Homeಕರೋನಾ ತಲ್ಲಣಕಂಟೈನ್ಮೆಂಟ್ ಪ್ರದೇಶಗಳ ಸೀಲ್‌ಡೌನ್‌ಗೆ 20-25 ಕೋಟಿ ರೂ. ಖರ್ಚು ಮಾಡಿದ ಬಿಬಿಎಂಪಿ!

ಕಂಟೈನ್ಮೆಂಟ್ ಪ್ರದೇಶಗಳ ಸೀಲ್‌ಡೌನ್‌ಗೆ 20-25 ಕೋಟಿ ರೂ. ಖರ್ಚು ಮಾಡಿದ ಬಿಬಿಎಂಪಿ!

ಒಂದೊಂದು ಪ್ರದೇಶದಲ್ಲಿ 15 ಸಾವಿರದಿಂದ ಹಿಡಿದು ಲಕ್ಷದವರೆಗೆ ಸೀಲ್‌ಡೌನ್‌ಗಾಗಿ ಖರ್ಚು ಮಾಡಿರುವುದು ಬಹಿರಂಗವಾಗಿದೆ.

- Advertisement -
- Advertisement -

ಕೊರೊನಾ ಪಾಸಿಟಿವ್ ರೋಗಿಗಳಿರುವ ಕಂಟೈನ್ಮೆಂಟ್ ಪ್ರದೇಶಗಳ ಸೀಲ್‌ಡೌನ್‌ಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಸುಮಾರು 20-25 ಕೋಟಿ ರೂ. ಖರ್ಚು ಮಾಡಿದೆ ಎಂದು ಡೆಕ್ಕನ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿದೆ.

ಸೀಲ್ ಮಾಡಲು ಮಾಡಿದ ಖರ್ಚಿನ ಬಗ್ಗೆ ವಿವರವಾದ ವರದಿಯನ್ನು ಬಿಬಿಎಂಪಿ ತನ್ನ ಅಧಿಕಾರಿಗಳಿಂದ ಆಯುಕ್ತರು ಕೋರಿದ್ದಾರೆ. ಅನೇಕ ಕಂಟೈನ್ಮೆಂಟ್‌ಗಳಲ್ಲಿ ಸೀಲ್ ಮಾಡಲು 15,000 ರೂಗಳಿಂದ ಹಿಡಿದು ಹಲವಾರು ಲಕ್ಷದವರೆಗೆ ಖರ್ಚು ಮಾಡಿರುವುದನ್ನು ಅವರು ಬಹಿರಂಗಪಡಿಸಿದ್ದಾರೆ.

ಕಂಟೈನ್ಮೆಂಟ್ ಪ್ರದೇಶಗಳ ನಿರ್ವಹಣೆ ಮತ್ತು ಮನೆಗಳ ಸೀಲ್‌ಡೌನ್‌ಗೆ ಭಾರಿ ವೆಚ್ಚ ಮಾಡುತ್ತಿರುವುದನ್ನು ಮಾಧ್ಯಮಗಳು ವರದಿ ಮಾಡಿದ್ದವು. ಈ ವಿಷಯ ತನ್ನ ಗಮನಕ್ಕೆ ಬಂದಿದ್ದು, ಎಂಜಿನಿಯರ್‌ಗಳಿಂದ ವಿವರವಾದ ವರದಿಯನ್ನು ಕೋರಿದ್ದೇನೆ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.

ಸೋಮವಾರ ವಿವಿಧ ವಲಯಗಳ ಎಂಜಿನಿಯರ್‌ಗಳೊಂದಿಗೆ ನಡೆದ ಸಭೆಯ ನಂತರ “ಆರ್.ಆರ್. ನಗರವೊಂದರಲ್ಲೆ, ಜೂನ್ ಮತ್ತು ಆಗಸ್ಟ್ ನಡುವೆ, ಕಟ್ಟಡಗಳು ಮತ್ತು ಲೇನ್‌ಗಳ ಸೀಲ್ ಡೌನ್‌ ಹಾಕಲು ಅಧಿಕಾರಿಗಳು 1.5 ಕೋಟಿ ರೂ.ಗಳಿಂದ ಹಿಡಿದು 2 ಕೋಟಿ ರೂ. ಖರ್ಚು ಮಾಡಿದ್ದಾರೆ. ಕೆಲವು ವಲಯಗಳ ಕಾರ್ಯನಿರ್ವಾಹಕ ಎಂಜಿನಿಯರ್‌ಗಳು, ನಿಗದಿತ ದರಗಳ (ಎಸ್‌ಆರ್‌ ದರಗಳು) ಅನುಸಾರವಾಗಿ ಮನೆಗಳನ್ನು ಸೀಲ್ ಮಾಡಲು ಶೀಟ್‌ಗಳು ಮತ್ತು ಇತರ ವಸ್ತುಗಳನ್ನು ಖರೀದಿಸಿದರು. ಅವರು ಈ ವಸ್ತುಗಳನ್ನು ಪ್ರಕರಣಗಳು ವರದಿ ಮಾಡಿದ ಕಡೆ ಅದನ್ನು ಕೊ೦ಡೊಯ್ಯುತ್ತಾರೆ. ಆದರೆ ಒಂದು ವಲಯದಲ್ಲಿ ಅಧಿಕಾರಿಗಳು 2 ಕೋಟಿ ರೂ.ಯಷ್ಟು ಖರ್ಚು ಮಾಡಿದ್ದಾರೆ, ಎಲ್ಲಾ ವಲಯಗಳಲ್ಲಿ ನಾವು ಸುಮಾರು 20 ರಿಂದ 25 ಕೋಟಿ ರೂ. ಖರ್ಚು ಮಾಡಿರಬಹುದು. ನಾನು ಅವರೆಲ್ಲರನ್ನೂ ವಿವರವಾದ ವರದಿಗಾಗಿ ಕೇಳಿದ್ದೇನೆ” ಎಂದು ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.

ಬಿಬಿಎಂಪಿಯಿಂದ ಯಾವುದೇ ಅಂದಾಜು ಅಥವಾ ಪೂರ್ವ ಅನುಮೋದನೆಯಿಲ್ಲದ ಸೀಲ್‌ಡೌನ್‌ಗಳಿಗೆ ಸಂಬಂಧಿಸಿದ ಯಾವುದೇ ಮಸೂದೆಗಳನ್ನು ಅನುಮೋದಿಸದಂತೆ ಮಂಜುನಾಥ್ ಪ್ರಸಾದ್ ಜಂಟಿ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.

“ಅಂದಾಜುಗಳ ಆಧಾರದ ಮೇಲೆ ಸರಿಯಾದ ಕಾರ್ಯತತ್ಪರತೆ ಮತ್ತು ಪೂರ್ವ ಅನುಮೋದನೆಯೊಂದಿಗೆ ಸಲ್ಲಿಸಿದ ಬಿಲ್ಲುಗಳನ್ನು ಮಾತ್ರ ಕ್ಲಿಯರ್ ಮಾಡುತ್ತೇವೆ. ಇಲ್ಲದಿದ್ದರೆ ಅದನ್ನು ತಡೆಹಿಡಿದು ವಿಚಾರಣೆ ನಡೆಸಲಾಗುವುದು” ಎಂದು ಅವರು ಹೇಳಿದರು.


ಓದಿ: ಕರ್ನಾಟಕ ಸರ್ಕಾರದ ಕೋವಿಡ್ ನಿಜಪರೀಕ್ಷೆ: ಖಾಸಗಿ ಆಸ್ಪತ್ರೆಗಳು ಖಳನಾಯಕರಾಗುವರೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...