Homeಕರ್ನಾಟಕಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟಕ್ಕೆ ಮೊಬೈಲ್ ಆ್ಯಪ್! ನಿರ್ಗತಿಕರು ಆಹಾರ ವಂಚಿತರಾಗಬೇಕೆ ಎಂದು ಕಾಂಗ್ರೆಸ್ ಆಕ್ರೋಶ

ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟಕ್ಕೆ ಮೊಬೈಲ್ ಆ್ಯಪ್! ನಿರ್ಗತಿಕರು ಆಹಾರ ವಂಚಿತರಾಗಬೇಕೆ ಎಂದು ಕಾಂಗ್ರೆಸ್ ಆಕ್ರೋಶ

ಕ್ಯಾಂಟೀನ್‌ಗಳಲ್ಲಿ ಕೆಲಸ ಮಾಡುವ ಹಲವು ಸಿಬ್ಬಂದಿ ಬಳಿ ಆ್ಯಪ್ ಹಾಕಿಕೊಳ್ಳುವ ಮೊಬೈಲ್ ಇಲ್ಲ.ಇರುವ ಮೊಬೈಲ್‌ಗೆ ಆ್ಯಪ್ ಹೊಂದುವುದಿಲ್ಲ ಎನ್ನಲಾಗಿದೆ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಲ್ಲಿ ಇಂದಿರಾ ಕ್ಯಾಂಟೀನ್‌ಗಳ ಮೂಲಕ ಉಚಿತ ಆಹಾರವನ್ನು ಪಡೆಯುವವರಿಂದ ಆಧಾರ್ ಮತ್ತು ಇತರ ವಿವರಗಳನ್ನು ಸಂಗ್ರಹಿಸಲಾಗುತ್ತಿತ್ತು. ಈ ಕ್ರಮದ ವಿರುದ್ಧವೇ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಈಗ ಒಂದು ಹೆಜ್ಜೆ ಮುಂದೆ ಹೋಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP), ಊಟ ಮಾಡುವವರ ಡೇಟಾ ಪಡೆಯಲು ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದೆ.

ಕ್ಯಾಂಟೀನ್ ಸಿಬ್ಬಂದಿಗಳು ಮೊಬೈಲ್‌ಗಳಲ್ಲಿ ಊಟ ಪಡೆಯುವರ ಮೊಬೈಲ್ ಸಂಖ್ಯೆ, ಮತ್ತು ಆಹಾರದ ಪೊಟ್ಟಣ ಹಿಡಿದುಕೊಂಡಿರುವ ಛಾಯಾಚಿತ್ರಗಳನ್ನು ಸೆರೆ ಹಿಡಿದು ಅಪ್‌ಲೋಡ್ ಮಾಡುವಂತೆ ಹೇಳಲಾಗಿದೆ. ಜೊತೆಗೆ ಮೂರಕ್ಕಿಂತ ಹೆಚ್ಚು ಆಹಾರ ಪೊಟ್ಟಣಗಳನ್ನು ವಿತರಿಸಿದರೆ, ಆಹಾರ ಪ್ಯಾಕೆಟ್‌ಗಳನ್ನು ಹಸ್ತಾಂತರಿಸುವ ಮೊದಲು ಸಿಬ್ಬಂದಿ ಒನ್ ಟೈಮ್ ಪಾಸ್‌ವರ್ಡ್ (ಒಟಿಪಿ) ಮತ್ತು ಕುಟುಂಬದ ಪಡಿತರ ಚೀಟಿಯನ್ನು ಈ ಆ್ಯಪ್ ಒಳಗೆ ನಮೂದಿಸಬೇಕು.

“ಇಂದಿರಾ ಕ್ಯಾಂಟೀನ್ ಪಾರ್ಸೆಲ್ ವಿತರಣೆ” (Indira Canteen Parcel Distribution) ಅಪ್ಲಿಕೇಶನ್ ಅನ್ನು ಬುಧವಾರ ಬೆಳಿಗ್ಗೆ ಬಿಡುಗಡೆ ಮಾಡಲಾಗಿದೆ. ಆದರೆ, ಕ್ಯಾಂಟೀನ್‌ಗಳಲ್ಲಿ ಕೆಲಸ ಮಾಡುವ ಹಲವು ಸಿಬ್ಬಂದಿ ಬಳಿ ಆ್ಯಪ್ ಹಾಕಿಕೊಳ್ಳುವ ಮೊಬೈಲ್ ಇಲ್ಲ. ಇರುವ ಮೊಬೈಲ್‌ಗೆ ಆ್ಯಪ್ ಹೊಂದುವುದಿಲ್ಲ ಎನ್ನಲಾಗಿದೆ.

ಕೆಲವರಿಗೆ  ಫೋಟೋಗಳನ್ನು ಅಪ್‌ಲೋಡ್ ಮಾಡುವಲ್ಲಿ ಆ್ಯಪ್‌ನಲ್ಲಿ ತೊಂದರೆ, ಆ್ಯಪ್ ಬಳಸಲು ತಾಂತ್ರಿಕ ಜ್ಞಾನದ ಕೊರತೆ ಸೇರಿದಂತೆ ಹಲವು ಕಾರಣದಿಂದಾಗಿ ಸಿಬ್ಬಂದಿಗೆ ತೊಂದರೆಯಾಗಿದ್ದು, ಕ್ಯಾಂಟೀನ್‌ನಲ್ಲಿ ಆಹಾರ ವಿತರಣೆ ಮಾಡುವಲ್ಲಿ ವಿಳಂಬವಾಗಿದೆ.

ಇದನ್ನೂ ಓದಿ: ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ಸರ್ಕಾರದ ಹೊಸ ನಿಯಮಗಳಿಗೆ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. “ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ಪಡೆಯಬೇಕೆಂದರೆ ದಾಖಲೆ ತೋರಿಸುವಂತಹ ಕೆಟ್ಟ ಸಂಪ್ರದಾಯ ಹಾಕಿದ ಬೆನ್ನಲ್ಲೇ ಈಗ ಮೊಬೈಲ್ ಅಪ್ಲಿಕೇಶನ್ ರಿಜಿಸ್ಟರ್ ಎಂಬ ಅಸಂಬದ್ಧಕ್ಕೆ ಮುಂದಾಗಿದೆ ಸರ್ಕಾರ. ಇಂತಹ ಅತಾರ್ಕಿಕ, ಅಪ್ರಬುದ್ದ ನಿರ್ಣಯ ಕೈಗೊಳ್ಳುವ ಬಿಬಿಎಂಪಿ ಅಧಿಕಾರಿಗಳಿಗೆ ಕೊಂಚವೂ ವಾಸ್ತವದ ಸವಾಲುಗಳ ಜ್ಞಾನ ಇಲ್ಲವೇ…?” ಎಂದು ಪ್ರಶ್ನಿಸಿದೆ.

ಗುರುವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ “ಅಪ್ಲಿಕೇಶನ್ ಮೂಲಕ ಯಾವ ಸಾಧನೆ ಮಾಡಲು ಹೊರಟಿದೆ ಸರ್ಕಾರ..? ಯಾವ ಉದ್ದೇಶಕ್ಕಾಗಿ ಈ ಡಾಟಾ ಸಂಗ್ರಹಿಸಲಾಗುತ್ತಿದೆ..? ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳಲ್ಲಿ ಸ್ಮಾರ್ಟ್ ಫೋನ್ ಇರುವುದೇ ವಿರಳ, ಅವರಿಗೆ ತಂತ್ರಜ್ಞಾನದ ಅರಿವೂ ಇಲ್ಲ. ಜನರ ಡಾಟಾ ಬಗ್ಗೆ ಸರ್ಕಾರಕ್ಕೆ ಏಕಿಷ್ಟು ಕುತೂಹಲ..? ಇಂತಹ ಅಸಂಬದ್ಧ ನಿಲ್ಲಿಸಿ, ಹಸಿದ ಎಲ್ಲಾ ಬಡವರಿಗೂ ಆಹಾರ ನೀಡಿ” ಎಂದಿದೆ.

’ಆಹಾರ ಪಡೆಯಲು ಬರುವ ಬಡಜನರಲ್ಲಿ ಮೊಬೈಲ್ ಫೋನ್ ಎಲ್ಲರ ಬಳಿ ಇರುತ್ತದೆಯೇ..? ಪಡಿತರ ಚೀಟಿ ಹೊಂದಿರದೇ ಇರುವ ಎಷ್ಟೋ ಮಂದಿ ಇದ್ದಾರೆ, ನಿರ್ಗತಿಕರಿದ್ದಾರೆ, ಭಿಕ್ಷುಕರಿದ್ದಾರೆ, ಇವರೆಲ್ಲರು ಆಹಾರ ವಂಚಿತರಗಬೇಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ? ನಿಮ್ಮ ಸರ್ಕಾರ ಯಾಕಿಷ್ಟು ಅಸಂಬದ್ಧ ಅವೈಜ್ಞಾನಿಕ ನಿರ್ಧಾರ ತೆಗೆದುಕೊಳ್ಳುತ್ತದೆ..?’ ಎಂದು ಪ್ರಶ್ನಿಸಿದ್ದಾರೆ.

ಇತ್ತ, ಕ್ಯಾಂಟೀನ್‌ಗಳಲ್ಲಿ ದುಷ್ಕೃತ್ಯದ ಅನುಮಾನ ಇರುವುದರಿಂದ, ದತ್ತಾಂಶಗಳ ಗೊಂದಲ ಹೋಗಲಾಡಿಸಲು ಮತ್ತು ಗುತ್ತಿಗೆದಾರರ ಮೇಲೆ ಕಣ್ಣಿಡಲು ಬಿಬಿಎಂಪಿಗೆ ಆ್ಯಪ್ ಪರಿಚಯಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಇಂದಿರಾ ಕ್ಯಾಂಟೀನ್‌ಗಳ ಮೂಲಕ ಉಚಿತವಾಗಿ ಆಹಾರ ವಿತರಣೆಯ ಉಸ್ತುವಾರಿ ವಹಿಸಿರುವ ವಿಶೇಷ ಆಯುಕ್ತರಾದ (ಹಣಕಾಸು) ತುಳಸಿ ಮದ್ದಿನೇನಿ ಹೇಳಿದ್ದಾರೆ.


ಇದನ್ನೂ ಓದಿ: ಯುಪಿ: ಸೋಂಕಿತ ರೋಗಿಯ ನಿರ್ಲಕ್ಷ್ಯದ ಬಗ್ಗೆ ಪತ್ರಕರ್ತರಿಗೆ ಮಾಹಿತಿ; ಗ್ರಾಮಸ್ಥನ ಮೇಲೆ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...