Homeಕರ್ನಾಟಕಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕ ಅಂಗೀಕಾರ: ತೆರಿಗೆ ಬಾಕಿ ಮೇಲಿನ ದಂಡ ಶೇ. 50ರಷ್ಟು...

ಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕ ಅಂಗೀಕಾರ: ತೆರಿಗೆ ಬಾಕಿ ಮೇಲಿನ ದಂಡ ಶೇ. 50ರಷ್ಟು ಇಳಿಕೆ

- Advertisement -
- Advertisement -

ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇಕಡ 50ರಷ್ಟು ಕಡಿತ ಸೇರಿದಂತೆ ತೆರಿಗೆದಾರರ ಸ್ನೇಹಿ ಬಿಬಿಎಂಪಿ (ತಿದ್ದುಪಡಿ) ವಿಧೇಯಕ 2024 ಅನ್ನು ವಿಧಾನಸಭೆಯಲ್ಲಿ ಬುಧವಾರ ಅಂಗೀಕರಿಸಲಾಗಿದೆ.

ವಿಧಾನಸಭೆಯಲ್ಲಿ ಭೋಜನ ವಿರಾಮದ ನಂತರ ನಡೆದ ಕಲಾಪದಲ್ಲಿ ಬೆಂಗಳೂರು ನಗರಾಭಿವೃದ್ದಿ ಖಾತೆಯನ್ನೂ ಹೊಂದಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು.

ಈ ವಿಧೇಯಕದಿಂದ ಬೆಂಗಳೂರಿನ ನಾಗರಿಕರಿಗೆ ತೆರಿಗೆ ಬಾಬತ್ತು, ದಂಡ ವಿನಾಯಿತಿ ಸೇರಿ ಸುಮಾರು ರೂ. 2,700 ಕೋಟಿ ರೂಪಾಯಿಯಷ್ಟು ಅನುಕೂಲವಾಗಲಿದೆ. ಜೊತೆಗೆ ಪಾಲಿಕೆಗೆ ಸುಮಾರು ರೂ.1,000 ಕೋಟಿಯಷ್ಟು ಆಸ್ತಿ ತೆರಿಗೆ ಬರಲಿದೆ. ಸುಮಾರು 5.51 ಲಕ್ಷ ತೆರಿಗೆ ಬಾಕಿದಾರರು, 5- 7 ಲಕ್ಷ ತೆರಿಗೆ ವ್ಯಾಪ್ತಿಗೆ ಬಾರದವರು ಹಾಗೂ 3 ಲಕ್ಷದಷ್ಟು ಮಂದಿ ಭಾಗಶಃ ತೆರಿಗೆ ಪಾವತಿದಾರರಿಗೆ ಒಟ್ಟಾರೆ 13 ರಿಂದ 15 ಲಕ್ಷ ಜನರಿಗೆ ಅನುಕೂಲವಾಗಲಿದೆ.

ಈ ವಿಧೇಯಕದಲ್ಲಿ ಬಡ ಹಾಗೂ ದುರ್ಬಲ ವರ್ಗದವರಿಗೆ ವಿಶೇಷ ವಿನಾಯಿತಿ ನೀಡಲಾಗಿದೆ. ಸರ್ಕಾರದ ವಸತಿ ಯೋಜನೆಯ ಆಸ್ತಿಗಳು ಹಾಗೂ ಕೊಳೆಗೇರಿ ಪ್ರದೇಶದ ಕಟ್ಟಡಗಳಿಗೆ ಬಡ್ಡಿ ಮೇಲಿನ ದಂಡ ಇರುವುದಿಲ್ಲ. 1 ಸಾವಿರ ಚದರ ಅಡಿವರೆಗಿನ ಸ್ವಯಂ ಬಳಕೆ ಆಸ್ತಿದಾರರಿಗೆ ಸಂಪೂರ್ಣ ದಂಡ ವಿನಾಯಿತಿ ನೀಡಲಾಗಿದೆ.

ವಸತಿ ಮತ್ತು ಮಿಶ್ರ ಆಸ್ತಿದಾರರ (ವಸತಿ ಮತ್ತು ವಾಣಿಜ್ಯ) ಬಾಕಿಯನ್ನು ಎಷ್ಟೇ ವರ್ಷದಿಂದ ಉಳಿಸಿಕೊಂಡಿದ್ದರೂ ಹಿಂದಿನ 5 ವರ್ಷಕ್ಕೆ ಮಾತ್ರ ಲೆಕ್ಕಾಚಾರ ಹಾಕಲು ನಿರ್ಧರಿಸಲಾಗಿದೆ. 5 ವರ್ಷಕ್ಕಿಂತ ಹಿಂದಿನ ಅವಧಿಗೆ ಬಡ್ಡಿ ಮನ್ನಾ ಮಾಡಲಾಗಿದೆ.

“ಇದೊಂದು ಜನಸ್ನೇಹಿ ತಿದ್ದುಪಡಿಯಾಗಿದ್ದು, ಸರ್ಕಾರಕ್ಕೆ ನಷ್ಟವಾದರೂ ಪರವಾಗಿಲ್ಲ, ಜನರಿಗೆ ಅನುಕೂಲವಾಗಲಿ ಎನ್ನುವ ನಿಟ್ಟಿನಲ್ಲಿ ಈ ಕಾನೂನನ್ನು ಜಾರಿಗೆ ತರಲಾಗಿದೆ” ಎಂದು ಶಿವಕುಮಾರ್ ಅವರು ಸದನದಲ್ಲಿ ತಿಳಿಸಿದರು.

ಹಿಂದಿನ ಬಿಜೆಪಿ ಸರ್ಕಾರ ತಂದಿದ್ದ ತಿದ್ದುಪಡಿ ವಿಧೇಯಕ ಅಂಗೀಕಾರದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡ ತೆರಿಗೆ ಮೇಲೆ ದುಪ್ಪಟ್ಟು ದಂಡ ಪಾವತಿಸಬೇಕಾಗಿ ಬಂದು ಬೆಂಗಳೂರು ನಾಗರಿಕರು ತೀವ್ರ ಸಂಕಷ್ಟಕ್ಕೆ ಸಿಕ್ಕಿದ್ದರು. ತೆರಿಗೆ ಮೊತ್ತಕ್ಕಿಂತ ದಂಡದ ಪ್ರಮಾಣವೇ ಸಿಕ್ಕಾಪಟ್ಟೆ ಹೆಚ್ಚಾಗಿತ್ತು. ಪ್ರಸ್ತುತ, ಸರ್ಕಾರ ಹಿಂದಿನ ಸರ್ಕಾರ ಅಂಗಿಕರಿಸಿದ್ದ ಕಾಯ್ದೆಗೆ ತಿದ್ದುಪಡಿ ತಂದು ನಾಗರಿಕರ ತೆರಿಗೆ ಹೊರೆ ಕಡಿಮೆ ಮಾಡಿದೆ.

ಇದನ್ನೂ ಓದಿ: ಪರಿಷತ್ ಫಲಿತಾಂಶ ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರನ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...