾರ್ ಹೆಸರಿಡಲಾಗಿದೆ ಎಂಬುದು ವರದಿಯ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. 3,833 ಆಕ್ಷೇಪಣೆಗಳ ಪೈಕಿ 1,800 ಕ್ಕಿಂತ ಹೆಚ್ಚು ಆಕ್ಷೇಪಣೆಗಳನ್ನು ಅಂತಿಮ ವರದಿಯಲ್ಲಿ ಪರಿಗಣಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

243 ವಾರ್ಡ್‌ಗಳಿಗೆ ಗಡಿಗಳ ಅಂತಿಮಗೊಳಿಸುವಿಕೆಯು ಬಿಬಿಎಂಪಿಗೆ ಚುನಾವಣಾ ಪ್ರಕ್ರಿಯೆಯನ್ನು ವೇಗವಾಗಿ ಮಾಡುವ ನಿರೀಕ್ಷೆಯಿದೆ. ಬಿಬಿಎಂಪಿಯ ಅವಧಿಯು ಸೆಪ್ಟೆಂಬರ್ 2020 ರಲ್ಲಿ ಮುಕ್ತಾಯಗೊಂಡಿತ್ತು. ಉಳಿದಿರುವಂತೆ, ವಾರ್ಡ್‌ಗಳ ಮೀಸಲಾತಿಯನ್ನು ಮುಂದಿನ ಒಂದು ಅಥವಾ ಎರಡು ವಾರಗಳಲ್ಲಿ ಪ್ರಕಟಿಸಬಹುದು ಎಂದು ವರದಿಯಾಗಿದೆ.

ನಾಗರಿಕರು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಗಣಿಸಿ ಸಿದ್ಧಪಡಿಸಿದ ಅಂತಿಮ ವರದಿಯಲ್ಲಿ ಕನಿಷ್ಠ 18 ವಾರ್ಡ್‌ಗಳ ಹೆಸರನ್ನು ಬದಲಾಯಿಸಲಾಗಿದೆ. ಜೊತೆಗೆ 42 ವಾರ್ಡ್‌ಗಳಿಗೆ ಮತ್ತೊಮ್ಮೆ ಗಡಿಯನ್ನು ಮರು ರಚಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್‌‌ ವರದಿ ತಿಳಿಸಿವೆ. ಆಕ್ಷೇಪಣೆಗಳ ಆಧಾರದ ಮೇಲೆ ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

3,833 ಆಕ್ಷೇಪಣೆಗಳಲ್ಲಿ ಅರ್ಧದಷ್ಟು ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಬಂದಿವೆ. ಇವುಗಳಲ್ಲಿ ಹೆಚ್ಚಿನ ಆಕ್ಷೇಪಣೆಗಳು ವಾರ್ಡ್‌ನ ಹೆಸರು ಬದಲಾವಣೆಗೆ ವಿರುದ್ಧವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಆರ್ ಪುರಂನಿಂದ 479 ಆಕ್ಷೇಪಣೆಗಳು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹುತಾತ್ಮ ಚೌಕ ಸಂರಕ್ಷಣೆಗೆ ಆಗ್ರಹ; ಸಹಿ ಸಂಗ್ರಹ ಅಭಿಯಾನ ಆರಂಭ

ಗಾಂಧಿನಗರ ಮತ್ತು ಆನೇಕಲ್ ವಿಧಾನಸಭಾ ಕ್ಷೇತ್ರಗಳಿಂದ ಯಾವುದೇ ಆಕ್ಷೇಪ ವ್ಯಕ್ತವಾಗಿಲ್ಲ ಎಂಬುದು ಕುತೂಹಲ ಮೂಡಿಸಿದೆ. ಆಕ್ಷೇಪಣೆಗಳನ್ನು ಅಧ್ಯಯನ ಮಾಡಲು ನಗರಾಭಿವೃದ್ಧಿ ಇಲಾಖೆಯು ಬಿಬಿಎಂಪಿಯ ವಿಶೇಷ ಆಯುಕ್ತ (ಕಂದಾಯ) ದೀಪಕ್ ಆರ್ ಎಲ್ ಅವರ ಅಧ್ಯಕ್ಷತೆಯಲ್ಲಿ ಉಪ ಸಮಿತಿಯನ್ನು ರಚಿಸಿದೆ.

ಹೆಚ್ಚಿನ ಆಕ್ಷೇಪಣೆಗಳು ಹೊಸ ಗಡಿಗಳಿಗೆ ಸಂಬಂಧಿಸಿವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. “ವಾರ್ಡ್‌ನ್ನು ಎರಡು ಭಾಗಗಳಾಗಿ ವಿಭಜಿಸುವ ರಾಷ್ಟ್ರೀಯ ಹೆದ್ದಾರಿ ಗೊಂದಲಕ್ಕೆ ಕಾರಣವಾಗಲಿದೆ ಎಂದು ಕೆಲವು ನಿವಾಸಿಗಳು ಆಕ್ಷೇಪಿಸಿದ್ದಾರೆ. ಆ ಆಕ್ಷೇಪಣೆಗಳ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಲಿದೆ” ಎಂದು ಹೇಳಿದ್ದಾರೆ.

ಕರ್ನಾಟಕ ನಗರಾಭಿವೃದ್ಧಿ ಇಲಾಖೆ ಜೂನ್ 23 ರಂದು ವಿಂಗಡಣೆ ಮಾಡಲಾದ ವಾರ್ಡ್‌ಗಳ ಕರಡನ್ನು ಅಧಿಸೂಚಿಸಿತ್ತು. ವಾರ್ಡ್‌ಗಳ ಸಂಖ್ಯೆಯನ್ನು 198 ರಿಂದ 243 ಕ್ಕೆ ಹೆಚ್ಚಿಸಿ, ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಿತ್ತು.

ಇದನ್ನೂ ಓದಿ: ಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

ಹಿಂದಿನ ವಾರ್ಡ್‌ಗಳು 28,000 ರಿಂದ 1 ಲಕ್ಷದವರೆಗಿನ ಜನಸಂಖ್ಯೆಯೊಂದಿಗೆ ಭಾರಿ ಅಸಮಾನತೆಯನ್ನು ಹೊಂದಿದ್ದರೆ, ಹೊಸ ವಾರ್ಡ್‌ಗಳು ಸರಾಸರಿ 34,700 ಜನಸಂಖ್ಯೆಯನ್ನು ಹೊಂದಿವೆ. ಆದಾಗ್ಯೂ, 2011 ರ ಜನಗಣತಿಯ ಆಧಾರದ ಮೇಲೆ ಡಿಲಿಮಿಟೇಶನ್ ಪ್ರಕ್ರಿಯೆಯು ಹಳೆಯ ಜನಸಂಖ್ಯೆಯ ಆಧಾರವಾಗಿ ಮಾಡಲಾಗಿದೆ ಎಂಬ ಟೀಕೆಗೆ ಒಳಗಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...