Homeಕರ್ನಾಟಕಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟಕ್ಕೆ ಮೊಬೈಲ್ ಆ್ಯಪ್! ನಿರ್ಗತಿಕರು ಆಹಾರ ವಂಚಿತರಾಗಬೇಕೆ ಎಂದು ಕಾಂಗ್ರೆಸ್ ಆಕ್ರೋಶ

ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟಕ್ಕೆ ಮೊಬೈಲ್ ಆ್ಯಪ್! ನಿರ್ಗತಿಕರು ಆಹಾರ ವಂಚಿತರಾಗಬೇಕೆ ಎಂದು ಕಾಂಗ್ರೆಸ್ ಆಕ್ರೋಶ

ಕ್ಯಾಂಟೀನ್‌ಗಳಲ್ಲಿ ಕೆಲಸ ಮಾಡುವ ಹಲವು ಸಿಬ್ಬಂದಿ ಬಳಿ ಆ್ಯಪ್ ಹಾಕಿಕೊಳ್ಳುವ ಮೊಬೈಲ್ ಇಲ್ಲ.ಇರುವ ಮೊಬೈಲ್‌ಗೆ ಆ್ಯಪ್ ಹೊಂದುವುದಿಲ್ಲ ಎನ್ನಲಾಗಿದೆ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಲ್ಲಿ ಇಂದಿರಾ ಕ್ಯಾಂಟೀನ್‌ಗಳ ಮೂಲಕ ಉಚಿತ ಆಹಾರವನ್ನು ಪಡೆಯುವವರಿಂದ ಆಧಾರ್ ಮತ್ತು ಇತರ ವಿವರಗಳನ್ನು ಸಂಗ್ರಹಿಸಲಾಗುತ್ತಿತ್ತು. ಈ ಕ್ರಮದ ವಿರುದ್ಧವೇ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಈಗ ಒಂದು ಹೆಜ್ಜೆ ಮುಂದೆ ಹೋಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP), ಊಟ ಮಾಡುವವರ ಡೇಟಾ ಪಡೆಯಲು ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದೆ.

ಕ್ಯಾಂಟೀನ್ ಸಿಬ್ಬಂದಿಗಳು ಮೊಬೈಲ್‌ಗಳಲ್ಲಿ ಊಟ ಪಡೆಯುವರ ಮೊಬೈಲ್ ಸಂಖ್ಯೆ, ಮತ್ತು ಆಹಾರದ ಪೊಟ್ಟಣ ಹಿಡಿದುಕೊಂಡಿರುವ ಛಾಯಾಚಿತ್ರಗಳನ್ನು ಸೆರೆ ಹಿಡಿದು ಅಪ್‌ಲೋಡ್ ಮಾಡುವಂತೆ ಹೇಳಲಾಗಿದೆ. ಜೊತೆಗೆ ಮೂರಕ್ಕಿಂತ ಹೆಚ್ಚು ಆಹಾರ ಪೊಟ್ಟಣಗಳನ್ನು ವಿತರಿಸಿದರೆ, ಆಹಾರ ಪ್ಯಾಕೆಟ್‌ಗಳನ್ನು ಹಸ್ತಾಂತರಿಸುವ ಮೊದಲು ಸಿಬ್ಬಂದಿ ಒನ್ ಟೈಮ್ ಪಾಸ್‌ವರ್ಡ್ (ಒಟಿಪಿ) ಮತ್ತು ಕುಟುಂಬದ ಪಡಿತರ ಚೀಟಿಯನ್ನು ಈ ಆ್ಯಪ್ ಒಳಗೆ ನಮೂದಿಸಬೇಕು.

“ಇಂದಿರಾ ಕ್ಯಾಂಟೀನ್ ಪಾರ್ಸೆಲ್ ವಿತರಣೆ” (Indira Canteen Parcel Distribution) ಅಪ್ಲಿಕೇಶನ್ ಅನ್ನು ಬುಧವಾರ ಬೆಳಿಗ್ಗೆ ಬಿಡುಗಡೆ ಮಾಡಲಾಗಿದೆ. ಆದರೆ, ಕ್ಯಾಂಟೀನ್‌ಗಳಲ್ಲಿ ಕೆಲಸ ಮಾಡುವ ಹಲವು ಸಿಬ್ಬಂದಿ ಬಳಿ ಆ್ಯಪ್ ಹಾಕಿಕೊಳ್ಳುವ ಮೊಬೈಲ್ ಇಲ್ಲ. ಇರುವ ಮೊಬೈಲ್‌ಗೆ ಆ್ಯಪ್ ಹೊಂದುವುದಿಲ್ಲ ಎನ್ನಲಾಗಿದೆ.

ಕೆಲವರಿಗೆ  ಫೋಟೋಗಳನ್ನು ಅಪ್‌ಲೋಡ್ ಮಾಡುವಲ್ಲಿ ಆ್ಯಪ್‌ನಲ್ಲಿ ತೊಂದರೆ, ಆ್ಯಪ್ ಬಳಸಲು ತಾಂತ್ರಿಕ ಜ್ಞಾನದ ಕೊರತೆ ಸೇರಿದಂತೆ ಹಲವು ಕಾರಣದಿಂದಾಗಿ ಸಿಬ್ಬಂದಿಗೆ ತೊಂದರೆಯಾಗಿದ್ದು, ಕ್ಯಾಂಟೀನ್‌ನಲ್ಲಿ ಆಹಾರ ವಿತರಣೆ ಮಾಡುವಲ್ಲಿ ವಿಳಂಬವಾಗಿದೆ.

ಇದನ್ನೂ ಓದಿ: ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ಸರ್ಕಾರದ ಹೊಸ ನಿಯಮಗಳಿಗೆ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. “ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ಪಡೆಯಬೇಕೆಂದರೆ ದಾಖಲೆ ತೋರಿಸುವಂತಹ ಕೆಟ್ಟ ಸಂಪ್ರದಾಯ ಹಾಕಿದ ಬೆನ್ನಲ್ಲೇ ಈಗ ಮೊಬೈಲ್ ಅಪ್ಲಿಕೇಶನ್ ರಿಜಿಸ್ಟರ್ ಎಂಬ ಅಸಂಬದ್ಧಕ್ಕೆ ಮುಂದಾಗಿದೆ ಸರ್ಕಾರ. ಇಂತಹ ಅತಾರ್ಕಿಕ, ಅಪ್ರಬುದ್ದ ನಿರ್ಣಯ ಕೈಗೊಳ್ಳುವ ಬಿಬಿಎಂಪಿ ಅಧಿಕಾರಿಗಳಿಗೆ ಕೊಂಚವೂ ವಾಸ್ತವದ ಸವಾಲುಗಳ ಜ್ಞಾನ ಇಲ್ಲವೇ…?” ಎಂದು ಪ್ರಶ್ನಿಸಿದೆ.

ಗುರುವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ “ಅಪ್ಲಿಕೇಶನ್ ಮೂಲಕ ಯಾವ ಸಾಧನೆ ಮಾಡಲು ಹೊರಟಿದೆ ಸರ್ಕಾರ..? ಯಾವ ಉದ್ದೇಶಕ್ಕಾಗಿ ಈ ಡಾಟಾ ಸಂಗ್ರಹಿಸಲಾಗುತ್ತಿದೆ..? ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳಲ್ಲಿ ಸ್ಮಾರ್ಟ್ ಫೋನ್ ಇರುವುದೇ ವಿರಳ, ಅವರಿಗೆ ತಂತ್ರಜ್ಞಾನದ ಅರಿವೂ ಇಲ್ಲ. ಜನರ ಡಾಟಾ ಬಗ್ಗೆ ಸರ್ಕಾರಕ್ಕೆ ಏಕಿಷ್ಟು ಕುತೂಹಲ..? ಇಂತಹ ಅಸಂಬದ್ಧ ನಿಲ್ಲಿಸಿ, ಹಸಿದ ಎಲ್ಲಾ ಬಡವರಿಗೂ ಆಹಾರ ನೀಡಿ” ಎಂದಿದೆ.

’ಆಹಾರ ಪಡೆಯಲು ಬರುವ ಬಡಜನರಲ್ಲಿ ಮೊಬೈಲ್ ಫೋನ್ ಎಲ್ಲರ ಬಳಿ ಇರುತ್ತದೆಯೇ..? ಪಡಿತರ ಚೀಟಿ ಹೊಂದಿರದೇ ಇರುವ ಎಷ್ಟೋ ಮಂದಿ ಇದ್ದಾರೆ, ನಿರ್ಗತಿಕರಿದ್ದಾರೆ, ಭಿಕ್ಷುಕರಿದ್ದಾರೆ, ಇವರೆಲ್ಲರು ಆಹಾರ ವಂಚಿತರಗಬೇಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ? ನಿಮ್ಮ ಸರ್ಕಾರ ಯಾಕಿಷ್ಟು ಅಸಂಬದ್ಧ ಅವೈಜ್ಞಾನಿಕ ನಿರ್ಧಾರ ತೆಗೆದುಕೊಳ್ಳುತ್ತದೆ..?’ ಎಂದು ಪ್ರಶ್ನಿಸಿದ್ದಾರೆ.

ಇತ್ತ, ಕ್ಯಾಂಟೀನ್‌ಗಳಲ್ಲಿ ದುಷ್ಕೃತ್ಯದ ಅನುಮಾನ ಇರುವುದರಿಂದ, ದತ್ತಾಂಶಗಳ ಗೊಂದಲ ಹೋಗಲಾಡಿಸಲು ಮತ್ತು ಗುತ್ತಿಗೆದಾರರ ಮೇಲೆ ಕಣ್ಣಿಡಲು ಬಿಬಿಎಂಪಿಗೆ ಆ್ಯಪ್ ಪರಿಚಯಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಇಂದಿರಾ ಕ್ಯಾಂಟೀನ್‌ಗಳ ಮೂಲಕ ಉಚಿತವಾಗಿ ಆಹಾರ ವಿತರಣೆಯ ಉಸ್ತುವಾರಿ ವಹಿಸಿರುವ ವಿಶೇಷ ಆಯುಕ್ತರಾದ (ಹಣಕಾಸು) ತುಳಸಿ ಮದ್ದಿನೇನಿ ಹೇಳಿದ್ದಾರೆ.


ಇದನ್ನೂ ಓದಿ: ಯುಪಿ: ಸೋಂಕಿತ ರೋಗಿಯ ನಿರ್ಲಕ್ಷ್ಯದ ಬಗ್ಗೆ ಪತ್ರಕರ್ತರಿಗೆ ಮಾಹಿತಿ; ಗ್ರಾಮಸ್ಥನ ಮೇಲೆ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...