Homeಕರೋನಾ ತಲ್ಲಣಬಿಬಿಎಂಪಿ ನಗರ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ಜಮೀನು ಮಾರಾಟ: ಹಲವರಿಂದ ಖಂಡನೆ

ಬಿಬಿಎಂಪಿ ನಗರ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ಜಮೀನು ಮಾರಾಟ: ಹಲವರಿಂದ ಖಂಡನೆ

ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ಭಾಸ್ಕರ್ ನೇತೃತ್ವದಲ್ಲಿ ನಡೆದ ವಿಸ್ತೃತ ಸಭೆಯಲ್ಲಿ ಚರ್ಚಿಸಿ, ಕರ್ನಾಟಕದ ಮುನ್ಸಿಪಲ್ ಕಾರ್ಪೋರೇಷನ್ ಕಾಯ್ದೆಯಡಿ ಹಾಗೂ ಸ್ಥಳೀಯ ಸಂಸ್ಥೆಗಳ ಕಾಯ್ದೆಯಡಿ ಗುತ್ತಿಗೆ ನೀಡಲಾಗಿರುವ ಜಮೀನುಗಳನ್ನು ಮಾರಾಟ ಮಾಡುವ ಪ್ರಸ್ತಾವವನ್ನು ಸಂಸದೀಯ ವ್ಯವಹಾರ ಹಾಗೂ ಶಾಸನ ರಚನಾ ಇಲಾಖೆಗೆ ಸಲ್ಲಿಸಲಾಗಿದೆ.

- Advertisement -
- Advertisement -

ರಾಜ್ಯದಲ್ಲಿ ಎದುರಾಗಿರುವ ಆರ್ಥಿಕ ಸಂಕಷ್ಟವನ್ನು ನಿಭಾಯಿಸುವ ಸಲುವಾಗಿ ಬಿಬಿಎಂಪಿ ವ್ಯಾಪ್ತಿಗೆ ಬರುವ ಸರ್ಕಾರಿ ಗುತ್ತಿಗೆ ಜಮೀನುಗಳನ್ನು ಮಾರಾಟ ಮಾಡಲು ರಾಜ್ಯಸರ್ಕಾರ ಮುಂದಾಗಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ಭಾಸ್ಕರ್ ನೇತೃತ್ವದಲ್ಲಿ ನಡೆದ ವಿಸ್ತೃತ ಸಭೆಯಲ್ಲಿ ಚರ್ಚಿಸಿ, ಕರ್ನಾಟಕದ ಮುನ್ಸಿಪಲ್ ಕಾರ್ಪೋರೇಷನ್ ಕಾಯ್ದೆಯಡಿ ಹಾಗೂ ಸ್ಥಳೀಯ ಸಂಸ್ಥೆಗಳ ಕಾಯ್ದೆಯಡಿ ಗುತ್ತಿಗೆ ನೀಡಲಾಗಿರುವ ಜಮೀನುಗಳನ್ನು ಮಾರಾಟ ಮಾಡುವ ಪ್ರಸ್ತಾವವನ್ನು ಸಂಸದೀಯ ವ್ಯವಹಾರ ಹಾಗೂ ಶಾಸನ ರಚನಾ ಇಲಾಖೆಗೆ ಸಲ್ಲಿಸಲಾಗಿದೆ.

ಬಿಬಿಎಂಪಿ, ಮಹಾನಗರಪಾಲಿಕೆಗಳು, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನುಗಳನ್ನು ಮಾರಲಾಗುತ್ತಿದೆ. ಕೇವಲ ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 4,780 ಆಸ್ತಿಗಳನ್ನು ಗುತ್ತಿಗೆಗೆ ನೀಡಲಾಗಿದೆ. ಇವುಗಳ ಮಾರಾಟದಿಂದ ಸುಮಾರು 5 ಸಾವಿರ ಕೋಟಿ ವರಮಾನ ಬರಲಿದೆ ಎಂದು ಅಂದಾಜಿಸಲಾಗಿದೆ.

ರಾಜ್ಯ ಸರ್ಕಾರದ ಈ ನಡೆಗೆ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಹಲವರಿಂದ ಆಕ್ರೋಷ ವ್ಯಕ್ತವಾಗಿದೆ.

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಸರಣಿ ಟ್ವೀಟ್ ಗಳನ್ನು ಮಾಡುವ ಮೂಲಕ ಸರ್ಕಾರದ ಈ ನಡೆಯನ್ನು ಖಂಡಿಸಿದ್ದಾರೆ.

‘ಖಾಲಿ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.

‘ಕೋವಿಡ್19 ಪರಿಸ್ಥಿತಿ ಎದುರಾದ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರದ ಈ ನಿರ್ಧಾರ ಭವಿಷ್ಯದಲ್ಲಿ ಮುಳುವಾಗಲಿದೆ. ಕವಡೆ ಕಾಸಿಗೆ ಸ್ಥಳೀಯ ಸಂಸ್ಥೆಗಳ ಜಮೀನನ್ನು ಗುತ್ತಿಗೆ ನೀಡಿರುವ ಸರ್ಕಾರ ಮಾರಾಟ ನಿರ್ಧಾರ ಕೈಬಿಟ್ಟು, ಬಾಡಿಗೆ ಹೆಚ್ಚಿಸಲು ಮುಂದಾಗಬೇಕು’ ಎಂದು ಆಗ್ರಹಿಸಿದ್ದಾರೆ.

‘ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನನ್ನು ಮಾರಾಟ ಮಾಡಿದರೆ, ಮುಂದೆ ಸಾರ್ವಜನಿಕ ಅವಶ್ಯಕತೆಗಳಿಗೆ ಸರ್ಕಾರಿ ಜಮೀನು ಇಲ್ಲದಂತಾಗುತ್ತದೆ. ಅಗತ್ಯ ಬಿದ್ದಾಗ ಖಾಸಗಿ ಅವರ ಎದುರು ಅಂಗಲಾಚಬೇಕಾದ ದೈನೇಸಿ ಸ್ಥಿತಿ ನಿರ್ಮಾಣವಾಗುತ್ತದೆ’ ಎಂದಿದ್ದಾರೆ.

‘ಬೊಕ್ಕಸ ತುಂಬಿಸಿಕೊಳ್ಳಲು ಬಿಡಿಎ ನಿವೇಶನಗಳನ್ನು ಹರಾಜು ಹಾಕುತ್ತಿರುವ ಸರ್ಕಾರ ಇದೀಗ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ನೀಡಿರುವ ಜಮೀನಿನ ಮೇಲೆ ಕಣ್ಣಿಟ್ಟಿದೆ. ಇಂತಹ ತಾತ್ಕಾಲಿಕ ಉಪಶಮನಗಳಿಂದ ಸರ್ಕಾರ ಶಾಶ್ವತವಾಗಿ ಬೊಕ್ಕಸ ತುಂಬಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಆರೋಪಿಸಿದ್ದಾರೆ.

‘ಸುಮಾರು 5000 ಕೋಟಿ ರೂಪಾಯಿಗಳ ಆದಾಯ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರ ಇರುವುದನ್ನು ಕಳೆದು ಕೊಳ್ಳುವ ಈ ಪ್ರಸ್ತಾವನೆಯನ್ನು ಸಾರಾಸಗಟಾಗಿ ತಿರಸ್ಕರಿಸಿ’ ಎಂದು ಆಗ್ರಹಿಸಿದ್ದಾರೆ.

ಕೊರೊನಾ ನೆಪದಲ್ಲಿ ಇಂತಹ ಕ್ರಮ ತೆಗೆದುಕೊಳ್ಳುವು ಸರಿಯಲ್ಲ. ಮುಂದೆ ಸರ್ಕಾರಿ ಯೋಜನೆಗಳಿಗೆ ಖಾಸಗಿಯವರ ಬಳಿ ಕೈಚಾಚಬೇಕಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಲಾಕ್ ಟೌನ್ ನಿಂದಾಗಿ ಹತ್ತಾರು ಕೋಟಿಯ ಕಾಮಗಾರಿಗಳು ಸ್ಥಗಿತಗೊಂಡಿವೆ. ಮತ್ತೊಂದೆಡೆ ಸಾವಿರಾರು ಕೋಟಿಯ ನಿರುಪಯುಕ್ತ ಕಾಮಗಾರಿಗಳನ್ನು ಸರ್ಕಾರ ಮಾಡುತ್ತಿದೆ. ಈ ಯೋಜನೆಗಳನ್ನು ರದ್ದುಪಡಿಸಿದರೆ ಸರ್ಕಾರದ ಬೊಕ್ಕಸದಲ್ಲಿ ಸಾಕಷ್ಟು ಹಣ ಇರುತ್ತಿತ್ತು’ ಎಂದು ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷರಾದ ರವಿಕೃಷ್ಣ ರೆಡ್ಡಿ ಹೇಳಿದ್ದಾರೆ.

‘ಭ್ರಷ್ಟಾಚಾರ ನಡೆಸುವ ಉದ್ದೇಶದಿಂದ ಹಾಗೂ ರಿಯಲ್ ಎಸ್ಟೇಟ್ ನವರಿಗೆ ಲಾಭ ಮಾಡಿಕೊಡಲು ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ’ ಎಂದು ಆರೋಪಿಸಿದ್ದಾರೆ.

ಗುತ್ತಿಗೆ ಜಮೀನುಗಳನ್ನು ಮಾರುವ ಬದಲು, ಅವುಗಳ ಬಾಡಿಗೆ ಹೆಚ್ಚಿಸಿದ್ದರೆ ಸಾಕಿತ್ತು ಎಂದು ಪಾಲಿಕೆಯ ಬಿಜೆಪಿ ಸದಸ್ಯ ಬಿ.ಎಸ್ ಸತ್ಯನಾರಾಯಣ ಹೇಳಿದ್ದಾರೆ. ರಾಜ್ಯಸರ್ಕಾರವು ಕೌನ್ಸಿಲ್ ನ ಒಪ್ಪಿಗೆ ಪಡೆಯದೇ ಈ ಕೆಲಸಕ್ಕೆ ಮುಂದಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.


ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...