Homeಕರ್ನಾಟಕಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟಕ್ಕೆ ಮೊಬೈಲ್ ಆ್ಯಪ್! ನಿರ್ಗತಿಕರು ಆಹಾರ ವಂಚಿತರಾಗಬೇಕೆ ಎಂದು ಕಾಂಗ್ರೆಸ್ ಆಕ್ರೋಶ

ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟಕ್ಕೆ ಮೊಬೈಲ್ ಆ್ಯಪ್! ನಿರ್ಗತಿಕರು ಆಹಾರ ವಂಚಿತರಾಗಬೇಕೆ ಎಂದು ಕಾಂಗ್ರೆಸ್ ಆಕ್ರೋಶ

ಕ್ಯಾಂಟೀನ್‌ಗಳಲ್ಲಿ ಕೆಲಸ ಮಾಡುವ ಹಲವು ಸಿಬ್ಬಂದಿ ಬಳಿ ಆ್ಯಪ್ ಹಾಕಿಕೊಳ್ಳುವ ಮೊಬೈಲ್ ಇಲ್ಲ.ಇರುವ ಮೊಬೈಲ್‌ಗೆ ಆ್ಯಪ್ ಹೊಂದುವುದಿಲ್ಲ ಎನ್ನಲಾಗಿದೆ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಲ್ಲಿ ಇಂದಿರಾ ಕ್ಯಾಂಟೀನ್‌ಗಳ ಮೂಲಕ ಉಚಿತ ಆಹಾರವನ್ನು ಪಡೆಯುವವರಿಂದ ಆಧಾರ್ ಮತ್ತು ಇತರ ವಿವರಗಳನ್ನು ಸಂಗ್ರಹಿಸಲಾಗುತ್ತಿತ್ತು. ಈ ಕ್ರಮದ ವಿರುದ್ಧವೇ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಈಗ ಒಂದು ಹೆಜ್ಜೆ ಮುಂದೆ ಹೋಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP), ಊಟ ಮಾಡುವವರ ಡೇಟಾ ಪಡೆಯಲು ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದೆ.

ಕ್ಯಾಂಟೀನ್ ಸಿಬ್ಬಂದಿಗಳು ಮೊಬೈಲ್‌ಗಳಲ್ಲಿ ಊಟ ಪಡೆಯುವರ ಮೊಬೈಲ್ ಸಂಖ್ಯೆ, ಮತ್ತು ಆಹಾರದ ಪೊಟ್ಟಣ ಹಿಡಿದುಕೊಂಡಿರುವ ಛಾಯಾಚಿತ್ರಗಳನ್ನು ಸೆರೆ ಹಿಡಿದು ಅಪ್‌ಲೋಡ್ ಮಾಡುವಂತೆ ಹೇಳಲಾಗಿದೆ. ಜೊತೆಗೆ ಮೂರಕ್ಕಿಂತ ಹೆಚ್ಚು ಆಹಾರ ಪೊಟ್ಟಣಗಳನ್ನು ವಿತರಿಸಿದರೆ, ಆಹಾರ ಪ್ಯಾಕೆಟ್‌ಗಳನ್ನು ಹಸ್ತಾಂತರಿಸುವ ಮೊದಲು ಸಿಬ್ಬಂದಿ ಒನ್ ಟೈಮ್ ಪಾಸ್‌ವರ್ಡ್ (ಒಟಿಪಿ) ಮತ್ತು ಕುಟುಂಬದ ಪಡಿತರ ಚೀಟಿಯನ್ನು ಈ ಆ್ಯಪ್ ಒಳಗೆ ನಮೂದಿಸಬೇಕು.

“ಇಂದಿರಾ ಕ್ಯಾಂಟೀನ್ ಪಾರ್ಸೆಲ್ ವಿತರಣೆ” (Indira Canteen Parcel Distribution) ಅಪ್ಲಿಕೇಶನ್ ಅನ್ನು ಬುಧವಾರ ಬೆಳಿಗ್ಗೆ ಬಿಡುಗಡೆ ಮಾಡಲಾಗಿದೆ. ಆದರೆ, ಕ್ಯಾಂಟೀನ್‌ಗಳಲ್ಲಿ ಕೆಲಸ ಮಾಡುವ ಹಲವು ಸಿಬ್ಬಂದಿ ಬಳಿ ಆ್ಯಪ್ ಹಾಕಿಕೊಳ್ಳುವ ಮೊಬೈಲ್ ಇಲ್ಲ. ಇರುವ ಮೊಬೈಲ್‌ಗೆ ಆ್ಯಪ್ ಹೊಂದುವುದಿಲ್ಲ ಎನ್ನಲಾಗಿದೆ.

ಕೆಲವರಿಗೆ  ಫೋಟೋಗಳನ್ನು ಅಪ್‌ಲೋಡ್ ಮಾಡುವಲ್ಲಿ ಆ್ಯಪ್‌ನಲ್ಲಿ ತೊಂದರೆ, ಆ್ಯಪ್ ಬಳಸಲು ತಾಂತ್ರಿಕ ಜ್ಞಾನದ ಕೊರತೆ ಸೇರಿದಂತೆ ಹಲವು ಕಾರಣದಿಂದಾಗಿ ಸಿಬ್ಬಂದಿಗೆ ತೊಂದರೆಯಾಗಿದ್ದು, ಕ್ಯಾಂಟೀನ್‌ನಲ್ಲಿ ಆಹಾರ ವಿತರಣೆ ಮಾಡುವಲ್ಲಿ ವಿಳಂಬವಾಗಿದೆ.

ಇದನ್ನೂ ಓದಿ: ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ಸರ್ಕಾರದ ಹೊಸ ನಿಯಮಗಳಿಗೆ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. “ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ಪಡೆಯಬೇಕೆಂದರೆ ದಾಖಲೆ ತೋರಿಸುವಂತಹ ಕೆಟ್ಟ ಸಂಪ್ರದಾಯ ಹಾಕಿದ ಬೆನ್ನಲ್ಲೇ ಈಗ ಮೊಬೈಲ್ ಅಪ್ಲಿಕೇಶನ್ ರಿಜಿಸ್ಟರ್ ಎಂಬ ಅಸಂಬದ್ಧಕ್ಕೆ ಮುಂದಾಗಿದೆ ಸರ್ಕಾರ. ಇಂತಹ ಅತಾರ್ಕಿಕ, ಅಪ್ರಬುದ್ದ ನಿರ್ಣಯ ಕೈಗೊಳ್ಳುವ ಬಿಬಿಎಂಪಿ ಅಧಿಕಾರಿಗಳಿಗೆ ಕೊಂಚವೂ ವಾಸ್ತವದ ಸವಾಲುಗಳ ಜ್ಞಾನ ಇಲ್ಲವೇ…?” ಎಂದು ಪ್ರಶ್ನಿಸಿದೆ.

ಗುರುವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ “ಅಪ್ಲಿಕೇಶನ್ ಮೂಲಕ ಯಾವ ಸಾಧನೆ ಮಾಡಲು ಹೊರಟಿದೆ ಸರ್ಕಾರ..? ಯಾವ ಉದ್ದೇಶಕ್ಕಾಗಿ ಈ ಡಾಟಾ ಸಂಗ್ರಹಿಸಲಾಗುತ್ತಿದೆ..? ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳಲ್ಲಿ ಸ್ಮಾರ್ಟ್ ಫೋನ್ ಇರುವುದೇ ವಿರಳ, ಅವರಿಗೆ ತಂತ್ರಜ್ಞಾನದ ಅರಿವೂ ಇಲ್ಲ. ಜನರ ಡಾಟಾ ಬಗ್ಗೆ ಸರ್ಕಾರಕ್ಕೆ ಏಕಿಷ್ಟು ಕುತೂಹಲ..? ಇಂತಹ ಅಸಂಬದ್ಧ ನಿಲ್ಲಿಸಿ, ಹಸಿದ ಎಲ್ಲಾ ಬಡವರಿಗೂ ಆಹಾರ ನೀಡಿ” ಎಂದಿದೆ.

’ಆಹಾರ ಪಡೆಯಲು ಬರುವ ಬಡಜನರಲ್ಲಿ ಮೊಬೈಲ್ ಫೋನ್ ಎಲ್ಲರ ಬಳಿ ಇರುತ್ತದೆಯೇ..? ಪಡಿತರ ಚೀಟಿ ಹೊಂದಿರದೇ ಇರುವ ಎಷ್ಟೋ ಮಂದಿ ಇದ್ದಾರೆ, ನಿರ್ಗತಿಕರಿದ್ದಾರೆ, ಭಿಕ್ಷುಕರಿದ್ದಾರೆ, ಇವರೆಲ್ಲರು ಆಹಾರ ವಂಚಿತರಗಬೇಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ? ನಿಮ್ಮ ಸರ್ಕಾರ ಯಾಕಿಷ್ಟು ಅಸಂಬದ್ಧ ಅವೈಜ್ಞಾನಿಕ ನಿರ್ಧಾರ ತೆಗೆದುಕೊಳ್ಳುತ್ತದೆ..?’ ಎಂದು ಪ್ರಶ್ನಿಸಿದ್ದಾರೆ.

ಇತ್ತ, ಕ್ಯಾಂಟೀನ್‌ಗಳಲ್ಲಿ ದುಷ್ಕೃತ್ಯದ ಅನುಮಾನ ಇರುವುದರಿಂದ, ದತ್ತಾಂಶಗಳ ಗೊಂದಲ ಹೋಗಲಾಡಿಸಲು ಮತ್ತು ಗುತ್ತಿಗೆದಾರರ ಮೇಲೆ ಕಣ್ಣಿಡಲು ಬಿಬಿಎಂಪಿಗೆ ಆ್ಯಪ್ ಪರಿಚಯಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಇಂದಿರಾ ಕ್ಯಾಂಟೀನ್‌ಗಳ ಮೂಲಕ ಉಚಿತವಾಗಿ ಆಹಾರ ವಿತರಣೆಯ ಉಸ್ತುವಾರಿ ವಹಿಸಿರುವ ವಿಶೇಷ ಆಯುಕ್ತರಾದ (ಹಣಕಾಸು) ತುಳಸಿ ಮದ್ದಿನೇನಿ ಹೇಳಿದ್ದಾರೆ.


ಇದನ್ನೂ ಓದಿ: ಯುಪಿ: ಸೋಂಕಿತ ರೋಗಿಯ ನಿರ್ಲಕ್ಷ್ಯದ ಬಗ್ಗೆ ಪತ್ರಕರ್ತರಿಗೆ ಮಾಹಿತಿ; ಗ್ರಾಮಸ್ಥನ ಮೇಲೆ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...