Homeಕರೋನಾ ತಲ್ಲಣಬಿಬಿಎಂಪಿ ನಗರ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ಜಮೀನು ಮಾರಾಟ: ಹಲವರಿಂದ ಖಂಡನೆ

ಬಿಬಿಎಂಪಿ ನಗರ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ಜಮೀನು ಮಾರಾಟ: ಹಲವರಿಂದ ಖಂಡನೆ

ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ಭಾಸ್ಕರ್ ನೇತೃತ್ವದಲ್ಲಿ ನಡೆದ ವಿಸ್ತೃತ ಸಭೆಯಲ್ಲಿ ಚರ್ಚಿಸಿ, ಕರ್ನಾಟಕದ ಮುನ್ಸಿಪಲ್ ಕಾರ್ಪೋರೇಷನ್ ಕಾಯ್ದೆಯಡಿ ಹಾಗೂ ಸ್ಥಳೀಯ ಸಂಸ್ಥೆಗಳ ಕಾಯ್ದೆಯಡಿ ಗುತ್ತಿಗೆ ನೀಡಲಾಗಿರುವ ಜಮೀನುಗಳನ್ನು ಮಾರಾಟ ಮಾಡುವ ಪ್ರಸ್ತಾವವನ್ನು ಸಂಸದೀಯ ವ್ಯವಹಾರ ಹಾಗೂ ಶಾಸನ ರಚನಾ ಇಲಾಖೆಗೆ ಸಲ್ಲಿಸಲಾಗಿದೆ.

- Advertisement -
- Advertisement -

ರಾಜ್ಯದಲ್ಲಿ ಎದುರಾಗಿರುವ ಆರ್ಥಿಕ ಸಂಕಷ್ಟವನ್ನು ನಿಭಾಯಿಸುವ ಸಲುವಾಗಿ ಬಿಬಿಎಂಪಿ ವ್ಯಾಪ್ತಿಗೆ ಬರುವ ಸರ್ಕಾರಿ ಗುತ್ತಿಗೆ ಜಮೀನುಗಳನ್ನು ಮಾರಾಟ ಮಾಡಲು ರಾಜ್ಯಸರ್ಕಾರ ಮುಂದಾಗಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ಭಾಸ್ಕರ್ ನೇತೃತ್ವದಲ್ಲಿ ನಡೆದ ವಿಸ್ತೃತ ಸಭೆಯಲ್ಲಿ ಚರ್ಚಿಸಿ, ಕರ್ನಾಟಕದ ಮುನ್ಸಿಪಲ್ ಕಾರ್ಪೋರೇಷನ್ ಕಾಯ್ದೆಯಡಿ ಹಾಗೂ ಸ್ಥಳೀಯ ಸಂಸ್ಥೆಗಳ ಕಾಯ್ದೆಯಡಿ ಗುತ್ತಿಗೆ ನೀಡಲಾಗಿರುವ ಜಮೀನುಗಳನ್ನು ಮಾರಾಟ ಮಾಡುವ ಪ್ರಸ್ತಾವವನ್ನು ಸಂಸದೀಯ ವ್ಯವಹಾರ ಹಾಗೂ ಶಾಸನ ರಚನಾ ಇಲಾಖೆಗೆ ಸಲ್ಲಿಸಲಾಗಿದೆ.

ಬಿಬಿಎಂಪಿ, ಮಹಾನಗರಪಾಲಿಕೆಗಳು, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನುಗಳನ್ನು ಮಾರಲಾಗುತ್ತಿದೆ. ಕೇವಲ ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 4,780 ಆಸ್ತಿಗಳನ್ನು ಗುತ್ತಿಗೆಗೆ ನೀಡಲಾಗಿದೆ. ಇವುಗಳ ಮಾರಾಟದಿಂದ ಸುಮಾರು 5 ಸಾವಿರ ಕೋಟಿ ವರಮಾನ ಬರಲಿದೆ ಎಂದು ಅಂದಾಜಿಸಲಾಗಿದೆ.

ರಾಜ್ಯ ಸರ್ಕಾರದ ಈ ನಡೆಗೆ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಹಲವರಿಂದ ಆಕ್ರೋಷ ವ್ಯಕ್ತವಾಗಿದೆ.

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಸರಣಿ ಟ್ವೀಟ್ ಗಳನ್ನು ಮಾಡುವ ಮೂಲಕ ಸರ್ಕಾರದ ಈ ನಡೆಯನ್ನು ಖಂಡಿಸಿದ್ದಾರೆ.

‘ಖಾಲಿ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.

‘ಕೋವಿಡ್19 ಪರಿಸ್ಥಿತಿ ಎದುರಾದ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರದ ಈ ನಿರ್ಧಾರ ಭವಿಷ್ಯದಲ್ಲಿ ಮುಳುವಾಗಲಿದೆ. ಕವಡೆ ಕಾಸಿಗೆ ಸ್ಥಳೀಯ ಸಂಸ್ಥೆಗಳ ಜಮೀನನ್ನು ಗುತ್ತಿಗೆ ನೀಡಿರುವ ಸರ್ಕಾರ ಮಾರಾಟ ನಿರ್ಧಾರ ಕೈಬಿಟ್ಟು, ಬಾಡಿಗೆ ಹೆಚ್ಚಿಸಲು ಮುಂದಾಗಬೇಕು’ ಎಂದು ಆಗ್ರಹಿಸಿದ್ದಾರೆ.

‘ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನನ್ನು ಮಾರಾಟ ಮಾಡಿದರೆ, ಮುಂದೆ ಸಾರ್ವಜನಿಕ ಅವಶ್ಯಕತೆಗಳಿಗೆ ಸರ್ಕಾರಿ ಜಮೀನು ಇಲ್ಲದಂತಾಗುತ್ತದೆ. ಅಗತ್ಯ ಬಿದ್ದಾಗ ಖಾಸಗಿ ಅವರ ಎದುರು ಅಂಗಲಾಚಬೇಕಾದ ದೈನೇಸಿ ಸ್ಥಿತಿ ನಿರ್ಮಾಣವಾಗುತ್ತದೆ’ ಎಂದಿದ್ದಾರೆ.

‘ಬೊಕ್ಕಸ ತುಂಬಿಸಿಕೊಳ್ಳಲು ಬಿಡಿಎ ನಿವೇಶನಗಳನ್ನು ಹರಾಜು ಹಾಕುತ್ತಿರುವ ಸರ್ಕಾರ ಇದೀಗ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ನೀಡಿರುವ ಜಮೀನಿನ ಮೇಲೆ ಕಣ್ಣಿಟ್ಟಿದೆ. ಇಂತಹ ತಾತ್ಕಾಲಿಕ ಉಪಶಮನಗಳಿಂದ ಸರ್ಕಾರ ಶಾಶ್ವತವಾಗಿ ಬೊಕ್ಕಸ ತುಂಬಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಆರೋಪಿಸಿದ್ದಾರೆ.

‘ಸುಮಾರು 5000 ಕೋಟಿ ರೂಪಾಯಿಗಳ ಆದಾಯ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರ ಇರುವುದನ್ನು ಕಳೆದು ಕೊಳ್ಳುವ ಈ ಪ್ರಸ್ತಾವನೆಯನ್ನು ಸಾರಾಸಗಟಾಗಿ ತಿರಸ್ಕರಿಸಿ’ ಎಂದು ಆಗ್ರಹಿಸಿದ್ದಾರೆ.

ಕೊರೊನಾ ನೆಪದಲ್ಲಿ ಇಂತಹ ಕ್ರಮ ತೆಗೆದುಕೊಳ್ಳುವು ಸರಿಯಲ್ಲ. ಮುಂದೆ ಸರ್ಕಾರಿ ಯೋಜನೆಗಳಿಗೆ ಖಾಸಗಿಯವರ ಬಳಿ ಕೈಚಾಚಬೇಕಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಲಾಕ್ ಟೌನ್ ನಿಂದಾಗಿ ಹತ್ತಾರು ಕೋಟಿಯ ಕಾಮಗಾರಿಗಳು ಸ್ಥಗಿತಗೊಂಡಿವೆ. ಮತ್ತೊಂದೆಡೆ ಸಾವಿರಾರು ಕೋಟಿಯ ನಿರುಪಯುಕ್ತ ಕಾಮಗಾರಿಗಳನ್ನು ಸರ್ಕಾರ ಮಾಡುತ್ತಿದೆ. ಈ ಯೋಜನೆಗಳನ್ನು ರದ್ದುಪಡಿಸಿದರೆ ಸರ್ಕಾರದ ಬೊಕ್ಕಸದಲ್ಲಿ ಸಾಕಷ್ಟು ಹಣ ಇರುತ್ತಿತ್ತು’ ಎಂದು ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷರಾದ ರವಿಕೃಷ್ಣ ರೆಡ್ಡಿ ಹೇಳಿದ್ದಾರೆ.

‘ಭ್ರಷ್ಟಾಚಾರ ನಡೆಸುವ ಉದ್ದೇಶದಿಂದ ಹಾಗೂ ರಿಯಲ್ ಎಸ್ಟೇಟ್ ನವರಿಗೆ ಲಾಭ ಮಾಡಿಕೊಡಲು ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ’ ಎಂದು ಆರೋಪಿಸಿದ್ದಾರೆ.

ಗುತ್ತಿಗೆ ಜಮೀನುಗಳನ್ನು ಮಾರುವ ಬದಲು, ಅವುಗಳ ಬಾಡಿಗೆ ಹೆಚ್ಚಿಸಿದ್ದರೆ ಸಾಕಿತ್ತು ಎಂದು ಪಾಲಿಕೆಯ ಬಿಜೆಪಿ ಸದಸ್ಯ ಬಿ.ಎಸ್ ಸತ್ಯನಾರಾಯಣ ಹೇಳಿದ್ದಾರೆ. ರಾಜ್ಯಸರ್ಕಾರವು ಕೌನ್ಸಿಲ್ ನ ಒಪ್ಪಿಗೆ ಪಡೆಯದೇ ಈ ಕೆಲಸಕ್ಕೆ ಮುಂದಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.


ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...