Homeಕರ್ನಾಟಕಬಿಬಿಎಂಪಿ: 243 ವಾರ್ಡ್‌ ವಿಂಗಡನೆಗೆ ಅಂತಿಮ ಅಧಿಸೂಚನೆ

ಬಿಬಿಎಂಪಿ: 243 ವಾರ್ಡ್‌ ವಿಂಗಡನೆಗೆ ಅಂತಿಮ ಅಧಿಸೂಚನೆ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ 243 ವಾರ್ಡ್‌ಗಳ ಅಂತಿಮ ಡಿಲಿಮಿಟೇಶನ್ ವರದಿಯನ್ನು ರಾಜ್ಯ ಸರ್ಕಾರ ಗುರುವಾರ ಅಧಿಸೂಚನೆ ನೀಡಿದೆ. ಬಿಬಿಎಂಪಿ ಚುನಾವಣೆಯನ್ನು ಎರಡು ವರ್ಷಗಳ ಕಾಲ ವಿಳಂಬಗೊಳಿಸಿದ್ದ ಕಸರತ್ತು ಕೊನೆಗೂ ಪೂರ್ಣಗೊಂಡಿದೆ.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಒಂದು ವಾರ್ಡ್‌ಗೆ ಸ್ಯಾಂಡಲ್‌ವುಡ್ ಸ್ಟಾರ್ ದಿವಂಗತ ಪುನೀತ್ ರಾಜ್‌ಕುಮಾರ್ ಹೆಸರಿಡಲಾಗಿದೆ ಎಂಬುದು ವರದಿಯ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. 3,833 ಆಕ್ಷೇಪಣೆಗಳ ಪೈಕಿ 1,800 ಕ್ಕಿಂತ ಹೆಚ್ಚು ಆಕ್ಷೇಪಣೆಗಳನ್ನು ಅಂತಿಮ ವರದಿಯಲ್ಲಿ ಪರಿಗಣಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

243 ವಾರ್ಡ್‌ಗಳಿಗೆ ಗಡಿಗಳ ಅಂತಿಮಗೊಳಿಸುವಿಕೆಯು ಬಿಬಿಎಂಪಿಗೆ ಚುನಾವಣಾ ಪ್ರಕ್ರಿಯೆಯನ್ನು ವೇಗವಾಗಿ ಮಾಡುವ ನಿರೀಕ್ಷೆಯಿದೆ. ಬಿಬಿಎಂಪಿಯ ಅವಧಿಯು ಸೆಪ್ಟೆಂಬರ್ 2020 ರಲ್ಲಿ ಮುಕ್ತಾಯಗೊಂಡಿತ್ತು. ಉಳಿದಿರುವಂತೆ, ವಾರ್ಡ್‌ಗಳ ಮೀಸಲಾತಿಯನ್ನು ಮುಂದಿನ ಒಂದು ಅಥವಾ ಎರಡು ವಾರಗಳಲ್ಲಿ ಪ್ರಕಟಿಸಬಹುದು ಎಂದು ವರದಿಯಾಗಿದೆ.

ನಾಗರಿಕರು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಗಣಿಸಿ ಸಿದ್ಧಪಡಿಸಿದ ಅಂತಿಮ ವರದಿಯಲ್ಲಿ ಕನಿಷ್ಠ 18 ವಾರ್ಡ್‌ಗಳ ಹೆಸರನ್ನು ಬದಲಾಯಿಸಲಾಗಿದೆ. ಜೊತೆಗೆ 42 ವಾರ್ಡ್‌ಗಳಿಗೆ ಮತ್ತೊಮ್ಮೆ ಗಡಿಯನ್ನು ಮರು ರಚಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್‌‌ ವರದಿ ತಿಳಿಸಿವೆ. ಆಕ್ಷೇಪಣೆಗಳ ಆಧಾರದ ಮೇಲೆ ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

3,833 ಆಕ್ಷೇಪಣೆಗಳಲ್ಲಿ ಅರ್ಧದಷ್ಟು ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಬಂದಿವೆ. ಇವುಗಳಲ್ಲಿ ಹೆಚ್ಚಿನ ಆಕ್ಷೇಪಣೆಗಳು ವಾರ್ಡ್‌ನ ಹೆಸರು ಬದಲಾವಣೆಗೆ ವಿರುದ್ಧವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಆರ್ ಪುರಂನಿಂದ 479 ಆಕ್ಷೇಪಣೆಗಳು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹುತಾತ್ಮ ಚೌಕ ಸಂರಕ್ಷಣೆಗೆ ಆಗ್ರಹ; ಸಹಿ ಸಂಗ್ರಹ ಅಭಿಯಾನ ಆರಂಭ

ಗಾಂಧಿನಗರ ಮತ್ತು ಆನೇಕಲ್ ವಿಧಾನಸಭಾ ಕ್ಷೇತ್ರಗಳಿಂದ ಯಾವುದೇ ಆಕ್ಷೇಪ ವ್ಯಕ್ತವಾಗಿಲ್ಲ ಎಂಬುದು ಕುತೂಹಲ ಮೂಡಿಸಿದೆ. ಆಕ್ಷೇಪಣೆಗಳನ್ನು ಅಧ್ಯಯನ ಮಾಡಲು ನಗರಾಭಿವೃದ್ಧಿ ಇಲಾಖೆಯು ಬಿಬಿಎಂಪಿಯ ವಿಶೇಷ ಆಯುಕ್ತ (ಕಂದಾಯ) ದೀಪಕ್ ಆರ್ ಎಲ್ ಅವರ ಅಧ್ಯಕ್ಷತೆಯಲ್ಲಿ ಉಪ ಸಮಿತಿಯನ್ನು ರಚಿಸಿದೆ.

ಹೆಚ್ಚಿನ ಆಕ್ಷೇಪಣೆಗಳು ಹೊಸ ಗಡಿಗಳಿಗೆ ಸಂಬಂಧಿಸಿವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. “ವಾರ್ಡ್‌ನ್ನು ಎರಡು ಭಾಗಗಳಾಗಿ ವಿಭಜಿಸುವ ರಾಷ್ಟ್ರೀಯ ಹೆದ್ದಾರಿ ಗೊಂದಲಕ್ಕೆ ಕಾರಣವಾಗಲಿದೆ ಎಂದು ಕೆಲವು ನಿವಾಸಿಗಳು ಆಕ್ಷೇಪಿಸಿದ್ದಾರೆ. ಆ ಆಕ್ಷೇಪಣೆಗಳ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಲಿದೆ” ಎಂದು ಹೇಳಿದ್ದಾರೆ.

ಕರ್ನಾಟಕ ನಗರಾಭಿವೃದ್ಧಿ ಇಲಾಖೆ ಜೂನ್ 23 ರಂದು ವಿಂಗಡಣೆ ಮಾಡಲಾದ ವಾರ್ಡ್‌ಗಳ ಕರಡನ್ನು ಅಧಿಸೂಚಿಸಿತ್ತು. ವಾರ್ಡ್‌ಗಳ ಸಂಖ್ಯೆಯನ್ನು 198 ರಿಂದ 243 ಕ್ಕೆ ಹೆಚ್ಚಿಸಿ, ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಿತ್ತು.

ಇದನ್ನೂ ಓದಿ: ಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

ಹಿಂದಿನ ವಾರ್ಡ್‌ಗಳು 28,000 ರಿಂದ 1 ಲಕ್ಷದವರೆಗಿನ ಜನಸಂಖ್ಯೆಯೊಂದಿಗೆ ಭಾರಿ ಅಸಮಾನತೆಯನ್ನು ಹೊಂದಿದ್ದರೆ, ಹೊಸ ವಾರ್ಡ್‌ಗಳು ಸರಾಸರಿ 34,700 ಜನಸಂಖ್ಯೆಯನ್ನು ಹೊಂದಿವೆ. ಆದಾಗ್ಯೂ, 2011 ರ ಜನಗಣತಿಯ ಆಧಾರದ ಮೇಲೆ ಡಿಲಿಮಿಟೇಶನ್ ಪ್ರಕ್ರಿಯೆಯು ಹಳೆಯ ಜನಸಂಖ್ಯೆಯ ಆಧಾರವಾಗಿ ಮಾಡಲಾಗಿದೆ ಎಂಬ ಟೀಕೆಗೆ ಒಳಗಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....