Homeಕರೋನಾ ತಲ್ಲಣಬಿಬಿಎಂಪಿ ನಗರ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ಜಮೀನು ಮಾರಾಟ: ಹಲವರಿಂದ ಖಂಡನೆ

ಬಿಬಿಎಂಪಿ ನಗರ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ಜಮೀನು ಮಾರಾಟ: ಹಲವರಿಂದ ಖಂಡನೆ

ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ಭಾಸ್ಕರ್ ನೇತೃತ್ವದಲ್ಲಿ ನಡೆದ ವಿಸ್ತೃತ ಸಭೆಯಲ್ಲಿ ಚರ್ಚಿಸಿ, ಕರ್ನಾಟಕದ ಮುನ್ಸಿಪಲ್ ಕಾರ್ಪೋರೇಷನ್ ಕಾಯ್ದೆಯಡಿ ಹಾಗೂ ಸ್ಥಳೀಯ ಸಂಸ್ಥೆಗಳ ಕಾಯ್ದೆಯಡಿ ಗುತ್ತಿಗೆ ನೀಡಲಾಗಿರುವ ಜಮೀನುಗಳನ್ನು ಮಾರಾಟ ಮಾಡುವ ಪ್ರಸ್ತಾವವನ್ನು ಸಂಸದೀಯ ವ್ಯವಹಾರ ಹಾಗೂ ಶಾಸನ ರಚನಾ ಇಲಾಖೆಗೆ ಸಲ್ಲಿಸಲಾಗಿದೆ.

- Advertisement -
- Advertisement -

ರಾಜ್ಯದಲ್ಲಿ ಎದುರಾಗಿರುವ ಆರ್ಥಿಕ ಸಂಕಷ್ಟವನ್ನು ನಿಭಾಯಿಸುವ ಸಲುವಾಗಿ ಬಿಬಿಎಂಪಿ ವ್ಯಾಪ್ತಿಗೆ ಬರುವ ಸರ್ಕಾರಿ ಗುತ್ತಿಗೆ ಜಮೀನುಗಳನ್ನು ಮಾರಾಟ ಮಾಡಲು ರಾಜ್ಯಸರ್ಕಾರ ಮುಂದಾಗಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ಭಾಸ್ಕರ್ ನೇತೃತ್ವದಲ್ಲಿ ನಡೆದ ವಿಸ್ತೃತ ಸಭೆಯಲ್ಲಿ ಚರ್ಚಿಸಿ, ಕರ್ನಾಟಕದ ಮುನ್ಸಿಪಲ್ ಕಾರ್ಪೋರೇಷನ್ ಕಾಯ್ದೆಯಡಿ ಹಾಗೂ ಸ್ಥಳೀಯ ಸಂಸ್ಥೆಗಳ ಕಾಯ್ದೆಯಡಿ ಗುತ್ತಿಗೆ ನೀಡಲಾಗಿರುವ ಜಮೀನುಗಳನ್ನು ಮಾರಾಟ ಮಾಡುವ ಪ್ರಸ್ತಾವವನ್ನು ಸಂಸದೀಯ ವ್ಯವಹಾರ ಹಾಗೂ ಶಾಸನ ರಚನಾ ಇಲಾಖೆಗೆ ಸಲ್ಲಿಸಲಾಗಿದೆ.

ಬಿಬಿಎಂಪಿ, ಮಹಾನಗರಪಾಲಿಕೆಗಳು, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನುಗಳನ್ನು ಮಾರಲಾಗುತ್ತಿದೆ. ಕೇವಲ ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 4,780 ಆಸ್ತಿಗಳನ್ನು ಗುತ್ತಿಗೆಗೆ ನೀಡಲಾಗಿದೆ. ಇವುಗಳ ಮಾರಾಟದಿಂದ ಸುಮಾರು 5 ಸಾವಿರ ಕೋಟಿ ವರಮಾನ ಬರಲಿದೆ ಎಂದು ಅಂದಾಜಿಸಲಾಗಿದೆ.

ರಾಜ್ಯ ಸರ್ಕಾರದ ಈ ನಡೆಗೆ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಹಲವರಿಂದ ಆಕ್ರೋಷ ವ್ಯಕ್ತವಾಗಿದೆ.

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಸರಣಿ ಟ್ವೀಟ್ ಗಳನ್ನು ಮಾಡುವ ಮೂಲಕ ಸರ್ಕಾರದ ಈ ನಡೆಯನ್ನು ಖಂಡಿಸಿದ್ದಾರೆ.

‘ಖಾಲಿ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.

‘ಕೋವಿಡ್19 ಪರಿಸ್ಥಿತಿ ಎದುರಾದ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರದ ಈ ನಿರ್ಧಾರ ಭವಿಷ್ಯದಲ್ಲಿ ಮುಳುವಾಗಲಿದೆ. ಕವಡೆ ಕಾಸಿಗೆ ಸ್ಥಳೀಯ ಸಂಸ್ಥೆಗಳ ಜಮೀನನ್ನು ಗುತ್ತಿಗೆ ನೀಡಿರುವ ಸರ್ಕಾರ ಮಾರಾಟ ನಿರ್ಧಾರ ಕೈಬಿಟ್ಟು, ಬಾಡಿಗೆ ಹೆಚ್ಚಿಸಲು ಮುಂದಾಗಬೇಕು’ ಎಂದು ಆಗ್ರಹಿಸಿದ್ದಾರೆ.

‘ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನನ್ನು ಮಾರಾಟ ಮಾಡಿದರೆ, ಮುಂದೆ ಸಾರ್ವಜನಿಕ ಅವಶ್ಯಕತೆಗಳಿಗೆ ಸರ್ಕಾರಿ ಜಮೀನು ಇಲ್ಲದಂತಾಗುತ್ತದೆ. ಅಗತ್ಯ ಬಿದ್ದಾಗ ಖಾಸಗಿ ಅವರ ಎದುರು ಅಂಗಲಾಚಬೇಕಾದ ದೈನೇಸಿ ಸ್ಥಿತಿ ನಿರ್ಮಾಣವಾಗುತ್ತದೆ’ ಎಂದಿದ್ದಾರೆ.

‘ಬೊಕ್ಕಸ ತುಂಬಿಸಿಕೊಳ್ಳಲು ಬಿಡಿಎ ನಿವೇಶನಗಳನ್ನು ಹರಾಜು ಹಾಕುತ್ತಿರುವ ಸರ್ಕಾರ ಇದೀಗ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ನೀಡಿರುವ ಜಮೀನಿನ ಮೇಲೆ ಕಣ್ಣಿಟ್ಟಿದೆ. ಇಂತಹ ತಾತ್ಕಾಲಿಕ ಉಪಶಮನಗಳಿಂದ ಸರ್ಕಾರ ಶಾಶ್ವತವಾಗಿ ಬೊಕ್ಕಸ ತುಂಬಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಆರೋಪಿಸಿದ್ದಾರೆ.

‘ಸುಮಾರು 5000 ಕೋಟಿ ರೂಪಾಯಿಗಳ ಆದಾಯ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರ ಇರುವುದನ್ನು ಕಳೆದು ಕೊಳ್ಳುವ ಈ ಪ್ರಸ್ತಾವನೆಯನ್ನು ಸಾರಾಸಗಟಾಗಿ ತಿರಸ್ಕರಿಸಿ’ ಎಂದು ಆಗ್ರಹಿಸಿದ್ದಾರೆ.

ಕೊರೊನಾ ನೆಪದಲ್ಲಿ ಇಂತಹ ಕ್ರಮ ತೆಗೆದುಕೊಳ್ಳುವು ಸರಿಯಲ್ಲ. ಮುಂದೆ ಸರ್ಕಾರಿ ಯೋಜನೆಗಳಿಗೆ ಖಾಸಗಿಯವರ ಬಳಿ ಕೈಚಾಚಬೇಕಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಲಾಕ್ ಟೌನ್ ನಿಂದಾಗಿ ಹತ್ತಾರು ಕೋಟಿಯ ಕಾಮಗಾರಿಗಳು ಸ್ಥಗಿತಗೊಂಡಿವೆ. ಮತ್ತೊಂದೆಡೆ ಸಾವಿರಾರು ಕೋಟಿಯ ನಿರುಪಯುಕ್ತ ಕಾಮಗಾರಿಗಳನ್ನು ಸರ್ಕಾರ ಮಾಡುತ್ತಿದೆ. ಈ ಯೋಜನೆಗಳನ್ನು ರದ್ದುಪಡಿಸಿದರೆ ಸರ್ಕಾರದ ಬೊಕ್ಕಸದಲ್ಲಿ ಸಾಕಷ್ಟು ಹಣ ಇರುತ್ತಿತ್ತು’ ಎಂದು ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷರಾದ ರವಿಕೃಷ್ಣ ರೆಡ್ಡಿ ಹೇಳಿದ್ದಾರೆ.

‘ಭ್ರಷ್ಟಾಚಾರ ನಡೆಸುವ ಉದ್ದೇಶದಿಂದ ಹಾಗೂ ರಿಯಲ್ ಎಸ್ಟೇಟ್ ನವರಿಗೆ ಲಾಭ ಮಾಡಿಕೊಡಲು ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ’ ಎಂದು ಆರೋಪಿಸಿದ್ದಾರೆ.

ಗುತ್ತಿಗೆ ಜಮೀನುಗಳನ್ನು ಮಾರುವ ಬದಲು, ಅವುಗಳ ಬಾಡಿಗೆ ಹೆಚ್ಚಿಸಿದ್ದರೆ ಸಾಕಿತ್ತು ಎಂದು ಪಾಲಿಕೆಯ ಬಿಜೆಪಿ ಸದಸ್ಯ ಬಿ.ಎಸ್ ಸತ್ಯನಾರಾಯಣ ಹೇಳಿದ್ದಾರೆ. ರಾಜ್ಯಸರ್ಕಾರವು ಕೌನ್ಸಿಲ್ ನ ಒಪ್ಪಿಗೆ ಪಡೆಯದೇ ಈ ಕೆಲಸಕ್ಕೆ ಮುಂದಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.


ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...