Homeಕರ್ನಾಟಕಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟಕ್ಕೆ ಮೊಬೈಲ್ ಆ್ಯಪ್! ನಿರ್ಗತಿಕರು ಆಹಾರ ವಂಚಿತರಾಗಬೇಕೆ ಎಂದು ಕಾಂಗ್ರೆಸ್ ಆಕ್ರೋಶ

ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟಕ್ಕೆ ಮೊಬೈಲ್ ಆ್ಯಪ್! ನಿರ್ಗತಿಕರು ಆಹಾರ ವಂಚಿತರಾಗಬೇಕೆ ಎಂದು ಕಾಂಗ್ರೆಸ್ ಆಕ್ರೋಶ

ಕ್ಯಾಂಟೀನ್‌ಗಳಲ್ಲಿ ಕೆಲಸ ಮಾಡುವ ಹಲವು ಸಿಬ್ಬಂದಿ ಬಳಿ ಆ್ಯಪ್ ಹಾಕಿಕೊಳ್ಳುವ ಮೊಬೈಲ್ ಇಲ್ಲ.ಇರುವ ಮೊಬೈಲ್‌ಗೆ ಆ್ಯಪ್ ಹೊಂದುವುದಿಲ್ಲ ಎನ್ನಲಾಗಿದೆ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಲ್ಲಿ ಇಂದಿರಾ ಕ್ಯಾಂಟೀನ್‌ಗಳ ಮೂಲಕ ಉಚಿತ ಆಹಾರವನ್ನು ಪಡೆಯುವವರಿಂದ ಆಧಾರ್ ಮತ್ತು ಇತರ ವಿವರಗಳನ್ನು ಸಂಗ್ರಹಿಸಲಾಗುತ್ತಿತ್ತು. ಈ ಕ್ರಮದ ವಿರುದ್ಧವೇ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಈಗ ಒಂದು ಹೆಜ್ಜೆ ಮುಂದೆ ಹೋಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP), ಊಟ ಮಾಡುವವರ ಡೇಟಾ ಪಡೆಯಲು ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದೆ.

ಕ್ಯಾಂಟೀನ್ ಸಿಬ್ಬಂದಿಗಳು ಮೊಬೈಲ್‌ಗಳಲ್ಲಿ ಊಟ ಪಡೆಯುವರ ಮೊಬೈಲ್ ಸಂಖ್ಯೆ, ಮತ್ತು ಆಹಾರದ ಪೊಟ್ಟಣ ಹಿಡಿದುಕೊಂಡಿರುವ ಛಾಯಾಚಿತ್ರಗಳನ್ನು ಸೆರೆ ಹಿಡಿದು ಅಪ್‌ಲೋಡ್ ಮಾಡುವಂತೆ ಹೇಳಲಾಗಿದೆ. ಜೊತೆಗೆ ಮೂರಕ್ಕಿಂತ ಹೆಚ್ಚು ಆಹಾರ ಪೊಟ್ಟಣಗಳನ್ನು ವಿತರಿಸಿದರೆ, ಆಹಾರ ಪ್ಯಾಕೆಟ್‌ಗಳನ್ನು ಹಸ್ತಾಂತರಿಸುವ ಮೊದಲು ಸಿಬ್ಬಂದಿ ಒನ್ ಟೈಮ್ ಪಾಸ್‌ವರ್ಡ್ (ಒಟಿಪಿ) ಮತ್ತು ಕುಟುಂಬದ ಪಡಿತರ ಚೀಟಿಯನ್ನು ಈ ಆ್ಯಪ್ ಒಳಗೆ ನಮೂದಿಸಬೇಕು.

“ಇಂದಿರಾ ಕ್ಯಾಂಟೀನ್ ಪಾರ್ಸೆಲ್ ವಿತರಣೆ” (Indira Canteen Parcel Distribution) ಅಪ್ಲಿಕೇಶನ್ ಅನ್ನು ಬುಧವಾರ ಬೆಳಿಗ್ಗೆ ಬಿಡುಗಡೆ ಮಾಡಲಾಗಿದೆ. ಆದರೆ, ಕ್ಯಾಂಟೀನ್‌ಗಳಲ್ಲಿ ಕೆಲಸ ಮಾಡುವ ಹಲವು ಸಿಬ್ಬಂದಿ ಬಳಿ ಆ್ಯಪ್ ಹಾಕಿಕೊಳ್ಳುವ ಮೊಬೈಲ್ ಇಲ್ಲ. ಇರುವ ಮೊಬೈಲ್‌ಗೆ ಆ್ಯಪ್ ಹೊಂದುವುದಿಲ್ಲ ಎನ್ನಲಾಗಿದೆ.

ಕೆಲವರಿಗೆ  ಫೋಟೋಗಳನ್ನು ಅಪ್‌ಲೋಡ್ ಮಾಡುವಲ್ಲಿ ಆ್ಯಪ್‌ನಲ್ಲಿ ತೊಂದರೆ, ಆ್ಯಪ್ ಬಳಸಲು ತಾಂತ್ರಿಕ ಜ್ಞಾನದ ಕೊರತೆ ಸೇರಿದಂತೆ ಹಲವು ಕಾರಣದಿಂದಾಗಿ ಸಿಬ್ಬಂದಿಗೆ ತೊಂದರೆಯಾಗಿದ್ದು, ಕ್ಯಾಂಟೀನ್‌ನಲ್ಲಿ ಆಹಾರ ವಿತರಣೆ ಮಾಡುವಲ್ಲಿ ವಿಳಂಬವಾಗಿದೆ.

ಇದನ್ನೂ ಓದಿ: ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ಸರ್ಕಾರದ ಹೊಸ ನಿಯಮಗಳಿಗೆ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. “ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ಪಡೆಯಬೇಕೆಂದರೆ ದಾಖಲೆ ತೋರಿಸುವಂತಹ ಕೆಟ್ಟ ಸಂಪ್ರದಾಯ ಹಾಕಿದ ಬೆನ್ನಲ್ಲೇ ಈಗ ಮೊಬೈಲ್ ಅಪ್ಲಿಕೇಶನ್ ರಿಜಿಸ್ಟರ್ ಎಂಬ ಅಸಂಬದ್ಧಕ್ಕೆ ಮುಂದಾಗಿದೆ ಸರ್ಕಾರ. ಇಂತಹ ಅತಾರ್ಕಿಕ, ಅಪ್ರಬುದ್ದ ನಿರ್ಣಯ ಕೈಗೊಳ್ಳುವ ಬಿಬಿಎಂಪಿ ಅಧಿಕಾರಿಗಳಿಗೆ ಕೊಂಚವೂ ವಾಸ್ತವದ ಸವಾಲುಗಳ ಜ್ಞಾನ ಇಲ್ಲವೇ…?” ಎಂದು ಪ್ರಶ್ನಿಸಿದೆ.

ಗುರುವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ “ಅಪ್ಲಿಕೇಶನ್ ಮೂಲಕ ಯಾವ ಸಾಧನೆ ಮಾಡಲು ಹೊರಟಿದೆ ಸರ್ಕಾರ..? ಯಾವ ಉದ್ದೇಶಕ್ಕಾಗಿ ಈ ಡಾಟಾ ಸಂಗ್ರಹಿಸಲಾಗುತ್ತಿದೆ..? ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳಲ್ಲಿ ಸ್ಮಾರ್ಟ್ ಫೋನ್ ಇರುವುದೇ ವಿರಳ, ಅವರಿಗೆ ತಂತ್ರಜ್ಞಾನದ ಅರಿವೂ ಇಲ್ಲ. ಜನರ ಡಾಟಾ ಬಗ್ಗೆ ಸರ್ಕಾರಕ್ಕೆ ಏಕಿಷ್ಟು ಕುತೂಹಲ..? ಇಂತಹ ಅಸಂಬದ್ಧ ನಿಲ್ಲಿಸಿ, ಹಸಿದ ಎಲ್ಲಾ ಬಡವರಿಗೂ ಆಹಾರ ನೀಡಿ” ಎಂದಿದೆ.

’ಆಹಾರ ಪಡೆಯಲು ಬರುವ ಬಡಜನರಲ್ಲಿ ಮೊಬೈಲ್ ಫೋನ್ ಎಲ್ಲರ ಬಳಿ ಇರುತ್ತದೆಯೇ..? ಪಡಿತರ ಚೀಟಿ ಹೊಂದಿರದೇ ಇರುವ ಎಷ್ಟೋ ಮಂದಿ ಇದ್ದಾರೆ, ನಿರ್ಗತಿಕರಿದ್ದಾರೆ, ಭಿಕ್ಷುಕರಿದ್ದಾರೆ, ಇವರೆಲ್ಲರು ಆಹಾರ ವಂಚಿತರಗಬೇಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ? ನಿಮ್ಮ ಸರ್ಕಾರ ಯಾಕಿಷ್ಟು ಅಸಂಬದ್ಧ ಅವೈಜ್ಞಾನಿಕ ನಿರ್ಧಾರ ತೆಗೆದುಕೊಳ್ಳುತ್ತದೆ..?’ ಎಂದು ಪ್ರಶ್ನಿಸಿದ್ದಾರೆ.

ಇತ್ತ, ಕ್ಯಾಂಟೀನ್‌ಗಳಲ್ಲಿ ದುಷ್ಕೃತ್ಯದ ಅನುಮಾನ ಇರುವುದರಿಂದ, ದತ್ತಾಂಶಗಳ ಗೊಂದಲ ಹೋಗಲಾಡಿಸಲು ಮತ್ತು ಗುತ್ತಿಗೆದಾರರ ಮೇಲೆ ಕಣ್ಣಿಡಲು ಬಿಬಿಎಂಪಿಗೆ ಆ್ಯಪ್ ಪರಿಚಯಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಇಂದಿರಾ ಕ್ಯಾಂಟೀನ್‌ಗಳ ಮೂಲಕ ಉಚಿತವಾಗಿ ಆಹಾರ ವಿತರಣೆಯ ಉಸ್ತುವಾರಿ ವಹಿಸಿರುವ ವಿಶೇಷ ಆಯುಕ್ತರಾದ (ಹಣಕಾಸು) ತುಳಸಿ ಮದ್ದಿನೇನಿ ಹೇಳಿದ್ದಾರೆ.


ಇದನ್ನೂ ಓದಿ: ಯುಪಿ: ಸೋಂಕಿತ ರೋಗಿಯ ನಿರ್ಲಕ್ಷ್ಯದ ಬಗ್ಗೆ ಪತ್ರಕರ್ತರಿಗೆ ಮಾಹಿತಿ; ಗ್ರಾಮಸ್ಥನ ಮೇಲೆ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...