Homeಕರ್ನಾಟಕಮೂರೇ ದಿನದಲ್ಲಿ 6 ಕೋಟಿ ವೆಚ್ಚದ ರಸ್ತೆ ಕುಸಿತ: ಎಂಜಿನಿಯರ್‌ಗಳಿಗೆ ನೋಟಿಸ್ ನೀಡಿದ ಬಿಬಿಎಂಪಿ

ಮೂರೇ ದಿನದಲ್ಲಿ 6 ಕೋಟಿ ವೆಚ್ಚದ ರಸ್ತೆ ಕುಸಿತ: ಎಂಜಿನಿಯರ್‌ಗಳಿಗೆ ನೋಟಿಸ್ ನೀಡಿದ ಬಿಬಿಎಂಪಿ

ಘಟನೆ ಬಗ್ಗೆ ವರದಿ ನೀಡುವಂತೆ ಪ್ರಧಾನಿ ಕಚೇರಿಯಿಂದ ಮುಖ್ಯಮಂತ್ರಿಗಳಿಗೆ ಗುರುವಾರ ಸೂಚನೆ ಬಂದಿತ್ತು.

- Advertisement -
- Advertisement -

ಬೆಂಗಳೂರು ವಿಶ್ವವಿದ್ಯಾನಿಲಯ ಆವರಣದಲ್ಲಿರುವ ಮರಿಯಪ್ಪನಪಾಳ್ಯ ಮುಖ್ಯ ರಸ್ತೆಗೆ ಕಳಪೆ ಡಾಂಬರೀಕರಣ ಮಾಡಿರುವ ಪ್ರಕರಣ ಕುರಿತು ಗುರುವಾರ ಆರ್‌ಆರ್‌ನಗರ ವಿಭಾಗದ ಮೂವರು ಎಂಜಿನಿಯರ್‌ಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶೋಕಾಸ್ ನೋಟಿಸ್ ನೀಡಿದೆ.

ಡಾ. .ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ಬಳಿಯ ರಸ್ತೆಯನ್ನು ಬೇಸ್ ಕ್ಯಾಂಪಸ್ ಉದ್ಘಾಟನೆಗೆ ಪ್ರಧಾನಿ ಮೋದಿ ಭೇಟಿ ನೀಡುವ ಕೆಲವೇ ದಿನಗಳ ಮುಂಚೆ ಹಾಕಲಾಗಿತ್ತು. ಇದಕ್ಕೆ 6 ಕೋಟಿ ರೂಪಾಯಿ ವೆಚ್ಚ ಮಾಡಲಾಗಿತ್ತು. ಆದರೆ, ಮೂರೇ ದಿನಕ್ಕೆ ರಸ್ತೆ ಕುಸಿದಿದ್ದು, ಡಾಂಬರ್‌ ಪದರ ಎದ್ದು ರಸ್ತೆ ಕಿತ್ತು ಬರುತ್ತಿದೆ.

ಈ ರಸ್ತೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ವಿಷಯ ಪ್ರಧಾನಿ ಕಚೇರಿಯವರೆಗೂ ತಲುಪಿತ್ತು. ಇದರ ಬಗ್ಗೆ ವರದಿ ನೀಡುವಂತೆ ಪ್ರಧಾನಿ ಕಚೇರಿಯಿಂದ ಮುಖ್ಯಮಂತ್ರಿಗಳಿಗೆ ಸೂಚನೆ ಬಂದಿತ್ತು. ಇದರ ಬೆನ್ನಲೇ ಕಳಪೆ ಕಾಮಗಾರಿ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಗುರುವಾರ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: 24 ಕೋಟಿ ರೂಪಾಯಿ ವೆಚ್ಚ ಮಾಡಿದ ಬಿಬಿಎಂಪಿ

ಆರ್‌ಆರ್‌ನಗರದ ಕಾರ್ಯಪಾಲಕ ಎಂಜಿನಿಯರ್‌ ಎಂ.ಟಿ. ಬಾಲಾಜಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಎಚ್‌.ಜೆ ರವಿ ಮತ್ತು ಸಹಾಯಕ ಎಂಜಿನಿಯರ್‌ ಐ.ಕೆ. ವಿಶ್ವಾಸ್‌ ಅವರಿಗೆ ನೋಟಿಸ್‌ ನೀಡಲಾಗಿದೆ.

‘ಬೆಂಗಳೂರು ವಿಶ್ವವಿದ್ಯಾನಿಲಯ ಆವರಣದಲ್ಲಿ ಮರಿಯಪ್ಪನಪಾಳ್ಯ ಮುಖ್ಯರಸ್ತೆಯಲ್ಲಿ ಮಾಡಲಾಗಿರುವ ಡಾಂಬರೀಕರಣ ಕಾಮಗಾರಿ ಕಳಪೆ ಕಾಮಗಾರಿ ಎಂದು ವರದಿಯಾಗಿದ್ದು, ಕೆಲಸದ ಅನುಷ್ಠಾನದಲ್ಲಿ ಯಾವುದೇ ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನವನ್ನು ಅನುಸರಿಸಲಾಗಿಲ್ಲ ಎಂದು ಭಾವಿಸಲಾಗಿದೆ. ಆದ್ದರಿಂದ, ಪರೀಕ್ಷಾ ವರದಿಗಳ ಜೊತೆಗೆ ಈ ಸಮಸ್ಯೆಯ ಬಗ್ಗೆ ನಿಮ್ಮ ವಿವರಣೆಯನ್ನು ಕೇಳಲು ಈ ಮೂಲಕ ಶೋಕಾಸ್ ನೋಟಿಸ್ ನೀಡಲಾಗಿದೆ. ಸ್ಟ್ಯಾಂಡರ್ಡ್ ಆಪರೇಷನ್ ಪ್ರೊಸೀಜರ್ ಪ್ರಕಾರ ಕೆಲಸವನ್ನು ಕಾರ್ಯಗತಗೊಳಿಸಲು ವಿಫಲವಾದ ಮತ್ತು ಸೈಟ್‌ನಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ನಿಮ್ಮ ಕರ್ತವ್ಯಗಳನ್ನು ನಿರ್ವಹಿಸಲು ವಿಫಲವಾಗಿರುವ ಕಾರಣ ನಿಮ್ಮ ಮೇಲೆ ಕ್ರಮ ಏಕೆ ತೆಗೆದುಕೊಳ್ಳಬಾರದು ಎಂಬುದನ್ನು ವಿವರಿಸಬೇಕು” ಎಂದು ಶೋಕಾಸ್ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಎರಡು ದಿನಗಳ ರಾಜ್ಯ ಪ್ರವಾಸದ ಅಂಗವಾಗಿ ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಿದ್ದರು. ಆಗ ಬಿಬಿಎಂಪಿ 24 ಕೋಟಿ ರೂಪಾಯಿ ವೆಚ್ಚ ಮಾಡಿ ರಸ್ತೆ, ವಿದ್ಯುತ್‌ ದೀಪ, ಚರಂಡಿ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಿತ್ತು. ಇದರ ಭಾಗವಾಗಿ ಜ್ಞಾನಭಾರತಿಯ ಡಾ.ಬಿ.ಆರ್.ಅಂಬೇಡ್ಕರ್‌ ಸ್ಕೂಲ್ ಆಫ್‌ ಎಕಾನಮಿಕ್ಸ್‌ (ಬೇಸ್‌) ಕ್ಯಾಂಪಸ್‌ ಬಳಿ 6 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಮಾಡಲಾಗಿತ್ತು. ಅದೇ ರಸ್ತೆ ಕುಸಿದಿದೆ.

ಈ ರಸ್ತೆಯ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲಾಣದಲ್ಲಿ ವೈರಲ್ ಆಗಿದ್ದವು. ಕಳಪೆ ಕಾಮಗಾರಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಸಾಕ್ಷಿ ಎಂದೆಲ್ಲ ಟೀಕೆ ವ್ಯಕ್ತವಾಗಿತ್ತು. ಇದರಿಂದ ಪ್ರಧಾನಿ ಕಚೇರಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ವರದಿ ಕೇಳಿತ್ತು. ಇದರ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಬಿಬಿಎಂಪಿಗೆ ವರದಿ ನೀಡಿ, ಕ್ರಮ ಕೈಗೊಳ್ಳಲು ಸೂಚಿಸಿದ್ದರು.


ಇದನ್ನೂ ಓದಿ: ಮೋದಿ ಭೇಟಿಗಾಗಿ ಡಾಂಬರೀಕರಣ ಮಾಡಿದ್ದ 6 ಕೋಟಿ ವೆಚ್ಚದ ರಸ್ತೆ ಮೂರೇ ದಿನಕ್ಕೆ ಕುಸಿತ, ವರದಿ ಕೇಳಿದ ಪ್ರಧಾನಿ ಕಚೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...