Homeಕರ್ನಾಟಕಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟಕ್ಕೆ ಮೊಬೈಲ್ ಆ್ಯಪ್! ನಿರ್ಗತಿಕರು ಆಹಾರ ವಂಚಿತರಾಗಬೇಕೆ ಎಂದು ಕಾಂಗ್ರೆಸ್ ಆಕ್ರೋಶ

ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟಕ್ಕೆ ಮೊಬೈಲ್ ಆ್ಯಪ್! ನಿರ್ಗತಿಕರು ಆಹಾರ ವಂಚಿತರಾಗಬೇಕೆ ಎಂದು ಕಾಂಗ್ರೆಸ್ ಆಕ್ರೋಶ

ಕ್ಯಾಂಟೀನ್‌ಗಳಲ್ಲಿ ಕೆಲಸ ಮಾಡುವ ಹಲವು ಸಿಬ್ಬಂದಿ ಬಳಿ ಆ್ಯಪ್ ಹಾಕಿಕೊಳ್ಳುವ ಮೊಬೈಲ್ ಇಲ್ಲ.ಇರುವ ಮೊಬೈಲ್‌ಗೆ ಆ್ಯಪ್ ಹೊಂದುವುದಿಲ್ಲ ಎನ್ನಲಾಗಿದೆ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಲ್ಲಿ ಇಂದಿರಾ ಕ್ಯಾಂಟೀನ್‌ಗಳ ಮೂಲಕ ಉಚಿತ ಆಹಾರವನ್ನು ಪಡೆಯುವವರಿಂದ ಆಧಾರ್ ಮತ್ತು ಇತರ ವಿವರಗಳನ್ನು ಸಂಗ್ರಹಿಸಲಾಗುತ್ತಿತ್ತು. ಈ ಕ್ರಮದ ವಿರುದ್ಧವೇ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಈಗ ಒಂದು ಹೆಜ್ಜೆ ಮುಂದೆ ಹೋಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP), ಊಟ ಮಾಡುವವರ ಡೇಟಾ ಪಡೆಯಲು ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದೆ.

ಕ್ಯಾಂಟೀನ್ ಸಿಬ್ಬಂದಿಗಳು ಮೊಬೈಲ್‌ಗಳಲ್ಲಿ ಊಟ ಪಡೆಯುವರ ಮೊಬೈಲ್ ಸಂಖ್ಯೆ, ಮತ್ತು ಆಹಾರದ ಪೊಟ್ಟಣ ಹಿಡಿದುಕೊಂಡಿರುವ ಛಾಯಾಚಿತ್ರಗಳನ್ನು ಸೆರೆ ಹಿಡಿದು ಅಪ್‌ಲೋಡ್ ಮಾಡುವಂತೆ ಹೇಳಲಾಗಿದೆ. ಜೊತೆಗೆ ಮೂರಕ್ಕಿಂತ ಹೆಚ್ಚು ಆಹಾರ ಪೊಟ್ಟಣಗಳನ್ನು ವಿತರಿಸಿದರೆ, ಆಹಾರ ಪ್ಯಾಕೆಟ್‌ಗಳನ್ನು ಹಸ್ತಾಂತರಿಸುವ ಮೊದಲು ಸಿಬ್ಬಂದಿ ಒನ್ ಟೈಮ್ ಪಾಸ್‌ವರ್ಡ್ (ಒಟಿಪಿ) ಮತ್ತು ಕುಟುಂಬದ ಪಡಿತರ ಚೀಟಿಯನ್ನು ಈ ಆ್ಯಪ್ ಒಳಗೆ ನಮೂದಿಸಬೇಕು.

“ಇಂದಿರಾ ಕ್ಯಾಂಟೀನ್ ಪಾರ್ಸೆಲ್ ವಿತರಣೆ” (Indira Canteen Parcel Distribution) ಅಪ್ಲಿಕೇಶನ್ ಅನ್ನು ಬುಧವಾರ ಬೆಳಿಗ್ಗೆ ಬಿಡುಗಡೆ ಮಾಡಲಾಗಿದೆ. ಆದರೆ, ಕ್ಯಾಂಟೀನ್‌ಗಳಲ್ಲಿ ಕೆಲಸ ಮಾಡುವ ಹಲವು ಸಿಬ್ಬಂದಿ ಬಳಿ ಆ್ಯಪ್ ಹಾಕಿಕೊಳ್ಳುವ ಮೊಬೈಲ್ ಇಲ್ಲ. ಇರುವ ಮೊಬೈಲ್‌ಗೆ ಆ್ಯಪ್ ಹೊಂದುವುದಿಲ್ಲ ಎನ್ನಲಾಗಿದೆ.

ಕೆಲವರಿಗೆ  ಫೋಟೋಗಳನ್ನು ಅಪ್‌ಲೋಡ್ ಮಾಡುವಲ್ಲಿ ಆ್ಯಪ್‌ನಲ್ಲಿ ತೊಂದರೆ, ಆ್ಯಪ್ ಬಳಸಲು ತಾಂತ್ರಿಕ ಜ್ಞಾನದ ಕೊರತೆ ಸೇರಿದಂತೆ ಹಲವು ಕಾರಣದಿಂದಾಗಿ ಸಿಬ್ಬಂದಿಗೆ ತೊಂದರೆಯಾಗಿದ್ದು, ಕ್ಯಾಂಟೀನ್‌ನಲ್ಲಿ ಆಹಾರ ವಿತರಣೆ ಮಾಡುವಲ್ಲಿ ವಿಳಂಬವಾಗಿದೆ.

ಇದನ್ನೂ ಓದಿ: ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ಸರ್ಕಾರದ ಹೊಸ ನಿಯಮಗಳಿಗೆ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. “ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ಪಡೆಯಬೇಕೆಂದರೆ ದಾಖಲೆ ತೋರಿಸುವಂತಹ ಕೆಟ್ಟ ಸಂಪ್ರದಾಯ ಹಾಕಿದ ಬೆನ್ನಲ್ಲೇ ಈಗ ಮೊಬೈಲ್ ಅಪ್ಲಿಕೇಶನ್ ರಿಜಿಸ್ಟರ್ ಎಂಬ ಅಸಂಬದ್ಧಕ್ಕೆ ಮುಂದಾಗಿದೆ ಸರ್ಕಾರ. ಇಂತಹ ಅತಾರ್ಕಿಕ, ಅಪ್ರಬುದ್ದ ನಿರ್ಣಯ ಕೈಗೊಳ್ಳುವ ಬಿಬಿಎಂಪಿ ಅಧಿಕಾರಿಗಳಿಗೆ ಕೊಂಚವೂ ವಾಸ್ತವದ ಸವಾಲುಗಳ ಜ್ಞಾನ ಇಲ್ಲವೇ…?” ಎಂದು ಪ್ರಶ್ನಿಸಿದೆ.

ಗುರುವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ “ಅಪ್ಲಿಕೇಶನ್ ಮೂಲಕ ಯಾವ ಸಾಧನೆ ಮಾಡಲು ಹೊರಟಿದೆ ಸರ್ಕಾರ..? ಯಾವ ಉದ್ದೇಶಕ್ಕಾಗಿ ಈ ಡಾಟಾ ಸಂಗ್ರಹಿಸಲಾಗುತ್ತಿದೆ..? ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳಲ್ಲಿ ಸ್ಮಾರ್ಟ್ ಫೋನ್ ಇರುವುದೇ ವಿರಳ, ಅವರಿಗೆ ತಂತ್ರಜ್ಞಾನದ ಅರಿವೂ ಇಲ್ಲ. ಜನರ ಡಾಟಾ ಬಗ್ಗೆ ಸರ್ಕಾರಕ್ಕೆ ಏಕಿಷ್ಟು ಕುತೂಹಲ..? ಇಂತಹ ಅಸಂಬದ್ಧ ನಿಲ್ಲಿಸಿ, ಹಸಿದ ಎಲ್ಲಾ ಬಡವರಿಗೂ ಆಹಾರ ನೀಡಿ” ಎಂದಿದೆ.

’ಆಹಾರ ಪಡೆಯಲು ಬರುವ ಬಡಜನರಲ್ಲಿ ಮೊಬೈಲ್ ಫೋನ್ ಎಲ್ಲರ ಬಳಿ ಇರುತ್ತದೆಯೇ..? ಪಡಿತರ ಚೀಟಿ ಹೊಂದಿರದೇ ಇರುವ ಎಷ್ಟೋ ಮಂದಿ ಇದ್ದಾರೆ, ನಿರ್ಗತಿಕರಿದ್ದಾರೆ, ಭಿಕ್ಷುಕರಿದ್ದಾರೆ, ಇವರೆಲ್ಲರು ಆಹಾರ ವಂಚಿತರಗಬೇಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ? ನಿಮ್ಮ ಸರ್ಕಾರ ಯಾಕಿಷ್ಟು ಅಸಂಬದ್ಧ ಅವೈಜ್ಞಾನಿಕ ನಿರ್ಧಾರ ತೆಗೆದುಕೊಳ್ಳುತ್ತದೆ..?’ ಎಂದು ಪ್ರಶ್ನಿಸಿದ್ದಾರೆ.

ಇತ್ತ, ಕ್ಯಾಂಟೀನ್‌ಗಳಲ್ಲಿ ದುಷ್ಕೃತ್ಯದ ಅನುಮಾನ ಇರುವುದರಿಂದ, ದತ್ತಾಂಶಗಳ ಗೊಂದಲ ಹೋಗಲಾಡಿಸಲು ಮತ್ತು ಗುತ್ತಿಗೆದಾರರ ಮೇಲೆ ಕಣ್ಣಿಡಲು ಬಿಬಿಎಂಪಿಗೆ ಆ್ಯಪ್ ಪರಿಚಯಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಇಂದಿರಾ ಕ್ಯಾಂಟೀನ್‌ಗಳ ಮೂಲಕ ಉಚಿತವಾಗಿ ಆಹಾರ ವಿತರಣೆಯ ಉಸ್ತುವಾರಿ ವಹಿಸಿರುವ ವಿಶೇಷ ಆಯುಕ್ತರಾದ (ಹಣಕಾಸು) ತುಳಸಿ ಮದ್ದಿನೇನಿ ಹೇಳಿದ್ದಾರೆ.


ಇದನ್ನೂ ಓದಿ: ಯುಪಿ: ಸೋಂಕಿತ ರೋಗಿಯ ನಿರ್ಲಕ್ಷ್ಯದ ಬಗ್ಗೆ ಪತ್ರಕರ್ತರಿಗೆ ಮಾಹಿತಿ; ಗ್ರಾಮಸ್ಥನ ಮೇಲೆ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...