Homeಕರ್ನಾಟಕಮೂರೇ ದಿನದಲ್ಲಿ 6 ಕೋಟಿ ವೆಚ್ಚದ ರಸ್ತೆ ಕುಸಿತ: ಎಂಜಿನಿಯರ್‌ಗಳಿಗೆ ನೋಟಿಸ್ ನೀಡಿದ ಬಿಬಿಎಂಪಿ

ಮೂರೇ ದಿನದಲ್ಲಿ 6 ಕೋಟಿ ವೆಚ್ಚದ ರಸ್ತೆ ಕುಸಿತ: ಎಂಜಿನಿಯರ್‌ಗಳಿಗೆ ನೋಟಿಸ್ ನೀಡಿದ ಬಿಬಿಎಂಪಿ

ಘಟನೆ ಬಗ್ಗೆ ವರದಿ ನೀಡುವಂತೆ ಪ್ರಧಾನಿ ಕಚೇರಿಯಿಂದ ಮುಖ್ಯಮಂತ್ರಿಗಳಿಗೆ ಗುರುವಾರ ಸೂಚನೆ ಬಂದಿತ್ತು.

- Advertisement -
- Advertisement -

ಬೆಂಗಳೂರು ವಿಶ್ವವಿದ್ಯಾನಿಲಯ ಆವರಣದಲ್ಲಿರುವ ಮರಿಯಪ್ಪನಪಾಳ್ಯ ಮುಖ್ಯ ರಸ್ತೆಗೆ ಕಳಪೆ ಡಾಂಬರೀಕರಣ ಮಾಡಿರುವ ಪ್ರಕರಣ ಕುರಿತು ಗುರುವಾರ ಆರ್‌ಆರ್‌ನಗರ ವಿಭಾಗದ ಮೂವರು ಎಂಜಿನಿಯರ್‌ಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶೋಕಾಸ್ ನೋಟಿಸ್ ನೀಡಿದೆ.

ಡಾ. .ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ಬಳಿಯ ರಸ್ತೆಯನ್ನು ಬೇಸ್ ಕ್ಯಾಂಪಸ್ ಉದ್ಘಾಟನೆಗೆ ಪ್ರಧಾನಿ ಮೋದಿ ಭೇಟಿ ನೀಡುವ ಕೆಲವೇ ದಿನಗಳ ಮುಂಚೆ ಹಾಕಲಾಗಿತ್ತು. ಇದಕ್ಕೆ 6 ಕೋಟಿ ರೂಪಾಯಿ ವೆಚ್ಚ ಮಾಡಲಾಗಿತ್ತು. ಆದರೆ, ಮೂರೇ ದಿನಕ್ಕೆ ರಸ್ತೆ ಕುಸಿದಿದ್ದು, ಡಾಂಬರ್‌ ಪದರ ಎದ್ದು ರಸ್ತೆ ಕಿತ್ತು ಬರುತ್ತಿದೆ.

ಈ ರಸ್ತೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ವಿಷಯ ಪ್ರಧಾನಿ ಕಚೇರಿಯವರೆಗೂ ತಲುಪಿತ್ತು. ಇದರ ಬಗ್ಗೆ ವರದಿ ನೀಡುವಂತೆ ಪ್ರಧಾನಿ ಕಚೇರಿಯಿಂದ ಮುಖ್ಯಮಂತ್ರಿಗಳಿಗೆ ಸೂಚನೆ ಬಂದಿತ್ತು. ಇದರ ಬೆನ್ನಲೇ ಕಳಪೆ ಕಾಮಗಾರಿ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಗುರುವಾರ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: 24 ಕೋಟಿ ರೂಪಾಯಿ ವೆಚ್ಚ ಮಾಡಿದ ಬಿಬಿಎಂಪಿ

ಆರ್‌ಆರ್‌ನಗರದ ಕಾರ್ಯಪಾಲಕ ಎಂಜಿನಿಯರ್‌ ಎಂ.ಟಿ. ಬಾಲಾಜಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಎಚ್‌.ಜೆ ರವಿ ಮತ್ತು ಸಹಾಯಕ ಎಂಜಿನಿಯರ್‌ ಐ.ಕೆ. ವಿಶ್ವಾಸ್‌ ಅವರಿಗೆ ನೋಟಿಸ್‌ ನೀಡಲಾಗಿದೆ.

‘ಬೆಂಗಳೂರು ವಿಶ್ವವಿದ್ಯಾನಿಲಯ ಆವರಣದಲ್ಲಿ ಮರಿಯಪ್ಪನಪಾಳ್ಯ ಮುಖ್ಯರಸ್ತೆಯಲ್ಲಿ ಮಾಡಲಾಗಿರುವ ಡಾಂಬರೀಕರಣ ಕಾಮಗಾರಿ ಕಳಪೆ ಕಾಮಗಾರಿ ಎಂದು ವರದಿಯಾಗಿದ್ದು, ಕೆಲಸದ ಅನುಷ್ಠಾನದಲ್ಲಿ ಯಾವುದೇ ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನವನ್ನು ಅನುಸರಿಸಲಾಗಿಲ್ಲ ಎಂದು ಭಾವಿಸಲಾಗಿದೆ. ಆದ್ದರಿಂದ, ಪರೀಕ್ಷಾ ವರದಿಗಳ ಜೊತೆಗೆ ಈ ಸಮಸ್ಯೆಯ ಬಗ್ಗೆ ನಿಮ್ಮ ವಿವರಣೆಯನ್ನು ಕೇಳಲು ಈ ಮೂಲಕ ಶೋಕಾಸ್ ನೋಟಿಸ್ ನೀಡಲಾಗಿದೆ. ಸ್ಟ್ಯಾಂಡರ್ಡ್ ಆಪರೇಷನ್ ಪ್ರೊಸೀಜರ್ ಪ್ರಕಾರ ಕೆಲಸವನ್ನು ಕಾರ್ಯಗತಗೊಳಿಸಲು ವಿಫಲವಾದ ಮತ್ತು ಸೈಟ್‌ನಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ನಿಮ್ಮ ಕರ್ತವ್ಯಗಳನ್ನು ನಿರ್ವಹಿಸಲು ವಿಫಲವಾಗಿರುವ ಕಾರಣ ನಿಮ್ಮ ಮೇಲೆ ಕ್ರಮ ಏಕೆ ತೆಗೆದುಕೊಳ್ಳಬಾರದು ಎಂಬುದನ್ನು ವಿವರಿಸಬೇಕು” ಎಂದು ಶೋಕಾಸ್ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಎರಡು ದಿನಗಳ ರಾಜ್ಯ ಪ್ರವಾಸದ ಅಂಗವಾಗಿ ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಿದ್ದರು. ಆಗ ಬಿಬಿಎಂಪಿ 24 ಕೋಟಿ ರೂಪಾಯಿ ವೆಚ್ಚ ಮಾಡಿ ರಸ್ತೆ, ವಿದ್ಯುತ್‌ ದೀಪ, ಚರಂಡಿ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಿತ್ತು. ಇದರ ಭಾಗವಾಗಿ ಜ್ಞಾನಭಾರತಿಯ ಡಾ.ಬಿ.ಆರ್.ಅಂಬೇಡ್ಕರ್‌ ಸ್ಕೂಲ್ ಆಫ್‌ ಎಕಾನಮಿಕ್ಸ್‌ (ಬೇಸ್‌) ಕ್ಯಾಂಪಸ್‌ ಬಳಿ 6 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಮಾಡಲಾಗಿತ್ತು. ಅದೇ ರಸ್ತೆ ಕುಸಿದಿದೆ.

ಈ ರಸ್ತೆಯ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲಾಣದಲ್ಲಿ ವೈರಲ್ ಆಗಿದ್ದವು. ಕಳಪೆ ಕಾಮಗಾರಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಸಾಕ್ಷಿ ಎಂದೆಲ್ಲ ಟೀಕೆ ವ್ಯಕ್ತವಾಗಿತ್ತು. ಇದರಿಂದ ಪ್ರಧಾನಿ ಕಚೇರಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ವರದಿ ಕೇಳಿತ್ತು. ಇದರ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಬಿಬಿಎಂಪಿಗೆ ವರದಿ ನೀಡಿ, ಕ್ರಮ ಕೈಗೊಳ್ಳಲು ಸೂಚಿಸಿದ್ದರು.


ಇದನ್ನೂ ಓದಿ: ಮೋದಿ ಭೇಟಿಗಾಗಿ ಡಾಂಬರೀಕರಣ ಮಾಡಿದ್ದ 6 ಕೋಟಿ ವೆಚ್ಚದ ರಸ್ತೆ ಮೂರೇ ದಿನಕ್ಕೆ ಕುಸಿತ, ವರದಿ ಕೇಳಿದ ಪ್ರಧಾನಿ ಕಚೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...